Homeಮುಖಪುಟಲಕ್ಷದ್ವೀಪ ನ್ಯಾಯಾಂಗ ವ್ಯಾಪ್ತಿ ಬದಲಾವಣೆ ಪ್ರಸ್ತಾಪ - ಆಡಳಿತ ದುರುಪಯೋಗ ಆರೋಪ

ಲಕ್ಷದ್ವೀಪ ನ್ಯಾಯಾಂಗ ವ್ಯಾಪ್ತಿ ಬದಲಾವಣೆ ಪ್ರಸ್ತಾಪ – ಆಡಳಿತ ದುರುಪಯೋಗ ಆರೋಪ

- Advertisement -
- Advertisement -

ಶಾಂತವಾಗಿದ್ದ ಲಕ್ಷದ್ವೀಪದಲ್ಲಿ ರಾಜಕೀಯ ಪ್ರತಿಭಟನೆಗಳು ಪ್ರಾರಂಭವಾಗಿದೆ. ದ್ವೀಪಕ್ಕೆ ಹೊಸದಾಗಿ ನೇಮಕಗೊಂಡಿರುವ ಆಡಳಿತಾಧಿಕಾರಿ ಪ್ರಫುಲ್ ಪಟೇಲ್‌‌ ದ್ವೀಪದ ಸಂಸ್ಕೃತಿಯನ್ನು ಹಾಳುಗೆಡವುತ್ತಿದ್ದಾರೆ ಮತ್ತು ತಮ್ಮ ಹಾಗೂ ತಮ್ಮ ರಾಜಕೀಯ ಹಿತಾಸಕ್ತಿಗಾಗಿ ದ್ವೀಪದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ದ್ವೀಪವಾಸಿಗಳು ಆರೋಪಿಸುತ್ತಿದ್ದಾರೆ. ಅವರು ದ್ವೀಪದಲ್ಲಿ ಆಡಳಿತ ವಹಿಸಿಕೊಂಡ ನಂತರ ಮಾಡಿರುವ ಕೊರೊನಾ ಮಾರ್ಗಸೂಚಿಯ ಬದಲಾವಣೆ, ಮೀನುಗಾರರ ಗುಡಿಸಲು ತೆರವು, ಗೂಂಡಾ ಕಾಯ್ದೆ ಸೇರಿದಂತೆ ಜಾರಿ ಮತ್ತಿತರ ನಿರ್ಣಯಗಳ ವಿರುದ್ಧ ಕೇರಳ ಹೈಕೋರ್ಟ್‌ನಲ್ಲಿ ಇದುವರೆಗೂ 23 ಅರ್ಜಿಗಳು ಸಲ್ಲಿಕೆಯಾಗಿವೆ.

ಇದೀಗ ಮತ್ತೆ ತನ್ನ ಅಧಿಕಾರವನ್ನು ದುರುಪಯೋಗ ಮಾಡಲು ಆಡಳಿತಾಧಿಕಾರಿ ಹೊರಟಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಫುಲ್ ಪಟೇಲ್‌‌‌, ಲಕ್ಷದ್ವೀಪದ ಕಾನೂನು ವ್ಯಾಪ್ತಿಯನ್ನು ಕೇರಳ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ ಬದಲಾಯಿಸಲು ಪ್ರಸ್ತಾಪ ಇಟ್ಟಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ: ಲಕ್ಷದ್ವೀಪ ಹೇಗಿತ್ತು? ಈಗೇನಾಗುತ್ತಿದೆ? 

