Homeಮುಖಪುಟಹೊಸ ಪ್ರವಾಸೋದ್ಯಮ ನೀತಿ ವಿರೋಧಿಸಿ ಲಕ್ಷದ್ವೀಪ ನಿವಾಸಿಗಳಿಂದ ಉಪವಾಸ ಸತ್ಯಾಗ್ರಹ

ಹೊಸ ಪ್ರವಾಸೋದ್ಯಮ ನೀತಿ ವಿರೋಧಿಸಿ ಲಕ್ಷದ್ವೀಪ ನಿವಾಸಿಗಳಿಂದ ಉಪವಾಸ ಸತ್ಯಾಗ್ರಹ

- Advertisement -
- Advertisement -

ಲಕ್ಷದ್ವೀಪ ನಿವಾಸಿಗಳು ಸೋಮವಾರ ಅಂದರೆ ಇಂದು ಜೂನ್‌ 7, 2021 ರಂದು 12 ಗಂಟೆಗಳ ನಿರಂತರ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ಲಕ್ಷದ್ವೀಪದಲ್ಲಿ ಸರ್ಕಾರ ಜಾರಿಗೆ ತರಲು ಹೊರಟಿರುವ 3 ಹೊಸ ಪ್ರವಾಸೋದ್ಯಮ ಯೋಜನೆಗಳನ್ನು ವಿರೋಧಿಸಿ ಲಕ್ಷದ್ವೀಪ ನಿವಾಸಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಜನ ಜೀವನವನ್ನು ನಾಶಮಾಡುವ ಭೀತಿಯನ್ನು ಹೊಸ ಯೋಜನೆಗಳು ಉಂಟುಮಾಡಿವೆ. ಸುಮಾರು 70,000 ಜನಸಂಖ್ಯೆಯನ್ನು ಹೊಂದಿರುವ ಲಕ್ಷದ್ವೀಪ ಭಿನ್ನವಾದ ಸಂಸ್ಕೃತಿ, ಭಾಷೆ ಮತ್ತು ಸಂಪ್ರದಾಯಗಳನ್ನು ಹೊಂದಿವೆ. ಹಾಗೇ ಲಕ್ಷದ್ವೀಪದ ಕಾಡುಗಳಲ್ಲಿ ಅನೇಕ ಬುಡಕಟ್ಟುಗಳು ನೂರಾರು ವರ್ಷಗಳಿಂದ ನೆಲೆ ಕಂಡುಕೊಂಡಿವೆ.

ಲಕ್ಷದ್ವೀಪ ಉಳಿಸಿ ಸಂಘಟನೆ ಈ ಒಂದು ದಿನ ದ ಉಪವಾಸ ಸತ್ಯಾಗ್ರಹಕ್ಕೆ ಕರೆಕೊಟ್ಟಿದೆ. ಜೂನ್‌ 7ರ ಸೋಮವಾರ ಅಂಗಡಿ ಮುಂಗಟ್ಟುಗಳು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮುಚ್ಚಿರಲಿವೆ. ನಗರ, ಹಳ್ಳಿ ಎಲ್ಲಾಕಡೆಯಲ್ಲೂ ಜನ ಲಕ್ಷದ್ವೀಪ ಉಳಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿ ಉಪವಾಸವನ್ನು ಆಚರಿಸಲಿದ್ದಾರೆ. ಅಗತ್ಯ ಸೇವೆಗಳು ಮತ್ತು ಅಗತ್ಯ ಸೇವೆಗಳು ಮಾತ್ರ ಜನರಿಗೆ ತೆರೆದಿರಲಿವೆ.

ಇನ್ನೊಂದು ಕಡೆ ವಿವಾದಾತ್ಮಕ ಹೊಸ ಯೋಜನೆಗಳನ್ನು ಜಾರಿಗೆ ತಂದಿರುವ ಲಕ್ಷದ್ವೀಪದ ಲೆಫ್ಟಿನೆಂಟ್‌ ಗೌವರ್ನರ್‌ ಪ್ರಫುಲ್‌ ಖೋಡಾ ಪಟೇಲ್‌ ಅವರು ಕೊರೋನಾ ಲಾಕ್‌ಡೌನ್‌ ಜಾರಿಯಿರುವುದರಿಂದ ಬಹಿರಂಗವಾಗಿ ಜನ ಸೇರುವುದನ್ನು ಲಕ್ಷದ್ವೀಪದಲ್ಲಿ ನಿಷೇಧಿಸಲಾಗಿದೆ. ಒಂದು ವೇಳೆ ಕಾನೂನು ಉಲ್ಲಂಘಿಸಿ ಯಾರಾದರೂ ಬೀದಿಗಿಳಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.

