Homeಮುಖಪುಟಲಲಿತಾ ಕುಮಾರಿ ಪ್ರಕರಣ ದಿಲ್ಲಿ ಪೊಲೀಸರಿಗೆ ಮಾದರಿಯಾಗಲಿ: ನ್ಯಾ. ಮುರಳೀಧರ್

ಲಲಿತಾ ಕುಮಾರಿ ಪ್ರಕರಣ ದಿಲ್ಲಿ ಪೊಲೀಸರಿಗೆ ಮಾದರಿಯಾಗಲಿ: ನ್ಯಾ. ಮುರಳೀಧರ್

ದಿಲ್ಲಿ ಪೊಲೀಸರು ಲಲಿತಾ ಕುಮಾರಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಿಂದ ಕಲಿಯಬೇಕು ಮತ್ತು ಕಾನೂನು ಹೇಗೆ ಹೇಳುತ್ತದೆಯೋ ತಪ್ಪದೇ ಅದಕ್ಕನುಗುಣವಾಗಿ ಕೆಲಸ ಮಾಡಬೇಕು ಎಂದು ನ್ಯಾಯಮೂರ್ತಿ ಮುರಳೀಧರ್ ಹೇಳಿದ್ದಾರೆ.

- Advertisement -
- Advertisement -

-ಅಪರ್ಣಾ ಮಂಧಾನಿ

ಅನುವಾದ: ನಿಖಿಲ್ ಕೋಲ್ಪೆ

ದಿಲ್ಲಿ ಹೈಕೋರ್ಟ್ ಇತ್ತೀಚೆಗೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ನ್ಯಾ. ಮುರಳೀಧರ್ ಅವರ ನಡುವಿನ ಆಕರ್ಣೀಯ ಸಂಭಾಷಣೆಗೆ ಸಾಕ್ಷಿಯಾಯಿತು.

ದಿಲ್ಲಿ ಹೈಕೋರ್ಟ್ ಈಶಾನ್ಯ ದಿಲ್ಲಿಯಲ್ಲಿ ಫೆಬ್ರವರಿ 23,24,25ರಂದು ನಡೆದ ಯೋಜಿತ ಗಲಭೆಗಳ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ)ದಿಂದ ತನಿಖೆ ನಡೆಯಬೇಕು ಮತ್ತು ಬಿಜೆಪಿ ನಾಯಕರಾದ ಪರ್ವೇಶ್ ವರ್ಮಾ, ಅನುರಾಗ್ ಠಾಕೂರ್, ಕಪಿಲ್ ಮಿಶ್ರಾ ಮುಂತಾದವರ ಮೇಲೆ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ಎಫ್ಐಆರ್ ದಾಖಲಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಹರೀಶ್ ಮಂದರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ಹೈಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿತ್ತು.

ವಿಚಾರಣೆಯ ವೇಳೆ ಅಧಿಕಾರಿಗಳ ಮೇಲೆ ಕಟುವಾಗಿ ದಾಳಿ ನಡೆಸಿದ ನ್ಯಾ. ಮುರಳೀಧರ್, “ತನಿಖೆಯು ಲಲಿತಾ ಕುಮಾರಿ ವಿರುದ್ಧ  ಉತ್ತರ ಪ್ರದೇಶ ಸರಕಾರ ಪ್ರಕರಣದಲ್ಲಿ ಸುಪ್ರೀಂಕೋರ್ಟಿನ ಸಂವಿಧಾನ ಪೀಠವು ನೀಡಿರುವ ತೀರ್ಪಿನಿಂದ ನಿರ್ದೇಶಿತವಾಗಬೇಕು ಮತ್ತು ಪೊಲೀಸರು ಕಾನೂನಿನಲ್ಲಿ ಹೇಳಿರುವಂತೆಯೇ ಕೆಲಸ ಮಾಡಬೇಕು” ಎಂದು ಹೇಳಿದರು.

ಪ್ರಕರಣವು ಹೈಕೋರ್ಟಿನ ಇನ್ನೊಂದು ಪೀಠದಲ್ಲಿ ವಿಚಾರಣೆಗೆ ಬಂದಾಗಲೂ ಹರೀಶ್ ಮಂದರ್ ಪರ ವಾದಿಸಿದ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವಿಸ್ ಅವರು ತನ್ನ ವಾದದಲ್ಲಿ 2013ರ ಲಲಿತಾ ಕುಮಾರಿ ಪ್ರಕರಣವನ್ನು ಬಹುವಾಗಿ ಅವಲಂಬಿಸಿದರು. ಈ ಪ್ರಕರಣವು ಎಪ್ರಿಲ್‌ನಲ್ಲಿ ಮತ್ತೆ ವಿಚಾರಣೆಗೆ ಬರಲಿರುವ ಹಿನ್ನೆಲೆಯಲ್ಲಿ ‘ದಿ ಪ್ರಿಂಟ್’ ಲಲಿತಾ ಕುಮಾರಿ ಪ್ರಕರಣದ ತೀರ್ಪನ್ನು ವಿವರಿಸಿದೆ.