ಪ್ರಫುಲ್ ಪಟೇಲ್‌‌ ತಾನು ದ್ವೀಪದಲ್ಲಿ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಗೋ ಮಾಂಸ ಮಾರಾಟ ನಿಷೇಧ, ಅಪರಾಧ ಪ್ರಕರಣ ಕಡಿಮೆ ಇರುವ ದ್ವೀಪದಲ್ಲಿ ಗೂಂಡಾ ಕಾಯ್ದೆ ಜಾರಿ, ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಪಂಚಾಯತ್‌ ಚುನಾವಣೆಗೆ ಸ್ಪರ್ಧಿಸಲು ಅನರ್ಹ, ಖಾಸಗಿ ಭೂಮಿ ವಶಪಡಿಸಿಕೊಳ್ಳಲು ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ, ಲಕ್ಷದ್ವೀಪಾಭಿವೃದ್ಧಿ ಪ್ರಾಧಿಕಾರ 2021 ರಚನೆ, ಲಕ್ಷದ್ವೀಪದಲ್ಲಿ ಮದ್ಯ ಮಾರಾಟ ನಿಷೇಧ ತೆರವು, ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಮಾಂಸಾಹಾರ ನಿಷೇಧವನ್ನು ಒಳಗೊಂಡ ಹಲವು ಮಸೂದೆ, ವಿಧೇಯಕಗಳನ್ನು ಪರಿಚಯಿಸಿದ್ದರು. ಇದು ದ್ವೀಪದ ಜನರ ವಿರೋಧಕ್ಕೆ ಕಾರಣವಾಗಿದ್ದು, ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದಾರೆ. ಅಲ್ಲದೆ, ಕಾನೂನು ಹೋರಾಟಕ್ಕೂ ಮುಂದಾಗಿದ್ದು, ಕೇರಳ ಹೈಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.

“ನ್ಯಾಯಾಂಗ ವ್ಯಾಪ್ತಿಯನ್ನು ಕೇರಳದಿಂದ ಕರ್ನಾಟಕಕ್ಕೆ ಸ್ಥಳಾಂತರಿಸುವ ಪ್ರಫುಲ್‌ ಪಟೇಲ್‌‌ ಅವರ ಪ್ರಯತ್ನವು, ಅಧಿಕಾರದ ಸಂಪೂರ್ಣ‌ ದುರುಪಯೋಗವಾಗಿದೆ. ಈ ದ್ವೀಪಗಳಲ್ಲಿನ ಜನರ ಮಾತೃಭಾಷೆ ಮಲಯಾಳಂ ಆಗಿದ್ದು, ಕೇರಳ ಹೈಕೋರ್ಟ್‌ನ ಸಂಪೂರ್ಣ ಹೆಸರು ‘ಕೇರಳ ಮತ್ತು ಲಕ್ಷದ್ವೀಪ ಹೈಕೋರ್ಟ್’ ಎಂದಾಗಿದೆ. ಪ್ರಫುಲ್ ಪಟೇಲ್‌ಗಿಂತಲೂ ಮುಂಚೆ ಇಲ್ಲಿ ಹಲವು ಆಡಳಿತಾಧಿಕಾರಿಗಳು ಆಡಳಿತ ನಡೆಸಿದ್ದಾರೆ. ಯಾರಿಗೂ ಈ ರೀತಿಯ ಆಲೋಚನೆ ಇರಲಿಲ್ಲ. ನಾವು ಈ ಪ್ರಸ್ತಾಪವನ್ನು ವಿರೋಧಿಸುತ್ತೇವೆ” ಎಂದು ಲಕ್ಷದ್ವೀಪದ ಸಂಸದ ಮೊಹಮ್ಮದ್ ಫೈಝಲ್‌ ಹೇಳಿದ್ದಾರೆ.

