Homeಮುಖಪುಟಲಲಿತಾ ಕುಮಾರಿ ಪ್ರಕರಣ ದಿಲ್ಲಿ ಪೊಲೀಸರಿಗೆ ಮಾದರಿಯಾಗಲಿ: ನ್ಯಾ. ಮುರಳೀಧರ್

ಲಲಿತಾ ಕುಮಾರಿ ಪ್ರಕರಣ ದಿಲ್ಲಿ ಪೊಲೀಸರಿಗೆ ಮಾದರಿಯಾಗಲಿ: ನ್ಯಾ. ಮುರಳೀಧರ್

ದಿಲ್ಲಿ ಪೊಲೀಸರು ಲಲಿತಾ ಕುಮಾರಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಿಂದ ಕಲಿಯಬೇಕು ಮತ್ತು ಕಾನೂನು ಹೇಗೆ ಹೇಳುತ್ತದೆಯೋ ತಪ್ಪದೇ ಅದಕ್ಕನುಗುಣವಾಗಿ ಕೆಲಸ ಮಾಡಬೇಕು ಎಂದು ನ್ಯಾಯಮೂರ್ತಿ ಮುರಳೀಧರ್ ಹೇಳಿದ್ದಾರೆ.

- Advertisement -
- Advertisement -

-ಅಪರ್ಣಾ ಮಂಧಾನಿ

ಅನುವಾದ: ನಿಖಿಲ್ ಕೋಲ್ಪೆ

ದಿಲ್ಲಿ ಹೈಕೋರ್ಟ್ ಇತ್ತೀಚೆಗೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ನ್ಯಾ. ಮುರಳೀಧರ್ ಅವರ ನಡುವಿನ ಆಕರ್ಣೀಯ ಸಂಭಾಷಣೆಗೆ ಸಾಕ್ಷಿಯಾಯಿತು.

ದಿಲ್ಲಿ ಹೈಕೋರ್ಟ್ ಈಶಾನ್ಯ ದಿಲ್ಲಿಯಲ್ಲಿ ಫೆಬ್ರವರಿ 23,24,25ರಂದು ನಡೆದ ಯೋಜಿತ ಗಲಭೆಗಳ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ)ದಿಂದ ತನಿಖೆ ನಡೆಯಬೇಕು ಮತ್ತು ಬಿಜೆಪಿ ನಾಯಕರಾದ ಪರ್ವೇಶ್ ವರ್ಮಾ, ಅನುರಾಗ್ ಠಾಕೂರ್, ಕಪಿಲ್ ಮಿಶ್ರಾ ಮುಂತಾದವರ ಮೇಲೆ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ಎಫ್ಐಆರ್ ದಾಖಲಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಹರೀಶ್ ಮಂದರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ಹೈಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿತ್ತು.

ವಿಚಾರಣೆಯ ವೇಳೆ ಅಧಿಕಾರಿಗಳ ಮೇಲೆ ಕಟುವಾಗಿ ದಾಳಿ ನಡೆಸಿದ ನ್ಯಾ. ಮುರಳೀಧರ್, “ತನಿಖೆಯು ಲಲಿತಾ ಕುಮಾರಿ ವಿರುದ್ಧ  ಉತ್ತರ ಪ್ರದೇಶ ಸರಕಾರ ಪ್ರಕರಣದಲ್ಲಿ ಸುಪ್ರೀಂಕೋರ್ಟಿನ ಸಂವಿಧಾನ ಪೀಠವು ನೀಡಿರುವ ತೀರ್ಪಿನಿಂದ ನಿರ್ದೇಶಿತವಾಗಬೇಕು ಮತ್ತು ಪೊಲೀಸರು ಕಾನೂನಿನಲ್ಲಿ ಹೇಳಿರುವಂತೆಯೇ ಕೆಲಸ ಮಾಡಬೇಕು” ಎಂದು ಹೇಳಿದರು.

ಪ್ರಕರಣವು ಹೈಕೋರ್ಟಿನ ಇನ್ನೊಂದು ಪೀಠದಲ್ಲಿ ವಿಚಾರಣೆಗೆ ಬಂದಾಗಲೂ ಹರೀಶ್ ಮಂದರ್ ಪರ ವಾದಿಸಿದ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವಿಸ್ ಅವರು ತನ್ನ ವಾದದಲ್ಲಿ 2013ರ ಲಲಿತಾ ಕುಮಾರಿ ಪ್ರಕರಣವನ್ನು ಬಹುವಾಗಿ ಅವಲಂಬಿಸಿದರು. ಈ ಪ್ರಕರಣವು ಎಪ್ರಿಲ್‌ನಲ್ಲಿ ಮತ್ತೆ ವಿಚಾರಣೆಗೆ ಬರಲಿರುವ ಹಿನ್ನೆಲೆಯಲ್ಲಿ ‘ದಿ ಪ್ರಿಂಟ್’ ಲಲಿತಾ ಕುಮಾರಿ ಪ್ರಕರಣದ ತೀರ್ಪನ್ನು ವಿವರಿಸಿದೆ.

