Homeಮುಖಪುಟಲಕ್ಷದ್ವೀಪ: ನಿರ್ಮಾಪಕಿ ಆಯಿಷಾ ಸುಲ್ತಾನಗೆ ಬಂಧನದಿಂದ ರಕ್ಷಣೆ ನೀಡಿದ ಕೇರಳ ಹೈಕೋರ್ಟ್‌

ಲಕ್ಷದ್ವೀಪ: ನಿರ್ಮಾಪಕಿ ಆಯಿಷಾ ಸುಲ್ತಾನಗೆ ಬಂಧನದಿಂದ ರಕ್ಷಣೆ ನೀಡಿದ ಕೇರಳ ಹೈಕೋರ್ಟ್‌

ಬಿಜೆಪಿಯು ಅವರ ವಿರುದ್ದ ದೇಶದ್ರೋಹದ ಪ್ರಕರಣವನ್ನು ದಾಖಲಿಸಿತ್ತು

- Advertisement -
- Advertisement -

ದೇಶದ್ರೋಹ ಪ್ರಕರಣದಲ್ಲಿ ಸಿಲುಕಿದ್ದ ಲಕ್ಷದ್ವೀಪದ ಚಿತ್ರ ನಿರ್ಮಾಪಕಿ ಆಯಿಷಾ ಸುಲ್ತಾನ ಅವರಿಗೆ ಕೇರಳ ಹೈಕೋರ್ಟ್ ಒಂದು ವಾರ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದೆ. ಮಲಯಾಳಂ ಟಿವಿ ಚಾನೆಲ್‌ ಒಂದರಲ್ಲಿ ಕಾಣಿಸಿಕೊಂಡಿದ್ದ ಆಯಿಷಾ ಸುಲ್ತಾನ, ಲಕ್ಷದ್ವೀಪದ ಆಡಳಿತಾಧಿಕಾರಿಯನ್ನು ಒಕ್ಕೂಟ ಸರ್ಕಾರವು ‘ಜೈವಿಕ ಅಸ್ತ್ರ’ ರೂಪದಲ್ಲಿ ಪ್ರಯೋಗಿಸಿದೆ ಎಂದು ಹೇಳಿದ್ದರು. ಇದರ ವಿರುದ್ದ ಲಕ್ಷದ್ವೀಪ ಬಿಜೆಪಿ ಅಧ್ಯಕ್ಷ ಸಿ. ಅಬ್ದುಲ್ ಖಾದರ್ ಹಾಜಿ ನೀಡಿದ ದೂರಿನ ಮೇರೆಗೆ ಜೂನ್ 10 ರಂದು ದ್ವೀಪದ ಪೊಲೀಸರು ಆಯಿಷಾ ಸುಲ್ತಾನ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಆಯಿಷಾ ಸುಲ್ತಾನ ಅವರು ಟಿವಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, “ಶೂನ್ಯ ಕೊರೊನಾವಿದ್ದ ಪ್ರದೇಶದಲ್ಲಿ ದಿನಕ್ಕೆ ನೂರು ಪ್ರಕರಣಗಳು ವರದಿಯಾಗುತ್ತಿವೆ. ಒಕ್ಕೂಟ ಸರ್ಕಾರ ಹೊಸದಾಗಿ ನೇಮಕಮಾಡಿದ್ದ ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಅವರನ್ನು ಪ್ರಯೋಗಿಸಿದ್ದು ‘ಜೈವಿಕ ಅಸ್ತ್ರ’ ರೀತಿಯಲ್ಲಾಗಿದೆ. ನನಗೆ ಸ್ಪಷ್ಟವಾಗಿ ಹೇಳಲು ಸಾಧ್ಯ, ಒಕ್ಕೂಟ ಸರ್ಕಾರವು ಕೊರೊನಾವನ್ನು ಜೈವಿಕ ಅಸ್ತ್ರವಾಗಿ ಪ್ರಯೋಗಿಸಿದೆ” ಎಂದು ಹೇಳಿದ್ದರು. ಇದನ್ನು ಬಿಜೆಪಿ ವಿವಾದವನ್ನಾಗಿ ಮಾಡಿತ್ತು.

