Homeಮುಖಪುಟದರ್ಗಾ-ಲಕ್ಷಗೃಹ ಪ್ರಕರಣ: ಮುಸ್ಲಿಮರ ಅರ್ಜಿ ವಜಾ, ವಿವಾದಿತ ಜಾಗ ಹಿಂದೂಗಳಿಗೆ ಹಸ್ತಾಂತರ

ದರ್ಗಾ-ಲಕ್ಷಗೃಹ ಪ್ರಕರಣ: ಮುಸ್ಲಿಮರ ಅರ್ಜಿ ವಜಾ, ವಿವಾದಿತ ಜಾಗ ಹಿಂದೂಗಳಿಗೆ ಹಸ್ತಾಂತರ

- Advertisement -
- Advertisement -

ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ ಬರ್ನಾವಾದಲ್ಲಿರುವ ಐತಿಹಾಸಿಕ ವಿವಾದಿತ ಜಾಗವನ್ನು ನ್ಯಾಯಾಲಯ ಸೋಮವಾರ ಹಿಂದೂಗಳಿಗೆ ಹಸ್ತಾಂತರಿಸಿದೆ. ಈ ಮೂಲಕ 53 ವರ್ಷಗಳ ಹಳೆಯ ಪ್ರಕರಣವನ್ನು ಇತ್ಯರ್ಥ ಮಾಡಿದೆ ಎಂದು ವರದಿಯಾಗಿದೆ.

ಬರ್ನಾವಾದ ಹಿಂಡನ್ ಮತ್ತು ಕೃಷ್ಣಾ ನದಿಗಳ ಸಂಗಮದಲ್ಲಿ ಎತ್ತರದ ಪ್ರದೇಶಲ್ಲಿ ಗುಂಬಝ್, ಗೋರಿ ಹಾನಿಗೊಳಗಾದ ಕಟ್ಟಡಗಳು ಇದ್ದು, ಈ ಜಾಗವನ್ನು ಹಿಂದೂಗಳು ಮಹಾಭಾರತದ ಐತಿಹಾಸಿಕ ದಿಬ್ಬ ‘ಲಕ್ಷಗೃಹ’ ಎಂದು ವಾದಿಸಿದ್ದರು. ದುರ್ಯೋಧನನು ಪಾಂಡವರನ್ನು ಸುಟ್ಟು ಕೊಲ್ಲುವ ದುಷ್ಟ ಯೋಜನೆಯೊಂದಿಗೆ ಇದನ್ನು ನಿರ್ಮಿಸಿದ್ದನು ಎಂದಿದ್ದರು. ಮುಸ್ಲಿಮರು ಸೂಫಿ ಸಂತ ಶೇಖ್ ಬದ್ರುದ್ದೀನ್ ಅವರ ದರ್ಗಾ ಮತ್ತು ಇತರರ ಸ್ಮಶಾನವಾಗಿದೆ ಎಂದು ವಾದಿಸಿದ್ದರು.

ಬರ್ನಾವಾದ ನಿವಾಸಿ ಹಾಗೂ ದರ್ಗಾದ ಮುತವಲ್ಲಿ ಮುಕೀಂ ಖಾನ್, ಇದು ಶೇಖ್ ಬದ್ರುದ್ದೀನ್ ಅವರ ದರ್ಗಾ ಎಂದು ವಾದಿಸಿ 1970ರಲ್ಲಿ ಮೀರತ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಲಕ್ಷಗೃಹ ಗುರುಕುಲದ ಸಂಸ್ಥಾಪಕ ಬ್ರಹ್ಮಚಾರಿ ಕೃಷ್ಣದತ್ ಮಹಾರಾಜ್ ಅವರನ್ನು ಮೊಕದ್ದಮೆಯ ಪ್ರತಿವಾದಿಯನ್ನಾಗಿ ಮಾಡಿದ್ದರು. ಬಳಿಕ ಮುಕೀಂ ಖಾನ್ ಮತ್ತು ಕೃಷ್ಣದತ್ ಮಹಾರಾಜ್ ಇಬ್ಬರೂ ವಿಧಿವಶರಾಗಿದ್ದರು. ಎರಡೂ ಕಡೆಯ ಇತರರು ಪ್ರಕರಣವನ್ನು ಮುಂದುವರೆಸಿಕೊಂಡು ಹೋಗುತ್ತಿದ್ದರು. ಬಾಗ್ಪತ್‌ ಜಿಲ್ಲೆಯ ಪ್ರತ್ಯೇಕತೆಯ ನಂತರ, ಈ ಪ್ರಕರಣವು ಸಿವಿಲ್ ನ್ಯಾಯಾಧೀಶ ಕಿರಿಯ ವಿಭಾಗ Iರಲ್ಲಿ ನಡೆಯುತ್ತಿತ್ತು.

