Homeಮುಖಪುಟದರ್ಗಾ-ಲಕ್ಷಗೃಹ ಪ್ರಕರಣ: ಮುಸ್ಲಿಮರ ಅರ್ಜಿ ವಜಾ, ವಿವಾದಿತ ಜಾಗ ಹಿಂದೂಗಳಿಗೆ ಹಸ್ತಾಂತರ

ದರ್ಗಾ-ಲಕ್ಷಗೃಹ ಪ್ರಕರಣ: ಮುಸ್ಲಿಮರ ಅರ್ಜಿ ವಜಾ, ವಿವಾದಿತ ಜಾಗ ಹಿಂದೂಗಳಿಗೆ ಹಸ್ತಾಂತರ

- Advertisement -
- Advertisement -

ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ ಬರ್ನಾವಾದಲ್ಲಿರುವ ಐತಿಹಾಸಿಕ ವಿವಾದಿತ ಜಾಗವನ್ನು ನ್ಯಾಯಾಲಯ ಸೋಮವಾರ ಹಿಂದೂಗಳಿಗೆ ಹಸ್ತಾಂತರಿಸಿದೆ. ಈ ಮೂಲಕ 53 ವರ್ಷಗಳ ಹಳೆಯ ಪ್ರಕರಣವನ್ನು ಇತ್ಯರ್ಥ ಮಾಡಿದೆ ಎಂದು ವರದಿಯಾಗಿದೆ.

ಬರ್ನಾವಾದ ಹಿಂಡನ್ ಮತ್ತು ಕೃಷ್ಣಾ ನದಿಗಳ ಸಂಗಮದಲ್ಲಿ ಎತ್ತರದ ಪ್ರದೇಶಲ್ಲಿ ಗುಂಬಝ್, ಗೋರಿ ಹಾನಿಗೊಳಗಾದ ಕಟ್ಟಡಗಳು ಇದ್ದು, ಈ ಜಾಗವನ್ನು ಹಿಂದೂಗಳು ಮಹಾಭಾರತದ ಐತಿಹಾಸಿಕ ದಿಬ್ಬ ‘ಲಕ್ಷಗೃಹ’ ಎಂದು ವಾದಿಸಿದ್ದರು. ದುರ್ಯೋಧನನು ಪಾಂಡವರನ್ನು ಸುಟ್ಟು ಕೊಲ್ಲುವ ದುಷ್ಟ ಯೋಜನೆಯೊಂದಿಗೆ ಇದನ್ನು ನಿರ್ಮಿಸಿದ್ದನು ಎಂದಿದ್ದರು. ಮುಸ್ಲಿಮರು ಸೂಫಿ ಸಂತ ಶೇಖ್ ಬದ್ರುದ್ದೀನ್ ಅವರ ದರ್ಗಾ ಮತ್ತು ಇತರರ ಸ್ಮಶಾನವಾಗಿದೆ ಎಂದು ವಾದಿಸಿದ್ದರು.

ಬರ್ನಾವಾದ ನಿವಾಸಿ ಹಾಗೂ ದರ್ಗಾದ ಮುತವಲ್ಲಿ ಮುಕೀಂ ಖಾನ್, ಇದು ಶೇಖ್ ಬದ್ರುದ್ದೀನ್ ಅವರ ದರ್ಗಾ ಎಂದು ವಾದಿಸಿ 1970ರಲ್ಲಿ ಮೀರತ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಲಕ್ಷಗೃಹ ಗುರುಕುಲದ ಸಂಸ್ಥಾಪಕ ಬ್ರಹ್ಮಚಾರಿ ಕೃಷ್ಣದತ್ ಮಹಾರಾಜ್ ಅವರನ್ನು ಮೊಕದ್ದಮೆಯ ಪ್ರತಿವಾದಿಯನ್ನಾಗಿ ಮಾಡಿದ್ದರು. ಬಳಿಕ ಮುಕೀಂ ಖಾನ್ ಮತ್ತು ಕೃಷ್ಣದತ್ ಮಹಾರಾಜ್ ಇಬ್ಬರೂ ವಿಧಿವಶರಾಗಿದ್ದರು. ಎರಡೂ ಕಡೆಯ ಇತರರು ಪ್ರಕರಣವನ್ನು ಮುಂದುವರೆಸಿಕೊಂಡು ಹೋಗುತ್ತಿದ್ದರು. ಬಾಗ್ಪತ್‌ ಜಿಲ್ಲೆಯ ಪ್ರತ್ಯೇಕತೆಯ ನಂತರ, ಈ ಪ್ರಕರಣವು ಸಿವಿಲ್ ನ್ಯಾಯಾಧೀಶ ಕಿರಿಯ ವಿಭಾಗ Iರಲ್ಲಿ ನಡೆಯುತ್ತಿತ್ತು.

