Homeಮುಖಪುಟಲಲಿತಾ ಕುಮಾರಿ ಪ್ರಕರಣ ದಿಲ್ಲಿ ಪೊಲೀಸರಿಗೆ ಮಾದರಿಯಾಗಲಿ: ನ್ಯಾ. ಮುರಳೀಧರ್

ಲಲಿತಾ ಕುಮಾರಿ ಪ್ರಕರಣ ದಿಲ್ಲಿ ಪೊಲೀಸರಿಗೆ ಮಾದರಿಯಾಗಲಿ: ನ್ಯಾ. ಮುರಳೀಧರ್

ದಿಲ್ಲಿ ಪೊಲೀಸರು ಲಲಿತಾ ಕುಮಾರಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಿಂದ ಕಲಿಯಬೇಕು ಮತ್ತು ಕಾನೂನು ಹೇಗೆ ಹೇಳುತ್ತದೆಯೋ ತಪ್ಪದೇ ಅದಕ್ಕನುಗುಣವಾಗಿ ಕೆಲಸ ಮಾಡಬೇಕು ಎಂದು ನ್ಯಾಯಮೂರ್ತಿ ಮುರಳೀಧರ್ ಹೇಳಿದ್ದಾರೆ.

- Advertisement -
- Advertisement -

-ಅಪರ್ಣಾ ಮಂಧಾನಿ

ಅನುವಾದ: ನಿಖಿಲ್ ಕೋಲ್ಪೆ

ದಿಲ್ಲಿ ಹೈಕೋರ್ಟ್ ಇತ್ತೀಚೆಗೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ನ್ಯಾ. ಮುರಳೀಧರ್ ಅವರ ನಡುವಿನ ಆಕರ್ಣೀಯ ಸಂಭಾಷಣೆಗೆ ಸಾಕ್ಷಿಯಾಯಿತು.

ದಿಲ್ಲಿ ಹೈಕೋರ್ಟ್ ಈಶಾನ್ಯ ದಿಲ್ಲಿಯಲ್ಲಿ ಫೆಬ್ರವರಿ 23,24,25ರಂದು ನಡೆದ ಯೋಜಿತ ಗಲಭೆಗಳ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ)ದಿಂದ ತನಿಖೆ ನಡೆಯಬೇಕು ಮತ್ತು ಬಿಜೆಪಿ ನಾಯಕರಾದ ಪರ್ವೇಶ್ ವರ್ಮಾ, ಅನುರಾಗ್ ಠಾಕೂರ್, ಕಪಿಲ್ ಮಿಶ್ರಾ ಮುಂತಾದವರ ಮೇಲೆ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ಎಫ್ಐಆರ್ ದಾಖಲಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಹರೀಶ್ ಮಂದರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ಹೈಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿತ್ತು.

ವಿಚಾರಣೆಯ ವೇಳೆ ಅಧಿಕಾರಿಗಳ ಮೇಲೆ ಕಟುವಾಗಿ ದಾಳಿ ನಡೆಸಿದ ನ್ಯಾ. ಮುರಳೀಧರ್, “ತನಿಖೆಯು ಲಲಿತಾ ಕುಮಾರಿ ವಿರುದ್ಧ  ಉತ್ತರ ಪ್ರದೇಶ ಸರಕಾರ ಪ್ರಕರಣದಲ್ಲಿ ಸುಪ್ರೀಂಕೋರ್ಟಿನ ಸಂವಿಧಾನ ಪೀಠವು ನೀಡಿರುವ ತೀರ್ಪಿನಿಂದ ನಿರ್ದೇಶಿತವಾಗಬೇಕು ಮತ್ತು ಪೊಲೀಸರು ಕಾನೂನಿನಲ್ಲಿ ಹೇಳಿರುವಂತೆಯೇ ಕೆಲಸ ಮಾಡಬೇಕು” ಎಂದು ಹೇಳಿದರು.

ಪ್ರಕರಣವು ಹೈಕೋರ್ಟಿನ ಇನ್ನೊಂದು ಪೀಠದಲ್ಲಿ ವಿಚಾರಣೆಗೆ ಬಂದಾಗಲೂ ಹರೀಶ್ ಮಂದರ್ ಪರ ವಾದಿಸಿದ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವಿಸ್ ಅವರು ತನ್ನ ವಾದದಲ್ಲಿ 2013ರ ಲಲಿತಾ ಕುಮಾರಿ ಪ್ರಕರಣವನ್ನು ಬಹುವಾಗಿ ಅವಲಂಬಿಸಿದರು. ಈ ಪ್ರಕರಣವು ಎಪ್ರಿಲ್‌ನಲ್ಲಿ ಮತ್ತೆ ವಿಚಾರಣೆಗೆ ಬರಲಿರುವ ಹಿನ್ನೆಲೆಯಲ್ಲಿ ‘ದಿ ಪ್ರಿಂಟ್’ ಲಲಿತಾ ಕುಮಾರಿ ಪ್ರಕರಣದ ತೀರ್ಪನ್ನು ವಿವರಿಸಿದೆ.

