Homeಮುಖಪುಟಲಲಿತಾ ಕುಮಾರಿ ಪ್ರಕರಣ ದಿಲ್ಲಿ ಪೊಲೀಸರಿಗೆ ಮಾದರಿಯಾಗಲಿ: ನ್ಯಾ. ಮುರಳೀಧರ್

ಲಲಿತಾ ಕುಮಾರಿ ಪ್ರಕರಣ ದಿಲ್ಲಿ ಪೊಲೀಸರಿಗೆ ಮಾದರಿಯಾಗಲಿ: ನ್ಯಾ. ಮುರಳೀಧರ್

ದಿಲ್ಲಿ ಪೊಲೀಸರು ಲಲಿತಾ ಕುಮಾರಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಿಂದ ಕಲಿಯಬೇಕು ಮತ್ತು ಕಾನೂನು ಹೇಗೆ ಹೇಳುತ್ತದೆಯೋ ತಪ್ಪದೇ ಅದಕ್ಕನುಗುಣವಾಗಿ ಕೆಲಸ ಮಾಡಬೇಕು ಎಂದು ನ್ಯಾಯಮೂರ್ತಿ ಮುರಳೀಧರ್ ಹೇಳಿದ್ದಾರೆ.

- Advertisement -
- Advertisement -

-ಅಪರ್ಣಾ ಮಂಧಾನಿ

ಅನುವಾದ: ನಿಖಿಲ್ ಕೋಲ್ಪೆ

ದಿಲ್ಲಿ ಹೈಕೋರ್ಟ್ ಇತ್ತೀಚೆಗೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ನ್ಯಾ. ಮುರಳೀಧರ್ ಅವರ ನಡುವಿನ ಆಕರ್ಣೀಯ ಸಂಭಾಷಣೆಗೆ ಸಾಕ್ಷಿಯಾಯಿತು.

ದಿಲ್ಲಿ ಹೈಕೋರ್ಟ್ ಈಶಾನ್ಯ ದಿಲ್ಲಿಯಲ್ಲಿ ಫೆಬ್ರವರಿ 23,24,25ರಂದು ನಡೆದ ಯೋಜಿತ ಗಲಭೆಗಳ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ)ದಿಂದ ತನಿಖೆ ನಡೆಯಬೇಕು ಮತ್ತು ಬಿಜೆಪಿ ನಾಯಕರಾದ ಪರ್ವೇಶ್ ವರ್ಮಾ, ಅನುರಾಗ್ ಠಾಕೂರ್, ಕಪಿಲ್ ಮಿಶ್ರಾ ಮುಂತಾದವರ ಮೇಲೆ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ಎಫ್ಐಆರ್ ದಾಖಲಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಹರೀಶ್ ಮಂದರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ಹೈಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿತ್ತು.

ವಿಚಾರಣೆಯ ವೇಳೆ ಅಧಿಕಾರಿಗಳ ಮೇಲೆ ಕಟುವಾಗಿ ದಾಳಿ ನಡೆಸಿದ ನ್ಯಾ. ಮುರಳೀಧರ್, “ತನಿಖೆಯು ಲಲಿತಾ ಕುಮಾರಿ ವಿರುದ್ಧ  ಉತ್ತರ ಪ್ರದೇಶ ಸರಕಾರ ಪ್ರಕರಣದಲ್ಲಿ ಸುಪ್ರೀಂಕೋರ್ಟಿನ ಸಂವಿಧಾನ ಪೀಠವು ನೀಡಿರುವ ತೀರ್ಪಿನಿಂದ ನಿರ್ದೇಶಿತವಾಗಬೇಕು ಮತ್ತು ಪೊಲೀಸರು ಕಾನೂನಿನಲ್ಲಿ ಹೇಳಿರುವಂತೆಯೇ ಕೆಲಸ ಮಾಡಬೇಕು” ಎಂದು ಹೇಳಿದರು.

ಪ್ರಕರಣವು ಹೈಕೋರ್ಟಿನ ಇನ್ನೊಂದು ಪೀಠದಲ್ಲಿ ವಿಚಾರಣೆಗೆ ಬಂದಾಗಲೂ ಹರೀಶ್ ಮಂದರ್ ಪರ ವಾದಿಸಿದ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವಿಸ್ ಅವರು ತನ್ನ ವಾದದಲ್ಲಿ 2013ರ ಲಲಿತಾ ಕುಮಾರಿ ಪ್ರಕರಣವನ್ನು ಬಹುವಾಗಿ ಅವಲಂಬಿಸಿದರು. ಈ ಪ್ರಕರಣವು ಎಪ್ರಿಲ್‌ನಲ್ಲಿ ಮತ್ತೆ ವಿಚಾರಣೆಗೆ ಬರಲಿರುವ ಹಿನ್ನೆಲೆಯಲ್ಲಿ ‘ದಿ ಪ್ರಿಂಟ್’ ಲಲಿತಾ ಕುಮಾರಿ ಪ್ರಕರಣದ ತೀರ್ಪನ್ನು ವಿವರಿಸಿದೆ.

