Homeಚಳವಳಿಲಕ್ಷದ್ವೀಪ: ದೇಶದ್ರೋಹ ಆರೋಪದ ವಿರುದ್ದ ಕೇರಳ ಹೈಕೋರ್ಟ್‌ ಮಟ್ಟಿಲೇರಿದ ನಿರ್ಮಾಪಕಿ ಆಯಿಷಾ ಸುಲ್ತಾನ

ಲಕ್ಷದ್ವೀಪ: ದೇಶದ್ರೋಹ ಆರೋಪದ ವಿರುದ್ದ ಕೇರಳ ಹೈಕೋರ್ಟ್‌ ಮಟ್ಟಿಲೇರಿದ ನಿರ್ಮಾಪಕಿ ಆಯಿಷಾ ಸುಲ್ತಾನ

- Advertisement -
- Advertisement -

ತನ್ನ ವಿರುದ್ಧ ದಾಖಲಾಗಿದ್ದ ದೇಶದ್ರೋಹ ಪ್ರಕರಣದಲ್ಲಿ ಜಾಮೀನು ಕೋರಿ ಚಲನಚಿತ್ರ ನಿರ್ಮಾಪಕಿ ಆಯಿಷಾ ಸುಲ್ತಾನ ಸೋಮವಾರ ಕೇರಳ ಹೈಕೋರ್ಟ್‌ನ್ನು ಸಂಪರ್ಕಿಸಿದ್ದಾರೆ. ದೂರದರ್ಶನ ಚರ್ಚೆಯೊಂದರಲ್ಲಿ ಅವರು ನೀಡಿದ್ದ ಹೇಳಿಕೆಯ ಬಗ್ಗೆ ಲಕ್ಷದ್ವೀಪ ಬಿಜೆಪಿ ಅಧ್ಯಕ್ಷ ಸಿ. ಅಬ್ದುಲ್ ಖಾದರ್ ಹಾಜಿ ನೀಡಿದ ದೂರಿನ ಮೇರೆಗೆ ಜೂನ್ 10 ರಂದು ದ್ವೀಪದ ಪೊಲೀಸರು ಆಯಿಷಾ ಸುಲ್ತಾನ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಮಲಯಾಳಂ ಟಿವಿ ಚಾನೆಲ್‌ ಒಂದರಲ್ಲಿ ಕಾಣಿಸಿಕೊಂಡಿದ್ದ ಆಯಿಷಾ ಸುಲ್ತಾನ, “ಶೂನ್ಯ ಕೊರೊನಾವಿದ್ದ ಪ್ರದೇಶದಲ್ಲಿ ದಿನಕ್ಕೆ ನೂರು ಪ್ರಕರಣಗಳು ವರದಿಯಾಗುತ್ತಿವೆ. ಒಕ್ಕೂಟ ಸರ್ಕಾರ ಹೊಸದಾಗಿ ನೇಮಕಮಾಡಿದ್ದ ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಅವರನ್ನು ಪ್ರಯೋಗಿಸಿದ್ದು ‘ಜೈವಿಕ ಅಸ್ತ್ರ’ ರೀತಿಯಲ್ಲಾಗಿದೆ. ನನಗೆ ಸ್ಪಷ್ಟವಾಗಿ ಹೇಳಲು ಸಾಧ್ಯ, ಒಕ್ಕೂಟ ಸರ್ಕಾರವು ಕೊರೊನಾವನ್ನು ಜೈವಿಕ ಅಸ್ತ್ರವಾಗಿ ಪ್ರಯೋಗಿಸಿದೆ” ಎಂದು ಹೇಳಿದ್ದರು. ಇದನ್ನು ಬಿಜೆಪಿ ವಿವಾದವನ್ನಾಗಿ ಮಾಡಿತ್ತು.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ಆಯಿಷಾ ಸುಲ್ತಾನ ಅವರ ಹೇಳಿಕೆಯನ್ನು ವಿವಾದವನ್ನಾಗಿಸಿದ ಬಿಜೆಪಿ ಅವರ ವಿರುದ್ದ ದೇಶದ್ರೋಹದ ಆರೋಪ ಹೊರಿಸಿ ದೂರು ನೀಡಿತ್ತು. ಅದರ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 124ಎ (ದೇಶದ್ರೋಹ) ಮತ್ತು 153 ಬಿ (ದ್ವೇಷಪೂರಿತ ಭಾಷಣ) ಅಡಿಯಲ್ಲಿ ಲಕ್ಷದ್ವೀಪದ ಕವರತ್ತಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

ಎಫ್‌ಐಆರ್‌ ದಾಖಲಾದ ಹಿನ್ನಲೆಯಲ್ಲಿ ಜೂನ್ 20 ರಂದು ಪೊಲೀಸರ ಮುಂದೆ ಹಾಜರಾಗುವಂತೆ ಆಯಿಷಾ ಅವರನ್ನು ಕೇಳಲಾಗಿದೆ.

ತಮ್ಮ ಹೇಳಿಕೆಯನ್ನು ಬಿಜೆಪಿ ವಿವಾದ ಮಾಡಿದ ಹಿನ್ನಲೆಯಲ್ಲಿ ಆಯಿಷಾ ಸ್ಪಷ್ಟೀಕರಣ ಕೂಡಾ ನೀಡಿದ್ದರು. “ನಾನು ಪಟೇಲ್ ಅವರ ಕೆಲವು ನಿರ್ಧಾರಗಳನ್ನು ಉಲ್ಲೇಖಿಸಿ ಟೀಕಿಸಿದ್ದೆನೆಯೆ ಹೊರತು ದೇಶದ ವಿರುದ್ದ ಅಲ್ಲ. ಅವರ ನಡೆಯ ಕಾರಣದಿಂದಾಗಿ ಶೂನ್ಯವಿದ್ದ ಲಕ್ಷದ್ವೀಪದಲ್ಲಿ ಕೊರೊನಾ ತೀವ್ರವಾಗಿ ಹರಡುತ್ತಿದೆ. ಆದ್ದರಿಂದಲೆ ಅವರನ್ನು ನಾನು ಜೈವಿಕ ಅಸ್ತ್ರ ಎಂದು ಕರೆದಿದ್ದೇನೆ” ಎಂದು ಅವರು ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದರು.

ಆಯಿಷಾ ಸುಲ್ತಾನ ಅವರ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸುತ್ತಿದ್ದಂತೆ ಅನೇಕ ಸ್ಥಳೀಯ ಬಿಜೆಪಿ ನಾಯಕರು ಪಕ್ಷವನ್ನು ತೊರೆದು ಪ್ರತಿಭಟಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ, ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಅವರು ಪರಿಚಯಿಸಿದ ಹೊಸ ನಿಯಮಗಳ ವಿರುದ್ದ ದ್ವೀಪದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಹೊಸ ನೀತಿಗಳು ದ್ವೀಪವಾಸಿಗಳ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಲಕ್ಷದ್ವೀಪ: ಕೇಂದ್ರದಿಂದ ಜೈವಿಕ ಅಸ್ತ್ರ ಬಳಕೆ ಆರೋಪ, ನಿರ್ಮಾಪಕಿ ವಿರುದ್ಧ ದೇಶದ್ರೋಹ ಪ್ರಕರಣ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...