ಲಲಿತಾ ಕುಮಾರಿ ಯಾರು?

ಲಲಿತಾ ಕುಮಾರಿ ಅಪ್ರಾಪ್ತ ವಯಸ್ಸಿನ ಒಬ್ಬಳು ಬಾಲಕಿಯಾಗಿದ್ದು, ಆಕೆಯನ್ನು ಅಪಹರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಆಕೆಯ ತಂದೆ ಭೋಲಾ ಕಮತ್ ಸುಪ್ರೀಂಕೋರ್ಟಿನಲ್ಲಿ ಹೇಬಿಯಸ್ ಕೋರ್ಪಸ್ ಅರ್ಜಿ ಸಲ್ಲಿಸಿದ್ದರು. ತಾನು ಸಂಬಂಧಪಟ್ಟ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ವಿವರವಾದ ವರದಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ಆರೋಪಿಸಿದ್ದರು. ವಿಷಯ ಪೊಲೀಸ್ ಸುಪರಿಂಟೆಂಟ್‌ಗೆ ತಲುಪಿದ ಬಳಿಕವಷ್ಟೇ ಎಫ್ಐಆರ್ ದಾಖಲಿಸಲಾಗಿತ್ತು.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ದೇಶದ ಉದ್ದಗಲಕ್ಕೂ ಪ್ರಕರಣದಿಂದ ಪ್ರಕರಣಕ್ಕೆ ಎಫ್ಐಆರ್ ನೋಂದಣಿಯಲ್ಲಿ ವ್ಯತ್ಯಯವಿರುವುದನ್ನು ಗಮನಿಸಿತು. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ನೋಟೀಸು ಜಾರಿ ಮಾಡಿತು. ಕ್ರಿಮಿನಲ್ ಪ್ರೊಸಿಜರ್ ಕೋಡ್ (ಸಿಆರ್‌ಪಿಸಿ)ನ ವಿಧಿ 154ರ ಅನ್ವಯ ಗಂಭೀರ (ಗುರುತರ) ದಂಡನಾರ್ಹ ಅಪರಾಧವೊಂದು (cognisable offence) ಘಟಿಸಿರುವ ಕುರಿತು ಮಾಹಿತಿ ಸಿಕ್ಕಿದ ತಕ್ಷಣ ಪೊಲೀಸ್ ಅಧಿಕಾರಿಗಳು ಎಫ್ಐಆರ್ ದಾಖಲಿಸುವುದಕ್ಕೆ ಬದ್ಧರೇ ಎಂಬ ಕುರಿತು ವಿವಿಧ ನ್ಯಾಯಾಲಯಗಳು ತದ್ವಿರುದ್ಧವಾದ ತೀರ್ಪುಗಳನ್ನು ನೀಡಿವುದನ್ನೂ ಮೂವರು ಸದಸ್ಯರ ಸಂವಿಧಾನ ಪೀಠ ಪರಿಶೀಲಿಸಿತು.

ಗಂಭೀರ ದಂಡನಾರ್ಹ ಅಪರಾಧವೆಂದರೆ, ಪೊಲೀಸರು ಯಾವುದೇ ವಾರಂಟ್ ಇಲ್ಲದೆಯೇ ವ್ಯಕ್ತಿಯನ್ನು ಬಂಧಿಸಬಹುದಾದ ಅಪರಾಧ. ಇವುಗಳಲ್ಲಿ ಕೊಲೆ, ಅತ್ಯಾಚಾರ, ವರದಕ್ಷಿಣೆ ಸಾವು, ಅಪಹರಣ ಇತ್ಯಾದಿಗಳು ಬರುತ್ತವೆ. ಗುರುತರವಾದ ಅಪರಾಧದ ಕುರಿತಾಗಿ ಪಡೆದ ಮಾಹಿತಿಯನ್ನು ಯಾವ ರೀತಿಯಲ್ಲಿ ಪರಿಗಣಿಸಬೇಕು ಎಂಬ ಕುರಿತು ಸಿಆರ್‌ಪಿಸಿಯ ವಿಧಿ 154ರಲ್ಲಿ ವಿವರಿಸಲಾಗಿದೆ. ಎಫ್ಐಆರ್‌ನ ಕಡ್ಡಾಯ ನೋಂದಣಿಯ ಪ್ರಶ್ನೆಯನ್ನು ನಂತರ ಐವರು ನ್ಯಾಯಾಧೀಶರ ಪೀಠಕ್ಕೆ ಸಲ್ಲಿಸಲಾಗಿತ್ತು.

