Homeಮುಖಪುಟದರ್ಗಾ-ಲಕ್ಷಗೃಹ ಪ್ರಕರಣ: ಮುಸ್ಲಿಮರ ಅರ್ಜಿ ವಜಾ, ವಿವಾದಿತ ಜಾಗ ಹಿಂದೂಗಳಿಗೆ ಹಸ್ತಾಂತರ

ದರ್ಗಾ-ಲಕ್ಷಗೃಹ ಪ್ರಕರಣ: ಮುಸ್ಲಿಮರ ಅರ್ಜಿ ವಜಾ, ವಿವಾದಿತ ಜಾಗ ಹಿಂದೂಗಳಿಗೆ ಹಸ್ತಾಂತರ

- Advertisement -
- Advertisement -

ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ ಬರ್ನಾವಾದಲ್ಲಿರುವ ಐತಿಹಾಸಿಕ ವಿವಾದಿತ ಜಾಗವನ್ನು ನ್ಯಾಯಾಲಯ ಸೋಮವಾರ ಹಿಂದೂಗಳಿಗೆ ಹಸ್ತಾಂತರಿಸಿದೆ. ಈ ಮೂಲಕ 53 ವರ್ಷಗಳ ಹಳೆಯ ಪ್ರಕರಣವನ್ನು ಇತ್ಯರ್ಥ ಮಾಡಿದೆ ಎಂದು ವರದಿಯಾಗಿದೆ.

ಬರ್ನಾವಾದ ಹಿಂಡನ್ ಮತ್ತು ಕೃಷ್ಣಾ ನದಿಗಳ ಸಂಗಮದಲ್ಲಿ ಎತ್ತರದ ಪ್ರದೇಶಲ್ಲಿ ಗುಂಬಝ್, ಗೋರಿ ಹಾನಿಗೊಳಗಾದ ಕಟ್ಟಡಗಳು ಇದ್ದು, ಈ ಜಾಗವನ್ನು ಹಿಂದೂಗಳು ಮಹಾಭಾರತದ ಐತಿಹಾಸಿಕ ದಿಬ್ಬ ‘ಲಕ್ಷಗೃಹ’ ಎಂದು ವಾದಿಸಿದ್ದರು. ದುರ್ಯೋಧನನು ಪಾಂಡವರನ್ನು ಸುಟ್ಟು ಕೊಲ್ಲುವ ದುಷ್ಟ ಯೋಜನೆಯೊಂದಿಗೆ ಇದನ್ನು ನಿರ್ಮಿಸಿದ್ದನು ಎಂದಿದ್ದರು. ಮುಸ್ಲಿಮರು ಸೂಫಿ ಸಂತ ಶೇಖ್ ಬದ್ರುದ್ದೀನ್ ಅವರ ದರ್ಗಾ ಮತ್ತು ಇತರರ ಸ್ಮಶಾನವಾಗಿದೆ ಎಂದು ವಾದಿಸಿದ್ದರು.

ಬರ್ನಾವಾದ ನಿವಾಸಿ ಹಾಗೂ ದರ್ಗಾದ ಮುತವಲ್ಲಿ ಮುಕೀಂ ಖಾನ್, ಇದು ಶೇಖ್ ಬದ್ರುದ್ದೀನ್ ಅವರ ದರ್ಗಾ ಎಂದು ವಾದಿಸಿ 1970ರಲ್ಲಿ ಮೀರತ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಲಕ್ಷಗೃಹ ಗುರುಕುಲದ ಸಂಸ್ಥಾಪಕ ಬ್ರಹ್ಮಚಾರಿ ಕೃಷ್ಣದತ್ ಮಹಾರಾಜ್ ಅವರನ್ನು ಮೊಕದ್ದಮೆಯ ಪ್ರತಿವಾದಿಯನ್ನಾಗಿ ಮಾಡಿದ್ದರು. ಬಳಿಕ ಮುಕೀಂ ಖಾನ್ ಮತ್ತು ಕೃಷ್ಣದತ್ ಮಹಾರಾಜ್ ಇಬ್ಬರೂ ವಿಧಿವಶರಾಗಿದ್ದರು. ಎರಡೂ ಕಡೆಯ ಇತರರು ಪ್ರಕರಣವನ್ನು ಮುಂದುವರೆಸಿಕೊಂಡು ಹೋಗುತ್ತಿದ್ದರು. ಬಾಗ್ಪತ್‌ ಜಿಲ್ಲೆಯ ಪ್ರತ್ಯೇಕತೆಯ ನಂತರ, ಈ ಪ್ರಕರಣವು ಸಿವಿಲ್ ನ್ಯಾಯಾಧೀಶ ಕಿರಿಯ ವಿಭಾಗ Iರಲ್ಲಿ ನಡೆಯುತ್ತಿತ್ತು.

