Homeಕರ್ನಾಟಕಪರಿಹಾರ ನೀಡದೆ ರೈಲು ಮಾರ್ಗಕ್ಕಾಗಿ ಭೂಮಿ ವಶ: ಸಿಎಂ ತವರಿನ ರೈತರ ಆಕ್ರೋಶ

ಪರಿಹಾರ ನೀಡದೆ ರೈಲು ಮಾರ್ಗಕ್ಕಾಗಿ ಭೂಮಿ ವಶ: ಸಿಎಂ ತವರಿನ ರೈತರ ಆಕ್ರೋಶ

ಶಿವಮೊಗ್ಗ-ಶಿಕಾರಿಪುರ-ರಾಣೆ ಬೆನ್ನೂರು ರೈಲ್ವೇ ಮಾರ್ಗವನ್ನು ನಿರ್ಮಿಸಲಾಗುತ್ತಿದ್ದು ಇದಕ್ಕಾಗಿ ಸುಮಾರು 1100 ಎಕರೆಗೂ ಹೆಚ್ಚು ರೈತರ ಭೂಮಿಯನ್ನು ವಶಪಡಿಸಿಕೊಳ್ಳಲಾಗುತ್ತಿದೆ

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪನವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ರೈಲ್ವೆ ಮಾರ್ಗಕ್ಕಾಗಿ ರೈತರ ಫಲವತ್ತಾದ ಜಮೀನುಗಳನ್ನು ವಶಪಡಿಸಿಕೊಳ್ಳಲಾಗುತ್ತಿದ್ದು, ಇದರ ಕುರಿತು ರೈತರಿಗೆ ಪೂರ್ವ ಮಾಹಿತಿಯನ್ನಾಗಲೀ ಅಥವಾ ವಶಪಡಿಸಿಕೊಳ್ಳುವ ಭೂಮಿಗೆ ಬೆಲೆ ನಿಗದಿಯನ್ನಾಗಲಿ ಮಾಡಿಲ್ಲ ಎಂದು ರೈತರು ಆರೋಪಿಸಿದ್ದಾರೆ.

ಶಿವಮೊಗ್ಗ-ಶಿಕಾರಿಪುರ-ರಾಣೆ ಬೆನ್ನೂರು ರೈಲ್ವೇ ಮಾರ್ಗವನ್ನು ನಿರ್ಮಿಸಲಾಗುತ್ತಿದ್ದು ಇದಕ್ಕಾಗಿ ಸುಮಾರು 1100 ಎಕರೆಗೂ ಹೆಚ್ಚು ರೈತರ ಭೂಮಿಯನ್ನು ವಶಪಡಿಸಿಕೊಳ್ಳಲಾಗುತ್ತಿದೆ. ಆದರೆ ಅದಕ್ಕೆ ಸಮರ್ಪಕ ಪರಿಹಾರ ನೀಡುತ್ತಿಲ್ಲ ಎಂದು ಜಿಲ್ಲೆಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಕೆ.ಎಲ್ ಅಶೋಕ್, “ಸಾರ್ವಜನಿಕ ಸೇವೆಗಾಗಿ ಇಲ್ಲಿನ ರೈತರು ಭೂಮಿ ಕೊಡಲು ಸಿದ್ಧರಿದ್ದಾರೆ. ಆದರೆ ಅವರಿಗೆ ಯಾವುದೇ ಪರಿಹಾರ ನೀಡದೆ ಭೂಮಿಯನ್ನ ವಶಪಡಿಸಿಕೊಳ್ಳುವುದು ಸರಿಯಲ್ಲ. ಇದರ ಕುರಿತು ಜಿಲ್ಲಾಧಿಕಾರಿಗಳು, ಸ್ಥಳೀಯ ಶಾಸಕರು, ಸಂಸದರು, ಉಸ್ತುವಾರಿ ಸಚಿವರು ಸೇರಿದಂತೆ ಮುಖ್ಯಮಂತ್ರಿಗಳಿಗೂ ಮನವಿ ಸಲ್ಲಿಸಲಾಗಿತ್ತು. ಆದರೆ ಇದುವರೆಗೂ ಯಾವುದೆ ನಿರ್ದಿಷ್ಟ ಕ್ರಮ ಕೈಗೊಂಡಿಲ್ಲ. ಖಚಿತವಾದ ಭರವಸೆಗಳನ್ನೂ ಸಹ ನೀಡುತ್ತಿಲ್ಲ. ಹಾಗಾಗಿ ಇಂದಿನ ಮಾರುಕಟ್ಟೆಯ ಬೆಲೆ ನೀಡಿ ರೈತರ ಭೂಮಿಯನ್ನು ವಶಪಡಿಸಿಕೊಳ್ಳಬೇಕು ಮತ್ತು ಅವರಿಗೆ ಶೀಘ್ರವೇ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿ ಫೆಬ್ರವರಿ 3 ರಂದು ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ” ಎಂದು ತಿಳಿಸಿದರು.