ಲಲಿತಾ ಕುಮಾರಿ ಯಾರು?

ಲಲಿತಾ ಕುಮಾರಿ ಅಪ್ರಾಪ್ತ ವಯಸ್ಸಿನ ಒಬ್ಬಳು ಬಾಲಕಿಯಾಗಿದ್ದು, ಆಕೆಯನ್ನು ಅಪಹರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಆಕೆಯ ತಂದೆ ಭೋಲಾ ಕಮತ್ ಸುಪ್ರೀಂಕೋರ್ಟಿನಲ್ಲಿ ಹೇಬಿಯಸ್ ಕೋರ್ಪಸ್ ಅರ್ಜಿ ಸಲ್ಲಿಸಿದ್ದರು. ತಾನು ಸಂಬಂಧಪಟ್ಟ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ವಿವರವಾದ ವರದಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ಆರೋಪಿಸಿದ್ದರು. ವಿಷಯ ಪೊಲೀಸ್ ಸುಪರಿಂಟೆಂಟ್‌ಗೆ ತಲುಪಿದ ಬಳಿಕವಷ್ಟೇ ಎಫ್ಐಆರ್ ದಾಖಲಿಸಲಾಗಿತ್ತು.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ದೇಶದ ಉದ್ದಗಲಕ್ಕೂ ಪ್ರಕರಣದಿಂದ ಪ್ರಕರಣಕ್ಕೆ ಎಫ್ಐಆರ್ ನೋಂದಣಿಯಲ್ಲಿ ವ್ಯತ್ಯಯವಿರುವುದನ್ನು ಗಮನಿಸಿತು. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ನೋಟೀಸು ಜಾರಿ ಮಾಡಿತು. ಕ್ರಿಮಿನಲ್ ಪ್ರೊಸಿಜರ್ ಕೋಡ್ (ಸಿಆರ್‌ಪಿಸಿ)ನ ವಿಧಿ 154ರ ಅನ್ವಯ ಗಂಭೀರ (ಗುರುತರ) ದಂಡನಾರ್ಹ ಅಪರಾಧವೊಂದು (cognisable offence) ಘಟಿಸಿರುವ ಕುರಿತು ಮಾಹಿತಿ ಸಿಕ್ಕಿದ ತಕ್ಷಣ ಪೊಲೀಸ್ ಅಧಿಕಾರಿಗಳು ಎಫ್ಐಆರ್ ದಾಖಲಿಸುವುದಕ್ಕೆ ಬದ್ಧರೇ ಎಂಬ ಕುರಿತು ವಿವಿಧ ನ್ಯಾಯಾಲಯಗಳು ತದ್ವಿರುದ್ಧವಾದ ತೀರ್ಪುಗಳನ್ನು ನೀಡಿವುದನ್ನೂ ಮೂವರು ಸದಸ್ಯರ ಸಂವಿಧಾನ ಪೀಠ ಪರಿಶೀಲಿಸಿತು.

ಗಂಭೀರ ದಂಡನಾರ್ಹ ಅಪರಾಧವೆಂದರೆ, ಪೊಲೀಸರು ಯಾವುದೇ ವಾರಂಟ್ ಇಲ್ಲದೆಯೇ ವ್ಯಕ್ತಿಯನ್ನು ಬಂಧಿಸಬಹುದಾದ ಅಪರಾಧ. ಇವುಗಳಲ್ಲಿ ಕೊಲೆ, ಅತ್ಯಾಚಾರ, ವರದಕ್ಷಿಣೆ ಸಾವು, ಅಪಹರಣ ಇತ್ಯಾದಿಗಳು ಬರುತ್ತವೆ. ಗುರುತರವಾದ ಅಪರಾಧದ ಕುರಿತಾಗಿ ಪಡೆದ ಮಾಹಿತಿಯನ್ನು ಯಾವ ರೀತಿಯಲ್ಲಿ ಪರಿಗಣಿಸಬೇಕು ಎಂಬ ಕುರಿತು ಸಿಆರ್‌ಪಿಸಿಯ ವಿಧಿ 154ರಲ್ಲಿ ವಿವರಿಸಲಾಗಿದೆ. ಎಫ್ಐಆರ್‌ನ ಕಡ್ಡಾಯ ನೋಂದಣಿಯ ಪ್ರಶ್ನೆಯನ್ನು ನಂತರ ಐವರು ನ್ಯಾಯಾಧೀಶರ ಪೀಠಕ್ಕೆ ಸಲ್ಲಿಸಲಾಗಿತ್ತು.

