Homeಕರ್ನಾಟಕಪರಿಹಾರ ನೀಡದೆ ರೈಲು ಮಾರ್ಗಕ್ಕಾಗಿ ಭೂಮಿ ವಶ: ಸಿಎಂ ತವರಿನ ರೈತರ ಆಕ್ರೋಶ

ಪರಿಹಾರ ನೀಡದೆ ರೈಲು ಮಾರ್ಗಕ್ಕಾಗಿ ಭೂಮಿ ವಶ: ಸಿಎಂ ತವರಿನ ರೈತರ ಆಕ್ರೋಶ

ಶಿವಮೊಗ್ಗ-ಶಿಕಾರಿಪುರ-ರಾಣೆ ಬೆನ್ನೂರು ರೈಲ್ವೇ ಮಾರ್ಗವನ್ನು ನಿರ್ಮಿಸಲಾಗುತ್ತಿದ್ದು ಇದಕ್ಕಾಗಿ ಸುಮಾರು 1100 ಎಕರೆಗೂ ಹೆಚ್ಚು ರೈತರ ಭೂಮಿಯನ್ನು ವಶಪಡಿಸಿಕೊಳ್ಳಲಾಗುತ್ತಿದೆ

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪನವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ರೈಲ್ವೆ ಮಾರ್ಗಕ್ಕಾಗಿ ರೈತರ ಫಲವತ್ತಾದ ಜಮೀನುಗಳನ್ನು ವಶಪಡಿಸಿಕೊಳ್ಳಲಾಗುತ್ತಿದ್ದು, ಇದರ ಕುರಿತು ರೈತರಿಗೆ ಪೂರ್ವ ಮಾಹಿತಿಯನ್ನಾಗಲೀ ಅಥವಾ ವಶಪಡಿಸಿಕೊಳ್ಳುವ ಭೂಮಿಗೆ ಬೆಲೆ ನಿಗದಿಯನ್ನಾಗಲಿ ಮಾಡಿಲ್ಲ ಎಂದು ರೈತರು ಆರೋಪಿಸಿದ್ದಾರೆ.

ಶಿವಮೊಗ್ಗ-ಶಿಕಾರಿಪುರ-ರಾಣೆ ಬೆನ್ನೂರು ರೈಲ್ವೇ ಮಾರ್ಗವನ್ನು ನಿರ್ಮಿಸಲಾಗುತ್ತಿದ್ದು ಇದಕ್ಕಾಗಿ ಸುಮಾರು 1100 ಎಕರೆಗೂ ಹೆಚ್ಚು ರೈತರ ಭೂಮಿಯನ್ನು ವಶಪಡಿಸಿಕೊಳ್ಳಲಾಗುತ್ತಿದೆ. ಆದರೆ ಅದಕ್ಕೆ ಸಮರ್ಪಕ ಪರಿಹಾರ ನೀಡುತ್ತಿಲ್ಲ ಎಂದು ಜಿಲ್ಲೆಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಕೆ.ಎಲ್ ಅಶೋಕ್, “ಸಾರ್ವಜನಿಕ ಸೇವೆಗಾಗಿ ಇಲ್ಲಿನ ರೈತರು ಭೂಮಿ ಕೊಡಲು ಸಿದ್ಧರಿದ್ದಾರೆ. ಆದರೆ ಅವರಿಗೆ ಯಾವುದೇ ಪರಿಹಾರ ನೀಡದೆ ಭೂಮಿಯನ್ನ ವಶಪಡಿಸಿಕೊಳ್ಳುವುದು ಸರಿಯಲ್ಲ. ಇದರ ಕುರಿತು ಜಿಲ್ಲಾಧಿಕಾರಿಗಳು, ಸ್ಥಳೀಯ ಶಾಸಕರು, ಸಂಸದರು, ಉಸ್ತುವಾರಿ ಸಚಿವರು ಸೇರಿದಂತೆ ಮುಖ್ಯಮಂತ್ರಿಗಳಿಗೂ ಮನವಿ ಸಲ್ಲಿಸಲಾಗಿತ್ತು. ಆದರೆ ಇದುವರೆಗೂ ಯಾವುದೆ ನಿರ್ದಿಷ್ಟ ಕ್ರಮ ಕೈಗೊಂಡಿಲ್ಲ. ಖಚಿತವಾದ ಭರವಸೆಗಳನ್ನೂ ಸಹ ನೀಡುತ್ತಿಲ್ಲ. ಹಾಗಾಗಿ ಇಂದಿನ ಮಾರುಕಟ್ಟೆಯ ಬೆಲೆ ನೀಡಿ ರೈತರ ಭೂಮಿಯನ್ನು ವಶಪಡಿಸಿಕೊಳ್ಳಬೇಕು ಮತ್ತು ಅವರಿಗೆ ಶೀಘ್ರವೇ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿ ಫೆಬ್ರವರಿ 3 ರಂದು ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ” ಎಂದು ತಿಳಿಸಿದರು.

