Homeಕರ್ನಾಟಕಪರಿಹಾರ ನೀಡದೆ ರೈಲು ಮಾರ್ಗಕ್ಕಾಗಿ ಭೂಮಿ ವಶ: ಸಿಎಂ ತವರಿನ ರೈತರ ಆಕ್ರೋಶ

ಪರಿಹಾರ ನೀಡದೆ ರೈಲು ಮಾರ್ಗಕ್ಕಾಗಿ ಭೂಮಿ ವಶ: ಸಿಎಂ ತವರಿನ ರೈತರ ಆಕ್ರೋಶ

ಶಿವಮೊಗ್ಗ-ಶಿಕಾರಿಪುರ-ರಾಣೆ ಬೆನ್ನೂರು ರೈಲ್ವೇ ಮಾರ್ಗವನ್ನು ನಿರ್ಮಿಸಲಾಗುತ್ತಿದ್ದು ಇದಕ್ಕಾಗಿ ಸುಮಾರು 1100 ಎಕರೆಗೂ ಹೆಚ್ಚು ರೈತರ ಭೂಮಿಯನ್ನು ವಶಪಡಿಸಿಕೊಳ್ಳಲಾಗುತ್ತಿದೆ

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪನವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ರೈಲ್ವೆ ಮಾರ್ಗಕ್ಕಾಗಿ ರೈತರ ಫಲವತ್ತಾದ ಜಮೀನುಗಳನ್ನು ವಶಪಡಿಸಿಕೊಳ್ಳಲಾಗುತ್ತಿದ್ದು, ಇದರ ಕುರಿತು ರೈತರಿಗೆ ಪೂರ್ವ ಮಾಹಿತಿಯನ್ನಾಗಲೀ ಅಥವಾ ವಶಪಡಿಸಿಕೊಳ್ಳುವ ಭೂಮಿಗೆ ಬೆಲೆ ನಿಗದಿಯನ್ನಾಗಲಿ ಮಾಡಿಲ್ಲ ಎಂದು ರೈತರು ಆರೋಪಿಸಿದ್ದಾರೆ.

ಶಿವಮೊಗ್ಗ-ಶಿಕಾರಿಪುರ-ರಾಣೆ ಬೆನ್ನೂರು ರೈಲ್ವೇ ಮಾರ್ಗವನ್ನು ನಿರ್ಮಿಸಲಾಗುತ್ತಿದ್ದು ಇದಕ್ಕಾಗಿ ಸುಮಾರು 1100 ಎಕರೆಗೂ ಹೆಚ್ಚು ರೈತರ ಭೂಮಿಯನ್ನು ವಶಪಡಿಸಿಕೊಳ್ಳಲಾಗುತ್ತಿದೆ. ಆದರೆ ಅದಕ್ಕೆ ಸಮರ್ಪಕ ಪರಿಹಾರ ನೀಡುತ್ತಿಲ್ಲ ಎಂದು ಜಿಲ್ಲೆಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಕೆ.ಎಲ್ ಅಶೋಕ್, “ಸಾರ್ವಜನಿಕ ಸೇವೆಗಾಗಿ ಇಲ್ಲಿನ ರೈತರು ಭೂಮಿ ಕೊಡಲು ಸಿದ್ಧರಿದ್ದಾರೆ. ಆದರೆ ಅವರಿಗೆ ಯಾವುದೇ ಪರಿಹಾರ ನೀಡದೆ ಭೂಮಿಯನ್ನ ವಶಪಡಿಸಿಕೊಳ್ಳುವುದು ಸರಿಯಲ್ಲ. ಇದರ ಕುರಿತು ಜಿಲ್ಲಾಧಿಕಾರಿಗಳು, ಸ್ಥಳೀಯ ಶಾಸಕರು, ಸಂಸದರು, ಉಸ್ತುವಾರಿ ಸಚಿವರು ಸೇರಿದಂತೆ ಮುಖ್ಯಮಂತ್ರಿಗಳಿಗೂ ಮನವಿ ಸಲ್ಲಿಸಲಾಗಿತ್ತು. ಆದರೆ ಇದುವರೆಗೂ ಯಾವುದೆ ನಿರ್ದಿಷ್ಟ ಕ್ರಮ ಕೈಗೊಂಡಿಲ್ಲ. ಖಚಿತವಾದ ಭರವಸೆಗಳನ್ನೂ ಸಹ ನೀಡುತ್ತಿಲ್ಲ. ಹಾಗಾಗಿ ಇಂದಿನ ಮಾರುಕಟ್ಟೆಯ ಬೆಲೆ ನೀಡಿ ರೈತರ ಭೂಮಿಯನ್ನು ವಶಪಡಿಸಿಕೊಳ್ಳಬೇಕು ಮತ್ತು ಅವರಿಗೆ ಶೀಘ್ರವೇ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿ ಫೆಬ್ರವರಿ 3 ರಂದು ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ” ಎಂದು ತಿಳಿಸಿದರು.