ಪೊಲೀಸ್ ಅಧಿಕಾರಿಗಳು ಕರ್ತವ್ಯದಿಂದ ನುಣುಚಿಕೊಳ್ಳುವಂತಿಲ್ಲ

ಲಲಿತಾ ಕುಮಾರಿ ಪ್ರಕರಣದಲ್ಲಿ ಪೊಲೀಸರು ಅನುಸರಿಸಬೇಕಾದ ಕ್ರಮಗಳ ಕುರಿತು ಸುಪ್ರೀಂಕೋರ್ಟ್ ಎಂಟು ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಿತ್ತು.

ಪಡೆದ ಮಾಹಿತಿಯು ಗುರುತರವಾದ ಅಪರಾಧ ಘಟಿಸಿರುವುದನ್ನು ಸೂಚಿಸುತ್ತಿದ್ದರೆ, ಸಿಆರ್‌ಪಿಸಿ ವಿಧಿ 154ರ ಅನ್ವಯ ಎಫ್ಐಆರ್ ದಾಖಲಿಸುವುದು ಕಡ್ಡಾಯ ಎಂದು ಪೀಠವು ತೀರ್ಪು ನೀಡಿತು. ಇಂತಹ ಸಂದರ್ಭದಲ್ಲಿ ಯಾವುದೇ ಪೂರ್ವಭಾವಿ ತನಿಖೆಗೆ ಅವಕಾಶವಿಲ್ಲ ಎಂದು ಅದು ಹೇಳಿತು.  “ಗುರುತರ ಅಪರಾಧ ಘಟಿಸಿರುವ ಮಾಹಿತಿಯನ್ನು ಬಹಿರಂಗಗೊಳಿಸಲಾದಾಗ ಪೊಲೀಸ್ ಅಧಿಕಾರಿಯು ತನ್ನ ಕರ್ತವ್ಯದಿಂದ ನುಣುಚಿಕೊಳ್ಳುವಂತಿಲ್ಲ. ಗುರುತರ ಅಪರಾಧ ಘಟಿಸಿರುವ ಮಾಹಿತಿಯನ್ನು ಪಡೆದ ತಕ್ಷಣ ಎಫ್‌ಐಆರ್ ದಾಖಲಿಸದೆ ಕರ್ತವ್ಯಚ್ಯುತಿ ಮಾಡಿದ ಅಧಿಕಾರಿಯ ವಿರುದ್ಧ ಕ್ರಮಕೈಗೊಳ್ಳಬೇಕು” ಎಂದು ತೀರ್ಪಿನಲ್ಲಿ ಹೇಳಲಾಗಿದೆ.

ಪೂರ್ವಭಾವಿ ತನಿಖೆ ನಡೆಸಬಹುದಾದಂತಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಅದು ವಾಸ್ತವಾಂಶಗಳು ಮತ್ತು ಸಂದರ್ಭಗಳ ಮೇಲೆ ಅವಲಂಬಿಸಿದೆ ಎಂದು ನ್ಯಾಯಾಲಯ ಹೇಳಿದೆ. ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಇಂತಹಾ ಪ್ರಕರಣಗಳ ಒಂದು ವಿವರವಾದ ಯಾದಿಯನ್ನೇ ನೀಡಿದೆ. ಅವುಗಳಲ್ಲಿ ದಾಂಪತ್ಯ/ ಕೌಟುಂಬಿಕ ಕಲಹಗಳು, ವಾಣಿಜ್ಯ ಅಪರಾಧಗಳು, ವೈದ್ಯಕೀಯ ನಿರ್ಲಕ್ಷ್ಯದ ಪ್ರಕರಣಗಳು, ಭ್ರಷ್ಟಾಚಾರದ ಪ್ರಕರಣಗಳು ಇತ್ಯಾದಿಗಳಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸುವ ಮೊದಲು ಪೂರ್ವಭಾವಿ ತನಿಖೆಯ ಅಗತ್ಯವಿದ್ದು, ಎಫ್‌ಐಆರ್ ದಾಖಲೆಯಲ್ಲಿ ವಿಳಂಬವಾಗಬಹುದು.

ಯಾವುದೇ ಪ್ರಕರಣದಲ್ಲಿ ಏಳು ದಿನಗಳ ಒಳಗಾಗಿ ತನಿಖೆಯನ್ನು ಆರಂಭಿಸಬೇಕು ಎಂದು ಕೂಡಾ ಸುಪ್ರೀಂಕೋರ್ಟ್ ಆದೇಶಿಸಿತ್ತು. 2014ರ ಮಾರ್ಚ್ ತಿಂಗಳಲ್ಲಿ ಇದನ್ನು ಬದಲಿಸಿ ಸಾಮಾನ್ಯ ಪ್ರಕರಣಗಳಲ್ಲಿ ಸಮಯದ ಮಿತಿಯನ್ನು 15 ದಿನಗಳಿಗೆ ಮತ್ತು ಅಸಾಧಾರಣ ಪ್ರಕರಣಗಳಲ್ಲಿ ಆರು ವಾರಗಳಿಗೆ ವಿಸ್ತರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...