ಎರಡೂ ಕಡೆಯ ಜನರು ತಮ್ಮ ತಮ್ಮ ವಕೀಲರ ಮೂಲಕ ತಮ್ಮ ವಾದಕ್ಕೆ ಪೂರಕವಾದ ಸಾಕ್ಷ್ಯವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಒಂದು ಕಡೆಯಿಂದ ಅಯೂಬ್, ಮುನ್ನಾ ಮತ್ತು ಇತರರು ಇನ್ನೊಂದು ಕಡೆಯಿಂದ ಗಾಂಧಿಧಾಮ್ ಸಮಿತಿಯ ವ್ಯವಸ್ಥಾಪಕ ರಾಜ್‌ಪಾಲ್ ತ್ಯಾಗಿ ಅವರು ವಕೀಲರ ಮೂಲಕ ನ್ಯಾಯಾಲಯಕ್ಕೆ ತಮ್ಮ ಸಾಕ್ಷ್ಯವನ್ನು ಹಾಜರುಪಡಿಸಿದ್ದರು. ಈ ವೇಳೆ ಸ್ಥಳ ಪರಿಶೀಲನೆ ನಡೆಸುವಂತೆ ನ್ಯಾಯಾಲಯಕ್ಕೆ ಮನವಿಯನ್ನೂ ಸಲ್ಲಿಸಲಾಗಿತ್ತು. ಕಳೆದ ಹಲವು ತಿಂಗಳುಗಳಿಂದ ಪ್ರಕರಣದ ತೀರ್ಪು ಕಾಯ್ದಿರಿಸಿದ್ದ ನ್ಯಾಯಾಲಯ ಸೋಮವಾರ ತೀರ್ಪು ನೀಡಿದ್ದು, ಮುಸ್ಲಿಂ ಪರ ಅರ್ಜಿಯನ್ನು ತಿರಸ್ಕರಿಸಿದೆ.

ನ್ಯಾಯಾಲಯದಲ್ಲಿ ಹಾಜರುಪಡಿಸಿದ ಸಾಕ್ಷ್ಯಗಳ ಪ್ರಕಾರ ಕಂದಾಯ ದಾಖಲೆಗಳಲ್ಲಿ ದರ್ಗಾ ಮತ್ತು ಸ್ಮಶಾನದ ಭೂಮಿ ಬಗ್ಗೆ ಎಲ್ಲಿಯೂ ದಾಖಲಾಗಿಲ್ಲ ಎಂದು ಹೇಳಲಾಗಿದೆ.