ಲಲಿತಾ ಕುಮಾರಿ ಯಾರು?

ಲಲಿತಾ ಕುಮಾರಿ ಅಪ್ರಾಪ್ತ ವಯಸ್ಸಿನ ಒಬ್ಬಳು ಬಾಲಕಿಯಾಗಿದ್ದು, ಆಕೆಯನ್ನು ಅಪಹರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಆಕೆಯ ತಂದೆ ಭೋಲಾ ಕಮತ್ ಸುಪ್ರೀಂಕೋರ್ಟಿನಲ್ಲಿ ಹೇಬಿಯಸ್ ಕೋರ್ಪಸ್ ಅರ್ಜಿ ಸಲ್ಲಿಸಿದ್ದರು. ತಾನು ಸಂಬಂಧಪಟ್ಟ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ವಿವರವಾದ ವರದಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ಆರೋಪಿಸಿದ್ದರು. ವಿಷಯ ಪೊಲೀಸ್ ಸುಪರಿಂಟೆಂಟ್‌ಗೆ ತಲುಪಿದ ಬಳಿಕವಷ್ಟೇ ಎಫ್ಐಆರ್ ದಾಖಲಿಸಲಾಗಿತ್ತು.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ದೇಶದ ಉದ್ದಗಲಕ್ಕೂ ಪ್ರಕರಣದಿಂದ ಪ್ರಕರಣಕ್ಕೆ ಎಫ್ಐಆರ್ ನೋಂದಣಿಯಲ್ಲಿ ವ್ಯತ್ಯಯವಿರುವುದನ್ನು ಗಮನಿಸಿತು. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ನೋಟೀಸು ಜಾರಿ ಮಾಡಿತು. ಕ್ರಿಮಿನಲ್ ಪ್ರೊಸಿಜರ್ ಕೋಡ್ (ಸಿಆರ್‌ಪಿಸಿ)ನ ವಿಧಿ 154ರ ಅನ್ವಯ ಗಂಭೀರ (ಗುರುತರ) ದಂಡನಾರ್ಹ ಅಪರಾಧವೊಂದು (cognisable offence) ಘಟಿಸಿರುವ ಕುರಿತು ಮಾಹಿತಿ ಸಿಕ್ಕಿದ ತಕ್ಷಣ ಪೊಲೀಸ್ ಅಧಿಕಾರಿಗಳು ಎಫ್ಐಆರ್ ದಾಖಲಿಸುವುದಕ್ಕೆ ಬದ್ಧರೇ ಎಂಬ ಕುರಿತು ವಿವಿಧ ನ್ಯಾಯಾಲಯಗಳು ತದ್ವಿರುದ್ಧವಾದ ತೀರ್ಪುಗಳನ್ನು ನೀಡಿವುದನ್ನೂ ಮೂವರು ಸದಸ್ಯರ ಸಂವಿಧಾನ ಪೀಠ ಪರಿಶೀಲಿಸಿತು.

ಗಂಭೀರ ದಂಡನಾರ್ಹ ಅಪರಾಧವೆಂದರೆ, ಪೊಲೀಸರು ಯಾವುದೇ ವಾರಂಟ್ ಇಲ್ಲದೆಯೇ ವ್ಯಕ್ತಿಯನ್ನು ಬಂಧಿಸಬಹುದಾದ ಅಪರಾಧ. ಇವುಗಳಲ್ಲಿ ಕೊಲೆ, ಅತ್ಯಾಚಾರ, ವರದಕ್ಷಿಣೆ ಸಾವು, ಅಪಹರಣ ಇತ್ಯಾದಿಗಳು ಬರುತ್ತವೆ. ಗುರುತರವಾದ ಅಪರಾಧದ ಕುರಿತಾಗಿ ಪಡೆದ ಮಾಹಿತಿಯನ್ನು ಯಾವ ರೀತಿಯಲ್ಲಿ ಪರಿಗಣಿಸಬೇಕು ಎಂಬ ಕುರಿತು ಸಿಆರ್‌ಪಿಸಿಯ ವಿಧಿ 154ರಲ್ಲಿ ವಿವರಿಸಲಾಗಿದೆ. ಎಫ್ಐಆರ್‌ನ ಕಡ್ಡಾಯ ನೋಂದಣಿಯ ಪ್ರಶ್ನೆಯನ್ನು ನಂತರ ಐವರು ನ್ಯಾಯಾಧೀಶರ ಪೀಠಕ್ಕೆ ಸಲ್ಲಿಸಲಾಗಿತ್ತು.