ಮೊಟ್ಟ ಮೊದಲ ಬಾರಿಗೆ ಲಕ್ಷದ್ವೀಪದಲ್ಲಿ ಉಪವಾಸ ಸತ್ಯಾಗ್ರಹವನ್ನು ಆಚರಿಸಲಾಗುತ್ತಿದೆ. ನಾವು ಮೊದಲಿನಿಂದಲೂ ಸ್ಥಳೀಯರ ಭಾವನೆಗಳಿಗೆ ಬೆಲೆ ಕೊಡಬೇಕು ಮತ್ತು ಸ್ಥಳೀಯರ ಸಮಸ್ಯೆಗಳನ್ನು ಆಲಿಸಬೇಕೆಂದು ಲೆಫ್ಟಿನೆಂಟ್‌ ಗೌರ್ನರ್‌ ಅವರನ್ನು ಒತ್ತಾಯಿಸುತ್ತಲೇ ಬಂದಿದ್ದೇವೆ. ಆದರೆ ಎಲ್‌ಜೆ ಪ್ರಫುಲ್‌ ಪಟೇಲ್ ತಮ್ಮ ಏಕಪಕ್ಷೀಯ ನಿರ್ಧಾರಗಳನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಇದರಿಂದ ಲಕ್ಷದ್ವೀಪದ ಸ್ಥಳೀಯ ಜನಜೀವನಕ್ಕೆ ತೊಂದರೆಯಾಗಲಿದೆ ಎಂದು ಲಕ್ಷದ್ವೀಪ ಉಳಿಸಿ ಹೋರಾಟ ಸಂಘಟನೆಯ ಮುಖ್ಯಸ್ಥ ಯುಸಿಕೆ ಥಂಗಲ್‌ ಹೇಳುತ್ತಾರೆ.

37 ದ್ವೀಪಗಳನ್ನು ಒಳಗೊಂಡ ಲಕ್ಷದ್ವೀಪ ಒಂದು ದ್ವೀಪ ಸಮೂಹವಾಗಿದ್ದು ಸುಮಾರು 97% ದಟ್ಟವಾದ ಕಾಡಿನಿಂದ ಆವರಿಸಿದೆ. ಹಾಗೇ ಲಕ್ಷದ್ವೀಪದ 95% ಜನಸಂಖ್ಯೆ ಭಾರತ ಸಂವಿಧಾನದ ಅಡಿಯಲ್ಲಿ ಸಂರಕ್ಷಿಸಲಾದ ಬುಡಕಟ್ಟುಗಳಿಗೆ ಸೇರಿವೆ. ಹಾಗೇ ಲಕ್ಷದ್ವೀಪದ 37 ದ್ವೀಪಗಳಲ್ಲಿ ಕೇವಲ 11 ದ್ವೀಪಗಳಲ್ಲಿ ಮಾತ್ರ ಜನವಸತಿ ಇದೆ. ಸದ್ಯ ವಿವಾದಕ್ಕೆ ಕಾರಣವಾಗಿರುವ ಲಕ್ಷದ್ವೀಪ ಡೆವಲಪ್‌ಮೆಂಟ್‌ ಅಥಾರಿಟಿ ರೆಗ್ಯುಲೇಶನ್‌ ದ್ವೀಪವಾಸಿಗಳ ಜನ ಜೀವನವನ್ನು ಮತ್ತು ಸಾಂಪ್ರದಾಯಿಕ ಕಸುಬುಗಳನ್ನು ನಾಶ ಮಾಡಲಿದೆ ಎಂದು ಜನರು ಕಳವಳಗೊಂಡಿದ್ದಾರೆ. ಹೊಸ ಲಕ್ಷದ್ವೀಪ ಡೆವಲಪ್‌ಮೆಂಟ್‌ ಅಥಾರಿಟಿಯು ದ್ವೀಪವನ್ನು ದೇಶದ ಪ್ರಮುಖ ಪ್ರವಾಸಿ ತಾಣವನ್ನಾಗಿ ಮಾಡುವ ಉದ್ಧೇಶವನ್ನು ಹೊಂದಿದೆ. ಬಹುತೇಕ ಕಾಡುಗಳನ್ನು ಕಡಿದು ಮಾಲ್ಡೀವ್ಸ್‌ ಮಾದರಿಯ ಕಡಲು ದಂಡೆಗಳನ್ನು ನಿರ್ಮಿಸುವ ಉದ್ಧೇಶವನ್ನು ಹೊಂದಿದೆ ಎಂದು ಜನರು ಹೇಳುತ್ತಾರೆ.