ಇದನ್ನೂ ಓದಿ: ಹಿಂದುತ್ವ ಅಜೆಂಡಾದ ಪ್ರಯೋಗಕ್ಕೆ ಈಗ ನೂತನ ಬಲಿ ಲಕ್ಷದ್ವೀಪ

ಪ್ರಸ್ತುತ ಲಕ್ಷದ್ವೀಪದ ಹೈಕೋರ್ಟ್‌ ಕೂಡಾ ಆಗಿರುವ ಕೇರಳ ಹೈಕೋರ್ಟ್‌ ಲಕ್ಷದ್ವೀಪದಿಂದ 400 ಕಿ.ಮೀ.ದೂರದಲ್ಲಿದೆ. ಆದರೆ ಪ್ರಫುಲ್ ಪಟೇಲ್‌ ಹೊಸದಾಗಿ ಪ್ರಸ್ತಾಪ ಮಾಡಿರುವ ಕರ್ನಾಟಕ ಹೈಕೋರ್ಟ್‌ ದ್ವೀಪದಿಂದ 1,000 ಕಿ.ಮೀ. ದೂರದಲ್ಲಿದೆ. ಇದು ದ್ವೀಪವಾಸಿಗಳಿಗೆ ನ್ಯಾಯ ನಿರಾಕರಿಸುವ ಹುನ್ನಾರ ಎಂದು ಕೂಡಾ ಆರೋಪಿಸಲಾಗಿದೆ.

ಸಂವಿಧಾನದ 241 ನೇ ವಿಧಿ ಪ್ರಕಾರ ಹೈಕೋರ್ಟ್‌ನ ಅಧಿಕಾರ ವ್ಯಾಪ್ತಿಯನ್ನು ಸಂಸತ್ತಿನ ಕಾಯ್ದೆಯ ಮೂಲಕ ಮಾತ್ರ ಬದಲಿಸಬಹುದಾಗಿದೆ. ಈ ವಿಧಿಯ ಅನುಚ್ಛೇದ (1)ರ ಪ್ರಕಾರ ಸಂಸತ್ತು ತನ್ನ ಕಾಯಿದೆಯ ಮೂಲಕ ಕೇಂದ್ರಾಡಳಿತ ಪ್ರದೇಶಕ್ಕಾಗಿ ಹೈಕೋರ್ಟ್‌ ಸ್ಥಾಪಿಸಬಹುದು ಅಥವಾ ಆ ಪ್ರದೇಶದಲ್ಲಿರುವ ನ್ಯಾಯಾಲಯವನ್ನು ಹೈಕೋರ್ಟ್‌ ಆಗಿ ಪರಿವರ್ತಿಸಬಹುದು.

ಲಕ್ಷದ್ವೀಪ ಆಡಳಿತ ಸುಧಾರಣೆಗಳನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಕೇರಳ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ. ಲಕ್ಷದ್ವೀಪ ಅಭಿವೃದ್ಧಿ ಪ್ರಾಧಿಕಾರದ ಕರಡು ನಿಯಮಗಳನ್ನು ಪ್ರಶ್ನಿಸಿ ಕೆಪಿಸಿಸಿ ಪದಾಧಿಕಾರಿ ನೌಶಾದ್‌ ಆಲಿ ಸಲ್ಲಿಸಿದ್ದ ಮನವಿಯನ್ನು ಕೇರಳ ಹೈಕೋರ್ಟ್‌ನ ವಿಭಾಗೀಯ ಪೀಠ ತಿರಸ್ಕರಿಸಿದೆ. ಆಡಳಿತ ಸುಧಾರಣೆಗಳ ಬಗ್ಗೆ ದೂರುದಾರರು ತಕ್ಷಣ ತಡೆಯಾಜ್ಞೆ ನೀಡುವಂತೆ ಕೋರಿದ್ದಾರೆ. ಆದರೆ ನ್ಯಾಯಾಲಯ ಅದಕ್ಕೆ ಅವಕಾಶ ನೀಡಿಲ್ಲ. ಬದಲಾಗಿ, ವಿವರಣೆ ಕೋರಿ ಕೇಂದ್ರ ಮತ್ತು ಲಕ್ಷದ್ವೀಪ ಆಡಳಿತಕ್ಕೆ ಪತ್ರ ಕಳುಹಿಸಿದೆ.

ಇದನ್ನೂ ಓದಿ: ಒಂದು ಸಲದ ಲಕ್ಷದ್ವೀಪದ ಭೇಟಿಗೆ 23 ಲಕ್ಷ ಖರ್ಚು: ಪುಟ್ಟ ದ್ವೀಪದ ಮೇಲೆ ಬಿಜೆಪಿಯ ದೊಡ್ಡ ಹೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...