ಲಲಿತಾ ಕುಮಾರಿ ಯಾರು?

ಲಲಿತಾ ಕುಮಾರಿ ಅಪ್ರಾಪ್ತ ವಯಸ್ಸಿನ ಒಬ್ಬಳು ಬಾಲಕಿಯಾಗಿದ್ದು, ಆಕೆಯನ್ನು ಅಪಹರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಆಕೆಯ ತಂದೆ ಭೋಲಾ ಕಮತ್ ಸುಪ್ರೀಂಕೋರ್ಟಿನಲ್ಲಿ ಹೇಬಿಯಸ್ ಕೋರ್ಪಸ್ ಅರ್ಜಿ ಸಲ್ಲಿಸಿದ್ದರು. ತಾನು ಸಂಬಂಧಪಟ್ಟ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ವಿವರವಾದ ವರದಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ಆರೋಪಿಸಿದ್ದರು. ವಿಷಯ ಪೊಲೀಸ್ ಸುಪರಿಂಟೆಂಟ್‌ಗೆ ತಲುಪಿದ ಬಳಿಕವಷ್ಟೇ ಎಫ್ಐಆರ್ ದಾಖಲಿಸಲಾಗಿತ್ತು.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ದೇಶದ ಉದ್ದಗಲಕ್ಕೂ ಪ್ರಕರಣದಿಂದ ಪ್ರಕರಣಕ್ಕೆ ಎಫ್ಐಆರ್ ನೋಂದಣಿಯಲ್ಲಿ ವ್ಯತ್ಯಯವಿರುವುದನ್ನು ಗಮನಿಸಿತು. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ನೋಟೀಸು ಜಾರಿ ಮಾಡಿತು. ಕ್ರಿಮಿನಲ್ ಪ್ರೊಸಿಜರ್ ಕೋಡ್ (ಸಿಆರ್‌ಪಿಸಿ)ನ ವಿಧಿ 154ರ ಅನ್ವಯ ಗಂಭೀರ (ಗುರುತರ) ದಂಡನಾರ್ಹ ಅಪರಾಧವೊಂದು (cognisable offence) ಘಟಿಸಿರುವ ಕುರಿತು ಮಾಹಿತಿ ಸಿಕ್ಕಿದ ತಕ್ಷಣ ಪೊಲೀಸ್ ಅಧಿಕಾರಿಗಳು ಎಫ್ಐಆರ್ ದಾಖಲಿಸುವುದಕ್ಕೆ ಬದ್ಧರೇ ಎಂಬ ಕುರಿತು ವಿವಿಧ ನ್ಯಾಯಾಲಯಗಳು ತದ್ವಿರುದ್ಧವಾದ ತೀರ್ಪುಗಳನ್ನು ನೀಡಿವುದನ್ನೂ ಮೂವರು ಸದಸ್ಯರ ಸಂವಿಧಾನ ಪೀಠ ಪರಿಶೀಲಿಸಿತು.

ಗಂಭೀರ ದಂಡನಾರ್ಹ ಅಪರಾಧವೆಂದರೆ, ಪೊಲೀಸರು ಯಾವುದೇ ವಾರಂಟ್ ಇಲ್ಲದೆಯೇ ವ್ಯಕ್ತಿಯನ್ನು ಬಂಧಿಸಬಹುದಾದ ಅಪರಾಧ. ಇವುಗಳಲ್ಲಿ ಕೊಲೆ, ಅತ್ಯಾಚಾರ, ವರದಕ್ಷಿಣೆ ಸಾವು, ಅಪಹರಣ ಇತ್ಯಾದಿಗಳು ಬರುತ್ತವೆ. ಗುರುತರವಾದ ಅಪರಾಧದ ಕುರಿತಾಗಿ ಪಡೆದ ಮಾಹಿತಿಯನ್ನು ಯಾವ ರೀತಿಯಲ್ಲಿ ಪರಿಗಣಿಸಬೇಕು ಎಂಬ ಕುರಿತು ಸಿಆರ್‌ಪಿಸಿಯ ವಿಧಿ 154ರಲ್ಲಿ ವಿವರಿಸಲಾಗಿದೆ. ಎಫ್ಐಆರ್‌ನ ಕಡ್ಡಾಯ ನೋಂದಣಿಯ ಪ್ರಶ್ನೆಯನ್ನು ನಂತರ ಐವರು ನ್ಯಾಯಾಧೀಶರ ಪೀಠಕ್ಕೆ ಸಲ್ಲಿಸಲಾಗಿತ್ತು.

