Homeಮುಖಪುಟಹಿರಿಯ ಪುತ್ರ ತೇಜ್ ಪ್ರತಾಪ್‌ನನ್ನು ಪಕ್ಷ-ಕುಟುಂಬದಿಂದ ಹೊರಹಾಕಿದ ಲಾಲು ಯಾದವ್

ಹಿರಿಯ ಪುತ್ರ ತೇಜ್ ಪ್ರತಾಪ್‌ನನ್ನು ಪಕ್ಷ-ಕುಟುಂಬದಿಂದ ಹೊರಹಾಕಿದ ಲಾಲು ಯಾದವ್

- Advertisement -
- Advertisement -

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಸಂಸ್ಥಾಪಕ ಲಾಲು ಪ್ರಸಾದ್ ಯಾದವ್ ಭಾನುವಾರ ತಮ್ಮ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಹೊರಹಾಕಿದ್ದಾರೆ. ತೇಜ್ ಪ್ರತಾಪ್ ಯಾದವ್ ಅವರ ‘ಬೇಜವಾಬ್ದಾರಿಯುತ ನಡವಳಿಕೆ’ ಜತೆಗೆ, ಕುಟುಂಬದ ಮೌಲ್ಯಗಳು ಮತ್ತು ಸಾರ್ವಜನಿಕ ಸಭ್ಯತೆಯಿಂದ ವಿಚಲಿತರಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ತೇಜ್ ಪ್ರತಾಪ್ ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ ಒಂದು ದಿನದ ನಂತರ ಈ ಬೆಳವಣಿಗೆ ಸಂಭವಿಸಿದೆ. ಅನುಷ್ಕಾ ಯಾದವ್ ಅವರೊಂದಿಗಿನ ಅವರ ದೀರ್ಘಕಾಲದ ಸಂಬಂಧದ ಬಗ್ಗೆ ಮಾತನಾಡುತ್ತಾ, ಕಳೆದ 12 ವರ್ಷಗಳಿಂದ ನಾವು ಪ್ರೀತಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ. ಆದರೆ, ನಂತರ ಅವರ ಫೇಸ್‌ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ, ಅವರ ಮತ್ತು ಅವರ ಕುಟುಂಬದ ಹೆಸರು ಕೆಡಿಸಲು ಫೋಟೋಗಳನ್ನು ಎಡಿಟ್‌ ಮಾಡಲಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಸಾಮಾಜಿಕ ಮಾಧ್ಯಮ ಪೋಸ್ಟ್‌ ಕುರಿತು ವಿರೋಧ ವ್ಯಕ್ತಪಡಿಸಿರುವ ಬಿಹಾರ ಮಾಜಿ ಮುಖ್ಯಮಂತ್ರಿ ಯಾದವ್, ವೈಯಕ್ತಿಕ ಜೀವನದಲ್ಲಿ ನೈತಿಕ ಮೌಲ್ಯಗಳನ್ನು ನಿರ್ಲಕ್ಷಿಸುವುದು ಸಾಮಾಜಿಕ ನ್ಯಾಯಕ್ಕಾಗಿ ಪಕ್ಷದ ಸಾಮೂಹಿಕ ಹೋರಾಟವನ್ನು ದುರ್ಬಲಗೊಳಿಸುತ್ತದೆ. ತೇಜ್ ಪ್ರತಾಪ್ ಅವರ ನಡವಳಿಕೆ ಕುಟುಂಬ ಮೌಲ್ಯಗಳು ಅಥವಾ ಸಂಪ್ರದಾಯಗಳಿಗೆ ಅನುಗುಣವಾಗಿಲ್ಲ ಎಂದು ಹೇಳಿದರು.

