Homeಮುಖಪುಟಲಕ್ಷದ್ವೀಪ ನ್ಯಾಯಾಂಗ ವ್ಯಾಪ್ತಿ ಬದಲಾವಣೆ ಪ್ರಸ್ತಾಪ - ಆಡಳಿತ ದುರುಪಯೋಗ ಆರೋಪ

ಲಕ್ಷದ್ವೀಪ ನ್ಯಾಯಾಂಗ ವ್ಯಾಪ್ತಿ ಬದಲಾವಣೆ ಪ್ರಸ್ತಾಪ – ಆಡಳಿತ ದುರುಪಯೋಗ ಆರೋಪ

- Advertisement -
- Advertisement -

ಶಾಂತವಾಗಿದ್ದ ಲಕ್ಷದ್ವೀಪದಲ್ಲಿ ರಾಜಕೀಯ ಪ್ರತಿಭಟನೆಗಳು ಪ್ರಾರಂಭವಾಗಿದೆ. ದ್ವೀಪಕ್ಕೆ ಹೊಸದಾಗಿ ನೇಮಕಗೊಂಡಿರುವ ಆಡಳಿತಾಧಿಕಾರಿ ಪ್ರಫುಲ್ ಪಟೇಲ್‌‌ ದ್ವೀಪದ ಸಂಸ್ಕೃತಿಯನ್ನು ಹಾಳುಗೆಡವುತ್ತಿದ್ದಾರೆ ಮತ್ತು ತಮ್ಮ ಹಾಗೂ ತಮ್ಮ ರಾಜಕೀಯ ಹಿತಾಸಕ್ತಿಗಾಗಿ ದ್ವೀಪದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ದ್ವೀಪವಾಸಿಗಳು ಆರೋಪಿಸುತ್ತಿದ್ದಾರೆ. ಅವರು ದ್ವೀಪದಲ್ಲಿ ಆಡಳಿತ ವಹಿಸಿಕೊಂಡ ನಂತರ ಮಾಡಿರುವ ಕೊರೊನಾ ಮಾರ್ಗಸೂಚಿಯ ಬದಲಾವಣೆ, ಮೀನುಗಾರರ ಗುಡಿಸಲು ತೆರವು, ಗೂಂಡಾ ಕಾಯ್ದೆ ಸೇರಿದಂತೆ ಜಾರಿ ಮತ್ತಿತರ ನಿರ್ಣಯಗಳ ವಿರುದ್ಧ ಕೇರಳ ಹೈಕೋರ್ಟ್‌ನಲ್ಲಿ ಇದುವರೆಗೂ 23 ಅರ್ಜಿಗಳು ಸಲ್ಲಿಕೆಯಾಗಿವೆ.

ಇದೀಗ ಮತ್ತೆ ತನ್ನ ಅಧಿಕಾರವನ್ನು ದುರುಪಯೋಗ ಮಾಡಲು ಆಡಳಿತಾಧಿಕಾರಿ ಹೊರಟಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಫುಲ್ ಪಟೇಲ್‌‌‌, ಲಕ್ಷದ್ವೀಪದ ಕಾನೂನು ವ್ಯಾಪ್ತಿಯನ್ನು ಕೇರಳ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ ಬದಲಾಯಿಸಲು ಪ್ರಸ್ತಾಪ ಇಟ್ಟಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ: ಲಕ್ಷದ್ವೀಪ ಹೇಗಿತ್ತು? ಈಗೇನಾಗುತ್ತಿದೆ? 