ಪೊಲೀಸ್ ಅಧಿಕಾರಿಗಳು ಕರ್ತವ್ಯದಿಂದ ನುಣುಚಿಕೊಳ್ಳುವಂತಿಲ್ಲ

ಲಲಿತಾ ಕುಮಾರಿ ಪ್ರಕರಣದಲ್ಲಿ ಪೊಲೀಸರು ಅನುಸರಿಸಬೇಕಾದ ಕ್ರಮಗಳ ಕುರಿತು ಸುಪ್ರೀಂಕೋರ್ಟ್ ಎಂಟು ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಿತ್ತು.

ಪಡೆದ ಮಾಹಿತಿಯು ಗುರುತರವಾದ ಅಪರಾಧ ಘಟಿಸಿರುವುದನ್ನು ಸೂಚಿಸುತ್ತಿದ್ದರೆ, ಸಿಆರ್‌ಪಿಸಿ ವಿಧಿ 154ರ ಅನ್ವಯ ಎಫ್ಐಆರ್ ದಾಖಲಿಸುವುದು ಕಡ್ಡಾಯ ಎಂದು ಪೀಠವು ತೀರ್ಪು ನೀಡಿತು. ಇಂತಹ ಸಂದರ್ಭದಲ್ಲಿ ಯಾವುದೇ ಪೂರ್ವಭಾವಿ ತನಿಖೆಗೆ ಅವಕಾಶವಿಲ್ಲ ಎಂದು ಅದು ಹೇಳಿತು.  “ಗುರುತರ ಅಪರಾಧ ಘಟಿಸಿರುವ ಮಾಹಿತಿಯನ್ನು ಬಹಿರಂಗಗೊಳಿಸಲಾದಾಗ ಪೊಲೀಸ್ ಅಧಿಕಾರಿಯು ತನ್ನ ಕರ್ತವ್ಯದಿಂದ ನುಣುಚಿಕೊಳ್ಳುವಂತಿಲ್ಲ. ಗುರುತರ ಅಪರಾಧ ಘಟಿಸಿರುವ ಮಾಹಿತಿಯನ್ನು ಪಡೆದ ತಕ್ಷಣ ಎಫ್‌ಐಆರ್ ದಾಖಲಿಸದೆ ಕರ್ತವ್ಯಚ್ಯುತಿ ಮಾಡಿದ ಅಧಿಕಾರಿಯ ವಿರುದ್ಧ ಕ್ರಮಕೈಗೊಳ್ಳಬೇಕು” ಎಂದು ತೀರ್ಪಿನಲ್ಲಿ ಹೇಳಲಾಗಿದೆ.

ಪೂರ್ವಭಾವಿ ತನಿಖೆ ನಡೆಸಬಹುದಾದಂತಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಅದು ವಾಸ್ತವಾಂಶಗಳು ಮತ್ತು ಸಂದರ್ಭಗಳ ಮೇಲೆ ಅವಲಂಬಿಸಿದೆ ಎಂದು ನ್ಯಾಯಾಲಯ ಹೇಳಿದೆ. ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಇಂತಹಾ ಪ್ರಕರಣಗಳ ಒಂದು ವಿವರವಾದ ಯಾದಿಯನ್ನೇ ನೀಡಿದೆ. ಅವುಗಳಲ್ಲಿ ದಾಂಪತ್ಯ/ ಕೌಟುಂಬಿಕ ಕಲಹಗಳು, ವಾಣಿಜ್ಯ ಅಪರಾಧಗಳು, ವೈದ್ಯಕೀಯ ನಿರ್ಲಕ್ಷ್ಯದ ಪ್ರಕರಣಗಳು, ಭ್ರಷ್ಟಾಚಾರದ ಪ್ರಕರಣಗಳು ಇತ್ಯಾದಿಗಳಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸುವ ಮೊದಲು ಪೂರ್ವಭಾವಿ ತನಿಖೆಯ ಅಗತ್ಯವಿದ್ದು, ಎಫ್‌ಐಆರ್ ದಾಖಲೆಯಲ್ಲಿ ವಿಳಂಬವಾಗಬಹುದು.

