Homeಮುಖಪುಟಲಲಿತಾ ಕುಮಾರಿ ಪ್ರಕರಣ ದಿಲ್ಲಿ ಪೊಲೀಸರಿಗೆ ಮಾದರಿಯಾಗಲಿ: ನ್ಯಾ. ಮುರಳೀಧರ್

ಲಲಿತಾ ಕುಮಾರಿ ಪ್ರಕರಣ ದಿಲ್ಲಿ ಪೊಲೀಸರಿಗೆ ಮಾದರಿಯಾಗಲಿ: ನ್ಯಾ. ಮುರಳೀಧರ್

ದಿಲ್ಲಿ ಪೊಲೀಸರು ಲಲಿತಾ ಕುಮಾರಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಿಂದ ಕಲಿಯಬೇಕು ಮತ್ತು ಕಾನೂನು ಹೇಗೆ ಹೇಳುತ್ತದೆಯೋ ತಪ್ಪದೇ ಅದಕ್ಕನುಗುಣವಾಗಿ ಕೆಲಸ ಮಾಡಬೇಕು ಎಂದು ನ್ಯಾಯಮೂರ್ತಿ ಮುರಳೀಧರ್ ಹೇಳಿದ್ದಾರೆ.

- Advertisement -
- Advertisement -

-ಅಪರ್ಣಾ ಮಂಧಾನಿ

ಅನುವಾದ: ನಿಖಿಲ್ ಕೋಲ್ಪೆ

ದಿಲ್ಲಿ ಹೈಕೋರ್ಟ್ ಇತ್ತೀಚೆಗೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ನ್ಯಾ. ಮುರಳೀಧರ್ ಅವರ ನಡುವಿನ ಆಕರ್ಣೀಯ ಸಂಭಾಷಣೆಗೆ ಸಾಕ್ಷಿಯಾಯಿತು.

ದಿಲ್ಲಿ ಹೈಕೋರ್ಟ್ ಈಶಾನ್ಯ ದಿಲ್ಲಿಯಲ್ಲಿ ಫೆಬ್ರವರಿ 23,24,25ರಂದು ನಡೆದ ಯೋಜಿತ ಗಲಭೆಗಳ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ)ದಿಂದ ತನಿಖೆ ನಡೆಯಬೇಕು ಮತ್ತು ಬಿಜೆಪಿ ನಾಯಕರಾದ ಪರ್ವೇಶ್ ವರ್ಮಾ, ಅನುರಾಗ್ ಠಾಕೂರ್, ಕಪಿಲ್ ಮಿಶ್ರಾ ಮುಂತಾದವರ ಮೇಲೆ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ಎಫ್ಐಆರ್ ದಾಖಲಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಹರೀಶ್ ಮಂದರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ಹೈಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿತ್ತು.

ವಿಚಾರಣೆಯ ವೇಳೆ ಅಧಿಕಾರಿಗಳ ಮೇಲೆ ಕಟುವಾಗಿ ದಾಳಿ ನಡೆಸಿದ ನ್ಯಾ. ಮುರಳೀಧರ್, “ತನಿಖೆಯು ಲಲಿತಾ ಕುಮಾರಿ ವಿರುದ್ಧ  ಉತ್ತರ ಪ್ರದೇಶ ಸರಕಾರ ಪ್ರಕರಣದಲ್ಲಿ ಸುಪ್ರೀಂಕೋರ್ಟಿನ ಸಂವಿಧಾನ ಪೀಠವು ನೀಡಿರುವ ತೀರ್ಪಿನಿಂದ ನಿರ್ದೇಶಿತವಾಗಬೇಕು ಮತ್ತು ಪೊಲೀಸರು ಕಾನೂನಿನಲ್ಲಿ ಹೇಳಿರುವಂತೆಯೇ ಕೆಲಸ ಮಾಡಬೇಕು” ಎಂದು ಹೇಳಿದರು.

ಪ್ರಕರಣವು ಹೈಕೋರ್ಟಿನ ಇನ್ನೊಂದು ಪೀಠದಲ್ಲಿ ವಿಚಾರಣೆಗೆ ಬಂದಾಗಲೂ ಹರೀಶ್ ಮಂದರ್ ಪರ ವಾದಿಸಿದ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವಿಸ್ ಅವರು ತನ್ನ ವಾದದಲ್ಲಿ 2013ರ ಲಲಿತಾ ಕುಮಾರಿ ಪ್ರಕರಣವನ್ನು ಬಹುವಾಗಿ ಅವಲಂಬಿಸಿದರು. ಈ ಪ್ರಕರಣವು ಎಪ್ರಿಲ್‌ನಲ್ಲಿ ಮತ್ತೆ ವಿಚಾರಣೆಗೆ ಬರಲಿರುವ ಹಿನ್ನೆಲೆಯಲ್ಲಿ ‘ದಿ ಪ್ರಿಂಟ್’ ಲಲಿತಾ ಕುಮಾರಿ ಪ್ರಕರಣದ ತೀರ್ಪನ್ನು ವಿವರಿಸಿದೆ.

