Homeಮುಖಪುಟಲಲಿತಾ ಕುಮಾರಿ ಪ್ರಕರಣ ದಿಲ್ಲಿ ಪೊಲೀಸರಿಗೆ ಮಾದರಿಯಾಗಲಿ: ನ್ಯಾ. ಮುರಳೀಧರ್

ಲಲಿತಾ ಕುಮಾರಿ ಪ್ರಕರಣ ದಿಲ್ಲಿ ಪೊಲೀಸರಿಗೆ ಮಾದರಿಯಾಗಲಿ: ನ್ಯಾ. ಮುರಳೀಧರ್

ದಿಲ್ಲಿ ಪೊಲೀಸರು ಲಲಿತಾ ಕುಮಾರಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಿಂದ ಕಲಿಯಬೇಕು ಮತ್ತು ಕಾನೂನು ಹೇಗೆ ಹೇಳುತ್ತದೆಯೋ ತಪ್ಪದೇ ಅದಕ್ಕನುಗುಣವಾಗಿ ಕೆಲಸ ಮಾಡಬೇಕು ಎಂದು ನ್ಯಾಯಮೂರ್ತಿ ಮುರಳೀಧರ್ ಹೇಳಿದ್ದಾರೆ.

- Advertisement -
- Advertisement -

-ಅಪರ್ಣಾ ಮಂಧಾನಿ

ಅನುವಾದ: ನಿಖಿಲ್ ಕೋಲ್ಪೆ

ದಿಲ್ಲಿ ಹೈಕೋರ್ಟ್ ಇತ್ತೀಚೆಗೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ನ್ಯಾ. ಮುರಳೀಧರ್ ಅವರ ನಡುವಿನ ಆಕರ್ಣೀಯ ಸಂಭಾಷಣೆಗೆ ಸಾಕ್ಷಿಯಾಯಿತು.

ದಿಲ್ಲಿ ಹೈಕೋರ್ಟ್ ಈಶಾನ್ಯ ದಿಲ್ಲಿಯಲ್ಲಿ ಫೆಬ್ರವರಿ 23,24,25ರಂದು ನಡೆದ ಯೋಜಿತ ಗಲಭೆಗಳ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ)ದಿಂದ ತನಿಖೆ ನಡೆಯಬೇಕು ಮತ್ತು ಬಿಜೆಪಿ ನಾಯಕರಾದ ಪರ್ವೇಶ್ ವರ್ಮಾ, ಅನುರಾಗ್ ಠಾಕೂರ್, ಕಪಿಲ್ ಮಿಶ್ರಾ ಮುಂತಾದವರ ಮೇಲೆ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ಎಫ್ಐಆರ್ ದಾಖಲಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಹರೀಶ್ ಮಂದರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ಹೈಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿತ್ತು.

ವಿಚಾರಣೆಯ ವೇಳೆ ಅಧಿಕಾರಿಗಳ ಮೇಲೆ ಕಟುವಾಗಿ ದಾಳಿ ನಡೆಸಿದ ನ್ಯಾ. ಮುರಳೀಧರ್, “ತನಿಖೆಯು ಲಲಿತಾ ಕುಮಾರಿ ವಿರುದ್ಧ  ಉತ್ತರ ಪ್ರದೇಶ ಸರಕಾರ ಪ್ರಕರಣದಲ್ಲಿ ಸುಪ್ರೀಂಕೋರ್ಟಿನ ಸಂವಿಧಾನ ಪೀಠವು ನೀಡಿರುವ ತೀರ್ಪಿನಿಂದ ನಿರ್ದೇಶಿತವಾಗಬೇಕು ಮತ್ತು ಪೊಲೀಸರು ಕಾನೂನಿನಲ್ಲಿ ಹೇಳಿರುವಂತೆಯೇ ಕೆಲಸ ಮಾಡಬೇಕು” ಎಂದು ಹೇಳಿದರು.

ಪ್ರಕರಣವು ಹೈಕೋರ್ಟಿನ ಇನ್ನೊಂದು ಪೀಠದಲ್ಲಿ ವಿಚಾರಣೆಗೆ ಬಂದಾಗಲೂ ಹರೀಶ್ ಮಂದರ್ ಪರ ವಾದಿಸಿದ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವಿಸ್ ಅವರು ತನ್ನ ವಾದದಲ್ಲಿ 2013ರ ಲಲಿತಾ ಕುಮಾರಿ ಪ್ರಕರಣವನ್ನು ಬಹುವಾಗಿ ಅವಲಂಬಿಸಿದರು. ಈ ಪ್ರಕರಣವು ಎಪ್ರಿಲ್‌ನಲ್ಲಿ ಮತ್ತೆ ವಿಚಾರಣೆಗೆ ಬರಲಿರುವ ಹಿನ್ನೆಲೆಯಲ್ಲಿ ‘ದಿ ಪ್ರಿಂಟ್’ ಲಲಿತಾ ಕುಮಾರಿ ಪ್ರಕರಣದ ತೀರ್ಪನ್ನು ವಿವರಿಸಿದೆ.

