Homeಮುಖಪುಟಲಕ್ಷದ್ವೀಪ: ಸಂಪೂರ್ಣ ಗೋಹತ್ಯೆ ತಡೆಗೆ ಕೇಂದ್ರ ಸರ್ಕಾರದ ಪ್ರಸ್ತಾಪ

ಲಕ್ಷದ್ವೀಪ: ಸಂಪೂರ್ಣ ಗೋಹತ್ಯೆ ತಡೆಗೆ ಕೇಂದ್ರ ಸರ್ಕಾರದ ಪ್ರಸ್ತಾಪ

ಯಾವುದೇ ರೂಪದಲ್ಲಿ ಗೋಮಾಂಸ ಅಥವಾ ಗೋಮಾಂಸದ ಉತ್ಪನ್ನಗಳ ಮಾರಾಟ, ಸಂಗ್ರಹಣೆ ಅಥವಾ ಸಾಗಣೆಯನ್ನು ಈ ಕಾನೂನು ನಿಷೇಧಿಸುತ್ತದೆ.

- Advertisement -
- Advertisement -

ಕೇಂದ್ರಾಡಳಿತ ಪ್ರದೇಶವಾದ ಲಕ್ಷದ್ವೀಪದಲ್ಲಿ ಹಸು, ಕರು, ಗೂಳಿ ಮತ್ತು ಎತ್ತಿನ ಹತ್ಯೆಗೆ ಸಂಪೂರ್ಣ ನಿಷೇಧ ಹೇರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಗೋಹತ್ಯೆ ತಡೆ ಕಾನೂನು ಉಲ್ಲಂಘನೆಗಾಗಿ ಗರಿಷ್ಠ ಜೀವಾವಧಿ ಶಿಕ್ಷೆಯೊಂದಿಗೆ ಪ್ರಸ್ತಾಪವನ್ನು ಸಾರ್ವಜನಿಕ ಪ್ರತಿಕ್ರಿಯೆಗಾಗಿ ಆಹ್ವಾನಿಸಿದೆ.

ಕೇಂದ್ರ ಸರ್ಕಾರ ಪರಿಚಯಿಸಲು ಉದ್ದೇಶಿಸಿರುವ ಕಾನೂನಿನ ಪ್ರಕಾರ, ಯಾವುದೇ ರೂಪದಲ್ಲಿ ಗೋಮಾಂಸ ಅಥವಾ ಗೋಮಾಂಸದ ಉತ್ಪನ್ನಗಳ ಮಾರಾಟ, ಸಂಗ್ರಹಣೆ ಅಥವಾ ಸಾಗಣೆಯನ್ನು ಈ ಕಾನೂನು ನಿಷೇಧಿಸುತ್ತದೆ.

ಈ ನಿಟ್ಟಿನಲ್ಲಿ, 2021 ರ ಲಕ್ಷದ್ವೀಪ ಪ್ರಾಣಿ ಸಂರಕ್ಷಣಾ ನಿಯಂತ್ರಣದ ಕರಡನ್ನು ಸಾರ್ವಜನಿಕರ ಅಭಿಪ್ರಾಯಕ್ಕೆ ಇಡಲಾಗಿದ್ದು, ಸಾರ್ವಜನಿಕರಿಂದ ಪ್ರತಿಕ್ರಿಯೆಗಳನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆಗೆ ವಿರೋಧ: ಗಂಡು ಕರುಗಳೊಂದಿಗೆ ಠಾಣೆಗೆ ಮುತ್ತಿಗೆ ಹಾಕಿದ ರೈತರು!

ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು 2021ರ ಮಾರ್ಚ್ 28ರ ಒಳಗೆ ಅಥವಾ ಅದಕ್ಕೂ ಮೊದಲು ಕಳುಹಿಸಬೇಕು ಎಂದು ತಿಳಿಸಲಾಗಿದೆ.

