Homeಮುಖಪುಟಹೊಸ ಪ್ರವಾಸೋದ್ಯಮ ನೀತಿ ವಿರೋಧಿಸಿ ಲಕ್ಷದ್ವೀಪ ನಿವಾಸಿಗಳಿಂದ ಉಪವಾಸ ಸತ್ಯಾಗ್ರಹ

ಹೊಸ ಪ್ರವಾಸೋದ್ಯಮ ನೀತಿ ವಿರೋಧಿಸಿ ಲಕ್ಷದ್ವೀಪ ನಿವಾಸಿಗಳಿಂದ ಉಪವಾಸ ಸತ್ಯಾಗ್ರಹ

- Advertisement -
- Advertisement -

ಲಕ್ಷದ್ವೀಪ ನಿವಾಸಿಗಳು ಸೋಮವಾರ ಅಂದರೆ ಇಂದು ಜೂನ್‌ 7, 2021 ರಂದು 12 ಗಂಟೆಗಳ ನಿರಂತರ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ಲಕ್ಷದ್ವೀಪದಲ್ಲಿ ಸರ್ಕಾರ ಜಾರಿಗೆ ತರಲು ಹೊರಟಿರುವ 3 ಹೊಸ ಪ್ರವಾಸೋದ್ಯಮ ಯೋಜನೆಗಳನ್ನು ವಿರೋಧಿಸಿ ಲಕ್ಷದ್ವೀಪ ನಿವಾಸಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಜನ ಜೀವನವನ್ನು ನಾಶಮಾಡುವ ಭೀತಿಯನ್ನು ಹೊಸ ಯೋಜನೆಗಳು ಉಂಟುಮಾಡಿವೆ. ಸುಮಾರು 70,000 ಜನಸಂಖ್ಯೆಯನ್ನು ಹೊಂದಿರುವ ಲಕ್ಷದ್ವೀಪ ಭಿನ್ನವಾದ ಸಂಸ್ಕೃತಿ, ಭಾಷೆ ಮತ್ತು ಸಂಪ್ರದಾಯಗಳನ್ನು ಹೊಂದಿವೆ. ಹಾಗೇ ಲಕ್ಷದ್ವೀಪದ ಕಾಡುಗಳಲ್ಲಿ ಅನೇಕ ಬುಡಕಟ್ಟುಗಳು ನೂರಾರು ವರ್ಷಗಳಿಂದ ನೆಲೆ ಕಂಡುಕೊಂಡಿವೆ.

ಲಕ್ಷದ್ವೀಪ ಉಳಿಸಿ ಸಂಘಟನೆ ಈ ಒಂದು ದಿನ ದ ಉಪವಾಸ ಸತ್ಯಾಗ್ರಹಕ್ಕೆ ಕರೆಕೊಟ್ಟಿದೆ. ಜೂನ್‌ 7ರ ಸೋಮವಾರ ಅಂಗಡಿ ಮುಂಗಟ್ಟುಗಳು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮುಚ್ಚಿರಲಿವೆ. ನಗರ, ಹಳ್ಳಿ ಎಲ್ಲಾಕಡೆಯಲ್ಲೂ ಜನ ಲಕ್ಷದ್ವೀಪ ಉಳಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿ ಉಪವಾಸವನ್ನು ಆಚರಿಸಲಿದ್ದಾರೆ. ಅಗತ್ಯ ಸೇವೆಗಳು ಮತ್ತು ಅಗತ್ಯ ಸೇವೆಗಳು ಮಾತ್ರ ಜನರಿಗೆ ತೆರೆದಿರಲಿವೆ.

ಇನ್ನೊಂದು ಕಡೆ ವಿವಾದಾತ್ಮಕ ಹೊಸ ಯೋಜನೆಗಳನ್ನು ಜಾರಿಗೆ ತಂದಿರುವ ಲಕ್ಷದ್ವೀಪದ ಲೆಫ್ಟಿನೆಂಟ್‌ ಗೌವರ್ನರ್‌ ಪ್ರಫುಲ್‌ ಖೋಡಾ ಪಟೇಲ್‌ ಅವರು ಕೊರೋನಾ ಲಾಕ್‌ಡೌನ್‌ ಜಾರಿಯಿರುವುದರಿಂದ ಬಹಿರಂಗವಾಗಿ ಜನ ಸೇರುವುದನ್ನು ಲಕ್ಷದ್ವೀಪದಲ್ಲಿ ನಿಷೇಧಿಸಲಾಗಿದೆ. ಒಂದು ವೇಳೆ ಕಾನೂನು ಉಲ್ಲಂಘಿಸಿ ಯಾರಾದರೂ ಬೀದಿಗಿಳಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.

