Homeಚಳವಳಿಲಕ್ಷದ್ವೀಪ: ದೇಶದ್ರೋಹ ಆರೋಪದ ವಿರುದ್ದ ಕೇರಳ ಹೈಕೋರ್ಟ್‌ ಮಟ್ಟಿಲೇರಿದ ನಿರ್ಮಾಪಕಿ ಆಯಿಷಾ ಸುಲ್ತಾನ

ಲಕ್ಷದ್ವೀಪ: ದೇಶದ್ರೋಹ ಆರೋಪದ ವಿರುದ್ದ ಕೇರಳ ಹೈಕೋರ್ಟ್‌ ಮಟ್ಟಿಲೇರಿದ ನಿರ್ಮಾಪಕಿ ಆಯಿಷಾ ಸುಲ್ತಾನ

- Advertisement -
- Advertisement -

ತನ್ನ ವಿರುದ್ಧ ದಾಖಲಾಗಿದ್ದ ದೇಶದ್ರೋಹ ಪ್ರಕರಣದಲ್ಲಿ ಜಾಮೀನು ಕೋರಿ ಚಲನಚಿತ್ರ ನಿರ್ಮಾಪಕಿ ಆಯಿಷಾ ಸುಲ್ತಾನ ಸೋಮವಾರ ಕೇರಳ ಹೈಕೋರ್ಟ್‌ನ್ನು ಸಂಪರ್ಕಿಸಿದ್ದಾರೆ. ದೂರದರ್ಶನ ಚರ್ಚೆಯೊಂದರಲ್ಲಿ ಅವರು ನೀಡಿದ್ದ ಹೇಳಿಕೆಯ ಬಗ್ಗೆ ಲಕ್ಷದ್ವೀಪ ಬಿಜೆಪಿ ಅಧ್ಯಕ್ಷ ಸಿ. ಅಬ್ದುಲ್ ಖಾದರ್ ಹಾಜಿ ನೀಡಿದ ದೂರಿನ ಮೇರೆಗೆ ಜೂನ್ 10 ರಂದು ದ್ವೀಪದ ಪೊಲೀಸರು ಆಯಿಷಾ ಸುಲ್ತಾನ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಮಲಯಾಳಂ ಟಿವಿ ಚಾನೆಲ್‌ ಒಂದರಲ್ಲಿ ಕಾಣಿಸಿಕೊಂಡಿದ್ದ ಆಯಿಷಾ ಸುಲ್ತಾನ, “ಶೂನ್ಯ ಕೊರೊನಾವಿದ್ದ ಪ್ರದೇಶದಲ್ಲಿ ದಿನಕ್ಕೆ ನೂರು ಪ್ರಕರಣಗಳು ವರದಿಯಾಗುತ್ತಿವೆ. ಒಕ್ಕೂಟ ಸರ್ಕಾರ ಹೊಸದಾಗಿ ನೇಮಕಮಾಡಿದ್ದ ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಅವರನ್ನು ಪ್ರಯೋಗಿಸಿದ್ದು ‘ಜೈವಿಕ ಅಸ್ತ್ರ’ ರೀತಿಯಲ್ಲಾಗಿದೆ. ನನಗೆ ಸ್ಪಷ್ಟವಾಗಿ ಹೇಳಲು ಸಾಧ್ಯ, ಒಕ್ಕೂಟ ಸರ್ಕಾರವು ಕೊರೊನಾವನ್ನು ಜೈವಿಕ ಅಸ್ತ್ರವಾಗಿ ಪ್ರಯೋಗಿಸಿದೆ” ಎಂದು ಹೇಳಿದ್ದರು. ಇದನ್ನು ಬಿಜೆಪಿ ವಿವಾದವನ್ನಾಗಿ ಮಾಡಿತ್ತು.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ಆಯಿಷಾ ಸುಲ್ತಾನ ಅವರ ಹೇಳಿಕೆಯನ್ನು ವಿವಾದವನ್ನಾಗಿಸಿದ ಬಿಜೆಪಿ ಅವರ ವಿರುದ್ದ ದೇಶದ್ರೋಹದ ಆರೋಪ ಹೊರಿಸಿ ದೂರು ನೀಡಿತ್ತು. ಅದರ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 124ಎ (ದೇಶದ್ರೋಹ) ಮತ್ತು 153 ಬಿ (ದ್ವೇಷಪೂರಿತ ಭಾಷಣ) ಅಡಿಯಲ್ಲಿ ಲಕ್ಷದ್ವೀಪದ ಕವರತ್ತಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

ಎಫ್‌ಐಆರ್‌ ದಾಖಲಾದ ಹಿನ್ನಲೆಯಲ್ಲಿ ಜೂನ್ 20 ರಂದು ಪೊಲೀಸರ ಮುಂದೆ ಹಾಜರಾಗುವಂತೆ ಆಯಿಷಾ ಅವರನ್ನು ಕೇಳಲಾಗಿದೆ.

ತಮ್ಮ ಹೇಳಿಕೆಯನ್ನು ಬಿಜೆಪಿ ವಿವಾದ ಮಾಡಿದ ಹಿನ್ನಲೆಯಲ್ಲಿ ಆಯಿಷಾ ಸ್ಪಷ್ಟೀಕರಣ ಕೂಡಾ ನೀಡಿದ್ದರು. “ನಾನು ಪಟೇಲ್ ಅವರ ಕೆಲವು ನಿರ್ಧಾರಗಳನ್ನು ಉಲ್ಲೇಖಿಸಿ ಟೀಕಿಸಿದ್ದೆನೆಯೆ ಹೊರತು ದೇಶದ ವಿರುದ್ದ ಅಲ್ಲ. ಅವರ ನಡೆಯ ಕಾರಣದಿಂದಾಗಿ ಶೂನ್ಯವಿದ್ದ ಲಕ್ಷದ್ವೀಪದಲ್ಲಿ ಕೊರೊನಾ ತೀವ್ರವಾಗಿ ಹರಡುತ್ತಿದೆ. ಆದ್ದರಿಂದಲೆ ಅವರನ್ನು ನಾನು ಜೈವಿಕ ಅಸ್ತ್ರ ಎಂದು ಕರೆದಿದ್ದೇನೆ” ಎಂದು ಅವರು ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದರು.

ಆಯಿಷಾ ಸುಲ್ತಾನ ಅವರ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸುತ್ತಿದ್ದಂತೆ ಅನೇಕ ಸ್ಥಳೀಯ ಬಿಜೆಪಿ ನಾಯಕರು ಪಕ್ಷವನ್ನು ತೊರೆದು ಪ್ರತಿಭಟಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ, ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಅವರು ಪರಿಚಯಿಸಿದ ಹೊಸ ನಿಯಮಗಳ ವಿರುದ್ದ ದ್ವೀಪದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಹೊಸ ನೀತಿಗಳು ದ್ವೀಪವಾಸಿಗಳ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಲಕ್ಷದ್ವೀಪ: ಕೇಂದ್ರದಿಂದ ಜೈವಿಕ ಅಸ್ತ್ರ ಬಳಕೆ ಆರೋಪ, ನಿರ್ಮಾಪಕಿ ವಿರುದ್ಧ ದೇಶದ್ರೋಹ ಪ್ರಕರಣ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....