Homeಮುಖಪುಟಲಕ್ಷದ್ವೀಪ: ಆಡಳಿತಾಧಿಕಾರಿಯ 2 ವಿವಾದಾತ್ಮಕ ಆದೇಶಗಳಿಗೆ ಕೇರಳ ಹೈಕೋರ್ಟ್ ತಡೆ

ಲಕ್ಷದ್ವೀಪ: ಆಡಳಿತಾಧಿಕಾರಿಯ 2 ವಿವಾದಾತ್ಮಕ ಆದೇಶಗಳಿಗೆ ಕೇರಳ ಹೈಕೋರ್ಟ್ ತಡೆ

- Advertisement -
- Advertisement -

ಲಕ್ಷದ್ವೀಪದ ಆಡಳಿತಾಧಿಕಾರಿಯ ವಿರುದ್ದ ಹೋರಾಟ ನಡೆಸುತ್ತಿರುವ ದ್ವೀಪವಾಸಿಗಳು ಮೊದಲ ಹಂತದ ನ್ಯಾಯಾಂಗ ಗೆಲುವು ದಾಖಲಿಸಿದ್ದು, ಪ್ರಫುಲ್ ಪಟೇಲ್‌ ನಿರ್ಧಾರಕ್ಕೆ ಹಿನ್ನಡೆಯಾಗಿದೆ. ಪ್ರಫುಲ್‌ ಪಟೇಲ್ ನೇತೃತ್ವದ ಲಕ್ಷದ್ವೀಪ ಆಡಳಿತದ ಎರಡು ವಿವಾದಾತ್ಮಕ ಆದೇಶಗಳಿಗೆ ಕೇರಳ ಹೈಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ.

ಶಾಂತವಾಗಿದ್ದ ಲಕ್ಷದ್ವೀಪದಲ್ಲಿ ರಾಜಕೀಯ ಪ್ರತಿಭಟನೆಗಳು ಪ್ರಾರಂಭವಾಗಿದೆ. ದ್ವೀಪಕ್ಕೆ ಹೊಸದಾಗಿ ನೇಮಕಗೊಂಡಿರುವ ಆಡಳಿತಾಧಿಕಾರಿ ಪ್ರಫುಲ್ ಪಟೇಲ್‌‌ ದ್ವೀಪದ ಸಂಸ್ಕೃತಿಯನ್ನು ಹಾಳುಗೆಡವುತ್ತಿದ್ದಾರೆ ಮತ್ತು ತಮ್ಮ ಹಾಗೂ ತಮ್ಮ ರಾಜಕೀಯ ಹಿತಾಸಕ್ತಿಗಾಗಿ ದ್ವೀಪದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ದ್ವೀಪವಾಸಿಗಳು ಆರೋಪಿಸುತ್ತಿದ್ದಾರೆ. ಅವರು ದ್ವೀಪದಲ್ಲಿ ಆಡಳಿತ ವಹಿಸಿಕೊಂಡ ನಂತರ ಮಾಡಿರುವ ಕೊರೊನಾ ಮಾರ್ಗಸೂಚಿಯ ಬದಲಾವಣೆ, ಮೀನುಗಾರರ ಗುಡಿಸಲು ತೆರವು, ಗೂಂಡಾ ಕಾಯ್ದೆ ಸೇರಿದಂತೆ ಜಾರಿ ಮತ್ತಿತರ ನಿರ್ಣಯಗಳ ವಿರುದ್ಧ ಕೇರಳ ಹೈಕೋರ್ಟ್‌ನಲ್ಲಿ ಇದುವರೆಗೂ 23 ಅರ್ಜಿಗಳು ಸಲ್ಲಿಕೆಯಾಗಿವೆ.

ಇದನ್ನೂ ಓದಿ: ಲಕ್ಷದ್ವೀಪ ಹೇಗಿತ್ತು? ಈಗೇನಾಗುತ್ತಿದೆ? 

ಮುಖ್ಯ ನ್ಯಾಯಮೂರ್ತಿ ಎಸ್.ಮಣಿಕುಮಾರ್ ಮತ್ತು ನ್ಯಾಯಮೂರ್ತಿ ಶಾಜಿ ಪಿ ಚಾಲಿ ನೇತೃತ್ವದ ವಿಭಾಗೀಯ ಪೀಠ ನೀಡಿದ ಆದೇಶದಲ್ಲಿ, ದ್ವೀಪಗಳಲ್ಲಿನ ಡೈರಿ ಫಾರಂಗಳನ್ನು ಮುಚ್ಚುವ ಮತ್ತು ಶಾಲಾ ಮಕ್ಕಳ ಮಧ್ಯಾಹ್ನದ ಊಟದ ಮೆನುವಿನಿಂದ ಕೋಳಿ, ಗೋಮಾಂಸ ಮತ್ತು ಇತರ ಮಾಂಸವನ್ನು ಬದಲಾಯಿಸುವ ಆಡಳಿತದ ನಿರ್ಧಾರಗಳನ್ನು ತಡೆಹಿಡಿದಿದೆ.