ಇದನ್ನೂ ಓದಿ:  ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ನ್ಯಾಯಮೂರ್ತಿ ಅಶೋಕ್ ಮೆನನ್ ಅವರ ಏಕ-ನ್ಯಾಯಾಧೀಶರ ಪೀಠವು ತನಿಖೆಗೆ ಸಹಕರಿಸುವಂತೆ ಸುಲ್ತಾನಾಗೆ ನಿರ್ದೇಶನ ನೀಡಿದ್ದು, ಕೋಡ್ ಆಫ್ ಕ್ರಿಮಿನಲ್ ಪ್ರೊಸೀಜರ್ (ಸಿಆರ್ಪಿಸಿ) ಯ ಸೆಕ್ಷನ್ 41 ಎ ಅಡಿಯಲ್ಲಿ ಲಕ್ಷದ್ವೀಪದಲ್ಲಿರುವ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವುದು ಅಗತ್ಯವಾಗಿದೆ ಎಂದು ಹೇಳಿದೆ. ನಿರೀಕ್ಷಣಾ ಜಾಮೀನು ಕೋರಿ ಆಯಿಷಾ ಸುಲ್ತಾನಾ ಸಲ್ಲಿಸಿದ್ದ ಮನವಿಯ ತೀರ್ಪನ್ನು ನ್ಯಾಯಾಲಯವು ಕಾಯ್ದಿರಿಸಿದೆ.

ವಿಚಾರಣೆಯ ಸಮಯದಲ್ಲಿ ಆಯಿಷಾ ಸುಲ್ತಾನ ಅವರ ಜಾಮೀನು ಅರ್ಜಿಯನ್ನು ಲಕ್ಷದ್ವೀಪ ಆಡಳಿತ ವಿರೋಧಿಸಿತ್ತು.

ಟಿವಿ ಕಾರ್ಯಕ್ರಮದಲ್ಲಿ ನೀಡಿದ್ದ ಹೇಳಿಕೆಯನ್ನು ಬಿಜೆಪಿ ವಿವಾದ ಮಾಡುತ್ತಿದ್ದಂತೆ ಆಯಿಷಾ ಸ್ಪಷ್ಟೀಕರಣವನ್ನು ಕೂಡಾ ನೀಡಿದ್ದರು. ಅವರು ತನ್ನ ಪೇಸ್‌ಬುಕ್‌ ಪೋಸ್ಟ್‌‌ನಲ್ಲಿ, “ನಾನು ಪಟೇಲ್ ಅವರ ಕೆಲವು ನಿರ್ಧಾರಗಳನ್ನು ಉಲ್ಲೇಖಿಸಿ ಟೀಕಿಸಿದ್ದೆನೆಯೆ ಹೊರತು ದೇಶದ ವಿರುದ್ದ ಅಲ್ಲ. ಅವರ ನಡೆಯ ಕಾರಣದಿಂದಾಗಿ ಶೂನ್ಯವಿದ್ದ ಲಕ್ಷದ್ವೀಪದಲ್ಲಿ ಕೊರೊನಾ ತೀವ್ರವಾಗಿ ಹರಡುತ್ತಿದೆ. ಆದ್ದರಿಂದಲೆ ಅವರನ್ನು ನಾನು ಜೈವಿಕ ಅಸ್ತ್ರ ಎಂದು ಕರೆದಿದ್ದೇನೆ” ಎಂದು ತಿಳಿಸಿದ್ದರು.

ಆಯಿಷಾ ಸುಲ್ತಾನ ಅವರ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸುತ್ತಿದ್ದಂತೆ ಅನೇಕ ಸ್ಥಳೀಯ ಬಿಜೆಪಿ ನಾಯಕರು ಪಕ್ಷವನ್ನು ತೊರೆದು ಪ್ರತಿಭಟಿಸಿದ್ದಾರೆ.

ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಅವರು ಪರಿಚಯಿಸಿದ ಹೊಸ ನಿಯಮಗಳ ವಿರುದ್ದ, ಒಂದು ತಿಂಗಳಿಗಿಂತಲೂ ಹೆಚ್ಚು ಕಾಲದಿಂದ ದ್ವೀಪವಾಸಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಹೊಸ ನೀತಿಗಳು ದ್ವೀಪವಾಸಿಗಳ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಅವರು ಆರೋಪಿಸುತ್ತಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪ: ದೇಶದ್ರೋಹ ಆರೋಪದ ವಿರುದ್ದ ಕೇರಳ ಹೈಕೋರ್ಟ್‌ ಮಟ್ಟಿಲೇರಿದ ನಿರ್ಮಾಪಕಿ ಆಯಿಷಾ ಸುಲ್ತಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...