ಪೊಲೀಸ್ ಅಧಿಕಾರಿಗಳು ಕರ್ತವ್ಯದಿಂದ ನುಣುಚಿಕೊಳ್ಳುವಂತಿಲ್ಲ

ಲಲಿತಾ ಕುಮಾರಿ ಪ್ರಕರಣದಲ್ಲಿ ಪೊಲೀಸರು ಅನುಸರಿಸಬೇಕಾದ ಕ್ರಮಗಳ ಕುರಿತು ಸುಪ್ರೀಂಕೋರ್ಟ್ ಎಂಟು ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಿತ್ತು.

ಪಡೆದ ಮಾಹಿತಿಯು ಗುರುತರವಾದ ಅಪರಾಧ ಘಟಿಸಿರುವುದನ್ನು ಸೂಚಿಸುತ್ತಿದ್ದರೆ, ಸಿಆರ್‌ಪಿಸಿ ವಿಧಿ 154ರ ಅನ್ವಯ ಎಫ್ಐಆರ್ ದಾಖಲಿಸುವುದು ಕಡ್ಡಾಯ ಎಂದು ಪೀಠವು ತೀರ್ಪು ನೀಡಿತು. ಇಂತಹ ಸಂದರ್ಭದಲ್ಲಿ ಯಾವುದೇ ಪೂರ್ವಭಾವಿ ತನಿಖೆಗೆ ಅವಕಾಶವಿಲ್ಲ ಎಂದು ಅದು ಹೇಳಿತು.  “ಗುರುತರ ಅಪರಾಧ ಘಟಿಸಿರುವ ಮಾಹಿತಿಯನ್ನು ಬಹಿರಂಗಗೊಳಿಸಲಾದಾಗ ಪೊಲೀಸ್ ಅಧಿಕಾರಿಯು ತನ್ನ ಕರ್ತವ್ಯದಿಂದ ನುಣುಚಿಕೊಳ್ಳುವಂತಿಲ್ಲ. ಗುರುತರ ಅಪರಾಧ ಘಟಿಸಿರುವ ಮಾಹಿತಿಯನ್ನು ಪಡೆದ ತಕ್ಷಣ ಎಫ್‌ಐಆರ್ ದಾಖಲಿಸದೆ ಕರ್ತವ್ಯಚ್ಯುತಿ ಮಾಡಿದ ಅಧಿಕಾರಿಯ ವಿರುದ್ಧ ಕ್ರಮಕೈಗೊಳ್ಳಬೇಕು” ಎಂದು ತೀರ್ಪಿನಲ್ಲಿ ಹೇಳಲಾಗಿದೆ.

ಪೂರ್ವಭಾವಿ ತನಿಖೆ ನಡೆಸಬಹುದಾದಂತಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಅದು ವಾಸ್ತವಾಂಶಗಳು ಮತ್ತು ಸಂದರ್ಭಗಳ ಮೇಲೆ ಅವಲಂಬಿಸಿದೆ ಎಂದು ನ್ಯಾಯಾಲಯ ಹೇಳಿದೆ. ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಇಂತಹಾ ಪ್ರಕರಣಗಳ ಒಂದು ವಿವರವಾದ ಯಾದಿಯನ್ನೇ ನೀಡಿದೆ. ಅವುಗಳಲ್ಲಿ ದಾಂಪತ್ಯ/ ಕೌಟುಂಬಿಕ ಕಲಹಗಳು, ವಾಣಿಜ್ಯ ಅಪರಾಧಗಳು, ವೈದ್ಯಕೀಯ ನಿರ್ಲಕ್ಷ್ಯದ ಪ್ರಕರಣಗಳು, ಭ್ರಷ್ಟಾಚಾರದ ಪ್ರಕರಣಗಳು ಇತ್ಯಾದಿಗಳಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸುವ ಮೊದಲು ಪೂರ್ವಭಾವಿ ತನಿಖೆಯ ಅಗತ್ಯವಿದ್ದು, ಎಫ್‌ಐಆರ್ ದಾಖಲೆಯಲ್ಲಿ ವಿಳಂಬವಾಗಬಹುದು.

ಯಾವುದೇ ಪ್ರಕರಣದಲ್ಲಿ ಏಳು ದಿನಗಳ ಒಳಗಾಗಿ ತನಿಖೆಯನ್ನು ಆರಂಭಿಸಬೇಕು ಎಂದು ಕೂಡಾ ಸುಪ್ರೀಂಕೋರ್ಟ್ ಆದೇಶಿಸಿತ್ತು. 2014ರ ಮಾರ್ಚ್ ತಿಂಗಳಲ್ಲಿ ಇದನ್ನು ಬದಲಿಸಿ ಸಾಮಾನ್ಯ ಪ್ರಕರಣಗಳಲ್ಲಿ ಸಮಯದ ಮಿತಿಯನ್ನು 15 ದಿನಗಳಿಗೆ ಮತ್ತು ಅಸಾಧಾರಣ ಪ್ರಕರಣಗಳಲ್ಲಿ ಆರು ವಾರಗಳಿಗೆ ವಿಸ್ತರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...