Homeಮುಖಪುಟಹೊಸ ಪ್ರವಾಸೋದ್ಯಮ ನೀತಿ ವಿರೋಧಿಸಿ ಲಕ್ಷದ್ವೀಪ ನಿವಾಸಿಗಳಿಂದ ಉಪವಾಸ ಸತ್ಯಾಗ್ರಹ

ಹೊಸ ಪ್ರವಾಸೋದ್ಯಮ ನೀತಿ ವಿರೋಧಿಸಿ ಲಕ್ಷದ್ವೀಪ ನಿವಾಸಿಗಳಿಂದ ಉಪವಾಸ ಸತ್ಯಾಗ್ರಹ

- Advertisement -
- Advertisement -

ಲಕ್ಷದ್ವೀಪ ನಿವಾಸಿಗಳು ಸೋಮವಾರ ಅಂದರೆ ಇಂದು ಜೂನ್‌ 7, 2021 ರಂದು 12 ಗಂಟೆಗಳ ನಿರಂತರ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ಲಕ್ಷದ್ವೀಪದಲ್ಲಿ ಸರ್ಕಾರ ಜಾರಿಗೆ ತರಲು ಹೊರಟಿರುವ 3 ಹೊಸ ಪ್ರವಾಸೋದ್ಯಮ ಯೋಜನೆಗಳನ್ನು ವಿರೋಧಿಸಿ ಲಕ್ಷದ್ವೀಪ ನಿವಾಸಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಜನ ಜೀವನವನ್ನು ನಾಶಮಾಡುವ ಭೀತಿಯನ್ನು ಹೊಸ ಯೋಜನೆಗಳು ಉಂಟುಮಾಡಿವೆ. ಸುಮಾರು 70,000 ಜನಸಂಖ್ಯೆಯನ್ನು ಹೊಂದಿರುವ ಲಕ್ಷದ್ವೀಪ ಭಿನ್ನವಾದ ಸಂಸ್ಕೃತಿ, ಭಾಷೆ ಮತ್ತು ಸಂಪ್ರದಾಯಗಳನ್ನು ಹೊಂದಿವೆ. ಹಾಗೇ ಲಕ್ಷದ್ವೀಪದ ಕಾಡುಗಳಲ್ಲಿ ಅನೇಕ ಬುಡಕಟ್ಟುಗಳು ನೂರಾರು ವರ್ಷಗಳಿಂದ ನೆಲೆ ಕಂಡುಕೊಂಡಿವೆ.

ಲಕ್ಷದ್ವೀಪ ಉಳಿಸಿ ಸಂಘಟನೆ ಈ ಒಂದು ದಿನ ದ ಉಪವಾಸ ಸತ್ಯಾಗ್ರಹಕ್ಕೆ ಕರೆಕೊಟ್ಟಿದೆ. ಜೂನ್‌ 7ರ ಸೋಮವಾರ ಅಂಗಡಿ ಮುಂಗಟ್ಟುಗಳು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮುಚ್ಚಿರಲಿವೆ. ನಗರ, ಹಳ್ಳಿ ಎಲ್ಲಾಕಡೆಯಲ್ಲೂ ಜನ ಲಕ್ಷದ್ವೀಪ ಉಳಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿ ಉಪವಾಸವನ್ನು ಆಚರಿಸಲಿದ್ದಾರೆ. ಅಗತ್ಯ ಸೇವೆಗಳು ಮತ್ತು ಅಗತ್ಯ ಸೇವೆಗಳು ಮಾತ್ರ ಜನರಿಗೆ ತೆರೆದಿರಲಿವೆ.

ಇನ್ನೊಂದು ಕಡೆ ವಿವಾದಾತ್ಮಕ ಹೊಸ ಯೋಜನೆಗಳನ್ನು ಜಾರಿಗೆ ತಂದಿರುವ ಲಕ್ಷದ್ವೀಪದ ಲೆಫ್ಟಿನೆಂಟ್‌ ಗೌವರ್ನರ್‌ ಪ್ರಫುಲ್‌ ಖೋಡಾ ಪಟೇಲ್‌ ಅವರು ಕೊರೋನಾ ಲಾಕ್‌ಡೌನ್‌ ಜಾರಿಯಿರುವುದರಿಂದ ಬಹಿರಂಗವಾಗಿ ಜನ ಸೇರುವುದನ್ನು ಲಕ್ಷದ್ವೀಪದಲ್ಲಿ ನಿಷೇಧಿಸಲಾಗಿದೆ. ಒಂದು ವೇಳೆ ಕಾನೂನು ಉಲ್ಲಂಘಿಸಿ ಯಾರಾದರೂ ಬೀದಿಗಿಳಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.

