Homeಮುಖಪುಟಲಲಿತಾ ಕುಮಾರಿ ಪ್ರಕರಣ ದಿಲ್ಲಿ ಪೊಲೀಸರಿಗೆ ಮಾದರಿಯಾಗಲಿ: ನ್ಯಾ. ಮುರಳೀಧರ್

ಲಲಿತಾ ಕುಮಾರಿ ಪ್ರಕರಣ ದಿಲ್ಲಿ ಪೊಲೀಸರಿಗೆ ಮಾದರಿಯಾಗಲಿ: ನ್ಯಾ. ಮುರಳೀಧರ್

ದಿಲ್ಲಿ ಪೊಲೀಸರು ಲಲಿತಾ ಕುಮಾರಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಿಂದ ಕಲಿಯಬೇಕು ಮತ್ತು ಕಾನೂನು ಹೇಗೆ ಹೇಳುತ್ತದೆಯೋ ತಪ್ಪದೇ ಅದಕ್ಕನುಗುಣವಾಗಿ ಕೆಲಸ ಮಾಡಬೇಕು ಎಂದು ನ್ಯಾಯಮೂರ್ತಿ ಮುರಳೀಧರ್ ಹೇಳಿದ್ದಾರೆ.

- Advertisement -
- Advertisement -

-ಅಪರ್ಣಾ ಮಂಧಾನಿ

ಅನುವಾದ: ನಿಖಿಲ್ ಕೋಲ್ಪೆ

ದಿಲ್ಲಿ ಹೈಕೋರ್ಟ್ ಇತ್ತೀಚೆಗೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ನ್ಯಾ. ಮುರಳೀಧರ್ ಅವರ ನಡುವಿನ ಆಕರ್ಣೀಯ ಸಂಭಾಷಣೆಗೆ ಸಾಕ್ಷಿಯಾಯಿತು.

ದಿಲ್ಲಿ ಹೈಕೋರ್ಟ್ ಈಶಾನ್ಯ ದಿಲ್ಲಿಯಲ್ಲಿ ಫೆಬ್ರವರಿ 23,24,25ರಂದು ನಡೆದ ಯೋಜಿತ ಗಲಭೆಗಳ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ)ದಿಂದ ತನಿಖೆ ನಡೆಯಬೇಕು ಮತ್ತು ಬಿಜೆಪಿ ನಾಯಕರಾದ ಪರ್ವೇಶ್ ವರ್ಮಾ, ಅನುರಾಗ್ ಠಾಕೂರ್, ಕಪಿಲ್ ಮಿಶ್ರಾ ಮುಂತಾದವರ ಮೇಲೆ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ಎಫ್ಐಆರ್ ದಾಖಲಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಹರೀಶ್ ಮಂದರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ಹೈಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿತ್ತು.

ವಿಚಾರಣೆಯ ವೇಳೆ ಅಧಿಕಾರಿಗಳ ಮೇಲೆ ಕಟುವಾಗಿ ದಾಳಿ ನಡೆಸಿದ ನ್ಯಾ. ಮುರಳೀಧರ್, “ತನಿಖೆಯು ಲಲಿತಾ ಕುಮಾರಿ ವಿರುದ್ಧ  ಉತ್ತರ ಪ್ರದೇಶ ಸರಕಾರ ಪ್ರಕರಣದಲ್ಲಿ ಸುಪ್ರೀಂಕೋರ್ಟಿನ ಸಂವಿಧಾನ ಪೀಠವು ನೀಡಿರುವ ತೀರ್ಪಿನಿಂದ ನಿರ್ದೇಶಿತವಾಗಬೇಕು ಮತ್ತು ಪೊಲೀಸರು ಕಾನೂನಿನಲ್ಲಿ ಹೇಳಿರುವಂತೆಯೇ ಕೆಲಸ ಮಾಡಬೇಕು” ಎಂದು ಹೇಳಿದರು.

ಪ್ರಕರಣವು ಹೈಕೋರ್ಟಿನ ಇನ್ನೊಂದು ಪೀಠದಲ್ಲಿ ವಿಚಾರಣೆಗೆ ಬಂದಾಗಲೂ ಹರೀಶ್ ಮಂದರ್ ಪರ ವಾದಿಸಿದ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವಿಸ್ ಅವರು ತನ್ನ ವಾದದಲ್ಲಿ 2013ರ ಲಲಿತಾ ಕುಮಾರಿ ಪ್ರಕರಣವನ್ನು ಬಹುವಾಗಿ ಅವಲಂಬಿಸಿದರು. ಈ ಪ್ರಕರಣವು ಎಪ್ರಿಲ್‌ನಲ್ಲಿ ಮತ್ತೆ ವಿಚಾರಣೆಗೆ ಬರಲಿರುವ ಹಿನ್ನೆಲೆಯಲ್ಲಿ ‘ದಿ ಪ್ರಿಂಟ್’ ಲಲಿತಾ ಕುಮಾರಿ ಪ್ರಕರಣದ ತೀರ್ಪನ್ನು ವಿವರಿಸಿದೆ.

