Homeಮುಖಪುಟದರ್ಗಾ-ಲಕ್ಷಗೃಹ ಪ್ರಕರಣ: ಮುಸ್ಲಿಮರ ಅರ್ಜಿ ವಜಾ, ವಿವಾದಿತ ಜಾಗ ಹಿಂದೂಗಳಿಗೆ ಹಸ್ತಾಂತರ

ದರ್ಗಾ-ಲಕ್ಷಗೃಹ ಪ್ರಕರಣ: ಮುಸ್ಲಿಮರ ಅರ್ಜಿ ವಜಾ, ವಿವಾದಿತ ಜಾಗ ಹಿಂದೂಗಳಿಗೆ ಹಸ್ತಾಂತರ

- Advertisement -
- Advertisement -

ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ ಬರ್ನಾವಾದಲ್ಲಿರುವ ಐತಿಹಾಸಿಕ ವಿವಾದಿತ ಜಾಗವನ್ನು ನ್ಯಾಯಾಲಯ ಸೋಮವಾರ ಹಿಂದೂಗಳಿಗೆ ಹಸ್ತಾಂತರಿಸಿದೆ. ಈ ಮೂಲಕ 53 ವರ್ಷಗಳ ಹಳೆಯ ಪ್ರಕರಣವನ್ನು ಇತ್ಯರ್ಥ ಮಾಡಿದೆ ಎಂದು ವರದಿಯಾಗಿದೆ.

ಬರ್ನಾವಾದ ಹಿಂಡನ್ ಮತ್ತು ಕೃಷ್ಣಾ ನದಿಗಳ ಸಂಗಮದಲ್ಲಿ ಎತ್ತರದ ಪ್ರದೇಶಲ್ಲಿ ಗುಂಬಝ್, ಗೋರಿ ಹಾನಿಗೊಳಗಾದ ಕಟ್ಟಡಗಳು ಇದ್ದು, ಈ ಜಾಗವನ್ನು ಹಿಂದೂಗಳು ಮಹಾಭಾರತದ ಐತಿಹಾಸಿಕ ದಿಬ್ಬ ‘ಲಕ್ಷಗೃಹ’ ಎಂದು ವಾದಿಸಿದ್ದರು. ದುರ್ಯೋಧನನು ಪಾಂಡವರನ್ನು ಸುಟ್ಟು ಕೊಲ್ಲುವ ದುಷ್ಟ ಯೋಜನೆಯೊಂದಿಗೆ ಇದನ್ನು ನಿರ್ಮಿಸಿದ್ದನು ಎಂದಿದ್ದರು. ಮುಸ್ಲಿಮರು ಸೂಫಿ ಸಂತ ಶೇಖ್ ಬದ್ರುದ್ದೀನ್ ಅವರ ದರ್ಗಾ ಮತ್ತು ಇತರರ ಸ್ಮಶಾನವಾಗಿದೆ ಎಂದು ವಾದಿಸಿದ್ದರು.

ಬರ್ನಾವಾದ ನಿವಾಸಿ ಹಾಗೂ ದರ್ಗಾದ ಮುತವಲ್ಲಿ ಮುಕೀಂ ಖಾನ್, ಇದು ಶೇಖ್ ಬದ್ರುದ್ದೀನ್ ಅವರ ದರ್ಗಾ ಎಂದು ವಾದಿಸಿ 1970ರಲ್ಲಿ ಮೀರತ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಲಕ್ಷಗೃಹ ಗುರುಕುಲದ ಸಂಸ್ಥಾಪಕ ಬ್ರಹ್ಮಚಾರಿ ಕೃಷ್ಣದತ್ ಮಹಾರಾಜ್ ಅವರನ್ನು ಮೊಕದ್ದಮೆಯ ಪ್ರತಿವಾದಿಯನ್ನಾಗಿ ಮಾಡಿದ್ದರು. ಬಳಿಕ ಮುಕೀಂ ಖಾನ್ ಮತ್ತು ಕೃಷ್ಣದತ್ ಮಹಾರಾಜ್ ಇಬ್ಬರೂ ವಿಧಿವಶರಾಗಿದ್ದರು. ಎರಡೂ ಕಡೆಯ ಇತರರು ಪ್ರಕರಣವನ್ನು ಮುಂದುವರೆಸಿಕೊಂಡು ಹೋಗುತ್ತಿದ್ದರು. ಬಾಗ್ಪತ್‌ ಜಿಲ್ಲೆಯ ಪ್ರತ್ಯೇಕತೆಯ ನಂತರ, ಈ ಪ್ರಕರಣವು ಸಿವಿಲ್ ನ್ಯಾಯಾಧೀಶ ಕಿರಿಯ ವಿಭಾಗ Iರಲ್ಲಿ ನಡೆಯುತ್ತಿತ್ತು.

