Homeಮುಖಪುಟಲಕ್ಷದ್ವೀಪ: ನಿರ್ಮಾಪಕಿ ಆಯಿಷಾ ಸುಲ್ತಾನಗೆ ಬಂಧನದಿಂದ ರಕ್ಷಣೆ ನೀಡಿದ ಕೇರಳ ಹೈಕೋರ್ಟ್‌

ಲಕ್ಷದ್ವೀಪ: ನಿರ್ಮಾಪಕಿ ಆಯಿಷಾ ಸುಲ್ತಾನಗೆ ಬಂಧನದಿಂದ ರಕ್ಷಣೆ ನೀಡಿದ ಕೇರಳ ಹೈಕೋರ್ಟ್‌

ಬಿಜೆಪಿಯು ಅವರ ವಿರುದ್ದ ದೇಶದ್ರೋಹದ ಪ್ರಕರಣವನ್ನು ದಾಖಲಿಸಿತ್ತು

- Advertisement -
- Advertisement -

ದೇಶದ್ರೋಹ ಪ್ರಕರಣದಲ್ಲಿ ಸಿಲುಕಿದ್ದ ಲಕ್ಷದ್ವೀಪದ ಚಿತ್ರ ನಿರ್ಮಾಪಕಿ ಆಯಿಷಾ ಸುಲ್ತಾನ ಅವರಿಗೆ ಕೇರಳ ಹೈಕೋರ್ಟ್ ಒಂದು ವಾರ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದೆ. ಮಲಯಾಳಂ ಟಿವಿ ಚಾನೆಲ್‌ ಒಂದರಲ್ಲಿ ಕಾಣಿಸಿಕೊಂಡಿದ್ದ ಆಯಿಷಾ ಸುಲ್ತಾನ, ಲಕ್ಷದ್ವೀಪದ ಆಡಳಿತಾಧಿಕಾರಿಯನ್ನು ಒಕ್ಕೂಟ ಸರ್ಕಾರವು ‘ಜೈವಿಕ ಅಸ್ತ್ರ’ ರೂಪದಲ್ಲಿ ಪ್ರಯೋಗಿಸಿದೆ ಎಂದು ಹೇಳಿದ್ದರು. ಇದರ ವಿರುದ್ದ ಲಕ್ಷದ್ವೀಪ ಬಿಜೆಪಿ ಅಧ್ಯಕ್ಷ ಸಿ. ಅಬ್ದುಲ್ ಖಾದರ್ ಹಾಜಿ ನೀಡಿದ ದೂರಿನ ಮೇರೆಗೆ ಜೂನ್ 10 ರಂದು ದ್ವೀಪದ ಪೊಲೀಸರು ಆಯಿಷಾ ಸುಲ್ತಾನ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಆಯಿಷಾ ಸುಲ್ತಾನ ಅವರು ಟಿವಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, “ಶೂನ್ಯ ಕೊರೊನಾವಿದ್ದ ಪ್ರದೇಶದಲ್ಲಿ ದಿನಕ್ಕೆ ನೂರು ಪ್ರಕರಣಗಳು ವರದಿಯಾಗುತ್ತಿವೆ. ಒಕ್ಕೂಟ ಸರ್ಕಾರ ಹೊಸದಾಗಿ ನೇಮಕಮಾಡಿದ್ದ ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಅವರನ್ನು ಪ್ರಯೋಗಿಸಿದ್ದು ‘ಜೈವಿಕ ಅಸ್ತ್ರ’ ರೀತಿಯಲ್ಲಾಗಿದೆ. ನನಗೆ ಸ್ಪಷ್ಟವಾಗಿ ಹೇಳಲು ಸಾಧ್ಯ, ಒಕ್ಕೂಟ ಸರ್ಕಾರವು ಕೊರೊನಾವನ್ನು ಜೈವಿಕ ಅಸ್ತ್ರವಾಗಿ ಪ್ರಯೋಗಿಸಿದೆ” ಎಂದು ಹೇಳಿದ್ದರು. ಇದನ್ನು ಬಿಜೆಪಿ ವಿವಾದವನ್ನಾಗಿ ಮಾಡಿತ್ತು.