ಮೊಟ್ಟ ಮೊದಲ ಬಾರಿಗೆ ಲಕ್ಷದ್ವೀಪದಲ್ಲಿ ಉಪವಾಸ ಸತ್ಯಾಗ್ರಹವನ್ನು ಆಚರಿಸಲಾಗುತ್ತಿದೆ. ನಾವು ಮೊದಲಿನಿಂದಲೂ ಸ್ಥಳೀಯರ ಭಾವನೆಗಳಿಗೆ ಬೆಲೆ ಕೊಡಬೇಕು ಮತ್ತು ಸ್ಥಳೀಯರ ಸಮಸ್ಯೆಗಳನ್ನು ಆಲಿಸಬೇಕೆಂದು ಲೆಫ್ಟಿನೆಂಟ್‌ ಗೌರ್ನರ್‌ ಅವರನ್ನು ಒತ್ತಾಯಿಸುತ್ತಲೇ ಬಂದಿದ್ದೇವೆ. ಆದರೆ ಎಲ್‌ಜೆ ಪ್ರಫುಲ್‌ ಪಟೇಲ್ ತಮ್ಮ ಏಕಪಕ್ಷೀಯ ನಿರ್ಧಾರಗಳನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಇದರಿಂದ ಲಕ್ಷದ್ವೀಪದ ಸ್ಥಳೀಯ ಜನಜೀವನಕ್ಕೆ ತೊಂದರೆಯಾಗಲಿದೆ ಎಂದು ಲಕ್ಷದ್ವೀಪ ಉಳಿಸಿ ಹೋರಾಟ ಸಂಘಟನೆಯ ಮುಖ್ಯಸ್ಥ ಯುಸಿಕೆ ಥಂಗಲ್‌ ಹೇಳುತ್ತಾರೆ.

37 ದ್ವೀಪಗಳನ್ನು ಒಳಗೊಂಡ ಲಕ್ಷದ್ವೀಪ ಒಂದು ದ್ವೀಪ ಸಮೂಹವಾಗಿದ್ದು ಸುಮಾರು 97% ದಟ್ಟವಾದ ಕಾಡಿನಿಂದ ಆವರಿಸಿದೆ. ಹಾಗೇ ಲಕ್ಷದ್ವೀಪದ 95% ಜನಸಂಖ್ಯೆ ಭಾರತ ಸಂವಿಧಾನದ ಅಡಿಯಲ್ಲಿ ಸಂರಕ್ಷಿಸಲಾದ ಬುಡಕಟ್ಟುಗಳಿಗೆ ಸೇರಿವೆ. ಹಾಗೇ ಲಕ್ಷದ್ವೀಪದ 37 ದ್ವೀಪಗಳಲ್ಲಿ ಕೇವಲ 11 ದ್ವೀಪಗಳಲ್ಲಿ ಮಾತ್ರ ಜನವಸತಿ ಇದೆ. ಸದ್ಯ ವಿವಾದಕ್ಕೆ ಕಾರಣವಾಗಿರುವ ಲಕ್ಷದ್ವೀಪ ಡೆವಲಪ್‌ಮೆಂಟ್‌ ಅಥಾರಿಟಿ ರೆಗ್ಯುಲೇಶನ್‌ ದ್ವೀಪವಾಸಿಗಳ ಜನ ಜೀವನವನ್ನು ಮತ್ತು ಸಾಂಪ್ರದಾಯಿಕ ಕಸುಬುಗಳನ್ನು ನಾಶ ಮಾಡಲಿದೆ ಎಂದು ಜನರು ಕಳವಳಗೊಂಡಿದ್ದಾರೆ. ಹೊಸ ಲಕ್ಷದ್ವೀಪ ಡೆವಲಪ್‌ಮೆಂಟ್‌ ಅಥಾರಿಟಿಯು ದ್ವೀಪವನ್ನು ದೇಶದ ಪ್ರಮುಖ ಪ್ರವಾಸಿ ತಾಣವನ್ನಾಗಿ ಮಾಡುವ ಉದ್ಧೇಶವನ್ನು ಹೊಂದಿದೆ. ಬಹುತೇಕ ಕಾಡುಗಳನ್ನು ಕಡಿದು ಮಾಲ್ಡೀವ್ಸ್‌ ಮಾದರಿಯ ಕಡಲು ದಂಡೆಗಳನ್ನು ನಿರ್ಮಿಸುವ ಉದ್ಧೇಶವನ್ನು ಹೊಂದಿದೆ ಎಂದು ಜನರು ಹೇಳುತ್ತಾರೆ.