ಲಕ್ಷದ್ವೀಪದ ಕವರತ್ತಿ ಮೂಲದ ವಕೀಲ ಅಜ್ಮಲ್ ಅಹಮದ್ ಅವರು ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆಯಾಗಿ ಈ ಆದೇಶ ಹೊರಡಿಸಲಾಗಿದೆ. ನ್ಯಾಯಾಲಯವು ಲಕ್ಷದ್ವೀಪದ ಆಡಳಿತ ಮತ್ತು ಆಡಳಿತಾಧಿಕಾರಿ ಪ್ರಫುಲ್‌‌ ಪಟೇಲ್ ಅವರಿಂದ ಪ್ರತಿಕ್ರಿಯೆಗಳನ್ನು ಕೇಳಿದೆ.

ಡೈರಿ ಫಾರ್ಮ್‌ಗಳನ್ನು ಮುಚ್ಚುವುದು ಮತ್ತು ಶಾಲಾ ಮಕ್ಕಳ ಮಧ್ಯಾಹ್ನದ ಊಟದ ಮೆನುವಿನಿಂದ ಮಾಂಸಾಹಾರವನ್ನು ತೆಗೆಯುವ ಆಡಳಿತಾಧಿಕಾರಿಯ ನಿರ್ಧಾರಗಳು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು. ಈ ನಿರ್ಧಾರಗಳು ದ್ವೀಪವಾಸಿಗಳ ಸಂಸ್ಕೃತಿ ಮತ್ತು ಆಹಾರ ಪದ್ಧತಿಯನ್ನು ನಾಶಪಡಿಸುವ ಗುರಿಯನ್ನು ಹೊಂದಿವೆ ಎಂದು ಅರ್ಜಿಯಲ್ಲಿ ವಾದಿಸಲಾಗಿತ್ತು.

ಇದನ್ನೂ ಓದಿ: ಹಿಂದುತ್ವ ಅಜೆಂಡಾದ ಪ್ರಯೋಗಕ್ಕೆ ಈಗ ನೂತನ ಬಲಿ ಲಕ್ಷದ್ವೀಪ

ದ್ವೀಪಗಳ ಚುನಾಯಿತ ಸ್ಥಳೀಯ ಸಂಸ್ಥೆಗಳೊಂದಿಗೆ ಯಾವುದೇ ಸೂಕ್ತ ಸಮಾಲೋಚನೆ ಇಲ್ಲದೆ ಡೈರಿ ಫಾರಂಗಳನ್ನು ಮುಚ್ಚುವ ಮತ್ತು ಪ್ರಾಣಿಗಳನ್ನು ಹರಾಜು ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅರ್ಜಿ ಹೇಳಿತ್ತು.

ಪ್ರಫುಲ್ ಪಟೇಲ್‌‌ ತಾನು ದ್ವೀಪದಲ್ಲಿ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಗೋ ಮಾಂಸ ಮಾರಾಟ ನಿಷೇಧ, ಅಪರಾಧ ಪ್ರಕರಣ ಕಡಿಮೆ ಇರುವ ದ್ವೀಪದಲ್ಲಿ ಗೂಂಡಾ ಕಾಯ್ದೆ ಜಾರಿ, ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಪಂಚಾಯತ್‌ ಚುನಾವಣೆಗೆ ಸ್ಪರ್ಧಿಸಲು ಅನರ್ಹ, ಖಾಸಗಿ ಭೂಮಿ ವಶಪಡಿಸಿಕೊಳ್ಳಲು ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ, ಲಕ್ಷದ್ವೀಪಾಭಿವೃದ್ಧಿ ಪ್ರಾಧಿಕಾರ 2021 ರಚನೆ, ಲಕ್ಷದ್ವೀಪದಲ್ಲಿ ಮದ್ಯ ಮಾರಾಟ ನಿಷೇಧ ತೆರವು, ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಮಾಂಸಾಹಾರ ನಿಷೇಧವನ್ನು ಒಳಗೊಂಡ ಹಲವು ಮಸೂದೆ, ವಿಧೇಯಕಗಳನ್ನು ಪರಿಚಯಿಸಿದ್ದರು.

ಇದು ದ್ವೀಪದ ಜನರ ವಿರೋಧಕ್ಕೆ ಕಾರಣವಾಗಿದ್ದು, ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದಾರೆ. ಅಲ್ಲದೆ, ಕಾನೂನು ಹೋರಾಟಕ್ಕೂ ಮುಂದಾಗಿದ್ದು, ಕೇರಳ ಹೈಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.

ಇದನ್ನೂ ಓದಿ: ಲಕ್ಷದ್ವೀಪ ನ್ಯಾಯಾಂಗ ವ್ಯಾಪ್ತಿ ಬದಲಾವಣೆ ಪ್ರಸ್ತಾಪ – ಆಡಳಿತ ದುರುಪಯೋಗ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...