Homeಮುಖಪುಟಲಕ್ಷದ್ವೀಪ ನ್ಯಾಯಾಂಗ ವ್ಯಾಪ್ತಿ ಬದಲಾವಣೆ ಪ್ರಸ್ತಾಪ - ಆಡಳಿತ ದುರುಪಯೋಗ ಆರೋಪ

ಲಕ್ಷದ್ವೀಪ ನ್ಯಾಯಾಂಗ ವ್ಯಾಪ್ತಿ ಬದಲಾವಣೆ ಪ್ರಸ್ತಾಪ – ಆಡಳಿತ ದುರುಪಯೋಗ ಆರೋಪ

- Advertisement -
- Advertisement -

ಶಾಂತವಾಗಿದ್ದ ಲಕ್ಷದ್ವೀಪದಲ್ಲಿ ರಾಜಕೀಯ ಪ್ರತಿಭಟನೆಗಳು ಪ್ರಾರಂಭವಾಗಿದೆ. ದ್ವೀಪಕ್ಕೆ ಹೊಸದಾಗಿ ನೇಮಕಗೊಂಡಿರುವ ಆಡಳಿತಾಧಿಕಾರಿ ಪ್ರಫುಲ್ ಪಟೇಲ್‌‌ ದ್ವೀಪದ ಸಂಸ್ಕೃತಿಯನ್ನು ಹಾಳುಗೆಡವುತ್ತಿದ್ದಾರೆ ಮತ್ತು ತಮ್ಮ ಹಾಗೂ ತಮ್ಮ ರಾಜಕೀಯ ಹಿತಾಸಕ್ತಿಗಾಗಿ ದ್ವೀಪದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ದ್ವೀಪವಾಸಿಗಳು ಆರೋಪಿಸುತ್ತಿದ್ದಾರೆ. ಅವರು ದ್ವೀಪದಲ್ಲಿ ಆಡಳಿತ ವಹಿಸಿಕೊಂಡ ನಂತರ ಮಾಡಿರುವ ಕೊರೊನಾ ಮಾರ್ಗಸೂಚಿಯ ಬದಲಾವಣೆ, ಮೀನುಗಾರರ ಗುಡಿಸಲು ತೆರವು, ಗೂಂಡಾ ಕಾಯ್ದೆ ಸೇರಿದಂತೆ ಜಾರಿ ಮತ್ತಿತರ ನಿರ್ಣಯಗಳ ವಿರುದ್ಧ ಕೇರಳ ಹೈಕೋರ್ಟ್‌ನಲ್ಲಿ ಇದುವರೆಗೂ 23 ಅರ್ಜಿಗಳು ಸಲ್ಲಿಕೆಯಾಗಿವೆ.

ಇದೀಗ ಮತ್ತೆ ತನ್ನ ಅಧಿಕಾರವನ್ನು ದುರುಪಯೋಗ ಮಾಡಲು ಆಡಳಿತಾಧಿಕಾರಿ ಹೊರಟಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಫುಲ್ ಪಟೇಲ್‌‌‌, ಲಕ್ಷದ್ವೀಪದ ಕಾನೂನು ವ್ಯಾಪ್ತಿಯನ್ನು ಕೇರಳ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ ಬದಲಾಯಿಸಲು ಪ್ರಸ್ತಾಪ ಇಟ್ಟಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ: ಲಕ್ಷದ್ವೀಪ ಹೇಗಿತ್ತು? ಈಗೇನಾಗುತ್ತಿದೆ? 

