Homeಕರ್ನಾಟಕದೊರೆಸ್ವಾಮಿಯವರ ಸಾರ್ಥಕ ಬದುಕಿಗೆ ಅಖಂಡ ಬೆಂಬಲವಾಗಿ ನಿಂತಿದ್ದ ಲಲಿತಮ್ಮ

ದೊರೆಸ್ವಾಮಿಯವರ ಸಾರ್ಥಕ ಬದುಕಿಗೆ ಅಖಂಡ ಬೆಂಬಲವಾಗಿ ನಿಂತಿದ್ದ ಲಲಿತಮ್ಮ

- Advertisement -
- Advertisement -

ಲಲಿತಮ್ಮನವರು ಹುಟ್ಟಿದ್ದು ಮದ್ದೂರು ತಾಲೂಕು ಕೌಡ್ಲೆ. ಬೆಳೆದಿದ್ದು ಬೆಂಗಳೂರು. ದೊರೆಸ್ವಾಮಿಯವರ ಜೊತೆ ಮದುವೆ (ದೊರೆಸ್ವಾಮಿಯವರ ಪ್ರಕಾರ “ಒಂದು ರೀತಿಯಲ್ಲಿ ಲವ್ ಮ್ಯಾರೇಜ್”!) ಡಿಸೆಂಬರ್ 1950. ಭರ್ತಿ 69 ವರ್ಷಗಳ ಸಹಜೀವನ ನಡೆಸಿ ಈಗ ತಮ್ಮ 89 ವರ್ಷನೇ ವರ್ಷದಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಜೀವನ ಪೂರ್ತಿ ದೊರೆಸ್ವಾಮಿಯವರ ಸಾರ್ಥಕ ಬದುಕಿಗೆ ಅಖಂಡ ಬೆಂಬಲವಾಗಿ ನಿಂತ ಸಾರ್ಥಕ ಬದುಕು ಬದುಕಿದರು. ಗಂಡನಾದ ಜಂಗಮ ತಿಂಗಳಿಗೆ ಕೈಗೆ ತಂದಿಡುತ್ತಿದ್ದ 100 ರೂ. ಮಾಸಾಶನದಲ್ಲಿ 34 ರೂಪಾಯಿ ಮನೆ ಬಾಡಿಗೆ ಕಟ್ಟಿ, ಮೂರೋ ನಾಲಕೋ ರೂಪಾಯಿ ಮನೆಗೆಲಸದಾಕೆಗೆ ಕೊಟ್ಟು ಮಿಕ್ಕಿದ್ದರಲ್ಲಿ ಎರಡು ಮಕ್ಕಳ ಎಲ್ಲ ಬೇಕುಬೇಡಗಳನ್ನು ನಿಭಾಯಿಸಿ ಮನೆ ತೂಗಿಸಿಕೊಂಡು ಬಂದ ಗಟ್ಟಿಗಿತ್ತಿ ಅವರಾಗಿದ್ದರು.

ಗಂಡ ಸತತ ನಾಲ್ಕು ವರ್ಷಗಳ ಕಾಲ ಭೂದಾನ ಚಳವಳಿಯ ಸಂಘಟಕರಾಗಿ ತಿಂಗಳಲ್ಲಿ ಮೂರುವಾರ ಊರೂರು ತಿರುಗಿ ಒಂದು ವಾರ ಮಾತ್ರ ಮನೆಯಲ್ಲಿರುತ್ತಿದ್ದುದು.

ಖಾದಿ ಪ್ರಸಾರ ಇತ್ಯಾದಿ ಕಾರಣ

ನಂತರ ಕೂಡ ದೊರೆಸ್ವಾಮಿಯವರು ಖಾದಿ ಪ್ರಸಾರ, ಪರಿಸರ ಚಳವಳಿ, ಶಾಲೆಗಳು-ಸಹಕಾರಿ ಸಂಘಗಳು, ಭ್ರಷ್ಟಾಚಾರ ವಿರೋಧಿ ಚಳವಳಿ ಇವೇ ಮುಂತಾದವುಗಳಲ್ಲಿ ಎಡೆಬಿಡದೆ ತೊಡಗಿಸಿಕೊಂಡು ತಿಂಗಳಲ್ಲಿ ಮೂರು ವಾರ ಹೊರಗೆ ಇರುತ್ತಿದ್ದವರೇ. ಕೈಗಾ ಚಳವಳಿಯಲ್ಲಿ ಸತತ ಎರಡು ವರ್ಷ ಆ ಕಡೆಯೇ ಇದ್ದವರು. ಆಗೆಲ್ಲ ಅಮ್ಮ ‘ಏಕಾಂಗವೀರ’ರೇ!