ಪೊಲೀಸ್ ಅಧಿಕಾರಿಗಳು ಕರ್ತವ್ಯದಿಂದ ನುಣುಚಿಕೊಳ್ಳುವಂತಿಲ್ಲ

ಲಲಿತಾ ಕುಮಾರಿ ಪ್ರಕರಣದಲ್ಲಿ ಪೊಲೀಸರು ಅನುಸರಿಸಬೇಕಾದ ಕ್ರಮಗಳ ಕುರಿತು ಸುಪ್ರೀಂಕೋರ್ಟ್ ಎಂಟು ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಿತ್ತು.

ಪಡೆದ ಮಾಹಿತಿಯು ಗುರುತರವಾದ ಅಪರಾಧ ಘಟಿಸಿರುವುದನ್ನು ಸೂಚಿಸುತ್ತಿದ್ದರೆ, ಸಿಆರ್‌ಪಿಸಿ ವಿಧಿ 154ರ ಅನ್ವಯ ಎಫ್ಐಆರ್ ದಾಖಲಿಸುವುದು ಕಡ್ಡಾಯ ಎಂದು ಪೀಠವು ತೀರ್ಪು ನೀಡಿತು. ಇಂತಹ ಸಂದರ್ಭದಲ್ಲಿ ಯಾವುದೇ ಪೂರ್ವಭಾವಿ ತನಿಖೆಗೆ ಅವಕಾಶವಿಲ್ಲ ಎಂದು ಅದು ಹೇಳಿತು.  “ಗುರುತರ ಅಪರಾಧ ಘಟಿಸಿರುವ ಮಾಹಿತಿಯನ್ನು ಬಹಿರಂಗಗೊಳಿಸಲಾದಾಗ ಪೊಲೀಸ್ ಅಧಿಕಾರಿಯು ತನ್ನ ಕರ್ತವ್ಯದಿಂದ ನುಣುಚಿಕೊಳ್ಳುವಂತಿಲ್ಲ. ಗುರುತರ ಅಪರಾಧ ಘಟಿಸಿರುವ ಮಾಹಿತಿಯನ್ನು ಪಡೆದ ತಕ್ಷಣ ಎಫ್‌ಐಆರ್ ದಾಖಲಿಸದೆ ಕರ್ತವ್ಯಚ್ಯುತಿ ಮಾಡಿದ ಅಧಿಕಾರಿಯ ವಿರುದ್ಧ ಕ್ರಮಕೈಗೊಳ್ಳಬೇಕು” ಎಂದು ತೀರ್ಪಿನಲ್ಲಿ ಹೇಳಲಾಗಿದೆ.

ಪೂರ್ವಭಾವಿ ತನಿಖೆ ನಡೆಸಬಹುದಾದಂತಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಅದು ವಾಸ್ತವಾಂಶಗಳು ಮತ್ತು ಸಂದರ್ಭಗಳ ಮೇಲೆ ಅವಲಂಬಿಸಿದೆ ಎಂದು ನ್ಯಾಯಾಲಯ ಹೇಳಿದೆ. ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಇಂತಹಾ ಪ್ರಕರಣಗಳ ಒಂದು ವಿವರವಾದ ಯಾದಿಯನ್ನೇ ನೀಡಿದೆ. ಅವುಗಳಲ್ಲಿ ದಾಂಪತ್ಯ/ ಕೌಟುಂಬಿಕ ಕಲಹಗಳು, ವಾಣಿಜ್ಯ ಅಪರಾಧಗಳು, ವೈದ್ಯಕೀಯ ನಿರ್ಲಕ್ಷ್ಯದ ಪ್ರಕರಣಗಳು, ಭ್ರಷ್ಟಾಚಾರದ ಪ್ರಕರಣಗಳು ಇತ್ಯಾದಿಗಳಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸುವ ಮೊದಲು ಪೂರ್ವಭಾವಿ ತನಿಖೆಯ ಅಗತ್ಯವಿದ್ದು, ಎಫ್‌ಐಆರ್ ದಾಖಲೆಯಲ್ಲಿ ವಿಳಂಬವಾಗಬಹುದು.

ಯಾವುದೇ ಪ್ರಕರಣದಲ್ಲಿ ಏಳು ದಿನಗಳ ಒಳಗಾಗಿ ತನಿಖೆಯನ್ನು ಆರಂಭಿಸಬೇಕು ಎಂದು ಕೂಡಾ ಸುಪ್ರೀಂಕೋರ್ಟ್ ಆದೇಶಿಸಿತ್ತು. 2014ರ ಮಾರ್ಚ್ ತಿಂಗಳಲ್ಲಿ ಇದನ್ನು ಬದಲಿಸಿ ಸಾಮಾನ್ಯ ಪ್ರಕರಣಗಳಲ್ಲಿ ಸಮಯದ ಮಿತಿಯನ್ನು 15 ದಿನಗಳಿಗೆ ಮತ್ತು ಅಸಾಧಾರಣ ಪ್ರಕರಣಗಳಲ್ಲಿ ಆರು ವಾರಗಳಿಗೆ ವಿಸ್ತರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...