Homeಮುಖಪುಟಹೊಸ ಪ್ರವಾಸೋದ್ಯಮ ನೀತಿ ವಿರೋಧಿಸಿ ಲಕ್ಷದ್ವೀಪ ನಿವಾಸಿಗಳಿಂದ ಉಪವಾಸ ಸತ್ಯಾಗ್ರಹ

ಹೊಸ ಪ್ರವಾಸೋದ್ಯಮ ನೀತಿ ವಿರೋಧಿಸಿ ಲಕ್ಷದ್ವೀಪ ನಿವಾಸಿಗಳಿಂದ ಉಪವಾಸ ಸತ್ಯಾಗ್ರಹ

- Advertisement -
- Advertisement -

ಲಕ್ಷದ್ವೀಪ ನಿವಾಸಿಗಳು ಸೋಮವಾರ ಅಂದರೆ ಇಂದು ಜೂನ್‌ 7, 2021 ರಂದು 12 ಗಂಟೆಗಳ ನಿರಂತರ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ಲಕ್ಷದ್ವೀಪದಲ್ಲಿ ಸರ್ಕಾರ ಜಾರಿಗೆ ತರಲು ಹೊರಟಿರುವ 3 ಹೊಸ ಪ್ರವಾಸೋದ್ಯಮ ಯೋಜನೆಗಳನ್ನು ವಿರೋಧಿಸಿ ಲಕ್ಷದ್ವೀಪ ನಿವಾಸಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಜನ ಜೀವನವನ್ನು ನಾಶಮಾಡುವ ಭೀತಿಯನ್ನು ಹೊಸ ಯೋಜನೆಗಳು ಉಂಟುಮಾಡಿವೆ. ಸುಮಾರು 70,000 ಜನಸಂಖ್ಯೆಯನ್ನು ಹೊಂದಿರುವ ಲಕ್ಷದ್ವೀಪ ಭಿನ್ನವಾದ ಸಂಸ್ಕೃತಿ, ಭಾಷೆ ಮತ್ತು ಸಂಪ್ರದಾಯಗಳನ್ನು ಹೊಂದಿವೆ. ಹಾಗೇ ಲಕ್ಷದ್ವೀಪದ ಕಾಡುಗಳಲ್ಲಿ ಅನೇಕ ಬುಡಕಟ್ಟುಗಳು ನೂರಾರು ವರ್ಷಗಳಿಂದ ನೆಲೆ ಕಂಡುಕೊಂಡಿವೆ.

ಲಕ್ಷದ್ವೀಪ ಉಳಿಸಿ ಸಂಘಟನೆ ಈ ಒಂದು ದಿನ ದ ಉಪವಾಸ ಸತ್ಯಾಗ್ರಹಕ್ಕೆ ಕರೆಕೊಟ್ಟಿದೆ. ಜೂನ್‌ 7ರ ಸೋಮವಾರ ಅಂಗಡಿ ಮುಂಗಟ್ಟುಗಳು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮುಚ್ಚಿರಲಿವೆ. ನಗರ, ಹಳ್ಳಿ ಎಲ್ಲಾಕಡೆಯಲ್ಲೂ ಜನ ಲಕ್ಷದ್ವೀಪ ಉಳಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿ ಉಪವಾಸವನ್ನು ಆಚರಿಸಲಿದ್ದಾರೆ. ಅಗತ್ಯ ಸೇವೆಗಳು ಮತ್ತು ಅಗತ್ಯ ಸೇವೆಗಳು ಮಾತ್ರ ಜನರಿಗೆ ತೆರೆದಿರಲಿವೆ.

ಇನ್ನೊಂದು ಕಡೆ ವಿವಾದಾತ್ಮಕ ಹೊಸ ಯೋಜನೆಗಳನ್ನು ಜಾರಿಗೆ ತಂದಿರುವ ಲಕ್ಷದ್ವೀಪದ ಲೆಫ್ಟಿನೆಂಟ್‌ ಗೌವರ್ನರ್‌ ಪ್ರಫುಲ್‌ ಖೋಡಾ ಪಟೇಲ್‌ ಅವರು ಕೊರೋನಾ ಲಾಕ್‌ಡೌನ್‌ ಜಾರಿಯಿರುವುದರಿಂದ ಬಹಿರಂಗವಾಗಿ ಜನ ಸೇರುವುದನ್ನು ಲಕ್ಷದ್ವೀಪದಲ್ಲಿ ನಿಷೇಧಿಸಲಾಗಿದೆ. ಒಂದು ವೇಳೆ ಕಾನೂನು ಉಲ್ಲಂಘಿಸಿ ಯಾರಾದರೂ ಬೀದಿಗಿಳಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.

