Homeಮುಖಪುಟಲಕ್ಷದ್ವೀಪ ನ್ಯಾಯಾಂಗ ವ್ಯಾಪ್ತಿ ಬದಲಾವಣೆ ಪ್ರಸ್ತಾಪ - ಆಡಳಿತ ದುರುಪಯೋಗ ಆರೋಪ

ಲಕ್ಷದ್ವೀಪ ನ್ಯಾಯಾಂಗ ವ್ಯಾಪ್ತಿ ಬದಲಾವಣೆ ಪ್ರಸ್ತಾಪ – ಆಡಳಿತ ದುರುಪಯೋಗ ಆರೋಪ

- Advertisement -
- Advertisement -

ಶಾಂತವಾಗಿದ್ದ ಲಕ್ಷದ್ವೀಪದಲ್ಲಿ ರಾಜಕೀಯ ಪ್ರತಿಭಟನೆಗಳು ಪ್ರಾರಂಭವಾಗಿದೆ. ದ್ವೀಪಕ್ಕೆ ಹೊಸದಾಗಿ ನೇಮಕಗೊಂಡಿರುವ ಆಡಳಿತಾಧಿಕಾರಿ ಪ್ರಫುಲ್ ಪಟೇಲ್‌‌ ದ್ವೀಪದ ಸಂಸ್ಕೃತಿಯನ್ನು ಹಾಳುಗೆಡವುತ್ತಿದ್ದಾರೆ ಮತ್ತು ತಮ್ಮ ಹಾಗೂ ತಮ್ಮ ರಾಜಕೀಯ ಹಿತಾಸಕ್ತಿಗಾಗಿ ದ್ವೀಪದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ದ್ವೀಪವಾಸಿಗಳು ಆರೋಪಿಸುತ್ತಿದ್ದಾರೆ. ಅವರು ದ್ವೀಪದಲ್ಲಿ ಆಡಳಿತ ವಹಿಸಿಕೊಂಡ ನಂತರ ಮಾಡಿರುವ ಕೊರೊನಾ ಮಾರ್ಗಸೂಚಿಯ ಬದಲಾವಣೆ, ಮೀನುಗಾರರ ಗುಡಿಸಲು ತೆರವು, ಗೂಂಡಾ ಕಾಯ್ದೆ ಸೇರಿದಂತೆ ಜಾರಿ ಮತ್ತಿತರ ನಿರ್ಣಯಗಳ ವಿರುದ್ಧ ಕೇರಳ ಹೈಕೋರ್ಟ್‌ನಲ್ಲಿ ಇದುವರೆಗೂ 23 ಅರ್ಜಿಗಳು ಸಲ್ಲಿಕೆಯಾಗಿವೆ.

ಇದೀಗ ಮತ್ತೆ ತನ್ನ ಅಧಿಕಾರವನ್ನು ದುರುಪಯೋಗ ಮಾಡಲು ಆಡಳಿತಾಧಿಕಾರಿ ಹೊರಟಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಫುಲ್ ಪಟೇಲ್‌‌‌, ಲಕ್ಷದ್ವೀಪದ ಕಾನೂನು ವ್ಯಾಪ್ತಿಯನ್ನು ಕೇರಳ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ ಬದಲಾಯಿಸಲು ಪ್ರಸ್ತಾಪ ಇಟ್ಟಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ: ಲಕ್ಷದ್ವೀಪ ಹೇಗಿತ್ತು? ಈಗೇನಾಗುತ್ತಿದೆ? 