ಎರಡೂ ಕಡೆಯ ಜನರು ತಮ್ಮ ತಮ್ಮ ವಕೀಲರ ಮೂಲಕ ತಮ್ಮ ವಾದಕ್ಕೆ ಪೂರಕವಾದ ಸಾಕ್ಷ್ಯವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಒಂದು ಕಡೆಯಿಂದ ಅಯೂಬ್, ಮುನ್ನಾ ಮತ್ತು ಇತರರು ಇನ್ನೊಂದು ಕಡೆಯಿಂದ ಗಾಂಧಿಧಾಮ್ ಸಮಿತಿಯ ವ್ಯವಸ್ಥಾಪಕ ರಾಜ್‌ಪಾಲ್ ತ್ಯಾಗಿ ಅವರು ವಕೀಲರ ಮೂಲಕ ನ್ಯಾಯಾಲಯಕ್ಕೆ ತಮ್ಮ ಸಾಕ್ಷ್ಯವನ್ನು ಹಾಜರುಪಡಿಸಿದ್ದರು. ಈ ವೇಳೆ ಸ್ಥಳ ಪರಿಶೀಲನೆ ನಡೆಸುವಂತೆ ನ್ಯಾಯಾಲಯಕ್ಕೆ ಮನವಿಯನ್ನೂ ಸಲ್ಲಿಸಲಾಗಿತ್ತು. ಕಳೆದ ಹಲವು ತಿಂಗಳುಗಳಿಂದ ಪ್ರಕರಣದ ತೀರ್ಪು ಕಾಯ್ದಿರಿಸಿದ್ದ ನ್ಯಾಯಾಲಯ ಸೋಮವಾರ ತೀರ್ಪು ನೀಡಿದ್ದು, ಮುಸ್ಲಿಂ ಪರ ಅರ್ಜಿಯನ್ನು ತಿರಸ್ಕರಿಸಿದೆ.

ನ್ಯಾಯಾಲಯದಲ್ಲಿ ಹಾಜರುಪಡಿಸಿದ ಸಾಕ್ಷ್ಯಗಳ ಪ್ರಕಾರ ಕಂದಾಯ ದಾಖಲೆಗಳಲ್ಲಿ ದರ್ಗಾ ಮತ್ತು ಸ್ಮಶಾನದ ಭೂಮಿ ಬಗ್ಗೆ ಎಲ್ಲಿಯೂ ದಾಖಲಾಗಿಲ್ಲ ಎಂದು ಹೇಳಲಾಗಿದೆ.

ಐತಿಹಾಸಿಕ ದಿಬ್ಬ ಮಹಾಭಾರತ ಕಾಲದ ‘ಲಕ್ಷಗೃಹ’ ಎಂದು ಬರ್ನಾವಾದ ಲಕ್ಷಗೃಹದಲ್ಲಿರುವ ಸಂಸ್ಕೃತ ಪಾಠಶಾಲೆಯ ಪ್ರಾಂಶುಪಾಲ ಆಚಾರ್ಯ ಅರವಿಂದ್ ಕುಮಾರ್ ಶಾಸ್ತ್ರಿ ಹೇಳಿದ್ದಾರೆ. ಇಲ್ಲಿರುವ ಸುರಂಗ ಮತ್ತು ಇತರ ಅವಶೇಷಗಳು ಇದಕ್ಕೆ ಸಾಕ್ಷಿ. ನ್ಯಾಯಾಲಯದಲ್ಲಿ ವಕಾಲತ್ತು ವಹಿಸಿದ್ದ ಗಾಂಧಿಧಾಮ ಸಮಿತಿಯ ಅಧಿಕಾರಿಗಳು ಈ ಸಂಬಂಧ ಎಲ್ಲ ಸಾಕ್ಷ್ಯಗಳನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಪುರಾತನ ದಿಬ್ಬದ ಮೇಲೆ ಶೇಖ್ ಬದ್ರುದ್ದೀನ್ ಅವರ ದರ್ಗಾ ಮತ್ತು ಸ್ಮಶಾನವಿದೆ ಎಂದು ಆರೋಪಿಸಿ ಮುಕೀಂ ಖಾನ್ ಮೊಕದ್ದಮೆ ಹೂಡಿದ್ದರು. ಇದನ್ನು ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಯಲ್ಲಿ ನೋಂದಾಯಿಸಲಾಗಿದೆ. ಕೃಷ್ಣದತ್ತ ಮಹಾರಾಜ್ ಹೊರಗಿನಿಂದ ಬಂದವರಾಗಿದ್ದು, ಸ್ಮಶಾನವನ್ನು ಧ್ವಂಸಗೊಳಿಸಿ ಅದನ್ನು ಹಿಂದೂಗಳ ಯಾತ್ರಾ ಸ್ಥಳವನ್ನಾಗಿ ಮಾಡಲು ಬಯಸಿದ್ದರು ಎಂದು ಆರೋಪಿಸಿದ್ದರು.

ಎರಡೂ ಕಡೆಯವರ ವಾದ ಮತ್ತು ಸಾಕ್ಷ್ಯಗಳನ್ನು ಪರಿಶೀಲಿಸಿದ ನ್ಯಾಯಾಲಯ ಜಾಗದ ಮಾಲೀಕತ್ವ ಹಿಂದೂಗಳಿಗೆ ನೀಡಿದೆ ಎಂದು ತಿಳಿದು ಬಂದಿದೆ. ಹಿಂದೂಗಳ ಪರ ನ್ಯಾಯಾಲಯದಲ್ಲಿ ಪ್ರಕರಣ ಮುನ್ನಡೆಸುತ್ತಿದ್ದ ಗಾಂಧಿಧಾಮ್ ಸಮಿತಿಯ ವಕೀಲ ರಣವೀರ್ ಸಿಂಗ್ ತೋಮರ್ ಅವರು ನ್ಯಾಯಾಲಯದ ಈ ತೀರ್ಪಿಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಉತ್ತರಾಖಂಡ ವಿಧಾನಸಭೆಯಲ್ಲಿ ಸಮಾನ ನಾಗರಿಕ ಸಂಹಿತೆ ಮಸೂದೆ ಮಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...