ಮೊಟ್ಟ ಮೊದಲ ಬಾರಿಗೆ ಲಕ್ಷದ್ವೀಪದಲ್ಲಿ ಉಪವಾಸ ಸತ್ಯಾಗ್ರಹವನ್ನು ಆಚರಿಸಲಾಗುತ್ತಿದೆ. ನಾವು ಮೊದಲಿನಿಂದಲೂ ಸ್ಥಳೀಯರ ಭಾವನೆಗಳಿಗೆ ಬೆಲೆ ಕೊಡಬೇಕು ಮತ್ತು ಸ್ಥಳೀಯರ ಸಮಸ್ಯೆಗಳನ್ನು ಆಲಿಸಬೇಕೆಂದು ಲೆಫ್ಟಿನೆಂಟ್‌ ಗೌರ್ನರ್‌ ಅವರನ್ನು ಒತ್ತಾಯಿಸುತ್ತಲೇ ಬಂದಿದ್ದೇವೆ. ಆದರೆ ಎಲ್‌ಜೆ ಪ್ರಫುಲ್‌ ಪಟೇಲ್ ತಮ್ಮ ಏಕಪಕ್ಷೀಯ ನಿರ್ಧಾರಗಳನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಇದರಿಂದ ಲಕ್ಷದ್ವೀಪದ ಸ್ಥಳೀಯ ಜನಜೀವನಕ್ಕೆ ತೊಂದರೆಯಾಗಲಿದೆ ಎಂದು ಲಕ್ಷದ್ವೀಪ ಉಳಿಸಿ ಹೋರಾಟ ಸಂಘಟನೆಯ ಮುಖ್ಯಸ್ಥ ಯುಸಿಕೆ ಥಂಗಲ್‌ ಹೇಳುತ್ತಾರೆ.

37 ದ್ವೀಪಗಳನ್ನು ಒಳಗೊಂಡ ಲಕ್ಷದ್ವೀಪ ಒಂದು ದ್ವೀಪ ಸಮೂಹವಾಗಿದ್ದು ಸುಮಾರು 97% ದಟ್ಟವಾದ ಕಾಡಿನಿಂದ ಆವರಿಸಿದೆ. ಹಾಗೇ ಲಕ್ಷದ್ವೀಪದ 95% ಜನಸಂಖ್ಯೆ ಭಾರತ ಸಂವಿಧಾನದ ಅಡಿಯಲ್ಲಿ ಸಂರಕ್ಷಿಸಲಾದ ಬುಡಕಟ್ಟುಗಳಿಗೆ ಸೇರಿವೆ. ಹಾಗೇ ಲಕ್ಷದ್ವೀಪದ 37 ದ್ವೀಪಗಳಲ್ಲಿ ಕೇವಲ 11 ದ್ವೀಪಗಳಲ್ಲಿ ಮಾತ್ರ ಜನವಸತಿ ಇದೆ. ಸದ್ಯ ವಿವಾದಕ್ಕೆ ಕಾರಣವಾಗಿರುವ ಲಕ್ಷದ್ವೀಪ ಡೆವಲಪ್‌ಮೆಂಟ್‌ ಅಥಾರಿಟಿ ರೆಗ್ಯುಲೇಶನ್‌ ದ್ವೀಪವಾಸಿಗಳ ಜನ ಜೀವನವನ್ನು ಮತ್ತು ಸಾಂಪ್ರದಾಯಿಕ ಕಸುಬುಗಳನ್ನು ನಾಶ ಮಾಡಲಿದೆ ಎಂದು ಜನರು ಕಳವಳಗೊಂಡಿದ್ದಾರೆ. ಹೊಸ ಲಕ್ಷದ್ವೀಪ ಡೆವಲಪ್‌ಮೆಂಟ್‌ ಅಥಾರಿಟಿಯು ದ್ವೀಪವನ್ನು ದೇಶದ ಪ್ರಮುಖ ಪ್ರವಾಸಿ ತಾಣವನ್ನಾಗಿ ಮಾಡುವ ಉದ್ಧೇಶವನ್ನು ಹೊಂದಿದೆ. ಬಹುತೇಕ ಕಾಡುಗಳನ್ನು ಕಡಿದು ಮಾಲ್ಡೀವ್ಸ್‌ ಮಾದರಿಯ ಕಡಲು ದಂಡೆಗಳನ್ನು ನಿರ್ಮಿಸುವ ಉದ್ಧೇಶವನ್ನು ಹೊಂದಿದೆ ಎಂದು ಜನರು ಹೇಳುತ್ತಾರೆ.

