Homeಮುಖಪುಟಲಕ್ಷದ್ವೀಪ: ಸಂಪೂರ್ಣ ಗೋಹತ್ಯೆ ತಡೆಗೆ ಕೇಂದ್ರ ಸರ್ಕಾರದ ಪ್ರಸ್ತಾಪ

ಲಕ್ಷದ್ವೀಪ: ಸಂಪೂರ್ಣ ಗೋಹತ್ಯೆ ತಡೆಗೆ ಕೇಂದ್ರ ಸರ್ಕಾರದ ಪ್ರಸ್ತಾಪ

ಯಾವುದೇ ರೂಪದಲ್ಲಿ ಗೋಮಾಂಸ ಅಥವಾ ಗೋಮಾಂಸದ ಉತ್ಪನ್ನಗಳ ಮಾರಾಟ, ಸಂಗ್ರಹಣೆ ಅಥವಾ ಸಾಗಣೆಯನ್ನು ಈ ಕಾನೂನು ನಿಷೇಧಿಸುತ್ತದೆ.

- Advertisement -
- Advertisement -

ಕೇಂದ್ರಾಡಳಿತ ಪ್ರದೇಶವಾದ ಲಕ್ಷದ್ವೀಪದಲ್ಲಿ ಹಸು, ಕರು, ಗೂಳಿ ಮತ್ತು ಎತ್ತಿನ ಹತ್ಯೆಗೆ ಸಂಪೂರ್ಣ ನಿಷೇಧ ಹೇರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಗೋಹತ್ಯೆ ತಡೆ ಕಾನೂನು ಉಲ್ಲಂಘನೆಗಾಗಿ ಗರಿಷ್ಠ ಜೀವಾವಧಿ ಶಿಕ್ಷೆಯೊಂದಿಗೆ ಪ್ರಸ್ತಾಪವನ್ನು ಸಾರ್ವಜನಿಕ ಪ್ರತಿಕ್ರಿಯೆಗಾಗಿ ಆಹ್ವಾನಿಸಿದೆ.

ಕೇಂದ್ರ ಸರ್ಕಾರ ಪರಿಚಯಿಸಲು ಉದ್ದೇಶಿಸಿರುವ ಕಾನೂನಿನ ಪ್ರಕಾರ, ಯಾವುದೇ ರೂಪದಲ್ಲಿ ಗೋಮಾಂಸ ಅಥವಾ ಗೋಮಾಂಸದ ಉತ್ಪನ್ನಗಳ ಮಾರಾಟ, ಸಂಗ್ರಹಣೆ ಅಥವಾ ಸಾಗಣೆಯನ್ನು ಈ ಕಾನೂನು ನಿಷೇಧಿಸುತ್ತದೆ.

ಈ ನಿಟ್ಟಿನಲ್ಲಿ, 2021 ರ ಲಕ್ಷದ್ವೀಪ ಪ್ರಾಣಿ ಸಂರಕ್ಷಣಾ ನಿಯಂತ್ರಣದ ಕರಡನ್ನು ಸಾರ್ವಜನಿಕರ ಅಭಿಪ್ರಾಯಕ್ಕೆ ಇಡಲಾಗಿದ್ದು, ಸಾರ್ವಜನಿಕರಿಂದ ಪ್ರತಿಕ್ರಿಯೆಗಳನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆಗೆ ವಿರೋಧ: ಗಂಡು ಕರುಗಳೊಂದಿಗೆ ಠಾಣೆಗೆ ಮುತ್ತಿಗೆ ಹಾಕಿದ ರೈತರು!

ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು 2021ರ ಮಾರ್ಚ್ 28ರ ಒಳಗೆ ಅಥವಾ ಅದಕ್ಕೂ ಮೊದಲು ಕಳುಹಿಸಬೇಕು ಎಂದು ತಿಳಿಸಲಾಗಿದೆ.