ಲಲಿತಾ ಕುಮಾರಿ ಯಾರು?

ಲಲಿತಾ ಕುಮಾರಿ ಅಪ್ರಾಪ್ತ ವಯಸ್ಸಿನ ಒಬ್ಬಳು ಬಾಲಕಿಯಾಗಿದ್ದು, ಆಕೆಯನ್ನು ಅಪಹರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಆಕೆಯ ತಂದೆ ಭೋಲಾ ಕಮತ್ ಸುಪ್ರೀಂಕೋರ್ಟಿನಲ್ಲಿ ಹೇಬಿಯಸ್ ಕೋರ್ಪಸ್ ಅರ್ಜಿ ಸಲ್ಲಿಸಿದ್ದರು. ತಾನು ಸಂಬಂಧಪಟ್ಟ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ವಿವರವಾದ ವರದಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ಆರೋಪಿಸಿದ್ದರು. ವಿಷಯ ಪೊಲೀಸ್ ಸುಪರಿಂಟೆಂಟ್‌ಗೆ ತಲುಪಿದ ಬಳಿಕವಷ್ಟೇ ಎಫ್ಐಆರ್ ದಾಖಲಿಸಲಾಗಿತ್ತು.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ದೇಶದ ಉದ್ದಗಲಕ್ಕೂ ಪ್ರಕರಣದಿಂದ ಪ್ರಕರಣಕ್ಕೆ ಎಫ್ಐಆರ್ ನೋಂದಣಿಯಲ್ಲಿ ವ್ಯತ್ಯಯವಿರುವುದನ್ನು ಗಮನಿಸಿತು. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ನೋಟೀಸು ಜಾರಿ ಮಾಡಿತು. ಕ್ರಿಮಿನಲ್ ಪ್ರೊಸಿಜರ್ ಕೋಡ್ (ಸಿಆರ್‌ಪಿಸಿ)ನ ವಿಧಿ 154ರ ಅನ್ವಯ ಗಂಭೀರ (ಗುರುತರ) ದಂಡನಾರ್ಹ ಅಪರಾಧವೊಂದು (cognisable offence) ಘಟಿಸಿರುವ ಕುರಿತು ಮಾಹಿತಿ ಸಿಕ್ಕಿದ ತಕ್ಷಣ ಪೊಲೀಸ್ ಅಧಿಕಾರಿಗಳು ಎಫ್ಐಆರ್ ದಾಖಲಿಸುವುದಕ್ಕೆ ಬದ್ಧರೇ ಎಂಬ ಕುರಿತು ವಿವಿಧ ನ್ಯಾಯಾಲಯಗಳು ತದ್ವಿರುದ್ಧವಾದ ತೀರ್ಪುಗಳನ್ನು ನೀಡಿವುದನ್ನೂ ಮೂವರು ಸದಸ್ಯರ ಸಂವಿಧಾನ ಪೀಠ ಪರಿಶೀಲಿಸಿತು.

ಗಂಭೀರ ದಂಡನಾರ್ಹ ಅಪರಾಧವೆಂದರೆ, ಪೊಲೀಸರು ಯಾವುದೇ ವಾರಂಟ್ ಇಲ್ಲದೆಯೇ ವ್ಯಕ್ತಿಯನ್ನು ಬಂಧಿಸಬಹುದಾದ ಅಪರಾಧ. ಇವುಗಳಲ್ಲಿ ಕೊಲೆ, ಅತ್ಯಾಚಾರ, ವರದಕ್ಷಿಣೆ ಸಾವು, ಅಪಹರಣ ಇತ್ಯಾದಿಗಳು ಬರುತ್ತವೆ. ಗುರುತರವಾದ ಅಪರಾಧದ ಕುರಿತಾಗಿ ಪಡೆದ ಮಾಹಿತಿಯನ್ನು ಯಾವ ರೀತಿಯಲ್ಲಿ ಪರಿಗಣಿಸಬೇಕು ಎಂಬ ಕುರಿತು ಸಿಆರ್‌ಪಿಸಿಯ ವಿಧಿ 154ರಲ್ಲಿ ವಿವರಿಸಲಾಗಿದೆ. ಎಫ್ಐಆರ್‌ನ ಕಡ್ಡಾಯ ನೋಂದಣಿಯ ಪ್ರಶ್ನೆಯನ್ನು ನಂತರ ಐವರು ನ್ಯಾಯಾಧೀಶರ ಪೀಠಕ್ಕೆ ಸಲ್ಲಿಸಲಾಗಿತ್ತು.

