Homeಮುಖಪುಟದರ್ಗಾ-ಲಕ್ಷಗೃಹ ಪ್ರಕರಣ: ಮುಸ್ಲಿಮರ ಅರ್ಜಿ ವಜಾ, ವಿವಾದಿತ ಜಾಗ ಹಿಂದೂಗಳಿಗೆ ಹಸ್ತಾಂತರ

ದರ್ಗಾ-ಲಕ್ಷಗೃಹ ಪ್ರಕರಣ: ಮುಸ್ಲಿಮರ ಅರ್ಜಿ ವಜಾ, ವಿವಾದಿತ ಜಾಗ ಹಿಂದೂಗಳಿಗೆ ಹಸ್ತಾಂತರ

- Advertisement -
- Advertisement -

ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ ಬರ್ನಾವಾದಲ್ಲಿರುವ ಐತಿಹಾಸಿಕ ವಿವಾದಿತ ಜಾಗವನ್ನು ನ್ಯಾಯಾಲಯ ಸೋಮವಾರ ಹಿಂದೂಗಳಿಗೆ ಹಸ್ತಾಂತರಿಸಿದೆ. ಈ ಮೂಲಕ 53 ವರ್ಷಗಳ ಹಳೆಯ ಪ್ರಕರಣವನ್ನು ಇತ್ಯರ್ಥ ಮಾಡಿದೆ ಎಂದು ವರದಿಯಾಗಿದೆ.

ಬರ್ನಾವಾದ ಹಿಂಡನ್ ಮತ್ತು ಕೃಷ್ಣಾ ನದಿಗಳ ಸಂಗಮದಲ್ಲಿ ಎತ್ತರದ ಪ್ರದೇಶಲ್ಲಿ ಗುಂಬಝ್, ಗೋರಿ ಹಾನಿಗೊಳಗಾದ ಕಟ್ಟಡಗಳು ಇದ್ದು, ಈ ಜಾಗವನ್ನು ಹಿಂದೂಗಳು ಮಹಾಭಾರತದ ಐತಿಹಾಸಿಕ ದಿಬ್ಬ ‘ಲಕ್ಷಗೃಹ’ ಎಂದು ವಾದಿಸಿದ್ದರು. ದುರ್ಯೋಧನನು ಪಾಂಡವರನ್ನು ಸುಟ್ಟು ಕೊಲ್ಲುವ ದುಷ್ಟ ಯೋಜನೆಯೊಂದಿಗೆ ಇದನ್ನು ನಿರ್ಮಿಸಿದ್ದನು ಎಂದಿದ್ದರು. ಮುಸ್ಲಿಮರು ಸೂಫಿ ಸಂತ ಶೇಖ್ ಬದ್ರುದ್ದೀನ್ ಅವರ ದರ್ಗಾ ಮತ್ತು ಇತರರ ಸ್ಮಶಾನವಾಗಿದೆ ಎಂದು ವಾದಿಸಿದ್ದರು.

ಬರ್ನಾವಾದ ನಿವಾಸಿ ಹಾಗೂ ದರ್ಗಾದ ಮುತವಲ್ಲಿ ಮುಕೀಂ ಖಾನ್, ಇದು ಶೇಖ್ ಬದ್ರುದ್ದೀನ್ ಅವರ ದರ್ಗಾ ಎಂದು ವಾದಿಸಿ 1970ರಲ್ಲಿ ಮೀರತ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಲಕ್ಷಗೃಹ ಗುರುಕುಲದ ಸಂಸ್ಥಾಪಕ ಬ್ರಹ್ಮಚಾರಿ ಕೃಷ್ಣದತ್ ಮಹಾರಾಜ್ ಅವರನ್ನು ಮೊಕದ್ದಮೆಯ ಪ್ರತಿವಾದಿಯನ್ನಾಗಿ ಮಾಡಿದ್ದರು. ಬಳಿಕ ಮುಕೀಂ ಖಾನ್ ಮತ್ತು ಕೃಷ್ಣದತ್ ಮಹಾರಾಜ್ ಇಬ್ಬರೂ ವಿಧಿವಶರಾಗಿದ್ದರು. ಎರಡೂ ಕಡೆಯ ಇತರರು ಪ್ರಕರಣವನ್ನು ಮುಂದುವರೆಸಿಕೊಂಡು ಹೋಗುತ್ತಿದ್ದರು. ಬಾಗ್ಪತ್‌ ಜಿಲ್ಲೆಯ ಪ್ರತ್ಯೇಕತೆಯ ನಂತರ, ಈ ಪ್ರಕರಣವು ಸಿವಿಲ್ ನ್ಯಾಯಾಧೀಶ ಕಿರಿಯ ವಿಭಾಗ Iರಲ್ಲಿ ನಡೆಯುತ್ತಿತ್ತು.