ಕರಡು ನಿಯಮಗಳು ಎಲ್ಲಾ ಹಸುಗಳು, ಕರುಗಳು (ಗಂಡು ಮತ್ತು ಹೆಣ್ಣು), ಎತ್ತು ಮತ್ತು ಎತ್ತಿನ ಹತ್ಯೆಯ ಸಂಪೂರ್ಣ ನಿಷೇಧವನ್ನು ಆಲೋಚಿಸುತ್ತವೆ. ಬೇರೆ ಯಾವುದೇ ಪ್ರಾಣಿಗಳ ಹತ್ಯೆಗೂ ಸಹ, ಸಮರ್ಥ ಪ್ರಾಧಿಕಾರದಿಂದ ಪ್ರಮಾಣಪತ್ರದ ಅಗತ್ಯವಿರುತ್ತದೆ.

ಈ ನಿಬಂಧನೆಯ ಉಲ್ಲಂಘನೆಗೆ ನಿಡುವ ಶಿಕ್ಷೆ ಹತ್ತು ವರ್ಷಗಳಿಗಿಂತ ಕಡಿಮೆಯಿರಬಾರದು, ಇದನ್ನೂ ಜೀವಾವಧಿ ಶಿಕ್ಷೆಗೂ ವಿಸ್ತರಿಸಬಹುದು. ಜೊತೆಗೆ 1 ಲಕ್ಷ ರೂಪಾಯಿಗೆ ಕಡಿಮೆ ಇರದಂತೆ 5 ಲಕ್ಷ ರೂ.ಗಳವರೆಗೆ ದಂಡವನ್ನು ವಿಧಿಸಬಹುದು.

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ: ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ – ಶೃಂಗೇರಿಯಲ್ಲಿ ದಾಖಲಾದ ಮೊದಲ ಪ್ರಕರಣವೆ ಸುಳ್ಳು?

“ಯಾವುದೇ ವ್ಯಕ್ತಿಯು ಗೋಮಾಂಸ ಅಥವಾ ಗೋಮಾಂಸ ಉತ್ಪನ್ನಗಳನ್ನು ಯಾವುದೇ ರೂಪದಲ್ಲಿ ಮಾರಾಟ ಮಾಡಲು ಅಥವಾ ಖರೀದಿಸಲು ನೇರವಾಗಿ ಅಥವಾ ಪರೋಕ್ಷವಾಗಿ ಮಾರಾಟ ಮಾಡಬಾರದು, ಇಡಬಾರದು, ಸಂಗ್ರಹಿಸಬಾರದು, ಸಾಗಿಸಬಾರದು ಮತ್ತು ಯಾರಿಗೂ ನೀಡಬಾರದು” ಎಂದು ನಿಬಂಧನೆಯ ಸೆಕ್ಷನ್ 8 ಗೋಮಾಂಸ ಉತ್ಪನ್ನಗಳ ಮೇಲೆ ನಿಷೇಧ ಹೇರಲು ಪ್ರಯತ್ನಿಸುತ್ತದೆ.

ಗೋಮಾಂಸ ಅಥವಾ ಗೋಮಾಂಸ ಉತ್ಪನ್ನಗಳನ್ನು ಸಾಗಿಸಲು ಬಳಸುವ ಯಾವುದೇ ವಾಹನ ಅಥವಾ ಸಾಗಣೆಯನ್ನು ಕಾನೂನಿನಡಿ ನೇಮಕಗೊಂಡ ಅಧಿಕಾರಿ ವಶಪಡಿಸಿಕೊಳ್ಳಬಹುದು. ಜೊತೆಗೆ ವಾಹನವನ್ನು ಕೇಂದ್ರಾಡಳಿತ ಪ್ರದೇಶ ಮುಟ್ಟುಗೋಲು ಹಾಕಿಕೊಳ್ಳುತ್ತದೆ.

ಕರ್ನಾಟಕದಲ್ಲಿ ಈಗಾಗಲೇ ಸರ್ಕಾರ ಜಾರಿ ಮಾಡಿರುವ ಗೋಹತ್ಯೆ ನಿಷೇಧ ಕಾಯ್ದೆ ವಿರುದ್ಧ ರೈತರು, ಸಾಮಾಜಿಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ಸೇರಿದಂತೆ ರೈತರು ಗಂಡು ಕರುಗಳನ್ನು ಪೊಲೀಸ್ ಠಾಣೆ ಮುಂದೆ ಕರೆ ತಂದು ಪ್ರತಿಭಟಿಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ಗೋಹತ್ಯೆ ಮಸೂದೆಗೆ ಸುಗ್ರೀವಾಜ್ಞೆ: ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...