ಮೊಟ್ಟ ಮೊದಲ ಬಾರಿಗೆ ಲಕ್ಷದ್ವೀಪದಲ್ಲಿ ಉಪವಾಸ ಸತ್ಯಾಗ್ರಹವನ್ನು ಆಚರಿಸಲಾಗುತ್ತಿದೆ. ನಾವು ಮೊದಲಿನಿಂದಲೂ ಸ್ಥಳೀಯರ ಭಾವನೆಗಳಿಗೆ ಬೆಲೆ ಕೊಡಬೇಕು ಮತ್ತು ಸ್ಥಳೀಯರ ಸಮಸ್ಯೆಗಳನ್ನು ಆಲಿಸಬೇಕೆಂದು ಲೆಫ್ಟಿನೆಂಟ್‌ ಗೌರ್ನರ್‌ ಅವರನ್ನು ಒತ್ತಾಯಿಸುತ್ತಲೇ ಬಂದಿದ್ದೇವೆ. ಆದರೆ ಎಲ್‌ಜೆ ಪ್ರಫುಲ್‌ ಪಟೇಲ್ ತಮ್ಮ ಏಕಪಕ್ಷೀಯ ನಿರ್ಧಾರಗಳನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಇದರಿಂದ ಲಕ್ಷದ್ವೀಪದ ಸ್ಥಳೀಯ ಜನಜೀವನಕ್ಕೆ ತೊಂದರೆಯಾಗಲಿದೆ ಎಂದು ಲಕ್ಷದ್ವೀಪ ಉಳಿಸಿ ಹೋರಾಟ ಸಂಘಟನೆಯ ಮುಖ್ಯಸ್ಥ ಯುಸಿಕೆ ಥಂಗಲ್‌ ಹೇಳುತ್ತಾರೆ.

37 ದ್ವೀಪಗಳನ್ನು ಒಳಗೊಂಡ ಲಕ್ಷದ್ವೀಪ ಒಂದು ದ್ವೀಪ ಸಮೂಹವಾಗಿದ್ದು ಸುಮಾರು 97% ದಟ್ಟವಾದ ಕಾಡಿನಿಂದ ಆವರಿಸಿದೆ. ಹಾಗೇ ಲಕ್ಷದ್ವೀಪದ 95% ಜನಸಂಖ್ಯೆ ಭಾರತ ಸಂವಿಧಾನದ ಅಡಿಯಲ್ಲಿ ಸಂರಕ್ಷಿಸಲಾದ ಬುಡಕಟ್ಟುಗಳಿಗೆ ಸೇರಿವೆ. ಹಾಗೇ ಲಕ್ಷದ್ವೀಪದ 37 ದ್ವೀಪಗಳಲ್ಲಿ ಕೇವಲ 11 ದ್ವೀಪಗಳಲ್ಲಿ ಮಾತ್ರ ಜನವಸತಿ ಇದೆ. ಸದ್ಯ ವಿವಾದಕ್ಕೆ ಕಾರಣವಾಗಿರುವ ಲಕ್ಷದ್ವೀಪ ಡೆವಲಪ್‌ಮೆಂಟ್‌ ಅಥಾರಿಟಿ ರೆಗ್ಯುಲೇಶನ್‌ ದ್ವೀಪವಾಸಿಗಳ ಜನ ಜೀವನವನ್ನು ಮತ್ತು ಸಾಂಪ್ರದಾಯಿಕ ಕಸುಬುಗಳನ್ನು ನಾಶ ಮಾಡಲಿದೆ ಎಂದು ಜನರು ಕಳವಳಗೊಂಡಿದ್ದಾರೆ. ಹೊಸ ಲಕ್ಷದ್ವೀಪ ಡೆವಲಪ್‌ಮೆಂಟ್‌ ಅಥಾರಿಟಿಯು ದ್ವೀಪವನ್ನು ದೇಶದ ಪ್ರಮುಖ ಪ್ರವಾಸಿ ತಾಣವನ್ನಾಗಿ ಮಾಡುವ ಉದ್ಧೇಶವನ್ನು ಹೊಂದಿದೆ. ಬಹುತೇಕ ಕಾಡುಗಳನ್ನು ಕಡಿದು ಮಾಲ್ಡೀವ್ಸ್‌ ಮಾದರಿಯ ಕಡಲು ದಂಡೆಗಳನ್ನು ನಿರ್ಮಿಸುವ ಉದ್ಧೇಶವನ್ನು ಹೊಂದಿದೆ ಎಂದು ಜನರು ಹೇಳುತ್ತಾರೆ.