ಸಬ್‍ಇನ್‍ಸ್ಪೆಕ್ಟರ್‍ಗೇ ಗದರಿದರು!

ತುರ್ತುಪರಿಸ್ಥಿತಿ ಅವಧಿಯಲ್ಲಿ ದೊರೆಸ್ವಾಮಿಯವರು ನಾಲ್ಕು ತಿಂಗಳ ಕಾಲ ಜೈಲಿನಲ್ಲಿದ್ದರು. ಆಗ ಅಮ್ಮ ಪ್ರತಿವಾರ ಕೋಡುಬಳೆ, ನಿಪ್ಪಟ್ಟು, ಚಕ್ಕುಲಿ, ರವೆಉಂಡೆ, ಪುಳಿಯೋಗರೆ… ಹೀಗೆ ಏನಾದರೊಂದು ತಿಂಡಿಯನ್ನು ಎಲ್ಲ ಸತ್ಯಾಗ್ರಹಿಗಳಿಗೂ ಆಗುವಷ್ಟು ಮಾಡಿಕೊಂಡು ಜೈಲುಭೇಟಿಗೆ ಹೋಗುವರು. ಎಲ್ಲರೂ ಗಂಟೆ ಕಾಲ ಕೂತು ಹರಟುತ್ತ ಕುರುಕುತ್ತ ಸಮಯ ಕಳೆಯುವರು. ಜೈಲು ಸಿಬ್ಬಂದಿ ಕೂಡ ಸಾಮಾನ್ಯವಾಗಿ ಅಡ್ಡಿಪಡಿಸುತ್ತಿರಲಿಲ್ಲ.

ಆದರೆ ಒಮ್ಮೆ ಯಾರೋ ಒಬ್ಬ ಹೊಸಬ ‘ಉತ್ಸಾಹಿ’ ಸಬ್‍ಇನ್‍ಸ್ಪೆಕ್ಟರ್‍ಗೆ ಗ್ರಹಚಾರ ಕೆಟ್ಟುಬಿಟ್ಟಿತ್ತು! “ಅದನ್ನೆಲ್ಲ ಇಲ್ಲಿ ತರಬಾರದಮ್ಮ. ಇದು ಜೈಲು. ಗೊತ್ತು ತಾನೆ? ಇಲ್ಲಿ ಅದನ್ನೆಲ್ಲ ಅಲೋ ಮಾಡಲ್ಲ” ಅಂದರು. ಅಮ್ಮ ಅವರಿಗೆ ಸಮಾಧಾನವಾಗಿಯೇ ತಿಳಿಹೇಳಿ ನೋಡಿದರು. ಆತ ಜಗ್ಗಲಿಲ್ಲ. ತನ್ನ ಮಗನ ವಯಸ್ಸಿನ ಆತನಿಗೆ “ಇದೇನಪ್ಪ. ಇಷ್ಟು ದಿನ ಬಿಡುತ್ತಿದ್ದರು, ನಿಮ್ಮದೊಂದು ಹೊಸ ರೂಲ್ಸಾ?” ಎಂದರು ಅಮ್ಮ. ಆತನದು ಬಿಸಿರಕ್ತ. ತನ್ನ ರೂಲುದೊಣ್ಣೆ ಅಡ್ಡಹಿಡಿದು ತಡೆದು ಬಿಟ್ಟ. ಅಮ್ಮ ರಣಚಂಡಿಯಾಗಿ ಬಿಟ್ಟರು!