ಇದನ್ನೂ ಓದಿ: ‘ದೆಹಲಿ ಗಡಿಯಲ್ಲಿನ ರೈತ ಪ್ರತಿಭಟನೆಗೆ ಸೇರಿಕೊಳ್ಳಿ’: ಕಾರ್ಯಕರ್ತರಿಗೆ ಮನವಿ ಮಾಡಿದ ಅಕಾಲಿ ದಳ

ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಎಚ್ ಆರ್ ಬಸವರಾಜಪ್ಪನವರು ಮಾತನಾಡಿ, “ಒಂದು ಎಕರೆಗೆ 44 ಲಕ್ಷ ಕೊಡಿಸುವುದಾಗಿ ಶಾಸಕರು ಭರವಸೆ ನೀಡಿದ್ದರು. ಆದರೆ ಜಿಲ್ಲಾಧಿಕಾರಿಗಳು ಇದಕ್ಕೆ ಒಪ್ಪಿಲ್ಲ. 6-12 ಲಕ್ಷ ಸಿಗುತ್ತದೆ ಎಂದು ಹೇಳುತ್ತಿದ್ದಾರೆ. ಇಷ್ಟೆ ಅಲ್ಲದೇ ಒಂದು ಹಳ್ಳಿಯಲ್ಲಿ ಎಕರೆಗೆ 6 ಲಕ್ಷ ಹೇಳಿದರೆ, ಮತ್ತೊಂದು ಹಳ್ಳಿಯಲ್ಲಿ ಎಕರೆಗೆ 8 ಲಕ್ಷ ಹೇಳಿದ್ದಾರೆ. ಮತ್ತೊಂದು ಹಳ್ಳಿಯಲ್ಲಿ 12 ಲಕ್ಷ ಹೇಳಿದ್ದಾರೆ. ಹಾಗಾಗಿ ರೈತರಲ್ಲಿ ಗೊಂದಲವುಂಟಾಗಿದೆ. ಇದನ್ನು ಶಾಸಕರಿಗೆ ಹೇಳಿದರೆ, ನಮ್ಮಿಂದ ಏನೂ ಮಾಡಲು ಸಾಧ್ಯವಿಲ್ಲ, ಡಿಸಿ ಒಪ್ಪುತ್ತಿಲ್ಲ, ಸರ್ಕಾರ ಒಪ್ಪುತ್ತಿಲ್ಲ ಎಂದು ಕೈ ಎತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಹಾಗಾಗಿ ಸಮರ್ಪಕ ಪರಿಹಾರ ಸಿಗದೇ ನಾವು ಭೂಮಿ ಕೊಡುವುದಿಲ್ಲ ಎಂದು ಫೆಬ್ರವರಿ 3 ರಂದು ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಾವು ಭೂಮಿ ಕೊಡಲೇ ಬೇಕು ಎನ್ನುವುದಾದರೆ, ಒಂದು ಎಕರೆಗೆ ಒಂದೂ ಕಾಲು ಕೋಟಿ, ತೋಟಕ್ಕೆ 2 ಕೋಟಿ ನಿಗದಿ ಮಾಡಬೇಕು. ಇಲ್ಲದಿದ್ದರೆ ನಾವು ಭೂಮಿ ಕೊಡುವುದಿಲ್ಲ. ಇದನ್ನೂ ಮೀರಿ ಸರ್ಕಾರ ರೈತರನ್ನು ಜೈಲಿಗೆ ಕಳುಹಿಸಿ ಭೂಮಿ ಪಡೆದುಕೊಳ್ಳುತ್ತದೋ ಅಥವಾ ರೈತರಿಗೆ ಗುಂಡು ಹಾರಿಸಿ ಪಡೆದುಕೊಳ್ಳುತ್ತದೋ ಗೊತ್ತಿಲ್ಲ” ಎಂದು ಹೇಳಿದರು.

ಈ ಯೋಜನೆಯಲ್ಲಿ ಕೆಲವು ರೈತರು ಸಂಪೂರ್ಣ ಅಥವಾ ಭಾಗಶಃ ಭೂಮಿಯನ್ನು ಕಳೆದುಕೊಳ್ಳುತ್ತಾರೆ. ಇವರಿಗೆ ಪರ್ಯಾಯ ಜಮೀನು ವ್ಯವಸ್ಥೆಯನ್ನು ಸರ್ಕಾರವೇ ಮಾಡಿಕೊಡಬೇಕು ಎಂಬುದು ರೈತರ ಒತ್ತಾಯವಾಗಿದೆ. ಇನ್ನು ಇದರಿಂದ ಉಂಟಾಗಬಹುದಾದ ಎಲ್ಲಾ ತೊಂದರೆಗಳನ್ನು ಸರ್ಕಾರ ಮೊದಲೆ ಗ್ರಹಿಸಿ ಬಗೆಹರಿಸಬೇಕೆಂದು ಆಗ್ರಹಿಸುತ್ತಿದ್ದಾರೆ.


ಇದನ್ನೂ ಓದಿ: ಒಂದೇ ಒಂದು ಇಂಚು ಹಿಂದೆ ಸರಿಯದಿರಿ, ನಿಮ್ಮ ಜೊತೆ ನಾವಿದ್ದೇವೆ: ರೈತರಿಗೆ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...