ಉದ್ಧೇಶಿತ ಲಕ್ಷದ್ವೀಪ ಡೆವಲಪ್‌ಮೆಂಟ್‌ ಅಥಾರಿಟಿ ರೆಗ್ಯುಲೇಶನ್‌ (2021) ಕಾನೂನು ಈಗ ಕೇಂದ್ರ ಗೃಹ ಸಚಿವಾಲಯದ ಅಂಗಳವನ್ನು ತಲುಪಿದ್ದು ಗೃಹ ಸಚಿವಾಲಯದ ಅನುಮತಿಯೆಂದೇ ಬಾಕಿಯಿದೆ. ಲಕ್ಷದ್ವೀಪ ಎಲ್‌ಜೆ ಪ್ರಫುಲ್‌ ಪಟೇಲ್‌ ಇದು ಪ್ರವಾಸೋದ್ಯಮವನ್ನು ಹೆಚ್ಚಿಸುವುದರಿಂದ ದ್ವೀಪವಾಸಿಗಳಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಕೂಡ ಸಿಗುತ್ತವೆ ಎಂದು ಉದ್ಧೇಶಿತ ಕಾಯ್ದೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ : ಸಾರ್ವಜನಿಕರ ಆಕ್ರೋಶಕ್ಕೆ ಮಣಿದು ಮಲಯಾಳಂ ನಿಷೇಧದ ಆದೇಶ ಹಿಂಪಡೆದ ದೆಹಲಿಯ ಆಸ್ಪತ್ರೆ

ದೇಶದ ಅನೇಕ ನಿವೃತ್ತ ಅಧಿಕಾರಿಗಳು. ಸಂಸದರು ಹಾಗೂ ಚಲನಚಿತ್ರ ಗಣ್ಯರು ಕೂಡ ಕೇಂದ್ರ ಸರ್ಕಾರಕ್ಕೆ ಪತ್ರವನ್ನು ಬರೆದು ಉದ್ದೇಶಿತ ಯೋಜನೆಯಿಂದ ಲಕ್ಷದ್ವೀಪದ ಮೂಲ ಸ್ವರೂಪವೇ ಬದಲಾಗಲಿದೆ. ಬುಡಕಟ್ಟು ಮತ್ತು ಅವರ ನೆಲೆ ಅರಣ್ಯ ನಾಶವಾಗುತ್ತದೆ. ಇದು ಲಕ್ಷದ್ವೀಪದ ಜನಜೀವನವನ್ನು ಸಂಪೂರ್ಣ ನಾಶಮಾಡಲಿದೆ. ಹಾಗಾಗಿ ಉದ್ಧೇಶಿತ ಯೋಜನೆಯನ್ನು ಕೈಬಿಡುವಂತೆ ಮನವಿಯನ್ನು ಮಾಡಿದ್ದಾರೆ.

ದ್ವೀಪವಾಸಿಗಳ ಹೋರಾಟ, ಗಣ್ಯರ ಒತ್ತಡಕ್ಕೆ ಕೇಂದ್ರ ಸರ್ಕಾರ ಮಣಿಯುವ ಯಾವ ಲಕ್ಷಣಗಳು ಕಾಣಿಸುತ್ತಿಲ್ಲ. ದೇಶದ ಅತ್ಯಂತ ಅಪರೂಪದ ಮತ್ತು ಅಪಾರ ವನ್ಯ ಸಂಪತ್ತಿನ  ತಾಣವಾದ ಲಕ್ಷದ್ವೀಪವನ್ನು ಬಲಿಕೊಡಲು ಮುಂದಾಗಿರುವ ಎಲ್‌ಜೆ ಪ್ರಫುಲ್‌ ಪಟೇಲ್‌, ಕೇಂದ್ರ ಸರ್ಕಾರ ದ್ವೀಪವಾಸಿಗಳ ಹಿತಾಸಕ್ತಿಯನ್ನು ರಕ್ಷಿಸಲು ತಕ್ಷಣವೇ ಮುಂದಾಗಬೇಕಿದೆ. ಇಲ್ಲವಾದರೆ ಲಕ್ಷದ್ವೀಪದ ಜನರ ಆಕ್ರೋಶ ಇನ್ನಷ್ಟು ಭುಗಿಲೇಳುವ ಸಾಧ್ಯತೆ ಕೂಡ ಇದೆ.


ಇದನ್ನೂ ಓದಿ: ಹಸುವಿನೊಂದಿಗೆ ಪ್ರತಿಭಟನೆಗೆ ಮಣಿದ ಹರಿಯಾಣ ಪೊಲೀಸರು: ಇಬ್ಬರು ರೈತರ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...