ಪೊಲೀಸ್ ಅಧಿಕಾರಿಗಳು ಕರ್ತವ್ಯದಿಂದ ನುಣುಚಿಕೊಳ್ಳುವಂತಿಲ್ಲ

ಲಲಿತಾ ಕುಮಾರಿ ಪ್ರಕರಣದಲ್ಲಿ ಪೊಲೀಸರು ಅನುಸರಿಸಬೇಕಾದ ಕ್ರಮಗಳ ಕುರಿತು ಸುಪ್ರೀಂಕೋರ್ಟ್ ಎಂಟು ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಿತ್ತು.

ಪಡೆದ ಮಾಹಿತಿಯು ಗುರುತರವಾದ ಅಪರಾಧ ಘಟಿಸಿರುವುದನ್ನು ಸೂಚಿಸುತ್ತಿದ್ದರೆ, ಸಿಆರ್‌ಪಿಸಿ ವಿಧಿ 154ರ ಅನ್ವಯ ಎಫ್ಐಆರ್ ದಾಖಲಿಸುವುದು ಕಡ್ಡಾಯ ಎಂದು ಪೀಠವು ತೀರ್ಪು ನೀಡಿತು. ಇಂತಹ ಸಂದರ್ಭದಲ್ಲಿ ಯಾವುದೇ ಪೂರ್ವಭಾವಿ ತನಿಖೆಗೆ ಅವಕಾಶವಿಲ್ಲ ಎಂದು ಅದು ಹೇಳಿತು.  “ಗುರುತರ ಅಪರಾಧ ಘಟಿಸಿರುವ ಮಾಹಿತಿಯನ್ನು ಬಹಿರಂಗಗೊಳಿಸಲಾದಾಗ ಪೊಲೀಸ್ ಅಧಿಕಾರಿಯು ತನ್ನ ಕರ್ತವ್ಯದಿಂದ ನುಣುಚಿಕೊಳ್ಳುವಂತಿಲ್ಲ. ಗುರುತರ ಅಪರಾಧ ಘಟಿಸಿರುವ ಮಾಹಿತಿಯನ್ನು ಪಡೆದ ತಕ್ಷಣ ಎಫ್‌ಐಆರ್ ದಾಖಲಿಸದೆ ಕರ್ತವ್ಯಚ್ಯುತಿ ಮಾಡಿದ ಅಧಿಕಾರಿಯ ವಿರುದ್ಧ ಕ್ರಮಕೈಗೊಳ್ಳಬೇಕು” ಎಂದು ತೀರ್ಪಿನಲ್ಲಿ ಹೇಳಲಾಗಿದೆ.

ಪೂರ್ವಭಾವಿ ತನಿಖೆ ನಡೆಸಬಹುದಾದಂತಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಅದು ವಾಸ್ತವಾಂಶಗಳು ಮತ್ತು ಸಂದರ್ಭಗಳ ಮೇಲೆ ಅವಲಂಬಿಸಿದೆ ಎಂದು ನ್ಯಾಯಾಲಯ ಹೇಳಿದೆ. ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಇಂತಹಾ ಪ್ರಕರಣಗಳ ಒಂದು ವಿವರವಾದ ಯಾದಿಯನ್ನೇ ನೀಡಿದೆ. ಅವುಗಳಲ್ಲಿ ದಾಂಪತ್ಯ/ ಕೌಟುಂಬಿಕ ಕಲಹಗಳು, ವಾಣಿಜ್ಯ ಅಪರಾಧಗಳು, ವೈದ್ಯಕೀಯ ನಿರ್ಲಕ್ಷ್ಯದ ಪ್ರಕರಣಗಳು, ಭ್ರಷ್ಟಾಚಾರದ ಪ್ರಕರಣಗಳು ಇತ್ಯಾದಿಗಳಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸುವ ಮೊದಲು ಪೂರ್ವಭಾವಿ ತನಿಖೆಯ ಅಗತ್ಯವಿದ್ದು, ಎಫ್‌ಐಆರ್ ದಾಖಲೆಯಲ್ಲಿ ವಿಳಂಬವಾಗಬಹುದು.

ಯಾವುದೇ ಪ್ರಕರಣದಲ್ಲಿ ಏಳು ದಿನಗಳ ಒಳಗಾಗಿ ತನಿಖೆಯನ್ನು ಆರಂಭಿಸಬೇಕು ಎಂದು ಕೂಡಾ ಸುಪ್ರೀಂಕೋರ್ಟ್ ಆದೇಶಿಸಿತ್ತು. 2014ರ ಮಾರ್ಚ್ ತಿಂಗಳಲ್ಲಿ ಇದನ್ನು ಬದಲಿಸಿ ಸಾಮಾನ್ಯ ಪ್ರಕರಣಗಳಲ್ಲಿ ಸಮಯದ ಮಿತಿಯನ್ನು 15 ದಿನಗಳಿಗೆ ಮತ್ತು ಅಸಾಧಾರಣ ಪ್ರಕರಣಗಳಲ್ಲಿ ಆರು ವಾರಗಳಿಗೆ ವಿಸ್ತರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...