ಎರಡೂ ಕಡೆಯ ಜನರು ತಮ್ಮ ತಮ್ಮ ವಕೀಲರ ಮೂಲಕ ತಮ್ಮ ವಾದಕ್ಕೆ ಪೂರಕವಾದ ಸಾಕ್ಷ್ಯವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಒಂದು ಕಡೆಯಿಂದ ಅಯೂಬ್, ಮುನ್ನಾ ಮತ್ತು ಇತರರು ಇನ್ನೊಂದು ಕಡೆಯಿಂದ ಗಾಂಧಿಧಾಮ್ ಸಮಿತಿಯ ವ್ಯವಸ್ಥಾಪಕ ರಾಜ್‌ಪಾಲ್ ತ್ಯಾಗಿ ಅವರು ವಕೀಲರ ಮೂಲಕ ನ್ಯಾಯಾಲಯಕ್ಕೆ ತಮ್ಮ ಸಾಕ್ಷ್ಯವನ್ನು ಹಾಜರುಪಡಿಸಿದ್ದರು. ಈ ವೇಳೆ ಸ್ಥಳ ಪರಿಶೀಲನೆ ನಡೆಸುವಂತೆ ನ್ಯಾಯಾಲಯಕ್ಕೆ ಮನವಿಯನ್ನೂ ಸಲ್ಲಿಸಲಾಗಿತ್ತು. ಕಳೆದ ಹಲವು ತಿಂಗಳುಗಳಿಂದ ಪ್ರಕರಣದ ತೀರ್ಪು ಕಾಯ್ದಿರಿಸಿದ್ದ ನ್ಯಾಯಾಲಯ ಸೋಮವಾರ ತೀರ್ಪು ನೀಡಿದ್ದು, ಮುಸ್ಲಿಂ ಪರ ಅರ್ಜಿಯನ್ನು ತಿರಸ್ಕರಿಸಿದೆ.

ನ್ಯಾಯಾಲಯದಲ್ಲಿ ಹಾಜರುಪಡಿಸಿದ ಸಾಕ್ಷ್ಯಗಳ ಪ್ರಕಾರ ಕಂದಾಯ ದಾಖಲೆಗಳಲ್ಲಿ ದರ್ಗಾ ಮತ್ತು ಸ್ಮಶಾನದ ಭೂಮಿ ಬಗ್ಗೆ ಎಲ್ಲಿಯೂ ದಾಖಲಾಗಿಲ್ಲ ಎಂದು ಹೇಳಲಾಗಿದೆ.

ಐತಿಹಾಸಿಕ ದಿಬ್ಬ ಮಹಾಭಾರತ ಕಾಲದ ‘ಲಕ್ಷಗೃಹ’ ಎಂದು ಬರ್ನಾವಾದ ಲಕ್ಷಗೃಹದಲ್ಲಿರುವ ಸಂಸ್ಕೃತ ಪಾಠಶಾಲೆಯ ಪ್ರಾಂಶುಪಾಲ ಆಚಾರ್ಯ ಅರವಿಂದ್ ಕುಮಾರ್ ಶಾಸ್ತ್ರಿ ಹೇಳಿದ್ದಾರೆ. ಇಲ್ಲಿರುವ ಸುರಂಗ ಮತ್ತು ಇತರ ಅವಶೇಷಗಳು ಇದಕ್ಕೆ ಸಾಕ್ಷಿ. ನ್ಯಾಯಾಲಯದಲ್ಲಿ ವಕಾಲತ್ತು ವಹಿಸಿದ್ದ ಗಾಂಧಿಧಾಮ ಸಮಿತಿಯ ಅಧಿಕಾರಿಗಳು ಈ ಸಂಬಂಧ ಎಲ್ಲ ಸಾಕ್ಷ್ಯಗಳನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಪುರಾತನ ದಿಬ್ಬದ ಮೇಲೆ ಶೇಖ್ ಬದ್ರುದ್ದೀನ್ ಅವರ ದರ್ಗಾ ಮತ್ತು ಸ್ಮಶಾನವಿದೆ ಎಂದು ಆರೋಪಿಸಿ ಮುಕೀಂ ಖಾನ್ ಮೊಕದ್ದಮೆ ಹೂಡಿದ್ದರು. ಇದನ್ನು ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಯಲ್ಲಿ ನೋಂದಾಯಿಸಲಾಗಿದೆ. ಕೃಷ್ಣದತ್ತ ಮಹಾರಾಜ್ ಹೊರಗಿನಿಂದ ಬಂದವರಾಗಿದ್ದು, ಸ್ಮಶಾನವನ್ನು ಧ್ವಂಸಗೊಳಿಸಿ ಅದನ್ನು ಹಿಂದೂಗಳ ಯಾತ್ರಾ ಸ್ಥಳವನ್ನಾಗಿ ಮಾಡಲು ಬಯಸಿದ್ದರು ಎಂದು ಆರೋಪಿಸಿದ್ದರು.

ಎರಡೂ ಕಡೆಯವರ ವಾದ ಮತ್ತು ಸಾಕ್ಷ್ಯಗಳನ್ನು ಪರಿಶೀಲಿಸಿದ ನ್ಯಾಯಾಲಯ ಜಾಗದ ಮಾಲೀಕತ್ವ ಹಿಂದೂಗಳಿಗೆ ನೀಡಿದೆ ಎಂದು ತಿಳಿದು ಬಂದಿದೆ. ಹಿಂದೂಗಳ ಪರ ನ್ಯಾಯಾಲಯದಲ್ಲಿ ಪ್ರಕರಣ ಮುನ್ನಡೆಸುತ್ತಿದ್ದ ಗಾಂಧಿಧಾಮ್ ಸಮಿತಿಯ ವಕೀಲ ರಣವೀರ್ ಸಿಂಗ್ ತೋಮರ್ ಅವರು ನ್ಯಾಯಾಲಯದ ಈ ತೀರ್ಪಿಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಉತ್ತರಾಖಂಡ ವಿಧಾನಸಭೆಯಲ್ಲಿ ಸಮಾನ ನಾಗರಿಕ ಸಂಹಿತೆ ಮಸೂದೆ ಮಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...