ಉದ್ಧೇಶಿತ ಲಕ್ಷದ್ವೀಪ ಡೆವಲಪ್‌ಮೆಂಟ್‌ ಅಥಾರಿಟಿ ರೆಗ್ಯುಲೇಶನ್‌ (2021) ಕಾನೂನು ಈಗ ಕೇಂದ್ರ ಗೃಹ ಸಚಿವಾಲಯದ ಅಂಗಳವನ್ನು ತಲುಪಿದ್ದು ಗೃಹ ಸಚಿವಾಲಯದ ಅನುಮತಿಯೆಂದೇ ಬಾಕಿಯಿದೆ. ಲಕ್ಷದ್ವೀಪ ಎಲ್‌ಜೆ ಪ್ರಫುಲ್‌ ಪಟೇಲ್‌ ಇದು ಪ್ರವಾಸೋದ್ಯಮವನ್ನು ಹೆಚ್ಚಿಸುವುದರಿಂದ ದ್ವೀಪವಾಸಿಗಳಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಕೂಡ ಸಿಗುತ್ತವೆ ಎಂದು ಉದ್ಧೇಶಿತ ಕಾಯ್ದೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ : ಸಾರ್ವಜನಿಕರ ಆಕ್ರೋಶಕ್ಕೆ ಮಣಿದು ಮಲಯಾಳಂ ನಿಷೇಧದ ಆದೇಶ ಹಿಂಪಡೆದ ದೆಹಲಿಯ ಆಸ್ಪತ್ರೆ

ದೇಶದ ಅನೇಕ ನಿವೃತ್ತ ಅಧಿಕಾರಿಗಳು. ಸಂಸದರು ಹಾಗೂ ಚಲನಚಿತ್ರ ಗಣ್ಯರು ಕೂಡ ಕೇಂದ್ರ ಸರ್ಕಾರಕ್ಕೆ ಪತ್ರವನ್ನು ಬರೆದು ಉದ್ದೇಶಿತ ಯೋಜನೆಯಿಂದ ಲಕ್ಷದ್ವೀಪದ ಮೂಲ ಸ್ವರೂಪವೇ ಬದಲಾಗಲಿದೆ. ಬುಡಕಟ್ಟು ಮತ್ತು ಅವರ ನೆಲೆ ಅರಣ್ಯ ನಾಶವಾಗುತ್ತದೆ. ಇದು ಲಕ್ಷದ್ವೀಪದ ಜನಜೀವನವನ್ನು ಸಂಪೂರ್ಣ ನಾಶಮಾಡಲಿದೆ. ಹಾಗಾಗಿ ಉದ್ಧೇಶಿತ ಯೋಜನೆಯನ್ನು ಕೈಬಿಡುವಂತೆ ಮನವಿಯನ್ನು ಮಾಡಿದ್ದಾರೆ.

ದ್ವೀಪವಾಸಿಗಳ ಹೋರಾಟ, ಗಣ್ಯರ ಒತ್ತಡಕ್ಕೆ ಕೇಂದ್ರ ಸರ್ಕಾರ ಮಣಿಯುವ ಯಾವ ಲಕ್ಷಣಗಳು ಕಾಣಿಸುತ್ತಿಲ್ಲ. ದೇಶದ ಅತ್ಯಂತ ಅಪರೂಪದ ಮತ್ತು ಅಪಾರ ವನ್ಯ ಸಂಪತ್ತಿನ  ತಾಣವಾದ ಲಕ್ಷದ್ವೀಪವನ್ನು ಬಲಿಕೊಡಲು ಮುಂದಾಗಿರುವ ಎಲ್‌ಜೆ ಪ್ರಫುಲ್‌ ಪಟೇಲ್‌, ಕೇಂದ್ರ ಸರ್ಕಾರ ದ್ವೀಪವಾಸಿಗಳ ಹಿತಾಸಕ್ತಿಯನ್ನು ರಕ್ಷಿಸಲು ತಕ್ಷಣವೇ ಮುಂದಾಗಬೇಕಿದೆ. ಇಲ್ಲವಾದರೆ ಲಕ್ಷದ್ವೀಪದ ಜನರ ಆಕ್ರೋಶ ಇನ್ನಷ್ಟು ಭುಗಿಲೇಳುವ ಸಾಧ್ಯತೆ ಕೂಡ ಇದೆ.


ಇದನ್ನೂ ಓದಿ: ಹಸುವಿನೊಂದಿಗೆ ಪ್ರತಿಭಟನೆಗೆ ಮಣಿದ ಹರಿಯಾಣ ಪೊಲೀಸರು: ಇಬ್ಬರು ರೈತರ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...