ಇದನ್ನೂ ಓದಿ: ‘ದೆಹಲಿ ಗಡಿಯಲ್ಲಿನ ರೈತ ಪ್ರತಿಭಟನೆಗೆ ಸೇರಿಕೊಳ್ಳಿ’: ಕಾರ್ಯಕರ್ತರಿಗೆ ಮನವಿ ಮಾಡಿದ ಅಕಾಲಿ ದಳ

ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಎಚ್ ಆರ್ ಬಸವರಾಜಪ್ಪನವರು ಮಾತನಾಡಿ, “ಒಂದು ಎಕರೆಗೆ 44 ಲಕ್ಷ ಕೊಡಿಸುವುದಾಗಿ ಶಾಸಕರು ಭರವಸೆ ನೀಡಿದ್ದರು. ಆದರೆ ಜಿಲ್ಲಾಧಿಕಾರಿಗಳು ಇದಕ್ಕೆ ಒಪ್ಪಿಲ್ಲ. 6-12 ಲಕ್ಷ ಸಿಗುತ್ತದೆ ಎಂದು ಹೇಳುತ್ತಿದ್ದಾರೆ. ಇಷ್ಟೆ ಅಲ್ಲದೇ ಒಂದು ಹಳ್ಳಿಯಲ್ಲಿ ಎಕರೆಗೆ 6 ಲಕ್ಷ ಹೇಳಿದರೆ, ಮತ್ತೊಂದು ಹಳ್ಳಿಯಲ್ಲಿ ಎಕರೆಗೆ 8 ಲಕ್ಷ ಹೇಳಿದ್ದಾರೆ. ಮತ್ತೊಂದು ಹಳ್ಳಿಯಲ್ಲಿ 12 ಲಕ್ಷ ಹೇಳಿದ್ದಾರೆ. ಹಾಗಾಗಿ ರೈತರಲ್ಲಿ ಗೊಂದಲವುಂಟಾಗಿದೆ. ಇದನ್ನು ಶಾಸಕರಿಗೆ ಹೇಳಿದರೆ, ನಮ್ಮಿಂದ ಏನೂ ಮಾಡಲು ಸಾಧ್ಯವಿಲ್ಲ, ಡಿಸಿ ಒಪ್ಪುತ್ತಿಲ್ಲ, ಸರ್ಕಾರ ಒಪ್ಪುತ್ತಿಲ್ಲ ಎಂದು ಕೈ ಎತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಹಾಗಾಗಿ ಸಮರ್ಪಕ ಪರಿಹಾರ ಸಿಗದೇ ನಾವು ಭೂಮಿ ಕೊಡುವುದಿಲ್ಲ ಎಂದು ಫೆಬ್ರವರಿ 3 ರಂದು ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಾವು ಭೂಮಿ ಕೊಡಲೇ ಬೇಕು ಎನ್ನುವುದಾದರೆ, ಒಂದು ಎಕರೆಗೆ ಒಂದೂ ಕಾಲು ಕೋಟಿ, ತೋಟಕ್ಕೆ 2 ಕೋಟಿ ನಿಗದಿ ಮಾಡಬೇಕು. ಇಲ್ಲದಿದ್ದರೆ ನಾವು ಭೂಮಿ ಕೊಡುವುದಿಲ್ಲ. ಇದನ್ನೂ ಮೀರಿ ಸರ್ಕಾರ ರೈತರನ್ನು ಜೈಲಿಗೆ ಕಳುಹಿಸಿ ಭೂಮಿ ಪಡೆದುಕೊಳ್ಳುತ್ತದೋ ಅಥವಾ ರೈತರಿಗೆ ಗುಂಡು ಹಾರಿಸಿ ಪಡೆದುಕೊಳ್ಳುತ್ತದೋ ಗೊತ್ತಿಲ್ಲ” ಎಂದು ಹೇಳಿದರು.

ಈ ಯೋಜನೆಯಲ್ಲಿ ಕೆಲವು ರೈತರು ಸಂಪೂರ್ಣ ಅಥವಾ ಭಾಗಶಃ ಭೂಮಿಯನ್ನು ಕಳೆದುಕೊಳ್ಳುತ್ತಾರೆ. ಇವರಿಗೆ ಪರ್ಯಾಯ ಜಮೀನು ವ್ಯವಸ್ಥೆಯನ್ನು ಸರ್ಕಾರವೇ ಮಾಡಿಕೊಡಬೇಕು ಎಂಬುದು ರೈತರ ಒತ್ತಾಯವಾಗಿದೆ. ಇನ್ನು ಇದರಿಂದ ಉಂಟಾಗಬಹುದಾದ ಎಲ್ಲಾ ತೊಂದರೆಗಳನ್ನು ಸರ್ಕಾರ ಮೊದಲೆ ಗ್ರಹಿಸಿ ಬಗೆಹರಿಸಬೇಕೆಂದು ಆಗ್ರಹಿಸುತ್ತಿದ್ದಾರೆ.


ಇದನ್ನೂ ಓದಿ: ಒಂದೇ ಒಂದು ಇಂಚು ಹಿಂದೆ ಸರಿಯದಿರಿ, ನಿಮ್ಮ ಜೊತೆ ನಾವಿದ್ದೇವೆ: ರೈತರಿಗೆ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...