Homeಮುಖಪುಟಎನ್‌ಡಿಎ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿರುವ ಲಾಲು ಪ್ರಸಾದ್: ಸುಶೀಲ್ ಮೋದಿ ಆರೋಪ!

ಎನ್‌ಡಿಎ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿರುವ ಲಾಲು ಪ್ರಸಾದ್: ಸುಶೀಲ್ ಮೋದಿ ಆರೋಪ!

ಲಾಲು ಯಾದವ್ ಎನ್‌ಡಿಎ ಶಾಸಕರಿಗೆ ಕರೆ ಮಾಡಿ (8051216302) ಸಚಿವ ಸ್ಥಾನಗಳ ಭರವಸೆ ನೀಡುತ್ತಿದ್ದಾರೆ. ನಾನು ಈ ಸಂಖ್ಯೆಗೆ ಕರೆ ಮಾಡಿದಾಗ ಲಾಲು ನೇರವಾಗಿ ಕರೆ ಸ್ವೀಕರಿಸಿದರು ಎಂದು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಬಿಹಾರದ ನಿತಿಶ್‌ ಕುಮಾರ್ ನೇತೃತ್ವದ ಸರ್ಕಾರವನ್ನು ಉರುಳಿಸಿ ಮಹಾಘಟಬಂಧನ್ ಅನ್ನು ಅಧಿಕಾರಕ್ಕೆ ತರಲು ಲಾಲು ಪ್ರಸಾದ್ ಯಾದವ್ ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿಯ ಹಿರಿಯ ಮುಖಂಡ ಸುಶೀಲ್‌ ಕುಮಾರ್ ಮೊದಿ ಆರೋಪಿಸಿದ್ದಾರೆ.

ಈ ಕುರಿತು ಮೊಬೈಲ್ ಸಂಖ್ಯೆಯನ್ನು ಸೇರಿಸಿ ಟ್ವೀಟ್ ಮಾಡಿರುವ ಸುಶೀಲ್ ಮೋದಿ, “ಲಾಲು ಯಾದವ್ ಎನ್‌ಡಿಎ ಶಾಸಕರಿಗೆ ಕರೆ ಮಾಡಿ (8051216302) ಸಚಿವ ಸ್ಥಾನಗಳ ಭರವಸೆ ನೀಡುತ್ತಿದ್ದಾರೆ. ನಾನು ಈ ಸಂಖ್ಯೆಗೆ ಕರೆ ಮಾಡಿದಾಗ ಲಾಲು ನೇರವಾಗಿ ಕರೆ ಸ್ವೀಕರಿಸಿದರು. ಜೈಲಿನಲ್ಲಿದ್ದುಕೊಂಡು ಇಂತಹ ಕೊಳಕು ತಂತ್ರಗಳನ್ನ ಬಳಸಬೇಡಿ. ನೀವು ಯಶಸ್ವಿಯಾಗುವುದಿಲ್ಲ ಎಂದು ಹೇಳಿದ್ದೇನೆ” ಎಂಬುದಾಗಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಹಾರ: 19 ಲಕ್ಷ ಉದ್ಯೋಗ ನೀಡದಿದ್ದರೆ ರಾಜ್ಯದಾದ್ಯಂತ ತೀವ್ರ ಪ್ರತಿಭಟನೆ – ತೇಜಸ್ವಿ ಯಾದವ್ ಎಚ್ಚರಿಕೆ

 

ಇದನ್ನೂ ಓದಿ: ತೇಜಸ್ವಿ ಯಾದವ್ ಬಿಹಾರ ವಿರೋಧ ಪಕ್ಷದ ನಾಯಕನಾಗಬಾರದು: ಜೆಡಿಯು ಆಗ್ರಹ

1970 ರ ದಶಕದಿಂದ ಆರ್‌ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಪರಿಚಯ ಸುಶೀಲ್ ಮೋದಿಯವರಿಗಿದೆ. ಇಬ್ಬರೂ ವಿದ್ಯಾರ್ಥಿ ದೆಸೆಯಿಂದಲೇ ವಿದ್ಯಾರ್ಥಿ ನಾಯಕರಾಗಿ, ಜೆಪಿ ಚಳುವಳಿಯಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು.

ಲಾಲು ಪ್ರಸಾದ್ ಈಗ ರಾಂಚಿ ಜೈಲಿನಲ್ಲಿದ್ದಾರೆ. ಮೇವು ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ಸಿಬಿಐ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

ಇದನ್ನೂ ಓದಿ: ಮೂರೇ ದಿನದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಹಾರದ ಶಿಕ್ಷಣ ಸಚಿವ!

ಕೊರೊನಾ ಸಾಂಕ್ರಾಮಿಕ ರೋಗದ ನಂತರ ದೇಶದಲ್ಲಿ ನಡೆದ ಮೊದಲ ದೊಡ್ಡ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಗೆಲುವು ಉಂಟಾಗಿತ್ತು. ಇದಕ್ಕೆ ಪ್ರಭಲ ಪೈಪೋಟಿ ನೀಡಿದ್ದ ಮಹಾಘಟಬಂಧನ್ ಅಂಚಿನಲ್ಲಿ ಸೋತಿದೆ. ರಾಜ್ಯದ ಅತಿದೊಡ್ಡ ಪಕ್ಷವಾಗಿ ಆರ್‌ಜೆಡಿ ಹೊರಹೊಮ್ಮಿದೆ.

ಬಿಹಾರ ಚುನಾವಣೆಯಲ್ಲಿ ಆರ್‌ಜೆಡಿ ಪಕ್ಷವು 75 ಸ್ಥಾನಗಳನ್ನು ಗೆದ್ದುಕೊಂಡಿದೆ. ನಂತರದ ಸ್ಥಾನದಲ್ಲಿ ಬಿಜೆಪಿಯು 74 ಸ್ಥಾನಗಳನ್ನು ಗೆದ್ದುಕೊಂಡಿದೆ. ನಿತೀಶ್‌ ಕುಮಾರ್ ನೇತೃತ್ವದ ಜೆಡಿಯು ಪಕ್ಷವು ಕೇವಲ 43 ಸ್ಥಾನಗಳನ್ನು ಗೆದ್ದುಕೊಂಡಿದೆ. ಎನ್‌ಡಿಎ ಮೈತ್ರಿ ಪಕ್ಷವು 125 ಸ್ಥಾನಗಳನ್ನು ಗೆದ್ದುಕೊಂಡು ಸ್ಪಷ್ಟ ಬಹುಮತವನ್ನು ಪಡೆದುಕೊಂಡಿದೆ.


ಇದನ್ನೂ ಓದಿ: ಬಿಹಾರದ ಹಂಗಾಮಿ ಸ್ಪೀಕರ್‌ ಆಗಿ ಜಿತನ್ ರಾಮ್ ಮಾಂಜಿ ಪ್ರಮಾಣ ವಚನ- ಯಾರಿವರು ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...