ಐತಿಹಾಸಿಕ ದಿಬ್ಬ ಮಹಾಭಾರತ ಕಾಲದ ‘ಲಕ್ಷಗೃಹ’ ಎಂದು ಬರ್ನಾವಾದ ಲಕ್ಷಗೃಹದಲ್ಲಿರುವ ಸಂಸ್ಕೃತ ಪಾಠಶಾಲೆಯ ಪ್ರಾಂಶುಪಾಲ ಆಚಾರ್ಯ ಅರವಿಂದ್ ಕುಮಾರ್ ಶಾಸ್ತ್ರಿ ಹೇಳಿದ್ದಾರೆ. ಇಲ್ಲಿರುವ ಸುರಂಗ ಮತ್ತು ಇತರ ಅವಶೇಷಗಳು ಇದಕ್ಕೆ ಸಾಕ್ಷಿ. ನ್ಯಾಯಾಲಯದಲ್ಲಿ ವಕಾಲತ್ತು ವಹಿಸಿದ್ದ ಗಾಂಧಿಧಾಮ ಸಮಿತಿಯ ಅಧಿಕಾರಿಗಳು ಈ ಸಂಬಂಧ ಎಲ್ಲ ಸಾಕ್ಷ್ಯಗಳನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಪುರಾತನ ದಿಬ್ಬದ ಮೇಲೆ ಶೇಖ್ ಬದ್ರುದ್ದೀನ್ ಅವರ ದರ್ಗಾ ಮತ್ತು ಸ್ಮಶಾನವಿದೆ ಎಂದು ಆರೋಪಿಸಿ ಮುಕೀಂ ಖಾನ್ ಮೊಕದ್ದಮೆ ಹೂಡಿದ್ದರು. ಇದನ್ನು ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಯಲ್ಲಿ ನೋಂದಾಯಿಸಲಾಗಿದೆ. ಕೃಷ್ಣದತ್ತ ಮಹಾರಾಜ್ ಹೊರಗಿನಿಂದ ಬಂದವರಾಗಿದ್ದು, ಸ್ಮಶಾನವನ್ನು ಧ್ವಂಸಗೊಳಿಸಿ ಅದನ್ನು ಹಿಂದೂಗಳ ಯಾತ್ರಾ ಸ್ಥಳವನ್ನಾಗಿ ಮಾಡಲು ಬಯಸಿದ್ದರು ಎಂದು ಆರೋಪಿಸಿದ್ದರು.

ಎರಡೂ ಕಡೆಯವರ ವಾದ ಮತ್ತು ಸಾಕ್ಷ್ಯಗಳನ್ನು ಪರಿಶೀಲಿಸಿದ ನ್ಯಾಯಾಲಯ ಜಾಗದ ಮಾಲೀಕತ್ವ ಹಿಂದೂಗಳಿಗೆ ನೀಡಿದೆ ಎಂದು ತಿಳಿದು ಬಂದಿದೆ. ಹಿಂದೂಗಳ ಪರ ನ್ಯಾಯಾಲಯದಲ್ಲಿ ಪ್ರಕರಣ ಮುನ್ನಡೆಸುತ್ತಿದ್ದ ಗಾಂಧಿಧಾಮ್ ಸಮಿತಿಯ ವಕೀಲ ರಣವೀರ್ ಸಿಂಗ್ ತೋಮರ್ ಅವರು ನ್ಯಾಯಾಲಯದ ಈ ತೀರ್ಪಿಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಉತ್ತರಾಖಂಡ ವಿಧಾನಸಭೆಯಲ್ಲಿ ಸಮಾನ ನಾಗರಿಕ ಸಂಹಿತೆ ಮಸೂದೆ ಮಂಡನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮಿತ್‌ ಶಾ ಸ್ಪರ್ಧಿಸುವ ಗಾಂಧಿನಗರದಲ್ಲಿ ಸ್ಪರ್ಧಿಸದಂತೆ ಅಭ್ಯರ್ಥಿಗಳಿಗೆ ಬಿಜೆಪಿ ನಾಯಕರು ಮತ್ತು ಪೊಲೀಸರಿಂದ ಬೆದರಿಕೆ?

0
ಗುಜರಾತ್‌ನ ಸೂರತ್ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಈಗಾಗಲೇ ಅವಿರೋಧವಾಗಿ ಗೆದ್ದುಕೊಂಡಿದೆ. ಇದರ ಬೆನ್ನಲ್ಲಿ ಅಮಿತ್ ಶಾ ಪ್ರತಿನಿಧಿಸುವ ಗಾಂಧಿನಗರ ಕ್ಷೇತ್ರದಲ್ಲಿ ಅಭ್ಯರ್ಥಿಗಳಿಗೆ ತಮ್ಮ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಗುಜರಾತ್‌ನ...