ಉದ್ಧೇಶಿತ ಲಕ್ಷದ್ವೀಪ ಡೆವಲಪ್‌ಮೆಂಟ್‌ ಅಥಾರಿಟಿ ರೆಗ್ಯುಲೇಶನ್‌ (2021) ಕಾನೂನು ಈಗ ಕೇಂದ್ರ ಗೃಹ ಸಚಿವಾಲಯದ ಅಂಗಳವನ್ನು ತಲುಪಿದ್ದು ಗೃಹ ಸಚಿವಾಲಯದ ಅನುಮತಿಯೆಂದೇ ಬಾಕಿಯಿದೆ. ಲಕ್ಷದ್ವೀಪ ಎಲ್‌ಜೆ ಪ್ರಫುಲ್‌ ಪಟೇಲ್‌ ಇದು ಪ್ರವಾಸೋದ್ಯಮವನ್ನು ಹೆಚ್ಚಿಸುವುದರಿಂದ ದ್ವೀಪವಾಸಿಗಳಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಕೂಡ ಸಿಗುತ್ತವೆ ಎಂದು ಉದ್ಧೇಶಿತ ಕಾಯ್ದೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ : ಸಾರ್ವಜನಿಕರ ಆಕ್ರೋಶಕ್ಕೆ ಮಣಿದು ಮಲಯಾಳಂ ನಿಷೇಧದ ಆದೇಶ ಹಿಂಪಡೆದ ದೆಹಲಿಯ ಆಸ್ಪತ್ರೆ

ದೇಶದ ಅನೇಕ ನಿವೃತ್ತ ಅಧಿಕಾರಿಗಳು. ಸಂಸದರು ಹಾಗೂ ಚಲನಚಿತ್ರ ಗಣ್ಯರು ಕೂಡ ಕೇಂದ್ರ ಸರ್ಕಾರಕ್ಕೆ ಪತ್ರವನ್ನು ಬರೆದು ಉದ್ದೇಶಿತ ಯೋಜನೆಯಿಂದ ಲಕ್ಷದ್ವೀಪದ ಮೂಲ ಸ್ವರೂಪವೇ ಬದಲಾಗಲಿದೆ. ಬುಡಕಟ್ಟು ಮತ್ತು ಅವರ ನೆಲೆ ಅರಣ್ಯ ನಾಶವಾಗುತ್ತದೆ. ಇದು ಲಕ್ಷದ್ವೀಪದ ಜನಜೀವನವನ್ನು ಸಂಪೂರ್ಣ ನಾಶಮಾಡಲಿದೆ. ಹಾಗಾಗಿ ಉದ್ಧೇಶಿತ ಯೋಜನೆಯನ್ನು ಕೈಬಿಡುವಂತೆ ಮನವಿಯನ್ನು ಮಾಡಿದ್ದಾರೆ.

ದ್ವೀಪವಾಸಿಗಳ ಹೋರಾಟ, ಗಣ್ಯರ ಒತ್ತಡಕ್ಕೆ ಕೇಂದ್ರ ಸರ್ಕಾರ ಮಣಿಯುವ ಯಾವ ಲಕ್ಷಣಗಳು ಕಾಣಿಸುತ್ತಿಲ್ಲ. ದೇಶದ ಅತ್ಯಂತ ಅಪರೂಪದ ಮತ್ತು ಅಪಾರ ವನ್ಯ ಸಂಪತ್ತಿನ  ತಾಣವಾದ ಲಕ್ಷದ್ವೀಪವನ್ನು ಬಲಿಕೊಡಲು ಮುಂದಾಗಿರುವ ಎಲ್‌ಜೆ ಪ್ರಫುಲ್‌ ಪಟೇಲ್‌, ಕೇಂದ್ರ ಸರ್ಕಾರ ದ್ವೀಪವಾಸಿಗಳ ಹಿತಾಸಕ್ತಿಯನ್ನು ರಕ್ಷಿಸಲು ತಕ್ಷಣವೇ ಮುಂದಾಗಬೇಕಿದೆ. ಇಲ್ಲವಾದರೆ ಲಕ್ಷದ್ವೀಪದ ಜನರ ಆಕ್ರೋಶ ಇನ್ನಷ್ಟು ಭುಗಿಲೇಳುವ ಸಾಧ್ಯತೆ ಕೂಡ ಇದೆ.


ಇದನ್ನೂ ಓದಿ: ಹಸುವಿನೊಂದಿಗೆ ಪ್ರತಿಭಟನೆಗೆ ಮಣಿದ ಹರಿಯಾಣ ಪೊಲೀಸರು: ಇಬ್ಬರು ರೈತರ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....