“ಏನು ಮಾಡ್ತೀಯೋ ಮಾಡ್ಕೋ. ಜೈಲಿಗೆ ಹಾಕ್ತೀಯಾ? ತಯಾರಾಗಿಯೇ ಬಂದಿದೀನಿ. ಈ ತಿಂಡಿಯನ್ನು ಮಾತ್ರ ನಾನು ಹಂಚದೆ ವಾಪಸ್ ಹೋಗೋಳಲ್ಲ..” ಎನ್ನುತ್ತಾ ಅವನ ರೂಲ್ ದೊಣ್ಣೆಯನ್ನೂ ಅವನನ್ನೂ ತಳ್ಳಿ ನುಗ್ಗಿ ನಡೆದೇಬಿಟ್ಟರು. ಇದು ಯಾಕೋ ವಿಕೋಪಕ್ಕೆ ಹೋಗಬಹುದೆಂದು ಹೆದರಿದ ಇತರ ಸಿಬ್ಬಂದಿ ಓಡಿಬಂದು ಇಬ್ಬರನ್ನೂ ಸಮಾಧಾನಪಡಿಸಿದರು. ಅಮ್ಮನಿಗೆ, “ಸಾಹೇಬ ಹೊಸಬ. ನಿಧಾನವಾಗಿ ನಾವು ಅವನಿಗೆ ಹೇಳ್ತೀವಿ. ಇವತ್ತೊಂದು ದಿನ ನಮ್ಮ ಕೈಲೇ ಕೊಡಿಯಮ್ಮ, ನಾವೇ ಹಂಚ್ತೀವಿ” ಅಂತ ರಣಚಂಡಿಯನ್ನು ಶಾಂತಗೊಳಿಸಿ ಪರಿಸ್ಥಿತಿ ತಿಳಿಗೊಳಿಸಿದರು!

ದೊರೆಸ್ವಾಮಿಯವರು ಅಮ್ಮನನ್ನು ನೆನೆದು ಹೇಳುತ್ತಾರೆ..

“70 ವರ್ಷಗಳ ಸಾರ್ಥಕ ಬದುಕು ಒಟ್ಟಿಗೆ ಕಳೆದೆವು. ಕಷ್ಟ ಸುಖ ಎಲ್ಲವನ್ನೂ ಕಂಡಿದ್ದೀವಿ. ಕಷ್ಟವನ್ನು ಪಟ್ಟಿದ್ದೀವಿ, ಸುಖವನ್ನು ಹಂಚಿಕೊಂಡಿದ್ದೆವು. ನಿಮ್ಮಂತ ನೂರಾರು ಗೆಳೆಯರನ್ನು ಪಡೆಯಲಿಕ್ಕೆ ಅವಳು ಇಲ್ಲದಿದ್ದರೆ ಸಾಧ್ಯವಾಗುತ್ತಿರಲಿಲ್ಲ. ಅವಳು ನನ್ನ ಪಾಡಿಗೆ ನನ್ನನ್ನು ಬಿಟ್ಟು ಮನೆ ಮತ್ತು ಮಕ್ಕಳನ್ನು ನೋಡಿಕೊಂಡಿದ್ದರಿಂದಲೇ ನಾನು ಊರೂರು ತಿರುಗಿಕೊಂಡು ನಿಮ್ಮೆಲ್ಲರ ಪ್ರೀತಿಯನ್ನು ಗಳಿಸಲಿಕ್ಕೆ ಸಾಧ್ಯವಾಯಿತು. ನನಗೆ ನೀವೆಲ್ಲರೂ ಸೇರಿ ಸಮಾಜ ನನ್ನ ರಕ್ಷಣೆಗೆ ನಿಲ್ಲುತ್ತದೆ. ಒಂದು ವೇಳೆ ನಾನೇ ಮೊದಲು ಹೊರಟುಹೋಗಿದ್ದರೆ ಅವಳನ್ನು ಯಾರು ನೋಡಿಕೊಳ್ಳುತ್ತಿದ್ದರು ಎಂಬ ಆತಂಕ ಕಾಡುತ್ತಿತ್ತು. ಆ ಆತಂಕ ಇವತ್ತು ದೂರವಾಗಿದೆ. ಅವಳು ಮುಂದೆ ಹೋಗಿದ್ದಾಳೆ. ಇದು ನಿಜವಾಗಿಯೂ ಸಮಾಧಾನದ ದಿನವಾಗಿದೆ.

