Homeಮುಖಪುಟದರ್ಗಾ-ಲಕ್ಷಗೃಹ ಪ್ರಕರಣ: ಮುಸ್ಲಿಮರ ಅರ್ಜಿ ವಜಾ, ವಿವಾದಿತ ಜಾಗ ಹಿಂದೂಗಳಿಗೆ ಹಸ್ತಾಂತರ

ದರ್ಗಾ-ಲಕ್ಷಗೃಹ ಪ್ರಕರಣ: ಮುಸ್ಲಿಮರ ಅರ್ಜಿ ವಜಾ, ವಿವಾದಿತ ಜಾಗ ಹಿಂದೂಗಳಿಗೆ ಹಸ್ತಾಂತರ

- Advertisement -
- Advertisement -

ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ ಬರ್ನಾವಾದಲ್ಲಿರುವ ಐತಿಹಾಸಿಕ ವಿವಾದಿತ ಜಾಗವನ್ನು ನ್ಯಾಯಾಲಯ ಸೋಮವಾರ ಹಿಂದೂಗಳಿಗೆ ಹಸ್ತಾಂತರಿಸಿದೆ. ಈ ಮೂಲಕ 53 ವರ್ಷಗಳ ಹಳೆಯ ಪ್ರಕರಣವನ್ನು ಇತ್ಯರ್ಥ ಮಾಡಿದೆ ಎಂದು ವರದಿಯಾಗಿದೆ.

ಬರ್ನಾವಾದ ಹಿಂಡನ್ ಮತ್ತು ಕೃಷ್ಣಾ ನದಿಗಳ ಸಂಗಮದಲ್ಲಿ ಎತ್ತರದ ಪ್ರದೇಶಲ್ಲಿ ಗುಂಬಝ್, ಗೋರಿ ಹಾನಿಗೊಳಗಾದ ಕಟ್ಟಡಗಳು ಇದ್ದು, ಈ ಜಾಗವನ್ನು ಹಿಂದೂಗಳು ಮಹಾಭಾರತದ ಐತಿಹಾಸಿಕ ದಿಬ್ಬ ‘ಲಕ್ಷಗೃಹ’ ಎಂದು ವಾದಿಸಿದ್ದರು. ದುರ್ಯೋಧನನು ಪಾಂಡವರನ್ನು ಸುಟ್ಟು ಕೊಲ್ಲುವ ದುಷ್ಟ ಯೋಜನೆಯೊಂದಿಗೆ ಇದನ್ನು ನಿರ್ಮಿಸಿದ್ದನು ಎಂದಿದ್ದರು. ಮುಸ್ಲಿಮರು ಸೂಫಿ ಸಂತ ಶೇಖ್ ಬದ್ರುದ್ದೀನ್ ಅವರ ದರ್ಗಾ ಮತ್ತು ಇತರರ ಸ್ಮಶಾನವಾಗಿದೆ ಎಂದು ವಾದಿಸಿದ್ದರು.

ಬರ್ನಾವಾದ ನಿವಾಸಿ ಹಾಗೂ ದರ್ಗಾದ ಮುತವಲ್ಲಿ ಮುಕೀಂ ಖಾನ್, ಇದು ಶೇಖ್ ಬದ್ರುದ್ದೀನ್ ಅವರ ದರ್ಗಾ ಎಂದು ವಾದಿಸಿ 1970ರಲ್ಲಿ ಮೀರತ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಲಕ್ಷಗೃಹ ಗುರುಕುಲದ ಸಂಸ್ಥಾಪಕ ಬ್ರಹ್ಮಚಾರಿ ಕೃಷ್ಣದತ್ ಮಹಾರಾಜ್ ಅವರನ್ನು ಮೊಕದ್ದಮೆಯ ಪ್ರತಿವಾದಿಯನ್ನಾಗಿ ಮಾಡಿದ್ದರು. ಬಳಿಕ ಮುಕೀಂ ಖಾನ್ ಮತ್ತು ಕೃಷ್ಣದತ್ ಮಹಾರಾಜ್ ಇಬ್ಬರೂ ವಿಧಿವಶರಾಗಿದ್ದರು. ಎರಡೂ ಕಡೆಯ ಇತರರು ಪ್ರಕರಣವನ್ನು ಮುಂದುವರೆಸಿಕೊಂಡು ಹೋಗುತ್ತಿದ್ದರು. ಬಾಗ್ಪತ್‌ ಜಿಲ್ಲೆಯ ಪ್ರತ್ಯೇಕತೆಯ ನಂತರ, ಈ ಪ್ರಕರಣವು ಸಿವಿಲ್ ನ್ಯಾಯಾಧೀಶ ಕಿರಿಯ ವಿಭಾಗ Iರಲ್ಲಿ ನಡೆಯುತ್ತಿತ್ತು.

