Homeಮುಖಪುಟಲಕ್ಷದ್ವೀಪ: ಆಡಳಿತಾಧಿಕಾರಿಯ 2 ವಿವಾದಾತ್ಮಕ ಆದೇಶಗಳಿಗೆ ಕೇರಳ ಹೈಕೋರ್ಟ್ ತಡೆ

ಲಕ್ಷದ್ವೀಪ: ಆಡಳಿತಾಧಿಕಾರಿಯ 2 ವಿವಾದಾತ್ಮಕ ಆದೇಶಗಳಿಗೆ ಕೇರಳ ಹೈಕೋರ್ಟ್ ತಡೆ

- Advertisement -
- Advertisement -

ಲಕ್ಷದ್ವೀಪದ ಆಡಳಿತಾಧಿಕಾರಿಯ ವಿರುದ್ದ ಹೋರಾಟ ನಡೆಸುತ್ತಿರುವ ದ್ವೀಪವಾಸಿಗಳು ಮೊದಲ ಹಂತದ ನ್ಯಾಯಾಂಗ ಗೆಲುವು ದಾಖಲಿಸಿದ್ದು, ಪ್ರಫುಲ್ ಪಟೇಲ್‌ ನಿರ್ಧಾರಕ್ಕೆ ಹಿನ್ನಡೆಯಾಗಿದೆ. ಪ್ರಫುಲ್‌ ಪಟೇಲ್ ನೇತೃತ್ವದ ಲಕ್ಷದ್ವೀಪ ಆಡಳಿತದ ಎರಡು ವಿವಾದಾತ್ಮಕ ಆದೇಶಗಳಿಗೆ ಕೇರಳ ಹೈಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ.

ಶಾಂತವಾಗಿದ್ದ ಲಕ್ಷದ್ವೀಪದಲ್ಲಿ ರಾಜಕೀಯ ಪ್ರತಿಭಟನೆಗಳು ಪ್ರಾರಂಭವಾಗಿದೆ. ದ್ವೀಪಕ್ಕೆ ಹೊಸದಾಗಿ ನೇಮಕಗೊಂಡಿರುವ ಆಡಳಿತಾಧಿಕಾರಿ ಪ್ರಫುಲ್ ಪಟೇಲ್‌‌ ದ್ವೀಪದ ಸಂಸ್ಕೃತಿಯನ್ನು ಹಾಳುಗೆಡವುತ್ತಿದ್ದಾರೆ ಮತ್ತು ತಮ್ಮ ಹಾಗೂ ತಮ್ಮ ರಾಜಕೀಯ ಹಿತಾಸಕ್ತಿಗಾಗಿ ದ್ವೀಪದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ದ್ವೀಪವಾಸಿಗಳು ಆರೋಪಿಸುತ್ತಿದ್ದಾರೆ. ಅವರು ದ್ವೀಪದಲ್ಲಿ ಆಡಳಿತ ವಹಿಸಿಕೊಂಡ ನಂತರ ಮಾಡಿರುವ ಕೊರೊನಾ ಮಾರ್ಗಸೂಚಿಯ ಬದಲಾವಣೆ, ಮೀನುಗಾರರ ಗುಡಿಸಲು ತೆರವು, ಗೂಂಡಾ ಕಾಯ್ದೆ ಸೇರಿದಂತೆ ಜಾರಿ ಮತ್ತಿತರ ನಿರ್ಣಯಗಳ ವಿರುದ್ಧ ಕೇರಳ ಹೈಕೋರ್ಟ್‌ನಲ್ಲಿ ಇದುವರೆಗೂ 23 ಅರ್ಜಿಗಳು ಸಲ್ಲಿಕೆಯಾಗಿವೆ.

ಇದನ್ನೂ ಓದಿ: ಲಕ್ಷದ್ವೀಪ ಹೇಗಿತ್ತು? ಈಗೇನಾಗುತ್ತಿದೆ? 

ಮುಖ್ಯ ನ್ಯಾಯಮೂರ್ತಿ ಎಸ್.ಮಣಿಕುಮಾರ್ ಮತ್ತು ನ್ಯಾಯಮೂರ್ತಿ ಶಾಜಿ ಪಿ ಚಾಲಿ ನೇತೃತ್ವದ ವಿಭಾಗೀಯ ಪೀಠ ನೀಡಿದ ಆದೇಶದಲ್ಲಿ, ದ್ವೀಪಗಳಲ್ಲಿನ ಡೈರಿ ಫಾರಂಗಳನ್ನು ಮುಚ್ಚುವ ಮತ್ತು ಶಾಲಾ ಮಕ್ಕಳ ಮಧ್ಯಾಹ್ನದ ಊಟದ ಮೆನುವಿನಿಂದ ಕೋಳಿ, ಗೋಮಾಂಸ ಮತ್ತು ಇತರ ಮಾಂಸವನ್ನು ಬದಲಾಯಿಸುವ ಆಡಳಿತದ ನಿರ್ಧಾರಗಳನ್ನು ತಡೆಹಿಡಿದಿದೆ.