ಯಾವುದೇ ಪ್ರಕರಣದಲ್ಲಿ ಏಳು ದಿನಗಳ ಒಳಗಾಗಿ ತನಿಖೆಯನ್ನು ಆರಂಭಿಸಬೇಕು ಎಂದು ಕೂಡಾ ಸುಪ್ರೀಂಕೋರ್ಟ್ ಆದೇಶಿಸಿತ್ತು. 2014ರ ಮಾರ್ಚ್ ತಿಂಗಳಲ್ಲಿ ಇದನ್ನು ಬದಲಿಸಿ ಸಾಮಾನ್ಯ ಪ್ರಕರಣಗಳಲ್ಲಿ ಸಮಯದ ಮಿತಿಯನ್ನು 15 ದಿನಗಳಿಗೆ ಮತ್ತು ಅಸಾಧಾರಣ ಪ್ರಕರಣಗಳಲ್ಲಿ ಆರು ವಾರಗಳಿಗೆ ವಿಸ್ತರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...

ದುಬೈ-ಅಬುಧಾಬಿ ಮೇಲೆ ದಾಳಿ; ಇರಾನ್‌ಗೆ ಯುಎಇ ಎಚ್ಚರಿಕೆ

ಇರಾನ್ ತನ್ನ ನೆರೆಹೊರೆಯವರನ್ನು ಗುರಿಯಾಗಿಸಿಕೊಳ್ಳಬಾರದು ಎಂದು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಅನ್ವರ್ ಗರ್ಗಶ್ ಎಚ್ಚರಿಕೆ ನೀಡಿದ್ದಾರೆ. "ಗಲ್ಫ್ ರಾಷ್ಟ್ರಗಳ ವಿರುದ್ಧ ಇರಾನ್ ಆಕ್ರಮಣವು ತಪ್ಪು ಲೆಕ್ಕಾಚಾರವಾಗಿದೆ. ಇದೇ ಬೆಳವಣಿಗೆ ನಿರ್ಣಾಯಕ ಹಂತದಲ್ಲಿ ಇರಾನ್...

ಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಹಿನ್ನೆಲೆ, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಇರಾನ್‌ನ ಹಂಗಾಮಿ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ-ಸಂಯೋಜಿತ...

ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದಲ್ಲಿರುವ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕರ ಗುಂಪು (UNMOGIP) ಪ್ರಧಾನ ಕಚೇರಿಯ ಮುಂದೆ ದೊಡ್ಡ ಜನಸಮೂಹ ಜಮಾಯಿಸಿತ್ತು....

ಅಮೆರಿಕಾ-ಇಸ್ರೇಲ್ ‘ಪುಂಡ ರಾಷ್ಟ್ರಗಳು’; ಇರಾನ್ ಮೇಲಿನ ದಾಳಿ ಖಂಡಿಸಿದ ಕೇರಳ ಸಿಎಂ; ಅನಿವಾಸಿ ಭಾರತೀಯರ ಆತಂಕ ಪರಿಹರಿಸಲು ಕೇಂದ್ರಕ್ಕೆ ಮನವಿ

ತಿರುವನಂತಪುರಂ: ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ...

ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ...

ಕರಾಚಿ| ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ಘರ್ಷಣೆ : ಕನಿಷ್ಠ 9 ಸಾವು

ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾನುವಾರ (ಮಾ.1) ಇರಾನ್ ಪರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಘರ್ಷಣೆ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. "ನಾವು ಕನಿಷ್ಠ ಎಂಟು...

ಇರಾನ್-ಇಸ್ರೇಲ್ ಯುದ್ಧ: ಭಾರತ ತಕ್ಷಣದ ಆರ್ಥಿಕ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ; ವರದಿ

ಫೆಬ್ರವರಿ 28, 2026 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಮುಷ್ಕರದ ನಂತರ ಇರಾನ್-ಇಸ್ರೇಲ್ ಸಂಘರ್ಷದಲ್ಲಿ ತೀವ್ರ ಏರಿಕೆಯು ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ರಾಜಕೀಯ ಅಪಾಯಗಳನ್ನು ತೀವ್ರಗೊಳಿಸಿದೆ ಮತ್ತು ಜಾಗತಿಕ ಇಂಧನ ಮಾರುಕಟ್ಟೆಗಳಿಗೆ ತಕ್ಷಣದ...