ಪ್ರಫುಲ್ ಪಟೇಲ್‌‌ ತಾನು ದ್ವೀಪದಲ್ಲಿ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಗೋ ಮಾಂಸ ಮಾರಾಟ ನಿಷೇಧ, ಅಪರಾಧ ಪ್ರಕರಣ ಕಡಿಮೆ ಇರುವ ದ್ವೀಪದಲ್ಲಿ ಗೂಂಡಾ ಕಾಯ್ದೆ ಜಾರಿ, ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಪಂಚಾಯತ್‌ ಚುನಾವಣೆಗೆ ಸ್ಪರ್ಧಿಸಲು ಅನರ್ಹ, ಖಾಸಗಿ ಭೂಮಿ ವಶಪಡಿಸಿಕೊಳ್ಳಲು ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ, ಲಕ್ಷದ್ವೀಪಾಭಿವೃದ್ಧಿ ಪ್ರಾಧಿಕಾರ 2021 ರಚನೆ, ಲಕ್ಷದ್ವೀಪದಲ್ಲಿ ಮದ್ಯ ಮಾರಾಟ ನಿಷೇಧ ತೆರವು, ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಮಾಂಸಾಹಾರ ನಿಷೇಧವನ್ನು ಒಳಗೊಂಡ ಹಲವು ಮಸೂದೆ, ವಿಧೇಯಕಗಳನ್ನು ಪರಿಚಯಿಸಿದ್ದರು. ಇದು ದ್ವೀಪದ ಜನರ ವಿರೋಧಕ್ಕೆ ಕಾರಣವಾಗಿದ್ದು, ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದಾರೆ. ಅಲ್ಲದೆ, ಕಾನೂನು ಹೋರಾಟಕ್ಕೂ ಮುಂದಾಗಿದ್ದು, ಕೇರಳ ಹೈಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.

“ನ್ಯಾಯಾಂಗ ವ್ಯಾಪ್ತಿಯನ್ನು ಕೇರಳದಿಂದ ಕರ್ನಾಟಕಕ್ಕೆ ಸ್ಥಳಾಂತರಿಸುವ ಪ್ರಫುಲ್‌ ಪಟೇಲ್‌‌ ಅವರ ಪ್ರಯತ್ನವು, ಅಧಿಕಾರದ ಸಂಪೂರ್ಣ‌ ದುರುಪಯೋಗವಾಗಿದೆ. ಈ ದ್ವೀಪಗಳಲ್ಲಿನ ಜನರ ಮಾತೃಭಾಷೆ ಮಲಯಾಳಂ ಆಗಿದ್ದು, ಕೇರಳ ಹೈಕೋರ್ಟ್‌ನ ಸಂಪೂರ್ಣ ಹೆಸರು ‘ಕೇರಳ ಮತ್ತು ಲಕ್ಷದ್ವೀಪ ಹೈಕೋರ್ಟ್’ ಎಂದಾಗಿದೆ. ಪ್ರಫುಲ್ ಪಟೇಲ್‌ಗಿಂತಲೂ ಮುಂಚೆ ಇಲ್ಲಿ ಹಲವು ಆಡಳಿತಾಧಿಕಾರಿಗಳು ಆಡಳಿತ ನಡೆಸಿದ್ದಾರೆ. ಯಾರಿಗೂ ಈ ರೀತಿಯ ಆಲೋಚನೆ ಇರಲಿಲ್ಲ. ನಾವು ಈ ಪ್ರಸ್ತಾಪವನ್ನು ವಿರೋಧಿಸುತ್ತೇವೆ” ಎಂದು ಲಕ್ಷದ್ವೀಪದ ಸಂಸದ ಮೊಹಮ್ಮದ್ ಫೈಝಲ್‌ ಹೇಳಿದ್ದಾರೆ.