ಹೌದು ಅವಳಿಲ್ಲದಿರುವುದು ಹಲವು ದಿನಗಳು ಕಾಡುತ್ತದೆ ನಿಜ. ಆದರೂ ಪರವಾಗಿಲ್ಲ. ನೀವೆಲ್ಲರೂ ಇದ್ದೀರಿ, ಇಷ್ಟೊಂದು ಜನ ನನ್ನ ವಿಶ್ವಾಸಿಗಳು, ಸ್ನೇಹಿತರೂ, ಹಿತೈಷಿಗಳಾಗಿದ್ದಿರಿ. ನಿಮ್ಮೆಲ್ಲರ ಬೆಂಬಲದೊಂದಿಗೆ ಇನ್ನುಳಿದ ಜೀವನವನ್ನು ಕಳೆಯಬಲ್ಲೆ ಎಂಬುದಾಗಿ ದೊರೆಸ್ವಾಮಿಯವರು ಅಮ್ಮನನ್ನು ನೆನಪಿಸಿಕೊಳ್ಳುತ್ತಾರೆ.

ಸಾವಿನಲ್ಲೂ ಮಾದರಿ

ಶ್ರೀಮತಿ ಲಲಿತಮ್ಮನವರಿಗೆ ದೊರೆಸ್ವಾಮಿಯವರು ಮತ್ತವರ ಕುಟುಂಬವರ್ಗದವರು ಯಾವುದೇ ಸಾಂಪ್ರದಾಯಿಕ ಅಂತ್ಯಸಂಸ್ಕಾರ ಮಾಡದೆ ಬೆಂಗಳೂರಿನ ಕೆಂಪೇಗೌಡ ವೈದ್ಯಕೀಯ ಕಾಲೇಜಿಗೆ ವೈದ್ಯಕೀಯ ವಿದ್ಯಾರ್ಥಿಗಳ ಸಂಶೋಧನೆಗೋಸ್ಕರ ದೇಹದಾನ ಮಾಡಿದ್ದಾರೆ. ಸಮಾಜಕ್ಕೆ ಮಾದರಿ ಮತ್ತು ಆದರ್ಶವಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...

ಸಾಲ-ವಂಚನೆ-ಹಣ ವರ್ಗಾವಣೆ ಪ್ರಕರಣ: ಅಂಬಾನಿ ಗ್ರೂಪ್ ಮಾಜಿ ಕಾರ್ಯನಿರ್ವಾಹಕ ಅಮಿತಾಬ್ ಜುಂಜುನ್‌ವಾಲಾ ಅವರನ್ನು ಬಂಧಿಸಿದ ಇಡಿ

ನವದೆಹಲಿ: ಬ್ಯಾಂಕ್ ಸಾಲ ವಂಚನೆ-ಸಂಬಂಧಿತ ಹಣ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ಧೀರೂಭಾಯಿ ಅಂಬಾನಿ ಗ್ರೂಪ್ (ADAG) ನ ಮಾಜಿ ಹಿರಿಯ ಕಾರ್ಯನಿರ್ವಾಹಕ ಅಮಿತಾಭ್ ಜುನ್ಜುನ್ವಾಲಾ ಅವರನ್ನು ಜಾರಿ ನಿರ್ದೇಶನಾಲಯ (ED) ಬುಧವಾರ ಬಂಧಿಸಿದೆ...

ಲೈಂಗಿಕ ದೌರ್ಜನ್ಯ ವಿವಾದದ ಬಳಿಕ ಕಾರ್ಯಾಚರಣೆ ಸ್ಥಗಿತಗೊಳಿಸಿದ ನಾಸಿಕ್ ಟಿಸಿಎಸ್; ಮನೆಯಿಂದಲೇ ಕೆಲಸ ಮಾಡುತ್ತಿರುವ ಸಿಬ್ಬಂದಿ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ನ ವ್ಯವಹಾರ ಪ್ರಕ್ರಿಯೆಯ ಹೊರಗುತ್ತಿಗೆ (ಬಿಪಿಒ) ಕೇಂದ್ರದಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಬಲವಂತದ ಮತಾಂತರ ಪ್ರಕರಣಗಳ ವಿವಾದದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಉದ್ಯೋಗಿಗಳಿಗೆ...