ಉದ್ಧೇಶಿತ ಲಕ್ಷದ್ವೀಪ ಡೆವಲಪ್‌ಮೆಂಟ್‌ ಅಥಾರಿಟಿ ರೆಗ್ಯುಲೇಶನ್‌ (2021) ಕಾನೂನು ಈಗ ಕೇಂದ್ರ ಗೃಹ ಸಚಿವಾಲಯದ ಅಂಗಳವನ್ನು ತಲುಪಿದ್ದು ಗೃಹ ಸಚಿವಾಲಯದ ಅನುಮತಿಯೆಂದೇ ಬಾಕಿಯಿದೆ. ಲಕ್ಷದ್ವೀಪ ಎಲ್‌ಜೆ ಪ್ರಫುಲ್‌ ಪಟೇಲ್‌ ಇದು ಪ್ರವಾಸೋದ್ಯಮವನ್ನು ಹೆಚ್ಚಿಸುವುದರಿಂದ ದ್ವೀಪವಾಸಿಗಳಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಕೂಡ ಸಿಗುತ್ತವೆ ಎಂದು ಉದ್ಧೇಶಿತ ಕಾಯ್ದೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ : ಸಾರ್ವಜನಿಕರ ಆಕ್ರೋಶಕ್ಕೆ ಮಣಿದು ಮಲಯಾಳಂ ನಿಷೇಧದ ಆದೇಶ ಹಿಂಪಡೆದ ದೆಹಲಿಯ ಆಸ್ಪತ್ರೆ

ದೇಶದ ಅನೇಕ ನಿವೃತ್ತ ಅಧಿಕಾರಿಗಳು. ಸಂಸದರು ಹಾಗೂ ಚಲನಚಿತ್ರ ಗಣ್ಯರು ಕೂಡ ಕೇಂದ್ರ ಸರ್ಕಾರಕ್ಕೆ ಪತ್ರವನ್ನು ಬರೆದು ಉದ್ದೇಶಿತ ಯೋಜನೆಯಿಂದ ಲಕ್ಷದ್ವೀಪದ ಮೂಲ ಸ್ವರೂಪವೇ ಬದಲಾಗಲಿದೆ. ಬುಡಕಟ್ಟು ಮತ್ತು ಅವರ ನೆಲೆ ಅರಣ್ಯ ನಾಶವಾಗುತ್ತದೆ. ಇದು ಲಕ್ಷದ್ವೀಪದ ಜನಜೀವನವನ್ನು ಸಂಪೂರ್ಣ ನಾಶಮಾಡಲಿದೆ. ಹಾಗಾಗಿ ಉದ್ಧೇಶಿತ ಯೋಜನೆಯನ್ನು ಕೈಬಿಡುವಂತೆ ಮನವಿಯನ್ನು ಮಾಡಿದ್ದಾರೆ.

ದ್ವೀಪವಾಸಿಗಳ ಹೋರಾಟ, ಗಣ್ಯರ ಒತ್ತಡಕ್ಕೆ ಕೇಂದ್ರ ಸರ್ಕಾರ ಮಣಿಯುವ ಯಾವ ಲಕ್ಷಣಗಳು ಕಾಣಿಸುತ್ತಿಲ್ಲ. ದೇಶದ ಅತ್ಯಂತ ಅಪರೂಪದ ಮತ್ತು ಅಪಾರ ವನ್ಯ ಸಂಪತ್ತಿನ  ತಾಣವಾದ ಲಕ್ಷದ್ವೀಪವನ್ನು ಬಲಿಕೊಡಲು ಮುಂದಾಗಿರುವ ಎಲ್‌ಜೆ ಪ್ರಫುಲ್‌ ಪಟೇಲ್‌, ಕೇಂದ್ರ ಸರ್ಕಾರ ದ್ವೀಪವಾಸಿಗಳ ಹಿತಾಸಕ್ತಿಯನ್ನು ರಕ್ಷಿಸಲು ತಕ್ಷಣವೇ ಮುಂದಾಗಬೇಕಿದೆ. ಇಲ್ಲವಾದರೆ ಲಕ್ಷದ್ವೀಪದ ಜನರ ಆಕ್ರೋಶ ಇನ್ನಷ್ಟು ಭುಗಿಲೇಳುವ ಸಾಧ್ಯತೆ ಕೂಡ ಇದೆ.


ಇದನ್ನೂ ಓದಿ: ಹಸುವಿನೊಂದಿಗೆ ಪ್ರತಿಭಟನೆಗೆ ಮಣಿದ ಹರಿಯಾಣ ಪೊಲೀಸರು: ಇಬ್ಬರು ರೈತರ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...