ಲಕ್ಷದ್ವೀಪದ ಕವರತ್ತಿ ಮೂಲದ ವಕೀಲ ಅಜ್ಮಲ್ ಅಹಮದ್ ಅವರು ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆಯಾಗಿ ಈ ಆದೇಶ ಹೊರಡಿಸಲಾಗಿದೆ. ನ್ಯಾಯಾಲಯವು ಲಕ್ಷದ್ವೀಪದ ಆಡಳಿತ ಮತ್ತು ಆಡಳಿತಾಧಿಕಾರಿ ಪ್ರಫುಲ್‌‌ ಪಟೇಲ್ ಅವರಿಂದ ಪ್ರತಿಕ್ರಿಯೆಗಳನ್ನು ಕೇಳಿದೆ.

ಡೈರಿ ಫಾರ್ಮ್‌ಗಳನ್ನು ಮುಚ್ಚುವುದು ಮತ್ತು ಶಾಲಾ ಮಕ್ಕಳ ಮಧ್ಯಾಹ್ನದ ಊಟದ ಮೆನುವಿನಿಂದ ಮಾಂಸಾಹಾರವನ್ನು ತೆಗೆಯುವ ಆಡಳಿತಾಧಿಕಾರಿಯ ನಿರ್ಧಾರಗಳು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು. ಈ ನಿರ್ಧಾರಗಳು ದ್ವೀಪವಾಸಿಗಳ ಸಂಸ್ಕೃತಿ ಮತ್ತು ಆಹಾರ ಪದ್ಧತಿಯನ್ನು ನಾಶಪಡಿಸುವ ಗುರಿಯನ್ನು ಹೊಂದಿವೆ ಎಂದು ಅರ್ಜಿಯಲ್ಲಿ ವಾದಿಸಲಾಗಿತ್ತು.

ಇದನ್ನೂ ಓದಿ: ಹಿಂದುತ್ವ ಅಜೆಂಡಾದ ಪ್ರಯೋಗಕ್ಕೆ ಈಗ ನೂತನ ಬಲಿ ಲಕ್ಷದ್ವೀಪ

ದ್ವೀಪಗಳ ಚುನಾಯಿತ ಸ್ಥಳೀಯ ಸಂಸ್ಥೆಗಳೊಂದಿಗೆ ಯಾವುದೇ ಸೂಕ್ತ ಸಮಾಲೋಚನೆ ಇಲ್ಲದೆ ಡೈರಿ ಫಾರಂಗಳನ್ನು ಮುಚ್ಚುವ ಮತ್ತು ಪ್ರಾಣಿಗಳನ್ನು ಹರಾಜು ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅರ್ಜಿ ಹೇಳಿತ್ತು.

ಪ್ರಫುಲ್ ಪಟೇಲ್‌‌ ತಾನು ದ್ವೀಪದಲ್ಲಿ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಗೋ ಮಾಂಸ ಮಾರಾಟ ನಿಷೇಧ, ಅಪರಾಧ ಪ್ರಕರಣ ಕಡಿಮೆ ಇರುವ ದ್ವೀಪದಲ್ಲಿ ಗೂಂಡಾ ಕಾಯ್ದೆ ಜಾರಿ, ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಪಂಚಾಯತ್‌ ಚುನಾವಣೆಗೆ ಸ್ಪರ್ಧಿಸಲು ಅನರ್ಹ, ಖಾಸಗಿ ಭೂಮಿ ವಶಪಡಿಸಿಕೊಳ್ಳಲು ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ, ಲಕ್ಷದ್ವೀಪಾಭಿವೃದ್ಧಿ ಪ್ರಾಧಿಕಾರ 2021 ರಚನೆ, ಲಕ್ಷದ್ವೀಪದಲ್ಲಿ ಮದ್ಯ ಮಾರಾಟ ನಿಷೇಧ ತೆರವು, ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಮಾಂಸಾಹಾರ ನಿಷೇಧವನ್ನು ಒಳಗೊಂಡ ಹಲವು ಮಸೂದೆ, ವಿಧೇಯಕಗಳನ್ನು ಪರಿಚಯಿಸಿದ್ದರು.

ಇದು ದ್ವೀಪದ ಜನರ ವಿರೋಧಕ್ಕೆ ಕಾರಣವಾಗಿದ್ದು, ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದಾರೆ. ಅಲ್ಲದೆ, ಕಾನೂನು ಹೋರಾಟಕ್ಕೂ ಮುಂದಾಗಿದ್ದು, ಕೇರಳ ಹೈಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.

ಇದನ್ನೂ ಓದಿ: ಲಕ್ಷದ್ವೀಪ ನ್ಯಾಯಾಂಗ ವ್ಯಾಪ್ತಿ ಬದಲಾವಣೆ ಪ್ರಸ್ತಾಪ – ಆಡಳಿತ ದುರುಪಯೋಗ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...