Homeಮುಖಪುಟಲಕ್ಷದ್ವೀಪ: ಸಂಪೂರ್ಣ ಗೋಹತ್ಯೆ ತಡೆಗೆ ಕೇಂದ್ರ ಸರ್ಕಾರದ ಪ್ರಸ್ತಾಪ

ಲಕ್ಷದ್ವೀಪ: ಸಂಪೂರ್ಣ ಗೋಹತ್ಯೆ ತಡೆಗೆ ಕೇಂದ್ರ ಸರ್ಕಾರದ ಪ್ರಸ್ತಾಪ

ಯಾವುದೇ ರೂಪದಲ್ಲಿ ಗೋಮಾಂಸ ಅಥವಾ ಗೋಮಾಂಸದ ಉತ್ಪನ್ನಗಳ ಮಾರಾಟ, ಸಂಗ್ರಹಣೆ ಅಥವಾ ಸಾಗಣೆಯನ್ನು ಈ ಕಾನೂನು ನಿಷೇಧಿಸುತ್ತದೆ.

- Advertisement -
- Advertisement -

ಕೇಂದ್ರಾಡಳಿತ ಪ್ರದೇಶವಾದ ಲಕ್ಷದ್ವೀಪದಲ್ಲಿ ಹಸು, ಕರು, ಗೂಳಿ ಮತ್ತು ಎತ್ತಿನ ಹತ್ಯೆಗೆ ಸಂಪೂರ್ಣ ನಿಷೇಧ ಹೇರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಗೋಹತ್ಯೆ ತಡೆ ಕಾನೂನು ಉಲ್ಲಂಘನೆಗಾಗಿ ಗರಿಷ್ಠ ಜೀವಾವಧಿ ಶಿಕ್ಷೆಯೊಂದಿಗೆ ಪ್ರಸ್ತಾಪವನ್ನು ಸಾರ್ವಜನಿಕ ಪ್ರತಿಕ್ರಿಯೆಗಾಗಿ ಆಹ್ವಾನಿಸಿದೆ.

ಕೇಂದ್ರ ಸರ್ಕಾರ ಪರಿಚಯಿಸಲು ಉದ್ದೇಶಿಸಿರುವ ಕಾನೂನಿನ ಪ್ರಕಾರ, ಯಾವುದೇ ರೂಪದಲ್ಲಿ ಗೋಮಾಂಸ ಅಥವಾ ಗೋಮಾಂಸದ ಉತ್ಪನ್ನಗಳ ಮಾರಾಟ, ಸಂಗ್ರಹಣೆ ಅಥವಾ ಸಾಗಣೆಯನ್ನು ಈ ಕಾನೂನು ನಿಷೇಧಿಸುತ್ತದೆ.

ಈ ನಿಟ್ಟಿನಲ್ಲಿ, 2021 ರ ಲಕ್ಷದ್ವೀಪ ಪ್ರಾಣಿ ಸಂರಕ್ಷಣಾ ನಿಯಂತ್ರಣದ ಕರಡನ್ನು ಸಾರ್ವಜನಿಕರ ಅಭಿಪ್ರಾಯಕ್ಕೆ ಇಡಲಾಗಿದ್ದು, ಸಾರ್ವಜನಿಕರಿಂದ ಪ್ರತಿಕ್ರಿಯೆಗಳನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆಗೆ ವಿರೋಧ: ಗಂಡು ಕರುಗಳೊಂದಿಗೆ ಠಾಣೆಗೆ ಮುತ್ತಿಗೆ ಹಾಕಿದ ರೈತರು!

ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು 2021ರ ಮಾರ್ಚ್ 28ರ ಒಳಗೆ ಅಥವಾ ಅದಕ್ಕೂ ಮೊದಲು ಕಳುಹಿಸಬೇಕು ಎಂದು ತಿಳಿಸಲಾಗಿದೆ.