ಪ್ರಫುಲ್ ಪಟೇಲ್‌‌ ತಾನು ದ್ವೀಪದಲ್ಲಿ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಗೋ ಮಾಂಸ ಮಾರಾಟ ನಿಷೇಧ, ಅಪರಾಧ ಪ್ರಕರಣ ಕಡಿಮೆ ಇರುವ ದ್ವೀಪದಲ್ಲಿ ಗೂಂಡಾ ಕಾಯ್ದೆ ಜಾರಿ, ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಪಂಚಾಯತ್‌ ಚುನಾವಣೆಗೆ ಸ್ಪರ್ಧಿಸಲು ಅನರ್ಹ, ಖಾಸಗಿ ಭೂಮಿ ವಶಪಡಿಸಿಕೊಳ್ಳಲು ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ, ಲಕ್ಷದ್ವೀಪಾಭಿವೃದ್ಧಿ ಪ್ರಾಧಿಕಾರ 2021 ರಚನೆ, ಲಕ್ಷದ್ವೀಪದಲ್ಲಿ ಮದ್ಯ ಮಾರಾಟ ನಿಷೇಧ ತೆರವು, ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಮಾಂಸಾಹಾರ ನಿಷೇಧವನ್ನು ಒಳಗೊಂಡ ಹಲವು ಮಸೂದೆ, ವಿಧೇಯಕಗಳನ್ನು ಪರಿಚಯಿಸಿದ್ದರು. ಇದು ದ್ವೀಪದ ಜನರ ವಿರೋಧಕ್ಕೆ ಕಾರಣವಾಗಿದ್ದು, ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದಾರೆ. ಅಲ್ಲದೆ, ಕಾನೂನು ಹೋರಾಟಕ್ಕೂ ಮುಂದಾಗಿದ್ದು, ಕೇರಳ ಹೈಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.

“ನ್ಯಾಯಾಂಗ ವ್ಯಾಪ್ತಿಯನ್ನು ಕೇರಳದಿಂದ ಕರ್ನಾಟಕಕ್ಕೆ ಸ್ಥಳಾಂತರಿಸುವ ಪ್ರಫುಲ್‌ ಪಟೇಲ್‌‌ ಅವರ ಪ್ರಯತ್ನವು, ಅಧಿಕಾರದ ಸಂಪೂರ್ಣ‌ ದುರುಪಯೋಗವಾಗಿದೆ. ಈ ದ್ವೀಪಗಳಲ್ಲಿನ ಜನರ ಮಾತೃಭಾಷೆ ಮಲಯಾಳಂ ಆಗಿದ್ದು, ಕೇರಳ ಹೈಕೋರ್ಟ್‌ನ ಸಂಪೂರ್ಣ ಹೆಸರು ‘ಕೇರಳ ಮತ್ತು ಲಕ್ಷದ್ವೀಪ ಹೈಕೋರ್ಟ್’ ಎಂದಾಗಿದೆ. ಪ್ರಫುಲ್ ಪಟೇಲ್‌ಗಿಂತಲೂ ಮುಂಚೆ ಇಲ್ಲಿ ಹಲವು ಆಡಳಿತಾಧಿಕಾರಿಗಳು ಆಡಳಿತ ನಡೆಸಿದ್ದಾರೆ. ಯಾರಿಗೂ ಈ ರೀತಿಯ ಆಲೋಚನೆ ಇರಲಿಲ್ಲ. ನಾವು ಈ ಪ್ರಸ್ತಾಪವನ್ನು ವಿರೋಧಿಸುತ್ತೇವೆ” ಎಂದು ಲಕ್ಷದ್ವೀಪದ ಸಂಸದ ಮೊಹಮ್ಮದ್ ಫೈಝಲ್‌ ಹೇಳಿದ್ದಾರೆ.