ಇದನ್ನೂ ಓದಿ: ಹಿಂದುತ್ವ ಅಜೆಂಡಾದ ಪ್ರಯೋಗಕ್ಕೆ ಈಗ ನೂತನ ಬಲಿ ಲಕ್ಷದ್ವೀಪ

ಪ್ರಸ್ತುತ ಲಕ್ಷದ್ವೀಪದ ಹೈಕೋರ್ಟ್‌ ಕೂಡಾ ಆಗಿರುವ ಕೇರಳ ಹೈಕೋರ್ಟ್‌ ಲಕ್ಷದ್ವೀಪದಿಂದ 400 ಕಿ.ಮೀ.ದೂರದಲ್ಲಿದೆ. ಆದರೆ ಪ್ರಫುಲ್ ಪಟೇಲ್‌ ಹೊಸದಾಗಿ ಪ್ರಸ್ತಾಪ ಮಾಡಿರುವ ಕರ್ನಾಟಕ ಹೈಕೋರ್ಟ್‌ ದ್ವೀಪದಿಂದ 1,000 ಕಿ.ಮೀ. ದೂರದಲ್ಲಿದೆ. ಇದು ದ್ವೀಪವಾಸಿಗಳಿಗೆ ನ್ಯಾಯ ನಿರಾಕರಿಸುವ ಹುನ್ನಾರ ಎಂದು ಕೂಡಾ ಆರೋಪಿಸಲಾಗಿದೆ.

ಸಂವಿಧಾನದ 241 ನೇ ವಿಧಿ ಪ್ರಕಾರ ಹೈಕೋರ್ಟ್‌ನ ಅಧಿಕಾರ ವ್ಯಾಪ್ತಿಯನ್ನು ಸಂಸತ್ತಿನ ಕಾಯ್ದೆಯ ಮೂಲಕ ಮಾತ್ರ ಬದಲಿಸಬಹುದಾಗಿದೆ. ಈ ವಿಧಿಯ ಅನುಚ್ಛೇದ (1)ರ ಪ್ರಕಾರ ಸಂಸತ್ತು ತನ್ನ ಕಾಯಿದೆಯ ಮೂಲಕ ಕೇಂದ್ರಾಡಳಿತ ಪ್ರದೇಶಕ್ಕಾಗಿ ಹೈಕೋರ್ಟ್‌ ಸ್ಥಾಪಿಸಬಹುದು ಅಥವಾ ಆ ಪ್ರದೇಶದಲ್ಲಿರುವ ನ್ಯಾಯಾಲಯವನ್ನು ಹೈಕೋರ್ಟ್‌ ಆಗಿ ಪರಿವರ್ತಿಸಬಹುದು.

ಲಕ್ಷದ್ವೀಪ ಆಡಳಿತ ಸುಧಾರಣೆಗಳನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಕೇರಳ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ. ಲಕ್ಷದ್ವೀಪ ಅಭಿವೃದ್ಧಿ ಪ್ರಾಧಿಕಾರದ ಕರಡು ನಿಯಮಗಳನ್ನು ಪ್ರಶ್ನಿಸಿ ಕೆಪಿಸಿಸಿ ಪದಾಧಿಕಾರಿ ನೌಶಾದ್‌ ಆಲಿ ಸಲ್ಲಿಸಿದ್ದ ಮನವಿಯನ್ನು ಕೇರಳ ಹೈಕೋರ್ಟ್‌ನ ವಿಭಾಗೀಯ ಪೀಠ ತಿರಸ್ಕರಿಸಿದೆ. ಆಡಳಿತ ಸುಧಾರಣೆಗಳ ಬಗ್ಗೆ ದೂರುದಾರರು ತಕ್ಷಣ ತಡೆಯಾಜ್ಞೆ ನೀಡುವಂತೆ ಕೋರಿದ್ದಾರೆ. ಆದರೆ ನ್ಯಾಯಾಲಯ ಅದಕ್ಕೆ ಅವಕಾಶ ನೀಡಿಲ್ಲ. ಬದಲಾಗಿ, ವಿವರಣೆ ಕೋರಿ ಕೇಂದ್ರ ಮತ್ತು ಲಕ್ಷದ್ವೀಪ ಆಡಳಿತಕ್ಕೆ ಪತ್ರ ಕಳುಹಿಸಿದೆ.

ಇದನ್ನೂ ಓದಿ: ಒಂದು ಸಲದ ಲಕ್ಷದ್ವೀಪದ ಭೇಟಿಗೆ 23 ಲಕ್ಷ ಖರ್ಚು: ಪುಟ್ಟ ದ್ವೀಪದ ಮೇಲೆ ಬಿಜೆಪಿಯ ದೊಡ್ಡ ಹೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...