ಲಲಿತಾ ಕುಮಾರಿ ಯಾರು?

ಲಲಿತಾ ಕುಮಾರಿ ಅಪ್ರಾಪ್ತ ವಯಸ್ಸಿನ ಒಬ್ಬಳು ಬಾಲಕಿಯಾಗಿದ್ದು, ಆಕೆಯನ್ನು ಅಪಹರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಆಕೆಯ ತಂದೆ ಭೋಲಾ ಕಮತ್ ಸುಪ್ರೀಂಕೋರ್ಟಿನಲ್ಲಿ ಹೇಬಿಯಸ್ ಕೋರ್ಪಸ್ ಅರ್ಜಿ ಸಲ್ಲಿಸಿದ್ದರು. ತಾನು ಸಂಬಂಧಪಟ್ಟ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ವಿವರವಾದ ವರದಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ಆರೋಪಿಸಿದ್ದರು. ವಿಷಯ ಪೊಲೀಸ್ ಸುಪರಿಂಟೆಂಟ್‌ಗೆ ತಲುಪಿದ ಬಳಿಕವಷ್ಟೇ ಎಫ್ಐಆರ್ ದಾಖಲಿಸಲಾಗಿತ್ತು.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ದೇಶದ ಉದ್ದಗಲಕ್ಕೂ ಪ್ರಕರಣದಿಂದ ಪ್ರಕರಣಕ್ಕೆ ಎಫ್ಐಆರ್ ನೋಂದಣಿಯಲ್ಲಿ ವ್ಯತ್ಯಯವಿರುವುದನ್ನು ಗಮನಿಸಿತು. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ನೋಟೀಸು ಜಾರಿ ಮಾಡಿತು. ಕ್ರಿಮಿನಲ್ ಪ್ರೊಸಿಜರ್ ಕೋಡ್ (ಸಿಆರ್‌ಪಿಸಿ)ನ ವಿಧಿ 154ರ ಅನ್ವಯ ಗಂಭೀರ (ಗುರುತರ) ದಂಡನಾರ್ಹ ಅಪರಾಧವೊಂದು (cognisable offence) ಘಟಿಸಿರುವ ಕುರಿತು ಮಾಹಿತಿ ಸಿಕ್ಕಿದ ತಕ್ಷಣ ಪೊಲೀಸ್ ಅಧಿಕಾರಿಗಳು ಎಫ್ಐಆರ್ ದಾಖಲಿಸುವುದಕ್ಕೆ ಬದ್ಧರೇ ಎಂಬ ಕುರಿತು ವಿವಿಧ ನ್ಯಾಯಾಲಯಗಳು ತದ್ವಿರುದ್ಧವಾದ ತೀರ್ಪುಗಳನ್ನು ನೀಡಿವುದನ್ನೂ ಮೂವರು ಸದಸ್ಯರ ಸಂವಿಧಾನ ಪೀಠ ಪರಿಶೀಲಿಸಿತು.

ಗಂಭೀರ ದಂಡನಾರ್ಹ ಅಪರಾಧವೆಂದರೆ, ಪೊಲೀಸರು ಯಾವುದೇ ವಾರಂಟ್ ಇಲ್ಲದೆಯೇ ವ್ಯಕ್ತಿಯನ್ನು ಬಂಧಿಸಬಹುದಾದ ಅಪರಾಧ. ಇವುಗಳಲ್ಲಿ ಕೊಲೆ, ಅತ್ಯಾಚಾರ, ವರದಕ್ಷಿಣೆ ಸಾವು, ಅಪಹರಣ ಇತ್ಯಾದಿಗಳು ಬರುತ್ತವೆ. ಗುರುತರವಾದ ಅಪರಾಧದ ಕುರಿತಾಗಿ ಪಡೆದ ಮಾಹಿತಿಯನ್ನು ಯಾವ ರೀತಿಯಲ್ಲಿ ಪರಿಗಣಿಸಬೇಕು ಎಂಬ ಕುರಿತು ಸಿಆರ್‌ಪಿಸಿಯ ವಿಧಿ 154ರಲ್ಲಿ ವಿವರಿಸಲಾಗಿದೆ. ಎಫ್ಐಆರ್‌ನ ಕಡ್ಡಾಯ ನೋಂದಣಿಯ ಪ್ರಶ್ನೆಯನ್ನು ನಂತರ ಐವರು ನ್ಯಾಯಾಧೀಶರ ಪೀಠಕ್ಕೆ ಸಲ್ಲಿಸಲಾಗಿತ್ತು.