ಎರಡೂ ಕಡೆಯ ಜನರು ತಮ್ಮ ತಮ್ಮ ವಕೀಲರ ಮೂಲಕ ತಮ್ಮ ವಾದಕ್ಕೆ ಪೂರಕವಾದ ಸಾಕ್ಷ್ಯವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಒಂದು ಕಡೆಯಿಂದ ಅಯೂಬ್, ಮುನ್ನಾ ಮತ್ತು ಇತರರು ಇನ್ನೊಂದು ಕಡೆಯಿಂದ ಗಾಂಧಿಧಾಮ್ ಸಮಿತಿಯ ವ್ಯವಸ್ಥಾಪಕ ರಾಜ್‌ಪಾಲ್ ತ್ಯಾಗಿ ಅವರು ವಕೀಲರ ಮೂಲಕ ನ್ಯಾಯಾಲಯಕ್ಕೆ ತಮ್ಮ ಸಾಕ್ಷ್ಯವನ್ನು ಹಾಜರುಪಡಿಸಿದ್ದರು. ಈ ವೇಳೆ ಸ್ಥಳ ಪರಿಶೀಲನೆ ನಡೆಸುವಂತೆ ನ್ಯಾಯಾಲಯಕ್ಕೆ ಮನವಿಯನ್ನೂ ಸಲ್ಲಿಸಲಾಗಿತ್ತು. ಕಳೆದ ಹಲವು ತಿಂಗಳುಗಳಿಂದ ಪ್ರಕರಣದ ತೀರ್ಪು ಕಾಯ್ದಿರಿಸಿದ್ದ ನ್ಯಾಯಾಲಯ ಸೋಮವಾರ ತೀರ್ಪು ನೀಡಿದ್ದು, ಮುಸ್ಲಿಂ ಪರ ಅರ್ಜಿಯನ್ನು ತಿರಸ್ಕರಿಸಿದೆ.

ನ್ಯಾಯಾಲಯದಲ್ಲಿ ಹಾಜರುಪಡಿಸಿದ ಸಾಕ್ಷ್ಯಗಳ ಪ್ರಕಾರ ಕಂದಾಯ ದಾಖಲೆಗಳಲ್ಲಿ ದರ್ಗಾ ಮತ್ತು ಸ್ಮಶಾನದ ಭೂಮಿ ಬಗ್ಗೆ ಎಲ್ಲಿಯೂ ದಾಖಲಾಗಿಲ್ಲ ಎಂದು ಹೇಳಲಾಗಿದೆ.

ಐತಿಹಾಸಿಕ ದಿಬ್ಬ ಮಹಾಭಾರತ ಕಾಲದ ‘ಲಕ್ಷಗೃಹ’ ಎಂದು ಬರ್ನಾವಾದ ಲಕ್ಷಗೃಹದಲ್ಲಿರುವ ಸಂಸ್ಕೃತ ಪಾಠಶಾಲೆಯ ಪ್ರಾಂಶುಪಾಲ ಆಚಾರ್ಯ ಅರವಿಂದ್ ಕುಮಾರ್ ಶಾಸ್ತ್ರಿ ಹೇಳಿದ್ದಾರೆ. ಇಲ್ಲಿರುವ ಸುರಂಗ ಮತ್ತು ಇತರ ಅವಶೇಷಗಳು ಇದಕ್ಕೆ ಸಾಕ್ಷಿ. ನ್ಯಾಯಾಲಯದಲ್ಲಿ ವಕಾಲತ್ತು ವಹಿಸಿದ್ದ ಗಾಂಧಿಧಾಮ ಸಮಿತಿಯ ಅಧಿಕಾರಿಗಳು ಈ ಸಂಬಂಧ ಎಲ್ಲ ಸಾಕ್ಷ್ಯಗಳನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಪುರಾತನ ದಿಬ್ಬದ ಮೇಲೆ ಶೇಖ್ ಬದ್ರುದ್ದೀನ್ ಅವರ ದರ್ಗಾ ಮತ್ತು ಸ್ಮಶಾನವಿದೆ ಎಂದು ಆರೋಪಿಸಿ ಮುಕೀಂ ಖಾನ್ ಮೊಕದ್ದಮೆ ಹೂಡಿದ್ದರು. ಇದನ್ನು ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಯಲ್ಲಿ ನೋಂದಾಯಿಸಲಾಗಿದೆ. ಕೃಷ್ಣದತ್ತ ಮಹಾರಾಜ್ ಹೊರಗಿನಿಂದ ಬಂದವರಾಗಿದ್ದು, ಸ್ಮಶಾನವನ್ನು ಧ್ವಂಸಗೊಳಿಸಿ ಅದನ್ನು ಹಿಂದೂಗಳ ಯಾತ್ರಾ ಸ್ಥಳವನ್ನಾಗಿ ಮಾಡಲು ಬಯಸಿದ್ದರು ಎಂದು ಆರೋಪಿಸಿದ್ದರು.

ಎರಡೂ ಕಡೆಯವರ ವಾದ ಮತ್ತು ಸಾಕ್ಷ್ಯಗಳನ್ನು ಪರಿಶೀಲಿಸಿದ ನ್ಯಾಯಾಲಯ ಜಾಗದ ಮಾಲೀಕತ್ವ ಹಿಂದೂಗಳಿಗೆ ನೀಡಿದೆ ಎಂದು ತಿಳಿದು ಬಂದಿದೆ. ಹಿಂದೂಗಳ ಪರ ನ್ಯಾಯಾಲಯದಲ್ಲಿ ಪ್ರಕರಣ ಮುನ್ನಡೆಸುತ್ತಿದ್ದ ಗಾಂಧಿಧಾಮ್ ಸಮಿತಿಯ ವಕೀಲ ರಣವೀರ್ ಸಿಂಗ್ ತೋಮರ್ ಅವರು ನ್ಯಾಯಾಲಯದ ಈ ತೀರ್ಪಿಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಉತ್ತರಾಖಂಡ ವಿಧಾನಸಭೆಯಲ್ಲಿ ಸಮಾನ ನಾಗರಿಕ ಸಂಹಿತೆ ಮಸೂದೆ ಮಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...