ಪ್ರಫುಲ್ ಪಟೇಲ್‌‌ ತಾನು ದ್ವೀಪದಲ್ಲಿ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಗೋ ಮಾಂಸ ಮಾರಾಟ ನಿಷೇಧ, ಅಪರಾಧ ಪ್ರಕರಣ ಕಡಿಮೆ ಇರುವ ದ್ವೀಪದಲ್ಲಿ ಗೂಂಡಾ ಕಾಯ್ದೆ ಜಾರಿ, ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಪಂಚಾಯತ್‌ ಚುನಾವಣೆಗೆ ಸ್ಪರ್ಧಿಸಲು ಅನರ್ಹ, ಖಾಸಗಿ ಭೂಮಿ ವಶಪಡಿಸಿಕೊಳ್ಳಲು ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ, ಲಕ್ಷದ್ವೀಪಾಭಿವೃದ್ಧಿ ಪ್ರಾಧಿಕಾರ 2021 ರಚನೆ, ಲಕ್ಷದ್ವೀಪದಲ್ಲಿ ಮದ್ಯ ಮಾರಾಟ ನಿಷೇಧ ತೆರವು, ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಮಾಂಸಾಹಾರ ನಿಷೇಧವನ್ನು ಒಳಗೊಂಡ ಹಲವು ಮಸೂದೆ, ವಿಧೇಯಕಗಳನ್ನು ಪರಿಚಯಿಸಿದ್ದರು. ಇದು ದ್ವೀಪದ ಜನರ ವಿರೋಧಕ್ಕೆ ಕಾರಣವಾಗಿದ್ದು, ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದಾರೆ. ಅಲ್ಲದೆ, ಕಾನೂನು ಹೋರಾಟಕ್ಕೂ ಮುಂದಾಗಿದ್ದು, ಕೇರಳ ಹೈಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.

“ನ್ಯಾಯಾಂಗ ವ್ಯಾಪ್ತಿಯನ್ನು ಕೇರಳದಿಂದ ಕರ್ನಾಟಕಕ್ಕೆ ಸ್ಥಳಾಂತರಿಸುವ ಪ್ರಫುಲ್‌ ಪಟೇಲ್‌‌ ಅವರ ಪ್ರಯತ್ನವು, ಅಧಿಕಾರದ ಸಂಪೂರ್ಣ‌ ದುರುಪಯೋಗವಾಗಿದೆ. ಈ ದ್ವೀಪಗಳಲ್ಲಿನ ಜನರ ಮಾತೃಭಾಷೆ ಮಲಯಾಳಂ ಆಗಿದ್ದು, ಕೇರಳ ಹೈಕೋರ್ಟ್‌ನ ಸಂಪೂರ್ಣ ಹೆಸರು ‘ಕೇರಳ ಮತ್ತು ಲಕ್ಷದ್ವೀಪ ಹೈಕೋರ್ಟ್’ ಎಂದಾಗಿದೆ. ಪ್ರಫುಲ್ ಪಟೇಲ್‌ಗಿಂತಲೂ ಮುಂಚೆ ಇಲ್ಲಿ ಹಲವು ಆಡಳಿತಾಧಿಕಾರಿಗಳು ಆಡಳಿತ ನಡೆಸಿದ್ದಾರೆ. ಯಾರಿಗೂ ಈ ರೀತಿಯ ಆಲೋಚನೆ ಇರಲಿಲ್ಲ. ನಾವು ಈ ಪ್ರಸ್ತಾಪವನ್ನು ವಿರೋಧಿಸುತ್ತೇವೆ” ಎಂದು ಲಕ್ಷದ್ವೀಪದ ಸಂಸದ ಮೊಹಮ್ಮದ್ ಫೈಝಲ್‌ ಹೇಳಿದ್ದಾರೆ.

