Homeಮುಖಪುಟದರ್ಗಾ-ಲಕ್ಷಗೃಹ ಪ್ರಕರಣ: ಮುಸ್ಲಿಮರ ಅರ್ಜಿ ವಜಾ, ವಿವಾದಿತ ಜಾಗ ಹಿಂದೂಗಳಿಗೆ ಹಸ್ತಾಂತರ

ದರ್ಗಾ-ಲಕ್ಷಗೃಹ ಪ್ರಕರಣ: ಮುಸ್ಲಿಮರ ಅರ್ಜಿ ವಜಾ, ವಿವಾದಿತ ಜಾಗ ಹಿಂದೂಗಳಿಗೆ ಹಸ್ತಾಂತರ

- Advertisement -
- Advertisement -

ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ ಬರ್ನಾವಾದಲ್ಲಿರುವ ಐತಿಹಾಸಿಕ ವಿವಾದಿತ ಜಾಗವನ್ನು ನ್ಯಾಯಾಲಯ ಸೋಮವಾರ ಹಿಂದೂಗಳಿಗೆ ಹಸ್ತಾಂತರಿಸಿದೆ. ಈ ಮೂಲಕ 53 ವರ್ಷಗಳ ಹಳೆಯ ಪ್ರಕರಣವನ್ನು ಇತ್ಯರ್ಥ ಮಾಡಿದೆ ಎಂದು ವರದಿಯಾಗಿದೆ.

ಬರ್ನಾವಾದ ಹಿಂಡನ್ ಮತ್ತು ಕೃಷ್ಣಾ ನದಿಗಳ ಸಂಗಮದಲ್ಲಿ ಎತ್ತರದ ಪ್ರದೇಶಲ್ಲಿ ಗುಂಬಝ್, ಗೋರಿ ಹಾನಿಗೊಳಗಾದ ಕಟ್ಟಡಗಳು ಇದ್ದು, ಈ ಜಾಗವನ್ನು ಹಿಂದೂಗಳು ಮಹಾಭಾರತದ ಐತಿಹಾಸಿಕ ದಿಬ್ಬ ‘ಲಕ್ಷಗೃಹ’ ಎಂದು ವಾದಿಸಿದ್ದರು. ದುರ್ಯೋಧನನು ಪಾಂಡವರನ್ನು ಸುಟ್ಟು ಕೊಲ್ಲುವ ದುಷ್ಟ ಯೋಜನೆಯೊಂದಿಗೆ ಇದನ್ನು ನಿರ್ಮಿಸಿದ್ದನು ಎಂದಿದ್ದರು. ಮುಸ್ಲಿಮರು ಸೂಫಿ ಸಂತ ಶೇಖ್ ಬದ್ರುದ್ದೀನ್ ಅವರ ದರ್ಗಾ ಮತ್ತು ಇತರರ ಸ್ಮಶಾನವಾಗಿದೆ ಎಂದು ವಾದಿಸಿದ್ದರು.

ಬರ್ನಾವಾದ ನಿವಾಸಿ ಹಾಗೂ ದರ್ಗಾದ ಮುತವಲ್ಲಿ ಮುಕೀಂ ಖಾನ್, ಇದು ಶೇಖ್ ಬದ್ರುದ್ದೀನ್ ಅವರ ದರ್ಗಾ ಎಂದು ವಾದಿಸಿ 1970ರಲ್ಲಿ ಮೀರತ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಲಕ್ಷಗೃಹ ಗುರುಕುಲದ ಸಂಸ್ಥಾಪಕ ಬ್ರಹ್ಮಚಾರಿ ಕೃಷ್ಣದತ್ ಮಹಾರಾಜ್ ಅವರನ್ನು ಮೊಕದ್ದಮೆಯ ಪ್ರತಿವಾದಿಯನ್ನಾಗಿ ಮಾಡಿದ್ದರು. ಬಳಿಕ ಮುಕೀಂ ಖಾನ್ ಮತ್ತು ಕೃಷ್ಣದತ್ ಮಹಾರಾಜ್ ಇಬ್ಬರೂ ವಿಧಿವಶರಾಗಿದ್ದರು. ಎರಡೂ ಕಡೆಯ ಇತರರು ಪ್ರಕರಣವನ್ನು ಮುಂದುವರೆಸಿಕೊಂಡು ಹೋಗುತ್ತಿದ್ದರು. ಬಾಗ್ಪತ್‌ ಜಿಲ್ಲೆಯ ಪ್ರತ್ಯೇಕತೆಯ ನಂತರ, ಈ ಪ್ರಕರಣವು ಸಿವಿಲ್ ನ್ಯಾಯಾಧೀಶ ಕಿರಿಯ ವಿಭಾಗ Iರಲ್ಲಿ ನಡೆಯುತ್ತಿತ್ತು.