ಎರಡೂ ಕಡೆಯ ಜನರು ತಮ್ಮ ತಮ್ಮ ವಕೀಲರ ಮೂಲಕ ತಮ್ಮ ವಾದಕ್ಕೆ ಪೂರಕವಾದ ಸಾಕ್ಷ್ಯವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಒಂದು ಕಡೆಯಿಂದ ಅಯೂಬ್, ಮುನ್ನಾ ಮತ್ತು ಇತರರು ಇನ್ನೊಂದು ಕಡೆಯಿಂದ ಗಾಂಧಿಧಾಮ್ ಸಮಿತಿಯ ವ್ಯವಸ್ಥಾಪಕ ರಾಜ್‌ಪಾಲ್ ತ್ಯಾಗಿ ಅವರು ವಕೀಲರ ಮೂಲಕ ನ್ಯಾಯಾಲಯಕ್ಕೆ ತಮ್ಮ ಸಾಕ್ಷ್ಯವನ್ನು ಹಾಜರುಪಡಿಸಿದ್ದರು. ಈ ವೇಳೆ ಸ್ಥಳ ಪರಿಶೀಲನೆ ನಡೆಸುವಂತೆ ನ್ಯಾಯಾಲಯಕ್ಕೆ ಮನವಿಯನ್ನೂ ಸಲ್ಲಿಸಲಾಗಿತ್ತು. ಕಳೆದ ಹಲವು ತಿಂಗಳುಗಳಿಂದ ಪ್ರಕರಣದ ತೀರ್ಪು ಕಾಯ್ದಿರಿಸಿದ್ದ ನ್ಯಾಯಾಲಯ ಸೋಮವಾರ ತೀರ್ಪು ನೀಡಿದ್ದು, ಮುಸ್ಲಿಂ ಪರ ಅರ್ಜಿಯನ್ನು ತಿರಸ್ಕರಿಸಿದೆ.

ನ್ಯಾಯಾಲಯದಲ್ಲಿ ಹಾಜರುಪಡಿಸಿದ ಸಾಕ್ಷ್ಯಗಳ ಪ್ರಕಾರ ಕಂದಾಯ ದಾಖಲೆಗಳಲ್ಲಿ ದರ್ಗಾ ಮತ್ತು ಸ್ಮಶಾನದ ಭೂಮಿ ಬಗ್ಗೆ ಎಲ್ಲಿಯೂ ದಾಖಲಾಗಿಲ್ಲ ಎಂದು ಹೇಳಲಾಗಿದೆ.

ಐತಿಹಾಸಿಕ ದಿಬ್ಬ ಮಹಾಭಾರತ ಕಾಲದ ‘ಲಕ್ಷಗೃಹ’ ಎಂದು ಬರ್ನಾವಾದ ಲಕ್ಷಗೃಹದಲ್ಲಿರುವ ಸಂಸ್ಕೃತ ಪಾಠಶಾಲೆಯ ಪ್ರಾಂಶುಪಾಲ ಆಚಾರ್ಯ ಅರವಿಂದ್ ಕುಮಾರ್ ಶಾಸ್ತ್ರಿ ಹೇಳಿದ್ದಾರೆ. ಇಲ್ಲಿರುವ ಸುರಂಗ ಮತ್ತು ಇತರ ಅವಶೇಷಗಳು ಇದಕ್ಕೆ ಸಾಕ್ಷಿ. ನ್ಯಾಯಾಲಯದಲ್ಲಿ ವಕಾಲತ್ತು ವಹಿಸಿದ್ದ ಗಾಂಧಿಧಾಮ ಸಮಿತಿಯ ಅಧಿಕಾರಿಗಳು ಈ ಸಂಬಂಧ ಎಲ್ಲ ಸಾಕ್ಷ್ಯಗಳನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಪುರಾತನ ದಿಬ್ಬದ ಮೇಲೆ ಶೇಖ್ ಬದ್ರುದ್ದೀನ್ ಅವರ ದರ್ಗಾ ಮತ್ತು ಸ್ಮಶಾನವಿದೆ ಎಂದು ಆರೋಪಿಸಿ ಮುಕೀಂ ಖಾನ್ ಮೊಕದ್ದಮೆ ಹೂಡಿದ್ದರು. ಇದನ್ನು ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಯಲ್ಲಿ ನೋಂದಾಯಿಸಲಾಗಿದೆ. ಕೃಷ್ಣದತ್ತ ಮಹಾರಾಜ್ ಹೊರಗಿನಿಂದ ಬಂದವರಾಗಿದ್ದು, ಸ್ಮಶಾನವನ್ನು ಧ್ವಂಸಗೊಳಿಸಿ ಅದನ್ನು ಹಿಂದೂಗಳ ಯಾತ್ರಾ ಸ್ಥಳವನ್ನಾಗಿ ಮಾಡಲು ಬಯಸಿದ್ದರು ಎಂದು ಆರೋಪಿಸಿದ್ದರು.

ಎರಡೂ ಕಡೆಯವರ ವಾದ ಮತ್ತು ಸಾಕ್ಷ್ಯಗಳನ್ನು ಪರಿಶೀಲಿಸಿದ ನ್ಯಾಯಾಲಯ ಜಾಗದ ಮಾಲೀಕತ್ವ ಹಿಂದೂಗಳಿಗೆ ನೀಡಿದೆ ಎಂದು ತಿಳಿದು ಬಂದಿದೆ. ಹಿಂದೂಗಳ ಪರ ನ್ಯಾಯಾಲಯದಲ್ಲಿ ಪ್ರಕರಣ ಮುನ್ನಡೆಸುತ್ತಿದ್ದ ಗಾಂಧಿಧಾಮ್ ಸಮಿತಿಯ ವಕೀಲ ರಣವೀರ್ ಸಿಂಗ್ ತೋಮರ್ ಅವರು ನ್ಯಾಯಾಲಯದ ಈ ತೀರ್ಪಿಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಉತ್ತರಾಖಂಡ ವಿಧಾನಸಭೆಯಲ್ಲಿ ಸಮಾನ ನಾಗರಿಕ ಸಂಹಿತೆ ಮಸೂದೆ ಮಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...