ಕರಡು ನಿಯಮಗಳು ಎಲ್ಲಾ ಹಸುಗಳು, ಕರುಗಳು (ಗಂಡು ಮತ್ತು ಹೆಣ್ಣು), ಎತ್ತು ಮತ್ತು ಎತ್ತಿನ ಹತ್ಯೆಯ ಸಂಪೂರ್ಣ ನಿಷೇಧವನ್ನು ಆಲೋಚಿಸುತ್ತವೆ. ಬೇರೆ ಯಾವುದೇ ಪ್ರಾಣಿಗಳ ಹತ್ಯೆಗೂ ಸಹ, ಸಮರ್ಥ ಪ್ರಾಧಿಕಾರದಿಂದ ಪ್ರಮಾಣಪತ್ರದ ಅಗತ್ಯವಿರುತ್ತದೆ.

ಈ ನಿಬಂಧನೆಯ ಉಲ್ಲಂಘನೆಗೆ ನಿಡುವ ಶಿಕ್ಷೆ ಹತ್ತು ವರ್ಷಗಳಿಗಿಂತ ಕಡಿಮೆಯಿರಬಾರದು, ಇದನ್ನೂ ಜೀವಾವಧಿ ಶಿಕ್ಷೆಗೂ ವಿಸ್ತರಿಸಬಹುದು. ಜೊತೆಗೆ 1 ಲಕ್ಷ ರೂಪಾಯಿಗೆ ಕಡಿಮೆ ಇರದಂತೆ 5 ಲಕ್ಷ ರೂ.ಗಳವರೆಗೆ ದಂಡವನ್ನು ವಿಧಿಸಬಹುದು.

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ: ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ – ಶೃಂಗೇರಿಯಲ್ಲಿ ದಾಖಲಾದ ಮೊದಲ ಪ್ರಕರಣವೆ ಸುಳ್ಳು?

“ಯಾವುದೇ ವ್ಯಕ್ತಿಯು ಗೋಮಾಂಸ ಅಥವಾ ಗೋಮಾಂಸ ಉತ್ಪನ್ನಗಳನ್ನು ಯಾವುದೇ ರೂಪದಲ್ಲಿ ಮಾರಾಟ ಮಾಡಲು ಅಥವಾ ಖರೀದಿಸಲು ನೇರವಾಗಿ ಅಥವಾ ಪರೋಕ್ಷವಾಗಿ ಮಾರಾಟ ಮಾಡಬಾರದು, ಇಡಬಾರದು, ಸಂಗ್ರಹಿಸಬಾರದು, ಸಾಗಿಸಬಾರದು ಮತ್ತು ಯಾರಿಗೂ ನೀಡಬಾರದು” ಎಂದು ನಿಬಂಧನೆಯ ಸೆಕ್ಷನ್ 8 ಗೋಮಾಂಸ ಉತ್ಪನ್ನಗಳ ಮೇಲೆ ನಿಷೇಧ ಹೇರಲು ಪ್ರಯತ್ನಿಸುತ್ತದೆ.

ಗೋಮಾಂಸ ಅಥವಾ ಗೋಮಾಂಸ ಉತ್ಪನ್ನಗಳನ್ನು ಸಾಗಿಸಲು ಬಳಸುವ ಯಾವುದೇ ವಾಹನ ಅಥವಾ ಸಾಗಣೆಯನ್ನು ಕಾನೂನಿನಡಿ ನೇಮಕಗೊಂಡ ಅಧಿಕಾರಿ ವಶಪಡಿಸಿಕೊಳ್ಳಬಹುದು. ಜೊತೆಗೆ ವಾಹನವನ್ನು ಕೇಂದ್ರಾಡಳಿತ ಪ್ರದೇಶ ಮುಟ್ಟುಗೋಲು ಹಾಕಿಕೊಳ್ಳುತ್ತದೆ.

ಕರ್ನಾಟಕದಲ್ಲಿ ಈಗಾಗಲೇ ಸರ್ಕಾರ ಜಾರಿ ಮಾಡಿರುವ ಗೋಹತ್ಯೆ ನಿಷೇಧ ಕಾಯ್ದೆ ವಿರುದ್ಧ ರೈತರು, ಸಾಮಾಜಿಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ಸೇರಿದಂತೆ ರೈತರು ಗಂಡು ಕರುಗಳನ್ನು ಪೊಲೀಸ್ ಠಾಣೆ ಮುಂದೆ ಕರೆ ತಂದು ಪ್ರತಿಭಟಿಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ಗೋಹತ್ಯೆ ಮಸೂದೆಗೆ ಸುಗ್ರೀವಾಜ್ಞೆ: ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...