ಇದನ್ನೂ ಓದಿ: ಹಿಂದುತ್ವ ಅಜೆಂಡಾದ ಪ್ರಯೋಗಕ್ಕೆ ಈಗ ನೂತನ ಬಲಿ ಲಕ್ಷದ್ವೀಪ

ಪ್ರಸ್ತುತ ಲಕ್ಷದ್ವೀಪದ ಹೈಕೋರ್ಟ್‌ ಕೂಡಾ ಆಗಿರುವ ಕೇರಳ ಹೈಕೋರ್ಟ್‌ ಲಕ್ಷದ್ವೀಪದಿಂದ 400 ಕಿ.ಮೀ.ದೂರದಲ್ಲಿದೆ. ಆದರೆ ಪ್ರಫುಲ್ ಪಟೇಲ್‌ ಹೊಸದಾಗಿ ಪ್ರಸ್ತಾಪ ಮಾಡಿರುವ ಕರ್ನಾಟಕ ಹೈಕೋರ್ಟ್‌ ದ್ವೀಪದಿಂದ 1,000 ಕಿ.ಮೀ. ದೂರದಲ್ಲಿದೆ. ಇದು ದ್ವೀಪವಾಸಿಗಳಿಗೆ ನ್ಯಾಯ ನಿರಾಕರಿಸುವ ಹುನ್ನಾರ ಎಂದು ಕೂಡಾ ಆರೋಪಿಸಲಾಗಿದೆ.

ಸಂವಿಧಾನದ 241 ನೇ ವಿಧಿ ಪ್ರಕಾರ ಹೈಕೋರ್ಟ್‌ನ ಅಧಿಕಾರ ವ್ಯಾಪ್ತಿಯನ್ನು ಸಂಸತ್ತಿನ ಕಾಯ್ದೆಯ ಮೂಲಕ ಮಾತ್ರ ಬದಲಿಸಬಹುದಾಗಿದೆ. ಈ ವಿಧಿಯ ಅನುಚ್ಛೇದ (1)ರ ಪ್ರಕಾರ ಸಂಸತ್ತು ತನ್ನ ಕಾಯಿದೆಯ ಮೂಲಕ ಕೇಂದ್ರಾಡಳಿತ ಪ್ರದೇಶಕ್ಕಾಗಿ ಹೈಕೋರ್ಟ್‌ ಸ್ಥಾಪಿಸಬಹುದು ಅಥವಾ ಆ ಪ್ರದೇಶದಲ್ಲಿರುವ ನ್ಯಾಯಾಲಯವನ್ನು ಹೈಕೋರ್ಟ್‌ ಆಗಿ ಪರಿವರ್ತಿಸಬಹುದು.

ಲಕ್ಷದ್ವೀಪ ಆಡಳಿತ ಸುಧಾರಣೆಗಳನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಕೇರಳ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ. ಲಕ್ಷದ್ವೀಪ ಅಭಿವೃದ್ಧಿ ಪ್ರಾಧಿಕಾರದ ಕರಡು ನಿಯಮಗಳನ್ನು ಪ್ರಶ್ನಿಸಿ ಕೆಪಿಸಿಸಿ ಪದಾಧಿಕಾರಿ ನೌಶಾದ್‌ ಆಲಿ ಸಲ್ಲಿಸಿದ್ದ ಮನವಿಯನ್ನು ಕೇರಳ ಹೈಕೋರ್ಟ್‌ನ ವಿಭಾಗೀಯ ಪೀಠ ತಿರಸ್ಕರಿಸಿದೆ. ಆಡಳಿತ ಸುಧಾರಣೆಗಳ ಬಗ್ಗೆ ದೂರುದಾರರು ತಕ್ಷಣ ತಡೆಯಾಜ್ಞೆ ನೀಡುವಂತೆ ಕೋರಿದ್ದಾರೆ. ಆದರೆ ನ್ಯಾಯಾಲಯ ಅದಕ್ಕೆ ಅವಕಾಶ ನೀಡಿಲ್ಲ. ಬದಲಾಗಿ, ವಿವರಣೆ ಕೋರಿ ಕೇಂದ್ರ ಮತ್ತು ಲಕ್ಷದ್ವೀಪ ಆಡಳಿತಕ್ಕೆ ಪತ್ರ ಕಳುಹಿಸಿದೆ.

ಇದನ್ನೂ ಓದಿ: ಒಂದು ಸಲದ ಲಕ್ಷದ್ವೀಪದ ಭೇಟಿಗೆ 23 ಲಕ್ಷ ಖರ್ಚು: ಪುಟ್ಟ ದ್ವೀಪದ ಮೇಲೆ ಬಿಜೆಪಿಯ ದೊಡ್ಡ ಹೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...