Homeಮುಖಪುಟಲಕ್ಷ್ಮಿ ಪುರಿ ಮಾನನಷ್ಟ ಪ್ರಕರಣ: ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಸಂಸದ ಸಾಕೇತ್ ಗೋಖಲೆಗೆ ಕೋರ್ಟ್ ಆದೇಶ

ಲಕ್ಷ್ಮಿ ಪುರಿ ಮಾನನಷ್ಟ ಪ್ರಕರಣ: ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಸಂಸದ ಸಾಕೇತ್ ಗೋಖಲೆಗೆ ಕೋರ್ಟ್ ಆದೇಶ

- Advertisement -
- Advertisement -

ಮಾಜಿ ರಾಜತಾಂತ್ರಿಕ ಅಧಿಕಾರಿ ಲಕ್ಷ್ಮಿ ಪುರಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸದಸ್ಯ ಸಾಕೇತ್ ಗೋಖಲೆ ಅವರಿಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ದೆಹಲಿ ಹೈಕೋರ್ಟ್ ಸೂಚಿಸಿದೆ.

ಗೋಖಲೆ ಅವರ ಎಕ್ಸ್‌ ಪೋಸ್ಟ್‌ಗಳು ಮಾನಹಾನಿಕರ ಎಂದು ಕಳೆದ ವರ್ಷ ಹೈಕೋರ್ಟ್ ತೀರ್ಪು ನೀಡಿತ್ತು. ಟೈಮ್ಸ್ ಆಫ್ ಇಂಡಿಯಾ ಪತ್ರಿಕೆ ಮತ್ತು ಅವರ ಎಕ್ಸ್ ಹ್ಯಾಂಡಲ್‌ನಲ್ಲಿ ಕ್ಷಮೆಯಾಚನೆಯನ್ನು ಪ್ರಕಟಿಸುವುದರ ಜೊತೆಗೆ ಲಕ್ಷ್ಮಿ ಪುರಿ ಅವರಿಗೆ 50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ನಿರ್ದೇಶಿಸಿತ್ತು.

ಈ ನಿರ್ದೇಶನಗಳನ್ನು ಪಾಲಿಸದೆ ಗೋಖಲೆ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಲಕ್ಷ್ಮಿ ಪುರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಗೋಖಲೆ ಅವರ ವಕೀಲರು, ಹೈಕೋರ್ಟ್‌ನ 2024 ರ ನಿರ್ದೇಶನಗಳ ವಿರುದ್ಧ ಗೋಖಲೆ ಸಲ್ಲಿಸಿದ ಅರ್ಜಿಯನ್ನು ಅಂತಿಮವಾಗಿ ತೀರ್ಮಾನಿಸುವವರೆಗೆ ಮುಚ್ಚಿದ ಲಕೋಟೆಯಲ್ಲಿ ಅವರು ಕ್ಷಮೆಯಾಚಿಸಬಹುದು ಎಂದು ವಾದಿಸಿದ್ದರು.

ಆದರೆ, ಈ ವಾದವನ್ನು ನ್ಯಾಯಮೂರ್ತಿ ಅನೀಶ್ ದಯಾಳ್ ಅವರು ತಿರಸ್ಕರಿಸಿದ್ದಾರೆ ಮತ್ತು ಎರಡು ವಾರಗಳಲ್ಲಿ ಕ್ಷಮೆಯಾಚನೆಯನ್ನು ಪ್ರಕಟಿಸುವಂತೆ ಗೋಖಲೆ ಅವರಿಗೆ ನಿರ್ದೇಶನ ನೀಡಿದ್ದಾರೆ.

ಲಕ್ಷ್ಮಿ ಪುರಿ ಅವರು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಪತ್ನಿಯಾಗಿದ್ದು, 2021 ರಲ್ಲಿ, ಅವರು ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ತಮ್ಮ ಆದಾಯ ಮೀರಿ ಕೆಲವು ಆಸ್ತಿಯನ್ನು ಖರೀದಿಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಮಾಧ್ಯಮದಲ್ಲಿ ಸಾಕೇತ್ ಹಾಕಿದ್ದ ಪೋಸ್ಟ್‌ಗಳ ವಿರುದ್ಧ ಮೊಕದ್ದಮೆ ಹೂಡಿದ್ದರು.