ಎರಡೂ ಕಡೆಯ ಜನರು ತಮ್ಮ ತಮ್ಮ ವಕೀಲರ ಮೂಲಕ ತಮ್ಮ ವಾದಕ್ಕೆ ಪೂರಕವಾದ ಸಾಕ್ಷ್ಯವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಒಂದು ಕಡೆಯಿಂದ ಅಯೂಬ್, ಮುನ್ನಾ ಮತ್ತು ಇತರರು ಇನ್ನೊಂದು ಕಡೆಯಿಂದ ಗಾಂಧಿಧಾಮ್ ಸಮಿತಿಯ ವ್ಯವಸ್ಥಾಪಕ ರಾಜ್‌ಪಾಲ್ ತ್ಯಾಗಿ ಅವರು ವಕೀಲರ ಮೂಲಕ ನ್ಯಾಯಾಲಯಕ್ಕೆ ತಮ್ಮ ಸಾಕ್ಷ್ಯವನ್ನು ಹಾಜರುಪಡಿಸಿದ್ದರು. ಈ ವೇಳೆ ಸ್ಥಳ ಪರಿಶೀಲನೆ ನಡೆಸುವಂತೆ ನ್ಯಾಯಾಲಯಕ್ಕೆ ಮನವಿಯನ್ನೂ ಸಲ್ಲಿಸಲಾಗಿತ್ತು. ಕಳೆದ ಹಲವು ತಿಂಗಳುಗಳಿಂದ ಪ್ರಕರಣದ ತೀರ್ಪು ಕಾಯ್ದಿರಿಸಿದ್ದ ನ್ಯಾಯಾಲಯ ಸೋಮವಾರ ತೀರ್ಪು ನೀಡಿದ್ದು, ಮುಸ್ಲಿಂ ಪರ ಅರ್ಜಿಯನ್ನು ತಿರಸ್ಕರಿಸಿದೆ.

ನ್ಯಾಯಾಲಯದಲ್ಲಿ ಹಾಜರುಪಡಿಸಿದ ಸಾಕ್ಷ್ಯಗಳ ಪ್ರಕಾರ ಕಂದಾಯ ದಾಖಲೆಗಳಲ್ಲಿ ದರ್ಗಾ ಮತ್ತು ಸ್ಮಶಾನದ ಭೂಮಿ ಬಗ್ಗೆ ಎಲ್ಲಿಯೂ ದಾಖಲಾಗಿಲ್ಲ ಎಂದು ಹೇಳಲಾಗಿದೆ.

ಐತಿಹಾಸಿಕ ದಿಬ್ಬ ಮಹಾಭಾರತ ಕಾಲದ ‘ಲಕ್ಷಗೃಹ’ ಎಂದು ಬರ್ನಾವಾದ ಲಕ್ಷಗೃಹದಲ್ಲಿರುವ ಸಂಸ್ಕೃತ ಪಾಠಶಾಲೆಯ ಪ್ರಾಂಶುಪಾಲ ಆಚಾರ್ಯ ಅರವಿಂದ್ ಕುಮಾರ್ ಶಾಸ್ತ್ರಿ ಹೇಳಿದ್ದಾರೆ. ಇಲ್ಲಿರುವ ಸುರಂಗ ಮತ್ತು ಇತರ ಅವಶೇಷಗಳು ಇದಕ್ಕೆ ಸಾಕ್ಷಿ. ನ್ಯಾಯಾಲಯದಲ್ಲಿ ವಕಾಲತ್ತು ವಹಿಸಿದ್ದ ಗಾಂಧಿಧಾಮ ಸಮಿತಿಯ ಅಧಿಕಾರಿಗಳು ಈ ಸಂಬಂಧ ಎಲ್ಲ ಸಾಕ್ಷ್ಯಗಳನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಪುರಾತನ ದಿಬ್ಬದ ಮೇಲೆ ಶೇಖ್ ಬದ್ರುದ್ದೀನ್ ಅವರ ದರ್ಗಾ ಮತ್ತು ಸ್ಮಶಾನವಿದೆ ಎಂದು ಆರೋಪಿಸಿ ಮುಕೀಂ ಖಾನ್ ಮೊಕದ್ದಮೆ ಹೂಡಿದ್ದರು. ಇದನ್ನು ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಯಲ್ಲಿ ನೋಂದಾಯಿಸಲಾಗಿದೆ. ಕೃಷ್ಣದತ್ತ ಮಹಾರಾಜ್ ಹೊರಗಿನಿಂದ ಬಂದವರಾಗಿದ್ದು, ಸ್ಮಶಾನವನ್ನು ಧ್ವಂಸಗೊಳಿಸಿ ಅದನ್ನು ಹಿಂದೂಗಳ ಯಾತ್ರಾ ಸ್ಥಳವನ್ನಾಗಿ ಮಾಡಲು ಬಯಸಿದ್ದರು ಎಂದು ಆರೋಪಿಸಿದ್ದರು.

ಎರಡೂ ಕಡೆಯವರ ವಾದ ಮತ್ತು ಸಾಕ್ಷ್ಯಗಳನ್ನು ಪರಿಶೀಲಿಸಿದ ನ್ಯಾಯಾಲಯ ಜಾಗದ ಮಾಲೀಕತ್ವ ಹಿಂದೂಗಳಿಗೆ ನೀಡಿದೆ ಎಂದು ತಿಳಿದು ಬಂದಿದೆ. ಹಿಂದೂಗಳ ಪರ ನ್ಯಾಯಾಲಯದಲ್ಲಿ ಪ್ರಕರಣ ಮುನ್ನಡೆಸುತ್ತಿದ್ದ ಗಾಂಧಿಧಾಮ್ ಸಮಿತಿಯ ವಕೀಲ ರಣವೀರ್ ಸಿಂಗ್ ತೋಮರ್ ಅವರು ನ್ಯಾಯಾಲಯದ ಈ ತೀರ್ಪಿಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಉತ್ತರಾಖಂಡ ವಿಧಾನಸಭೆಯಲ್ಲಿ ಸಮಾನ ನಾಗರಿಕ ಸಂಹಿತೆ ಮಸೂದೆ ಮಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...