ಲಲಿತಾ ಕುಮಾರಿ ಯಾರು?

ಲಲಿತಾ ಕುಮಾರಿ ಅಪ್ರಾಪ್ತ ವಯಸ್ಸಿನ ಒಬ್ಬಳು ಬಾಲಕಿಯಾಗಿದ್ದು, ಆಕೆಯನ್ನು ಅಪಹರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಆಕೆಯ ತಂದೆ ಭೋಲಾ ಕಮತ್ ಸುಪ್ರೀಂಕೋರ್ಟಿನಲ್ಲಿ ಹೇಬಿಯಸ್ ಕೋರ್ಪಸ್ ಅರ್ಜಿ ಸಲ್ಲಿಸಿದ್ದರು. ತಾನು ಸಂಬಂಧಪಟ್ಟ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ವಿವರವಾದ ವರದಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ಆರೋಪಿಸಿದ್ದರು. ವಿಷಯ ಪೊಲೀಸ್ ಸುಪರಿಂಟೆಂಟ್‌ಗೆ ತಲುಪಿದ ಬಳಿಕವಷ್ಟೇ ಎಫ್ಐಆರ್ ದಾಖಲಿಸಲಾಗಿತ್ತು.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ದೇಶದ ಉದ್ದಗಲಕ್ಕೂ ಪ್ರಕರಣದಿಂದ ಪ್ರಕರಣಕ್ಕೆ ಎಫ್ಐಆರ್ ನೋಂದಣಿಯಲ್ಲಿ ವ್ಯತ್ಯಯವಿರುವುದನ್ನು ಗಮನಿಸಿತು. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ನೋಟೀಸು ಜಾರಿ ಮಾಡಿತು. ಕ್ರಿಮಿನಲ್ ಪ್ರೊಸಿಜರ್ ಕೋಡ್ (ಸಿಆರ್‌ಪಿಸಿ)ನ ವಿಧಿ 154ರ ಅನ್ವಯ ಗಂಭೀರ (ಗುರುತರ) ದಂಡನಾರ್ಹ ಅಪರಾಧವೊಂದು (cognisable offence) ಘಟಿಸಿರುವ ಕುರಿತು ಮಾಹಿತಿ ಸಿಕ್ಕಿದ ತಕ್ಷಣ ಪೊಲೀಸ್ ಅಧಿಕಾರಿಗಳು ಎಫ್ಐಆರ್ ದಾಖಲಿಸುವುದಕ್ಕೆ ಬದ್ಧರೇ ಎಂಬ ಕುರಿತು ವಿವಿಧ ನ್ಯಾಯಾಲಯಗಳು ತದ್ವಿರುದ್ಧವಾದ ತೀರ್ಪುಗಳನ್ನು ನೀಡಿವುದನ್ನೂ ಮೂವರು ಸದಸ್ಯರ ಸಂವಿಧಾನ ಪೀಠ ಪರಿಶೀಲಿಸಿತು.

ಗಂಭೀರ ದಂಡನಾರ್ಹ ಅಪರಾಧವೆಂದರೆ, ಪೊಲೀಸರು ಯಾವುದೇ ವಾರಂಟ್ ಇಲ್ಲದೆಯೇ ವ್ಯಕ್ತಿಯನ್ನು ಬಂಧಿಸಬಹುದಾದ ಅಪರಾಧ. ಇವುಗಳಲ್ಲಿ ಕೊಲೆ, ಅತ್ಯಾಚಾರ, ವರದಕ್ಷಿಣೆ ಸಾವು, ಅಪಹರಣ ಇತ್ಯಾದಿಗಳು ಬರುತ್ತವೆ. ಗುರುತರವಾದ ಅಪರಾಧದ ಕುರಿತಾಗಿ ಪಡೆದ ಮಾಹಿತಿಯನ್ನು ಯಾವ ರೀತಿಯಲ್ಲಿ ಪರಿಗಣಿಸಬೇಕು ಎಂಬ ಕುರಿತು ಸಿಆರ್‌ಪಿಸಿಯ ವಿಧಿ 154ರಲ್ಲಿ ವಿವರಿಸಲಾಗಿದೆ. ಎಫ್ಐಆರ್‌ನ ಕಡ್ಡಾಯ ನೋಂದಣಿಯ ಪ್ರಶ್ನೆಯನ್ನು ನಂತರ ಐವರು ನ್ಯಾಯಾಧೀಶರ ಪೀಠಕ್ಕೆ ಸಲ್ಲಿಸಲಾಗಿತ್ತು.