ಇದನ್ನೂ ಓದಿ: ಹಿಂದುತ್ವ ಅಜೆಂಡಾದ ಪ್ರಯೋಗಕ್ಕೆ ಈಗ ನೂತನ ಬಲಿ ಲಕ್ಷದ್ವೀಪ

ಪ್ರಸ್ತುತ ಲಕ್ಷದ್ವೀಪದ ಹೈಕೋರ್ಟ್‌ ಕೂಡಾ ಆಗಿರುವ ಕೇರಳ ಹೈಕೋರ್ಟ್‌ ಲಕ್ಷದ್ವೀಪದಿಂದ 400 ಕಿ.ಮೀ.ದೂರದಲ್ಲಿದೆ. ಆದರೆ ಪ್ರಫುಲ್ ಪಟೇಲ್‌ ಹೊಸದಾಗಿ ಪ್ರಸ್ತಾಪ ಮಾಡಿರುವ ಕರ್ನಾಟಕ ಹೈಕೋರ್ಟ್‌ ದ್ವೀಪದಿಂದ 1,000 ಕಿ.ಮೀ. ದೂರದಲ್ಲಿದೆ. ಇದು ದ್ವೀಪವಾಸಿಗಳಿಗೆ ನ್ಯಾಯ ನಿರಾಕರಿಸುವ ಹುನ್ನಾರ ಎಂದು ಕೂಡಾ ಆರೋಪಿಸಲಾಗಿದೆ.

ಸಂವಿಧಾನದ 241 ನೇ ವಿಧಿ ಪ್ರಕಾರ ಹೈಕೋರ್ಟ್‌ನ ಅಧಿಕಾರ ವ್ಯಾಪ್ತಿಯನ್ನು ಸಂಸತ್ತಿನ ಕಾಯ್ದೆಯ ಮೂಲಕ ಮಾತ್ರ ಬದಲಿಸಬಹುದಾಗಿದೆ. ಈ ವಿಧಿಯ ಅನುಚ್ಛೇದ (1)ರ ಪ್ರಕಾರ ಸಂಸತ್ತು ತನ್ನ ಕಾಯಿದೆಯ ಮೂಲಕ ಕೇಂದ್ರಾಡಳಿತ ಪ್ರದೇಶಕ್ಕಾಗಿ ಹೈಕೋರ್ಟ್‌ ಸ್ಥಾಪಿಸಬಹುದು ಅಥವಾ ಆ ಪ್ರದೇಶದಲ್ಲಿರುವ ನ್ಯಾಯಾಲಯವನ್ನು ಹೈಕೋರ್ಟ್‌ ಆಗಿ ಪರಿವರ್ತಿಸಬಹುದು.

ಲಕ್ಷದ್ವೀಪ ಆಡಳಿತ ಸುಧಾರಣೆಗಳನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಕೇರಳ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ. ಲಕ್ಷದ್ವೀಪ ಅಭಿವೃದ್ಧಿ ಪ್ರಾಧಿಕಾರದ ಕರಡು ನಿಯಮಗಳನ್ನು ಪ್ರಶ್ನಿಸಿ ಕೆಪಿಸಿಸಿ ಪದಾಧಿಕಾರಿ ನೌಶಾದ್‌ ಆಲಿ ಸಲ್ಲಿಸಿದ್ದ ಮನವಿಯನ್ನು ಕೇರಳ ಹೈಕೋರ್ಟ್‌ನ ವಿಭಾಗೀಯ ಪೀಠ ತಿರಸ್ಕರಿಸಿದೆ. ಆಡಳಿತ ಸುಧಾರಣೆಗಳ ಬಗ್ಗೆ ದೂರುದಾರರು ತಕ್ಷಣ ತಡೆಯಾಜ್ಞೆ ನೀಡುವಂತೆ ಕೋರಿದ್ದಾರೆ. ಆದರೆ ನ್ಯಾಯಾಲಯ ಅದಕ್ಕೆ ಅವಕಾಶ ನೀಡಿಲ್ಲ. ಬದಲಾಗಿ, ವಿವರಣೆ ಕೋರಿ ಕೇಂದ್ರ ಮತ್ತು ಲಕ್ಷದ್ವೀಪ ಆಡಳಿತಕ್ಕೆ ಪತ್ರ ಕಳುಹಿಸಿದೆ.

ಇದನ್ನೂ ಓದಿ: ಒಂದು ಸಲದ ಲಕ್ಷದ್ವೀಪದ ಭೇಟಿಗೆ 23 ಲಕ್ಷ ಖರ್ಚು: ಪುಟ್ಟ ದ್ವೀಪದ ಮೇಲೆ ಬಿಜೆಪಿಯ ದೊಡ್ಡ ಹೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...