ಕರಡು ನಿಯಮಗಳು ಎಲ್ಲಾ ಹಸುಗಳು, ಕರುಗಳು (ಗಂಡು ಮತ್ತು ಹೆಣ್ಣು), ಎತ್ತು ಮತ್ತು ಎತ್ತಿನ ಹತ್ಯೆಯ ಸಂಪೂರ್ಣ ನಿಷೇಧವನ್ನು ಆಲೋಚಿಸುತ್ತವೆ. ಬೇರೆ ಯಾವುದೇ ಪ್ರಾಣಿಗಳ ಹತ್ಯೆಗೂ ಸಹ, ಸಮರ್ಥ ಪ್ರಾಧಿಕಾರದಿಂದ ಪ್ರಮಾಣಪತ್ರದ ಅಗತ್ಯವಿರುತ್ತದೆ.

ಈ ನಿಬಂಧನೆಯ ಉಲ್ಲಂಘನೆಗೆ ನಿಡುವ ಶಿಕ್ಷೆ ಹತ್ತು ವರ್ಷಗಳಿಗಿಂತ ಕಡಿಮೆಯಿರಬಾರದು, ಇದನ್ನೂ ಜೀವಾವಧಿ ಶಿಕ್ಷೆಗೂ ವಿಸ್ತರಿಸಬಹುದು. ಜೊತೆಗೆ 1 ಲಕ್ಷ ರೂಪಾಯಿಗೆ ಕಡಿಮೆ ಇರದಂತೆ 5 ಲಕ್ಷ ರೂ.ಗಳವರೆಗೆ ದಂಡವನ್ನು ವಿಧಿಸಬಹುದು.

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ: ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ – ಶೃಂಗೇರಿಯಲ್ಲಿ ದಾಖಲಾದ ಮೊದಲ ಪ್ರಕರಣವೆ ಸುಳ್ಳು?

“ಯಾವುದೇ ವ್ಯಕ್ತಿಯು ಗೋಮಾಂಸ ಅಥವಾ ಗೋಮಾಂಸ ಉತ್ಪನ್ನಗಳನ್ನು ಯಾವುದೇ ರೂಪದಲ್ಲಿ ಮಾರಾಟ ಮಾಡಲು ಅಥವಾ ಖರೀದಿಸಲು ನೇರವಾಗಿ ಅಥವಾ ಪರೋಕ್ಷವಾಗಿ ಮಾರಾಟ ಮಾಡಬಾರದು, ಇಡಬಾರದು, ಸಂಗ್ರಹಿಸಬಾರದು, ಸಾಗಿಸಬಾರದು ಮತ್ತು ಯಾರಿಗೂ ನೀಡಬಾರದು” ಎಂದು ನಿಬಂಧನೆಯ ಸೆಕ್ಷನ್ 8 ಗೋಮಾಂಸ ಉತ್ಪನ್ನಗಳ ಮೇಲೆ ನಿಷೇಧ ಹೇರಲು ಪ್ರಯತ್ನಿಸುತ್ತದೆ.

ಗೋಮಾಂಸ ಅಥವಾ ಗೋಮಾಂಸ ಉತ್ಪನ್ನಗಳನ್ನು ಸಾಗಿಸಲು ಬಳಸುವ ಯಾವುದೇ ವಾಹನ ಅಥವಾ ಸಾಗಣೆಯನ್ನು ಕಾನೂನಿನಡಿ ನೇಮಕಗೊಂಡ ಅಧಿಕಾರಿ ವಶಪಡಿಸಿಕೊಳ್ಳಬಹುದು. ಜೊತೆಗೆ ವಾಹನವನ್ನು ಕೇಂದ್ರಾಡಳಿತ ಪ್ರದೇಶ ಮುಟ್ಟುಗೋಲು ಹಾಕಿಕೊಳ್ಳುತ್ತದೆ.

ಕರ್ನಾಟಕದಲ್ಲಿ ಈಗಾಗಲೇ ಸರ್ಕಾರ ಜಾರಿ ಮಾಡಿರುವ ಗೋಹತ್ಯೆ ನಿಷೇಧ ಕಾಯ್ದೆ ವಿರುದ್ಧ ರೈತರು, ಸಾಮಾಜಿಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ಸೇರಿದಂತೆ ರೈತರು ಗಂಡು ಕರುಗಳನ್ನು ಪೊಲೀಸ್ ಠಾಣೆ ಮುಂದೆ ಕರೆ ತಂದು ಪ್ರತಿಭಟಿಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ಗೋಹತ್ಯೆ ಮಸೂದೆಗೆ ಸುಗ್ರೀವಾಜ್ಞೆ: ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...