ಇದನ್ನೂ ಓದಿ:  ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ನ್ಯಾಯಮೂರ್ತಿ ಅಶೋಕ್ ಮೆನನ್ ಅವರ ಏಕ-ನ್ಯಾಯಾಧೀಶರ ಪೀಠವು ತನಿಖೆಗೆ ಸಹಕರಿಸುವಂತೆ ಸುಲ್ತಾನಾಗೆ ನಿರ್ದೇಶನ ನೀಡಿದ್ದು, ಕೋಡ್ ಆಫ್ ಕ್ರಿಮಿನಲ್ ಪ್ರೊಸೀಜರ್ (ಸಿಆರ್ಪಿಸಿ) ಯ ಸೆಕ್ಷನ್ 41 ಎ ಅಡಿಯಲ್ಲಿ ಲಕ್ಷದ್ವೀಪದಲ್ಲಿರುವ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವುದು ಅಗತ್ಯವಾಗಿದೆ ಎಂದು ಹೇಳಿದೆ. ನಿರೀಕ್ಷಣಾ ಜಾಮೀನು ಕೋರಿ ಆಯಿಷಾ ಸುಲ್ತಾನಾ ಸಲ್ಲಿಸಿದ್ದ ಮನವಿಯ ತೀರ್ಪನ್ನು ನ್ಯಾಯಾಲಯವು ಕಾಯ್ದಿರಿಸಿದೆ.

ವಿಚಾರಣೆಯ ಸಮಯದಲ್ಲಿ ಆಯಿಷಾ ಸುಲ್ತಾನ ಅವರ ಜಾಮೀನು ಅರ್ಜಿಯನ್ನು ಲಕ್ಷದ್ವೀಪ ಆಡಳಿತ ವಿರೋಧಿಸಿತ್ತು.

ಟಿವಿ ಕಾರ್ಯಕ್ರಮದಲ್ಲಿ ನೀಡಿದ್ದ ಹೇಳಿಕೆಯನ್ನು ಬಿಜೆಪಿ ವಿವಾದ ಮಾಡುತ್ತಿದ್ದಂತೆ ಆಯಿಷಾ ಸ್ಪಷ್ಟೀಕರಣವನ್ನು ಕೂಡಾ ನೀಡಿದ್ದರು. ಅವರು ತನ್ನ ಪೇಸ್‌ಬುಕ್‌ ಪೋಸ್ಟ್‌‌ನಲ್ಲಿ, “ನಾನು ಪಟೇಲ್ ಅವರ ಕೆಲವು ನಿರ್ಧಾರಗಳನ್ನು ಉಲ್ಲೇಖಿಸಿ ಟೀಕಿಸಿದ್ದೆನೆಯೆ ಹೊರತು ದೇಶದ ವಿರುದ್ದ ಅಲ್ಲ. ಅವರ ನಡೆಯ ಕಾರಣದಿಂದಾಗಿ ಶೂನ್ಯವಿದ್ದ ಲಕ್ಷದ್ವೀಪದಲ್ಲಿ ಕೊರೊನಾ ತೀವ್ರವಾಗಿ ಹರಡುತ್ತಿದೆ. ಆದ್ದರಿಂದಲೆ ಅವರನ್ನು ನಾನು ಜೈವಿಕ ಅಸ್ತ್ರ ಎಂದು ಕರೆದಿದ್ದೇನೆ” ಎಂದು ತಿಳಿಸಿದ್ದರು.

ಆಯಿಷಾ ಸುಲ್ತಾನ ಅವರ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸುತ್ತಿದ್ದಂತೆ ಅನೇಕ ಸ್ಥಳೀಯ ಬಿಜೆಪಿ ನಾಯಕರು ಪಕ್ಷವನ್ನು ತೊರೆದು ಪ್ರತಿಭಟಿಸಿದ್ದಾರೆ.

ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಅವರು ಪರಿಚಯಿಸಿದ ಹೊಸ ನಿಯಮಗಳ ವಿರುದ್ದ, ಒಂದು ತಿಂಗಳಿಗಿಂತಲೂ ಹೆಚ್ಚು ಕಾಲದಿಂದ ದ್ವೀಪವಾಸಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಹೊಸ ನೀತಿಗಳು ದ್ವೀಪವಾಸಿಗಳ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಅವರು ಆರೋಪಿಸುತ್ತಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪ: ದೇಶದ್ರೋಹ ಆರೋಪದ ವಿರುದ್ದ ಕೇರಳ ಹೈಕೋರ್ಟ್‌ ಮಟ್ಟಿಲೇರಿದ ನಿರ್ಮಾಪಕಿ ಆಯಿಷಾ ಸುಲ್ತಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...