Homeಮುಖಪುಟನ.9ರಂದು ಲಾಲೂ ಜೈಲಿನಿಂದ ಹೊರಗೆ; ಮರುದಿನ ನಿತೀಶ್‌ಗೆ ಬೀಳ್ಕೊಡುಗೆ: ತೇಜಸ್ವಿ ಯಾದವ್

ನ.9ರಂದು ಲಾಲೂ ಜೈಲಿನಿಂದ ಹೊರಗೆ; ಮರುದಿನ ನಿತೀಶ್‌ಗೆ ಬೀಳ್ಕೊಡುಗೆ: ತೇಜಸ್ವಿ ಯಾದವ್

ನಿತೀಶ್ ಜೀ, ನೀವು ದಣಿದಿದ್ದೀರಿ, ನಿಮಗೆ ಬಿಹಾರವನ್ನು ನೋಡಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು 69 ವರ್ಷದ ನಿತೀಶ್ ಕುಮಾರ್ ಅವರಿಗೆ 30 ವರ್ಷದ ಆರ್‌ಜೆಡಿ ನಾಯಕ ಹೇಳಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ನವೆಂಬರ್‌ 9 ರಂದು ಜೈಲಿನಿಂದ ಹೊರಬರಲಿದ್ದು, ಮಾರನೇ ದಿನವೇ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಬೀಳ್ಕೊಡುಗೆ ಸಿಗಲಿದೆ ಎಂದು ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್‌ ಹೇಳಿದ್ದಾರೆ.

ಬಿಹಾರದ ವಿಧಾನಸಭೆಗೆ ಅಕ್ಟೋಬರ್ 28, ನವೆಂಬರ್ 3 ಮತ್ತು 7 ರಂದು ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 10 ರಂದು ಫಲಿತಾಂಶ ಪ್ರಕಟವಾಗಲಿದೆ. ಅಂದೇ ಮುಖ್ಯಮಂತ್ರಿ ನಿತೀಶ್ ಕುಮಾರ್‌ಗೆ ವಿದಾಯ ಸಿಗಲಿದೆ ಎಂದು ವ್ಯಂಗ್ಯವಾಡಿದ್ದಾರೆ.

ಸದ್ಯ ತೇಜಶ್ವಿ ಯಾದವ್ ಅವರ ತಂದೆ ಲಾಲೂ ಯಾದವ್ ಮೇವು ಹಗರಣ ಭ್ರಷ್ಟಾಚಾರ ಪ್ರಕರಣದಲ್ಲಿ ಜಾರ್ಖಂಡ್‌ನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮೇವು ಹಗರಣದ ಚಾಯ್‌ಬಾಸಾ ಖಜಾನೆ ಸಂಬಂಧಿಸಿದ ಪ್ರಕರಣದಲ್ಲಿ ಜಾರ್ಖಂಡ್‌ ಹೈಕೋರ್ಟ್‌ ಲಾಲೂ ಅವರಿಗೆ ಇತ್ತೀಚೆಗೆ ಜಾಮೀನು ನೀಡಿದೆ. ಆದರೆ ದುಮಕಾ ಖಜಾನೆ ಹಣ ವಂಚನೆ ಪ್ರಕರಣದಲ್ಲಿ ಜಾಮೀನು ವಿಚಾರಣೆ ನಡೆಯುತ್ತಿದ್ದು, ನ್ಯಾಯಾಂಗ ಬಂಧನದಲ್ಲೇ ಇದ್ದಾರೆ.

ಇದನ್ನೂ ಓದಿ: ವರ್ಷಕ್ಕೆ 10 ಲಕ್ಷ ಉದ್ಯೋಗ ಸೃಷ್ಟಿ: ತೇಜಸ್ವಿ ಯಾದವ್ ಭರವಸೆ; ನಿತೀಶ್ ಕಂಗಾಲು!

‘ಲಾಲೂ ಜೀ ಅವರಿಗೆ ಆಗಲೇ ಒಂದು ಪ್ರಕರಣದಲ್ಲಿ ಜಾಮೀನು ಸಿಕ್ಕಿದ್ದು, ನವೆಂಬರ್‌ 9ರಂದು ಮತ್ತೊಂದು ಜಾಮೀನು ಪಡೆದು, ನವೆಂಬರ್‌ 9ರಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಅಂದು ನನ್ನ ಜನ್ಮದಿನ ಕೂಡ. ಮಾರನೆಯ ದಿನ (ನವೆಂಬರ್‌ 10) ನಿತೀಶ್‌ಜಿ ಅವರಿಗೆ ಬೀಳ್ಕೊಡುಗೆ ಸಿಗಲಿದೆ’ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

ಬಿಹಾರದ ಹಿಸುವಾದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ನಡೆದ ಚುನಾವಣಾ ರ್‍ಯಾಲಿಯಲ್ಲಿ ಚುನಾವಣೆಯನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ನಿತೀಶ್ ಕುಮಾರ್ ನೇತೃತ್ವದ ಸರ್ಕಾರವು ರಾಜ್ಯದಲ್ಲಿ ಭ್ರಷ್ಟಾಚಾರವನ್ನು ತೊಡೆದುಹಾಕಲು, ಉದ್ಯೋಗ ಸೃಷ್ಟಿಸಲು ಮತ್ತು ಇತರ ರಾಜ್ಯಗಳಿಗೆ ಹೋಗುವ ಕಾರ್ಮಿಕರ ವಲಸೆಯನ್ನು ತಡೆಯಲು ವಿಫಲವಾಗಿದೆ ಎಂದು ತೇಜಸ್ವಿ ಯಾದವ್ ತಮ್ಮ ಭಾಷಣದಲ್ಲಿ ಆರೋಪಿಸಿದರು.

“ನಿತೀಶ್ ಜೀ, ನೀವು ದಣಿದಿದ್ದೀರಿ. ನಿಮಗೆ ಬಿಹಾರವನ್ನು ನೋಡಿಕೊಳ್ಳಲು ಸಾಧ್ಯವಾಗುವುದಿಲ್ಲ” ಎಂದು 69 ವರ್ಷದ ನಿತೀಶ್ ಕುಮಾರ್ ಅವರನ್ನು30 ವರ್ಷದ ಆರ್‌ಜೆಡಿ ನಾಯಕ ಮೂದಲಿಸಿದ್ದಾರೆ.

“15 ವರ್ಷಗಳಲ್ಲಿ ನಿಮಗೆ ಉದ್ಯೋಗ, ಶಿಕ್ಷಣ, ಆರೋಗ್ಯ ಸೌಲಭ್ಯಗಳು ಮತ್ತು ಕೈಗಾರಿಕೆಗಳನ್ನು ನೀಡದವರು ಮುಂದಿನ ಐದು ವರ್ಷಗಳಲ್ಲಿ ನೀಡುತ್ತಾರೆಯೇ” ಎಂದು ಪ್ರಶ್ನಿಸಿದ್ದಾರೆ. ಜೊತೆಗೆ 10 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಸೃಷ್ಟಿಸುವ ಭರವಸೆಯನ್ನು ಮತ್ತೊಮ್ಮೆ ನೀಡಿದ್ದಾರೆ.


ಇದನ್ನೂ ಓದಿ: ಬಿಹಾರ ಅಭಿವೃದ್ಧಿ; ಮುಖ್ಯಮಂತ್ರಿ ಅಭ್ಯರ್ಥಿಗಳ ನೇರ ಚರ್ಚೆ: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...