ಎರಡೂ ಕಡೆಯ ಜನರು ತಮ್ಮ ತಮ್ಮ ವಕೀಲರ ಮೂಲಕ ತಮ್ಮ ವಾದಕ್ಕೆ ಪೂರಕವಾದ ಸಾಕ್ಷ್ಯವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಒಂದು ಕಡೆಯಿಂದ ಅಯೂಬ್, ಮುನ್ನಾ ಮತ್ತು ಇತರರು ಇನ್ನೊಂದು ಕಡೆಯಿಂದ ಗಾಂಧಿಧಾಮ್ ಸಮಿತಿಯ ವ್ಯವಸ್ಥಾಪಕ ರಾಜ್‌ಪಾಲ್ ತ್ಯಾಗಿ ಅವರು ವಕೀಲರ ಮೂಲಕ ನ್ಯಾಯಾಲಯಕ್ಕೆ ತಮ್ಮ ಸಾಕ್ಷ್ಯವನ್ನು ಹಾಜರುಪಡಿಸಿದ್ದರು. ಈ ವೇಳೆ ಸ್ಥಳ ಪರಿಶೀಲನೆ ನಡೆಸುವಂತೆ ನ್ಯಾಯಾಲಯಕ್ಕೆ ಮನವಿಯನ್ನೂ ಸಲ್ಲಿಸಲಾಗಿತ್ತು. ಕಳೆದ ಹಲವು ತಿಂಗಳುಗಳಿಂದ ಪ್ರಕರಣದ ತೀರ್ಪು ಕಾಯ್ದಿರಿಸಿದ್ದ ನ್ಯಾಯಾಲಯ ಸೋಮವಾರ ತೀರ್ಪು ನೀಡಿದ್ದು, ಮುಸ್ಲಿಂ ಪರ ಅರ್ಜಿಯನ್ನು ತಿರಸ್ಕರಿಸಿದೆ.

ನ್ಯಾಯಾಲಯದಲ್ಲಿ ಹಾಜರುಪಡಿಸಿದ ಸಾಕ್ಷ್ಯಗಳ ಪ್ರಕಾರ ಕಂದಾಯ ದಾಖಲೆಗಳಲ್ಲಿ ದರ್ಗಾ ಮತ್ತು ಸ್ಮಶಾನದ ಭೂಮಿ ಬಗ್ಗೆ ಎಲ್ಲಿಯೂ ದಾಖಲಾಗಿಲ್ಲ ಎಂದು ಹೇಳಲಾಗಿದೆ.

ಐತಿಹಾಸಿಕ ದಿಬ್ಬ ಮಹಾಭಾರತ ಕಾಲದ ‘ಲಕ್ಷಗೃಹ’ ಎಂದು ಬರ್ನಾವಾದ ಲಕ್ಷಗೃಹದಲ್ಲಿರುವ ಸಂಸ್ಕೃತ ಪಾಠಶಾಲೆಯ ಪ್ರಾಂಶುಪಾಲ ಆಚಾರ್ಯ ಅರವಿಂದ್ ಕುಮಾರ್ ಶಾಸ್ತ್ರಿ ಹೇಳಿದ್ದಾರೆ. ಇಲ್ಲಿರುವ ಸುರಂಗ ಮತ್ತು ಇತರ ಅವಶೇಷಗಳು ಇದಕ್ಕೆ ಸಾಕ್ಷಿ. ನ್ಯಾಯಾಲಯದಲ್ಲಿ ವಕಾಲತ್ತು ವಹಿಸಿದ್ದ ಗಾಂಧಿಧಾಮ ಸಮಿತಿಯ ಅಧಿಕಾರಿಗಳು ಈ ಸಂಬಂಧ ಎಲ್ಲ ಸಾಕ್ಷ್ಯಗಳನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಪುರಾತನ ದಿಬ್ಬದ ಮೇಲೆ ಶೇಖ್ ಬದ್ರುದ್ದೀನ್ ಅವರ ದರ್ಗಾ ಮತ್ತು ಸ್ಮಶಾನವಿದೆ ಎಂದು ಆರೋಪಿಸಿ ಮುಕೀಂ ಖಾನ್ ಮೊಕದ್ದಮೆ ಹೂಡಿದ್ದರು. ಇದನ್ನು ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಯಲ್ಲಿ ನೋಂದಾಯಿಸಲಾಗಿದೆ. ಕೃಷ್ಣದತ್ತ ಮಹಾರಾಜ್ ಹೊರಗಿನಿಂದ ಬಂದವರಾಗಿದ್ದು, ಸ್ಮಶಾನವನ್ನು ಧ್ವಂಸಗೊಳಿಸಿ ಅದನ್ನು ಹಿಂದೂಗಳ ಯಾತ್ರಾ ಸ್ಥಳವನ್ನಾಗಿ ಮಾಡಲು ಬಯಸಿದ್ದರು ಎಂದು ಆರೋಪಿಸಿದ್ದರು.

ಎರಡೂ ಕಡೆಯವರ ವಾದ ಮತ್ತು ಸಾಕ್ಷ್ಯಗಳನ್ನು ಪರಿಶೀಲಿಸಿದ ನ್ಯಾಯಾಲಯ ಜಾಗದ ಮಾಲೀಕತ್ವ ಹಿಂದೂಗಳಿಗೆ ನೀಡಿದೆ ಎಂದು ತಿಳಿದು ಬಂದಿದೆ. ಹಿಂದೂಗಳ ಪರ ನ್ಯಾಯಾಲಯದಲ್ಲಿ ಪ್ರಕರಣ ಮುನ್ನಡೆಸುತ್ತಿದ್ದ ಗಾಂಧಿಧಾಮ್ ಸಮಿತಿಯ ವಕೀಲ ರಣವೀರ್ ಸಿಂಗ್ ತೋಮರ್ ಅವರು ನ್ಯಾಯಾಲಯದ ಈ ತೀರ್ಪಿಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಉತ್ತರಾಖಂಡ ವಿಧಾನಸಭೆಯಲ್ಲಿ ಸಮಾನ ನಾಗರಿಕ ಸಂಹಿತೆ ಮಸೂದೆ ಮಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...