ಪೊಲೀಸ್ ಅಧಿಕಾರಿಗಳು ಕರ್ತವ್ಯದಿಂದ ನುಣುಚಿಕೊಳ್ಳುವಂತಿಲ್ಲ

ಲಲಿತಾ ಕುಮಾರಿ ಪ್ರಕರಣದಲ್ಲಿ ಪೊಲೀಸರು ಅನುಸರಿಸಬೇಕಾದ ಕ್ರಮಗಳ ಕುರಿತು ಸುಪ್ರೀಂಕೋರ್ಟ್ ಎಂಟು ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಿತ್ತು.

ಪಡೆದ ಮಾಹಿತಿಯು ಗುರುತರವಾದ ಅಪರಾಧ ಘಟಿಸಿರುವುದನ್ನು ಸೂಚಿಸುತ್ತಿದ್ದರೆ, ಸಿಆರ್‌ಪಿಸಿ ವಿಧಿ 154ರ ಅನ್ವಯ ಎಫ್ಐಆರ್ ದಾಖಲಿಸುವುದು ಕಡ್ಡಾಯ ಎಂದು ಪೀಠವು ತೀರ್ಪು ನೀಡಿತು. ಇಂತಹ ಸಂದರ್ಭದಲ್ಲಿ ಯಾವುದೇ ಪೂರ್ವಭಾವಿ ತನಿಖೆಗೆ ಅವಕಾಶವಿಲ್ಲ ಎಂದು ಅದು ಹೇಳಿತು.  “ಗುರುತರ ಅಪರಾಧ ಘಟಿಸಿರುವ ಮಾಹಿತಿಯನ್ನು ಬಹಿರಂಗಗೊಳಿಸಲಾದಾಗ ಪೊಲೀಸ್ ಅಧಿಕಾರಿಯು ತನ್ನ ಕರ್ತವ್ಯದಿಂದ ನುಣುಚಿಕೊಳ್ಳುವಂತಿಲ್ಲ. ಗುರುತರ ಅಪರಾಧ ಘಟಿಸಿರುವ ಮಾಹಿತಿಯನ್ನು ಪಡೆದ ತಕ್ಷಣ ಎಫ್‌ಐಆರ್ ದಾಖಲಿಸದೆ ಕರ್ತವ್ಯಚ್ಯುತಿ ಮಾಡಿದ ಅಧಿಕಾರಿಯ ವಿರುದ್ಧ ಕ್ರಮಕೈಗೊಳ್ಳಬೇಕು” ಎಂದು ತೀರ್ಪಿನಲ್ಲಿ ಹೇಳಲಾಗಿದೆ.

ಪೂರ್ವಭಾವಿ ತನಿಖೆ ನಡೆಸಬಹುದಾದಂತಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಅದು ವಾಸ್ತವಾಂಶಗಳು ಮತ್ತು ಸಂದರ್ಭಗಳ ಮೇಲೆ ಅವಲಂಬಿಸಿದೆ ಎಂದು ನ್ಯಾಯಾಲಯ ಹೇಳಿದೆ. ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಇಂತಹಾ ಪ್ರಕರಣಗಳ ಒಂದು ವಿವರವಾದ ಯಾದಿಯನ್ನೇ ನೀಡಿದೆ. ಅವುಗಳಲ್ಲಿ ದಾಂಪತ್ಯ/ ಕೌಟುಂಬಿಕ ಕಲಹಗಳು, ವಾಣಿಜ್ಯ ಅಪರಾಧಗಳು, ವೈದ್ಯಕೀಯ ನಿರ್ಲಕ್ಷ್ಯದ ಪ್ರಕರಣಗಳು, ಭ್ರಷ್ಟಾಚಾರದ ಪ್ರಕರಣಗಳು ಇತ್ಯಾದಿಗಳಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸುವ ಮೊದಲು ಪೂರ್ವಭಾವಿ ತನಿಖೆಯ ಅಗತ್ಯವಿದ್ದು, ಎಫ್‌ಐಆರ್ ದಾಖಲೆಯಲ್ಲಿ ವಿಳಂಬವಾಗಬಹುದು.

ಯಾವುದೇ ಪ್ರಕರಣದಲ್ಲಿ ಏಳು ದಿನಗಳ ಒಳಗಾಗಿ ತನಿಖೆಯನ್ನು ಆರಂಭಿಸಬೇಕು ಎಂದು ಕೂಡಾ ಸುಪ್ರೀಂಕೋರ್ಟ್ ಆದೇಶಿಸಿತ್ತು. 2014ರ ಮಾರ್ಚ್ ತಿಂಗಳಲ್ಲಿ ಇದನ್ನು ಬದಲಿಸಿ ಸಾಮಾನ್ಯ ಪ್ರಕರಣಗಳಲ್ಲಿ ಸಮಯದ ಮಿತಿಯನ್ನು 15 ದಿನಗಳಿಗೆ ಮತ್ತು ಅಸಾಧಾರಣ ಪ್ರಕರಣಗಳಲ್ಲಿ ಆರು ವಾರಗಳಿಗೆ ವಿಸ್ತರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...