“ವೈಯಕ್ತಿಕ ಜೀವನದಲ್ಲಿ ನೈತಿಕ ಮೌಲ್ಯಗಳನ್ನು ನಿರ್ಲಕ್ಷಿಸುವುದರಿಂದ ಸಾಮಾಜಿಕ ನ್ಯಾಯಕ್ಕಾಗಿ ನಮ್ಮ ಸಾಮೂಹಿಕ ಹೋರಾಟ ದುರ್ಬಲಗೊಳ್ಳುತ್ತದೆ. ಹಿರಿಯ ಮಗನ ಚಟುವಟಿಕೆಗಳು, ಸಾರ್ವಜನಿಕ ನಡವಳಿಕೆ ಮತ್ತು ಬೇಜವಾಬ್ದಾರಿಯುತ ನಡವಳಿಕೆಯು ನಮ್ಮ ಕುಟುಂಬ ಮೌಲ್ಯಗಳು, ಸಂಪ್ರದಾಯಗಳಿಗೆ ಅನುಗುಣವಾಗಿಲ್ಲ. ಆದ್ದರಿಂದ, ಮೇಲಿನ ಸಂದರ್ಭಗಳಿಂದಾಗಿ, ನಾನು ಅವರನ್ನು ಪಕ್ಷ ಮತ್ತು ಕುಟುಂಬದಿಂದ ಉಚ್ಛಾಟಿಸುತ್ತಿದ್ದೇನೆ. ಇನ್ನು ಮುಂದೆ, ಅವರಿಗೆ ಪಕ್ಷ ಮತ್ತು ಕುಟುಂಬದಲ್ಲಿ ಯಾವುದೇ ರೀತಿಯ ಪಾತ್ರವಿರುವುದಿಲ್ಲ. ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಹೊರಹಾಕಲಾಗಿದೆ” ಎಂದು ಲಾಲು ಯಾದವ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಒಳ್ಳೆಯದು ಮತ್ತು ಕೆಟ್ಟದ್ದನ್ನು, ಅವರ ವೈಯಕ್ತಿಕ ಜೀವನದ ಅರ್ಹತೆ ಮತ್ತು ದೋಷಗಳ ನಡುವೆ ವ್ಯತ್ಯಾಸವನ್ನು ಗುರುತಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಅವರೊಂದಿಗೆ ಸಂಬಂಧ ಹೊಂದಿರುವವರು ತಮ್ಮ ಸ್ವಂತ ವಿವೇಚನೆಯಿಂದ ನಿರ್ಧಾರ ತೆಗೆದುಕೊಳ್ಳಬೇಕು. ನಾನು ಯಾವಾಗಲೂ ಸಾರ್ವಜನಿಕ ಜೀವನದಲ್ಲಿ ಸಾರ್ವಜನಿಕ ಸಭ್ಯತೆಯ ಪ್ರತಿಪಾದಕನಾಗಿದ್ದೇನೆ. ಕುಟುಂಬದ ವಿಧೇಯ ಸದಸ್ಯರು ಸಾರ್ವಜನಿಕ ಜೀವನದಲ್ಲಿ ಈ ಕಲ್ಪನೆಯನ್ನು ಅಳವಡಿಸಿಕೊಂಡಿದ್ದಾರೆ, ಅನುಸರಿಸಿದ್ದಾರೆ. ಅವರಿಗೆ ಧನ್ಯವಾದಗಳು” ಎಂದು ಅವರು ಹೇಳಿದರು.

ಲಾಲು ಯಾದವ್ ಅವರ ಕಿರಿಯ ಮಗ ಮತ್ತು ತೇಜ್ ಪ್ರತಾಪ್ ಅವರ ಕಿರಿಯ ಸಹೋದರ ತೇಜಸ್ವಿ ಯಾದವ್ ಅವರು ಭಾನುವಾರ ಪಾಟ್ನಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಅಭಿವೃದ್ಧಿಯ ಕುರಿತು ತಮ್ಮ ಆಲೋಚನೆಗಳನ್ನು ಹಂಚಿಕೊಂಡರು. ಅವರ ಪ್ರಕಾರ, ಒಬ್ಬರು ತಮ್ಮ ರಾಜಕೀಯ ಮತ್ತು ವೈಯಕ್ತಿಕ ಜೀವನವನ್ನು ಪ್ರತ್ಯೇಕವಾಗಿ ಇಟ್ಟುಕೊಳ್ಳಬೇಕು ಎಂದು ಹೇಳಿದರು.

“ನನ್ನ ಮಟ್ಟಿಗೆ ಹೇಳುವುದಾದರೆ, ನಾನು ಇದನ್ನೆಲ್ಲಾ ಇಷ್ಟಪಡುವುದಿಲ್ಲ; ಸಹಿಸುವುದೂ ಇಲ್ಲ. ವೈಯಕ್ತಿಕ ಜೀವನವು ಪ್ರತ್ಯೇಕವಾಗಿರಬೇಕು. ಅವರು ಹಿರಿಯರು, ಅವರಿಗೆ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಕ್ಕಿದೆ. ಆದರೆ, ಲಾಲು ಜಿ ಟ್ವೀಟ್ ಮೂಲಕ ತಮ್ಮ ಆಲೋಚನೆಗಳನ್ನು ಸ್ಪಷ್ಟಪಡಿಸಿದ್ದಾರೆ. ಅವರು ಸರಿ ಎಂದು ಭಾವಿಸಿದ್ದನ್ನು ಮಾಡಿದರು. ಇದರ ಬಗ್ಗೆ ನನಗೆ ಮಾಧ್ಯಮಗಳ ಮೂಲಕ ಮಾತ್ರ ತಿಳಿದುಬಂದಿತು” ಎಂದು ತೇಜಸ್ವಿ ಯಾದವ್ ಹೇಳಿದರು.

ಈ ಮಧ್ಯೆ, ನಿತೀಶ್ ಕುಮಾರ್ ಅವರ ಜನತಾದಳ (ಯುನೈಟೆಡ್) ಲಾಲು ಪ್ರಸಾದ್ ಯಾದವ್ ಅವರನ್ನು ಟೀಕಿಸಿ, ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಆರ್‌ಜೆಡಿ ಪೋಷಕರಾದ ಯಾದವ್ ಅವರ ಈ ನಡೆಯನ್ನು ಕಣ್ಣೊರೆಸುವ ತಂತ್ರ ಎಂದು ಕರೆದಿದೆ.