ಇದನ್ನೂ ಓದಿ: ‘ದೆಹಲಿ ಗಡಿಯಲ್ಲಿನ ರೈತ ಪ್ರತಿಭಟನೆಗೆ ಸೇರಿಕೊಳ್ಳಿ’: ಕಾರ್ಯಕರ್ತರಿಗೆ ಮನವಿ ಮಾಡಿದ ಅಕಾಲಿ ದಳ

ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಎಚ್ ಆರ್ ಬಸವರಾಜಪ್ಪನವರು ಮಾತನಾಡಿ, “ಒಂದು ಎಕರೆಗೆ 44 ಲಕ್ಷ ಕೊಡಿಸುವುದಾಗಿ ಶಾಸಕರು ಭರವಸೆ ನೀಡಿದ್ದರು. ಆದರೆ ಜಿಲ್ಲಾಧಿಕಾರಿಗಳು ಇದಕ್ಕೆ ಒಪ್ಪಿಲ್ಲ. 6-12 ಲಕ್ಷ ಸಿಗುತ್ತದೆ ಎಂದು ಹೇಳುತ್ತಿದ್ದಾರೆ. ಇಷ್ಟೆ ಅಲ್ಲದೇ ಒಂದು ಹಳ್ಳಿಯಲ್ಲಿ ಎಕರೆಗೆ 6 ಲಕ್ಷ ಹೇಳಿದರೆ, ಮತ್ತೊಂದು ಹಳ್ಳಿಯಲ್ಲಿ ಎಕರೆಗೆ 8 ಲಕ್ಷ ಹೇಳಿದ್ದಾರೆ. ಮತ್ತೊಂದು ಹಳ್ಳಿಯಲ್ಲಿ 12 ಲಕ್ಷ ಹೇಳಿದ್ದಾರೆ. ಹಾಗಾಗಿ ರೈತರಲ್ಲಿ ಗೊಂದಲವುಂಟಾಗಿದೆ. ಇದನ್ನು ಶಾಸಕರಿಗೆ ಹೇಳಿದರೆ, ನಮ್ಮಿಂದ ಏನೂ ಮಾಡಲು ಸಾಧ್ಯವಿಲ್ಲ, ಡಿಸಿ ಒಪ್ಪುತ್ತಿಲ್ಲ, ಸರ್ಕಾರ ಒಪ್ಪುತ್ತಿಲ್ಲ ಎಂದು ಕೈ ಎತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಹಾಗಾಗಿ ಸಮರ್ಪಕ ಪರಿಹಾರ ಸಿಗದೇ ನಾವು ಭೂಮಿ ಕೊಡುವುದಿಲ್ಲ ಎಂದು ಫೆಬ್ರವರಿ 3 ರಂದು ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಾವು ಭೂಮಿ ಕೊಡಲೇ ಬೇಕು ಎನ್ನುವುದಾದರೆ, ಒಂದು ಎಕರೆಗೆ ಒಂದೂ ಕಾಲು ಕೋಟಿ, ತೋಟಕ್ಕೆ 2 ಕೋಟಿ ನಿಗದಿ ಮಾಡಬೇಕು. ಇಲ್ಲದಿದ್ದರೆ ನಾವು ಭೂಮಿ ಕೊಡುವುದಿಲ್ಲ. ಇದನ್ನೂ ಮೀರಿ ಸರ್ಕಾರ ರೈತರನ್ನು ಜೈಲಿಗೆ ಕಳುಹಿಸಿ ಭೂಮಿ ಪಡೆದುಕೊಳ್ಳುತ್ತದೋ ಅಥವಾ ರೈತರಿಗೆ ಗುಂಡು ಹಾರಿಸಿ ಪಡೆದುಕೊಳ್ಳುತ್ತದೋ ಗೊತ್ತಿಲ್ಲ” ಎಂದು ಹೇಳಿದರು.

ಈ ಯೋಜನೆಯಲ್ಲಿ ಕೆಲವು ರೈತರು ಸಂಪೂರ್ಣ ಅಥವಾ ಭಾಗಶಃ ಭೂಮಿಯನ್ನು ಕಳೆದುಕೊಳ್ಳುತ್ತಾರೆ. ಇವರಿಗೆ ಪರ್ಯಾಯ ಜಮೀನು ವ್ಯವಸ್ಥೆಯನ್ನು ಸರ್ಕಾರವೇ ಮಾಡಿಕೊಡಬೇಕು ಎಂಬುದು ರೈತರ ಒತ್ತಾಯವಾಗಿದೆ. ಇನ್ನು ಇದರಿಂದ ಉಂಟಾಗಬಹುದಾದ ಎಲ್ಲಾ ತೊಂದರೆಗಳನ್ನು ಸರ್ಕಾರ ಮೊದಲೆ ಗ್ರಹಿಸಿ ಬಗೆಹರಿಸಬೇಕೆಂದು ಆಗ್ರಹಿಸುತ್ತಿದ್ದಾರೆ.


ಇದನ್ನೂ ಓದಿ: ಒಂದೇ ಒಂದು ಇಂಚು ಹಿಂದೆ ಸರಿಯದಿರಿ, ನಿಮ್ಮ ಜೊತೆ ನಾವಿದ್ದೇವೆ: ರೈತರಿಗೆ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...