ಜುಲೈ 2021ರಲ್ಲಿ, ನ್ಯಾಯಾಲಯವು ಗೋಖಲೆ ಅವರಿಗೆ ಎಕ್ಸ್‌ ಪೋಸ್ಟ್‌ಗಳನ್ನು ತೆಗೆದುಹಾಕಲು ಮತ್ತು ಪುರಿ ವಿರುದ್ಧ ಯಾವುದೇ ಮಾನನಷ್ಟಕರ ವಿಷಯವನ್ನು ಪೋಸ್ಟ್ ಮಾಡದಂತೆ ನಿರ್ದೇಶಿಸಿ ಮಧ್ಯಂತರ ಆದೇಶ ನೀಡಿತ್ತು.

ಜುಲೈ 2024 ರಲ್ಲಿ ನೀಡಿದ ಅಂತಿಮ ತೀರ್ಪಿನಲ್ಲಿ, ಹೈಕೋರ್ಟ್ ಗೋಖಲೆ ಅವರಿಗೆ ಲಕ್ಷ್ಮಿ ಪುರಿಗೆ 50 ಲಕ್ಷ ರೂಪಾಯಿ ಪರಿಹಾರವನ್ನು ಪಾವತಿಸಲು ಮತ್ತು ಕ್ಷಮೆಯಾಚನೆಯನ್ನು ಪ್ರಕಟಿಸಲು ನಿರ್ದೇಶಿಸಿತ್ತು.

ನಂತರ ಗೋಖಲೆ ಅವರು ಪರಿಹಾರವನ್ನು ಪಾವತಿಸಲು ಆದೇಶಿಸಿದ ತೀರ್ಪನ್ನು ಹಿಂಪಡೆಯಲು ಕೋರಿ ಅರ್ಜಿಯನ್ನು ಸಲ್ಲಿಸಿದ್ದರು. ಮೇ 2, 2025 ರಂದು, ಹೈಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸಿದೆ.

ಗೋಖಲೆ ಅವರು ಹೈಕೋರ್ಟ್‌ನ 2024 ರ ನಿರ್ದೇಶನಗಳನ್ನು ಪಾಲಿಸಿಲ್ಲ ಎಂದು ಆರೋಪಿಸಿ ಲಕ್ಷ್ಮಿ ಪುರಿ ಈ ವರ್ಷದ ಆರಂಭದಲ್ಲಿ ನ್ಯಾಯಾಂಗ ನಿಂದನೆ ಪ್ರಕರಣವನ್ನು ಹೂಡಿದ್ದರು.

ಪರಿಹಾರ ಪಾವತಿಸುವಂತೆ ನೀಡಿದ್ದ ಆದೇಶ ಹಿಂಪಡೆಯಲು ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ವಿರುದ್ದ ಮೇಲ್ಮನವಿ ಸಲ್ಲಿಸುವುದಾಗಿ ಗೋಖಲೆ ಪರ ವಕೀಲರು ಇತ್ತಿಚೆಗೆ ಹೈಕೋರ್ಟ್‌ಗೆ ತಿಳಿಸಿದ್ದಾರೆ. ಅಲ್ಲದೆ, 50 ಲಕ್ಷ ರೂ. ಠೇವಣಿ ಇಡುವವರೆಗೆ ಗೋಖಲೆ ಅವರ ಸಂಬಳದ ಒಂದು ಭಾಗವನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಹೈಕೋರ್ಟ್ ಇತ್ತೀಚೆಗೆ ಆದೇಶಿಸಿದೆ ಎಂದು ಅವರು ಗಮನಸೆಳೆದಿದ್ದಾರೆ.

ಈ ಮೇಲ್ಮನವಿ ಅಂತಿಮವಾಗಿ ಇತ್ಯರ್ಥವಾಗುವವರೆಗೆ ಗೋಖಲೆ ಅವರು ಮುಚ್ಚಿದ ಲಕೋಟೆಯಲ್ಲಿ ಕ್ಷಮೆಯಾಚಿಸಬಹುದು ಎಂದು ವಕೀಲರು ವಾದಿಸಿದ್ದಾರೆ.

ಆದಾಗ್ಯೂ, ನ್ಯಾಯಾಲಯವು ಅಂತಹ ಯಾವುದೇ ದಯೆ ತೋರಿಸಲು ನಿರಾಕರಿಸಿದೆ.

ಮಸೂದೆ ಅನುಮೋದನೆಗೆ ಗಡುವು: ಸುಪ್ರೀಂ ಕೋರ್ಟ್‌ಗೆ 14 ಪ್ರಶ್ನೆಗಳನ್ನು ಕೇಳಿದ ರಾಷ್ಟ್ರಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...