“ಲಾಲು ಜಿ ದಾರಿ ತಪ್ಪಿಸುತ್ತಿದ್ದಾರೆ. ಲಾಲು ಕುಟುಂಬವು ಐಶ್ವರ್ಯಾ (ತೇಜ್ ಪ್ರತಾಪ್ ಯಾದವ್ ಅವರ ಮಾಜಿ ಪತ್ನಿ) ವಿರುದ್ಧ ಘೋರ ಪಾಪ ಮಾಡಿದಾಗ ಅವರ ಆತ್ಮಸಾಕ್ಷಿ ಏಕೆ ಎಚ್ಚರಗೊಳ್ಳಲಿಲ್ಲ. ಇದು ಶುದ್ಧ ಅನೈತಿಕತೆ. ಅವರು ಚುನಾವಣೆಯ ಸಮಯದಲ್ಲಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಚುನಾವಣೆಯ ನಂತರ, ತೇಜ್ ಪ್ರತಾಪ್ ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು” ಎಂದು ಜೆಡಿಯು ರಾಷ್ಟ್ರೀಯ ವಕ್ತಾರ ರಾಜೀವ್ ರಂಜನ್ ಹೇಳಿದ್ದಾರೆ.

ಗಮನಾರ್ಹವಾಗಿ, ಐಶ್ವರ್ಯಾ ರೈ ಅವರೊಂದಿಗಿನ ತೇಜ್ ಪ್ರತಾಪ್ ಅವರ ವಿಚ್ಛೇದನ ಪ್ರಕರಣವು ನ್ಯಾಯಾಲಯದಲ್ಲಿ ಸಿಲುಕಿಕೊಂಡಿದೆ. ಬಿಹಾರದ ಮಾಜಿ ಮುಖ್ಯಮಂತ್ರಿ ದರೋಗಾ ರಾಯ್ ಅವರ ಮೊಮ್ಮಗಳು ರಾಯ್ ಅವರೊಂದಿಗಿನ ಅವರ ವಿವಾಹವು ತಿಂಗಳೊಳಗೆ ಮುರಿದುಬಿತ್ತು. ಪತಿ ಮತ್ತು ಅತ್ತೆ ಮಾವಂದಿರು ನನ್ನನ್ನು ಮನೆಯಿಂದ ಹೊರಹಾಕಿದ್ದಾರೆ ಎಂದು ಐಶ್ವರ್ಯಾ ಆರೋಪಿಸಿದರು.

ಐಶ್ವರ್ಯಾ ಅವರ ತಂದೆ ಚಂದ್ರಿಕಾ ರಾಯ್, ಸ್ವತಃ ಮಾಜಿ ಸಚಿವ. ನಂತರ ಅವರು ಆರ್‌ಜೆಡಿಯನ್ನು ತೊರೆದರು, “ರಾಜಕೀಯವಾಗಿ ಮತ್ತು ಕಾನೂನುಬದ್ಧವಾಗಿ” ಹೋರಾಟ ನಡೆಸುವುದಾಗಿ ಪ್ರತಿಜ್ಞೆ ಮಾಡಿದರು.

ಜಮ್ಮು-ಕಾಶ್ಮೀರ: ಜಾತಿ ಆಧಾರಿತ ಪ್ರತ್ಯೇಕತೆ ನಿಷೇಧಕ್ಕೆ ಜೈಲು ಕೈಪಿಡಿಗೆ ತಿದ್ದುಪಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ಲಾಮಾಬಾದ್‌ನಲ್ಲಿ ಅಮೆರಿಕ–ಇರಾನ್ ಶಾಂತಿ ಮಾತುಕತೆ; ಪಾಕಿಸ್ತಾನ ಮಧ್ಯಸ್ಥಿಕೆ

ಹಲವು ರೀತಿಯ ಪ್ರತಿಷ್ಠೆ ಪ್ರದರ್ಶನ, ಭಿನ್ನಾಭಿಪ್ರಾಯಗಳ ನಡುವೆ ಅಮೆರಿಕ-ಇರಾನ್ ಶಾಂತಿ ಮಾತುಕತೆ ಶನಿವಾರ (ಏ.11) ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಪ್ರಾರಂಭಗೊಳ್ಳಲಿದೆ. ಪಾಕಿಸ್ತಾನದ ಪಾಲಿಗೆ ಇದು ಅತ್ಯಂತ ಪ್ರತಿಷ್ಠೆಯ ವಿಷಯವಾಗಿ ಮಾರ್ಪಟ್ಟಿದೆ. ಅಮೆರಿಕದ ಪರವಾಗಿ ಉಪಾಧ್ಯಕ್ಷ ಜೆ.ಡಿ....

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...