ಪೊಲೀಸ್ ಅಧಿಕಾರಿಗಳು ಕರ್ತವ್ಯದಿಂದ ನುಣುಚಿಕೊಳ್ಳುವಂತಿಲ್ಲ

ಲಲಿತಾ ಕುಮಾರಿ ಪ್ರಕರಣದಲ್ಲಿ ಪೊಲೀಸರು ಅನುಸರಿಸಬೇಕಾದ ಕ್ರಮಗಳ ಕುರಿತು ಸುಪ್ರೀಂಕೋರ್ಟ್ ಎಂಟು ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಿತ್ತು.

ಪಡೆದ ಮಾಹಿತಿಯು ಗುರುತರವಾದ ಅಪರಾಧ ಘಟಿಸಿರುವುದನ್ನು ಸೂಚಿಸುತ್ತಿದ್ದರೆ, ಸಿಆರ್‌ಪಿಸಿ ವಿಧಿ 154ರ ಅನ್ವಯ ಎಫ್ಐಆರ್ ದಾಖಲಿಸುವುದು ಕಡ್ಡಾಯ ಎಂದು ಪೀಠವು ತೀರ್ಪು ನೀಡಿತು. ಇಂತಹ ಸಂದರ್ಭದಲ್ಲಿ ಯಾವುದೇ ಪೂರ್ವಭಾವಿ ತನಿಖೆಗೆ ಅವಕಾಶವಿಲ್ಲ ಎಂದು ಅದು ಹೇಳಿತು.  “ಗುರುತರ ಅಪರಾಧ ಘಟಿಸಿರುವ ಮಾಹಿತಿಯನ್ನು ಬಹಿರಂಗಗೊಳಿಸಲಾದಾಗ ಪೊಲೀಸ್ ಅಧಿಕಾರಿಯು ತನ್ನ ಕರ್ತವ್ಯದಿಂದ ನುಣುಚಿಕೊಳ್ಳುವಂತಿಲ್ಲ. ಗುರುತರ ಅಪರಾಧ ಘಟಿಸಿರುವ ಮಾಹಿತಿಯನ್ನು ಪಡೆದ ತಕ್ಷಣ ಎಫ್‌ಐಆರ್ ದಾಖಲಿಸದೆ ಕರ್ತವ್ಯಚ್ಯುತಿ ಮಾಡಿದ ಅಧಿಕಾರಿಯ ವಿರುದ್ಧ ಕ್ರಮಕೈಗೊಳ್ಳಬೇಕು” ಎಂದು ತೀರ್ಪಿನಲ್ಲಿ ಹೇಳಲಾಗಿದೆ.

ಪೂರ್ವಭಾವಿ ತನಿಖೆ ನಡೆಸಬಹುದಾದಂತಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಅದು ವಾಸ್ತವಾಂಶಗಳು ಮತ್ತು ಸಂದರ್ಭಗಳ ಮೇಲೆ ಅವಲಂಬಿಸಿದೆ ಎಂದು ನ್ಯಾಯಾಲಯ ಹೇಳಿದೆ. ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಇಂತಹಾ ಪ್ರಕರಣಗಳ ಒಂದು ವಿವರವಾದ ಯಾದಿಯನ್ನೇ ನೀಡಿದೆ. ಅವುಗಳಲ್ಲಿ ದಾಂಪತ್ಯ/ ಕೌಟುಂಬಿಕ ಕಲಹಗಳು, ವಾಣಿಜ್ಯ ಅಪರಾಧಗಳು, ವೈದ್ಯಕೀಯ ನಿರ್ಲಕ್ಷ್ಯದ ಪ್ರಕರಣಗಳು, ಭ್ರಷ್ಟಾಚಾರದ ಪ್ರಕರಣಗಳು ಇತ್ಯಾದಿಗಳಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸುವ ಮೊದಲು ಪೂರ್ವಭಾವಿ ತನಿಖೆಯ ಅಗತ್ಯವಿದ್ದು, ಎಫ್‌ಐಆರ್ ದಾಖಲೆಯಲ್ಲಿ ವಿಳಂಬವಾಗಬಹುದು.

ಯಾವುದೇ ಪ್ರಕರಣದಲ್ಲಿ ಏಳು ದಿನಗಳ ಒಳಗಾಗಿ ತನಿಖೆಯನ್ನು ಆರಂಭಿಸಬೇಕು ಎಂದು ಕೂಡಾ ಸುಪ್ರೀಂಕೋರ್ಟ್ ಆದೇಶಿಸಿತ್ತು. 2014ರ ಮಾರ್ಚ್ ತಿಂಗಳಲ್ಲಿ ಇದನ್ನು ಬದಲಿಸಿ ಸಾಮಾನ್ಯ ಪ್ರಕರಣಗಳಲ್ಲಿ ಸಮಯದ ಮಿತಿಯನ್ನು 15 ದಿನಗಳಿಗೆ ಮತ್ತು ಅಸಾಧಾರಣ ಪ್ರಕರಣಗಳಲ್ಲಿ ಆರು ವಾರಗಳಿಗೆ ವಿಸ್ತರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...