Homeಕರ್ನಾಟಕಕುಮಾರಸ್ವಾಮಿ ವಿರುದ್ಧದ ಭೂ ಒತ್ತುವರಿ ಆರೋಪ | ಆರೋಪಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಸತ್ಯ ಹೊರಬರಲಿದೆ;...

ಕುಮಾರಸ್ವಾಮಿ ವಿರುದ್ಧದ ಭೂ ಒತ್ತುವರಿ ಆರೋಪ | ಆರೋಪಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಸತ್ಯ ಹೊರಬರಲಿದೆ; ಹೈಕೋರ್ಟ್ ಕಿಡಿ

- Advertisement -
- Advertisement -

ರಾಮನಗರ ಜಿಲ್ಲೆ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನು ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಯಾರ ಅನುಮತಿ ಪಡೆದು ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಿದೆ ಎಂದು ಹೈಕೋರ್ಟ್ ಕೆಂಡಾಮಂಡಲವಾಗಿದ್ದು, “ಪ್ರಕರಣದ ಎಲ್ಲಾ ಆರೋಪಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ಆದೇಶಿಸಿದರೆ ಸತ್ಯ ಹೊರ ಬರಲಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ, ಅವರ ಸಂಬಂಧಿ, ಮಾಜಿ ಶಾಸಕ ಡಿ.ಸಿ ತಮ್ಮಣ್ಣ ಹಾಗೂ ಮತ್ತಿರರ ವಿರುದ್ದದ ಭೂ ಕಬಳಿಗೆ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನೀಡಿರುವ ಆದೇಶ ಜಾರಿಗೊಳಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಎಸ್‌.ಆರ್ ಹಿರೇಮಠ ನೇತೃತ್ವದ ‘ಸಮಾಜ ಪರಿವರ್ತನಾ ಸಮುದಾಯ’ ಸಲ್ಲಿಸಿರುವ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯನ್ನು ನ್ಯಾಯಮೂರ್ತಿ ಕೆ.ಸೋಮಶೇಖರ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ (ಮಾ.17) ವಿಚಾರಣೆ ನಡೆಸಿದೆ.

ವಿಚಾರಣೆ ವೇಳೆ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ನ್ಯಾಯಾಲಯ, “ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ ಅವರು ಎಸ್‌ಐಟಿ ರಚಿಸಿದ್ದಾರೆ. ಕಂದಾಯ ಇಲಾಖೆಯು ಎಸ್‌ಐಟಿ ರಚಿಸಲು ಅಷ್ಟು ಶಕ್ತಿಶಾಲಿಯೇ? ರಾಜ್ಯ ಸರ್ಕಾರವು ಸಂವಿಧಾನಕ್ಕಿಂತ ಮಿಗಿಲಾಗಿದೆಯೇ? 14 ಎಕರೆ ಒತ್ತುವರಿ ತೆರವು ಮಾಡಲಾಗಿದೆ. ಉಳಿದ 71 ಎಕರೆ ಒತ್ತುವರಿಯಾಗಿರುವ ಭೂಮಿಯನ್ನು ತೆರವುಗೊಳಿಸಬೇಕಿದೆ. ಯಾವ ರೀತಿಯಲ್ಲಿ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ? ಎಷ್ಟು ಎಕರೆ ತೆರವು ಮಾಡಲಾಗಿದೆ? ತಡೆಯಾಜ್ಞೆ ಪಡೆಯಲು ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ಕಟಾರಿಯಾ ವಿರುದ್ಧ ಜಾಮೀನುರಹಿತ ವಾರೆಂಟ್‌ ಜಾರಿ ಮಾಡಲಾಗುವುದು. ನ್ಯಾಯಾಲಯದ ಆದೇಶವನ್ನು ಜಾರಿಗೊಳಿಸಬೇಕು, ಇಲ್ಲವೇ ಆರೋಪಿಗಳನ್ನು ಜೈಲಿಗೆ ಹಾಕಬೇಕು ಅಷ್ಟೆ. ಎಲ್ಲಾ ಆರೋಪಿಗಳನ್ನು ಮಂಪರು ಪರೀಕ್ಷೆ ಪರೀಕ್ಷೆಗೆ ಒಳಪಡಿಸಿದರೆ ಸತ್ಯ ಹೊರಬರುತ್ತದೆ. ಎಸ್‌ಐಟಿ ರಚಿಸಲು ಸರ್ಕಾರಕ್ಕೆ ಅಧಿಕಾರ ನೀಡಿದವರು ಯಾರು? ಹಾಗಾದರೆ ರಾಜ್ಯ ಸರ್ಕಾರ ಕಾನೂನಿಗಿಂತ ಮೇಲಿದೆಯೇ?” ಎಂದು ಕಿಡಿಕಾರಿದೆ ಎಂದು ವರದಿ ಹೇಳಿದೆ.

ಸಮಾಜ ಪರಿವರ್ತನಾ ಸಮುದಾಯ ಪರ ಹಿರಿಯ ವಕೀಲ ಎಸ್‌. ಬಸವರಾಜು ವಾದ ಮಂಡಿಸಿ, “ಪ್ರಬಲರಲ್ಲದವರು ಒತ್ತುವರಿ ಮಾಡಿದ್ದ 14 ಎಕರೆಯನ್ನು ತೆರವುಗೊಳಿಸಲಾಗಿದೆ. ಬಲಿಶಾಲಿಗಳು ಒತ್ತುವರಿ ಮಾಡಿಕೊಂಡಿರುವ ಜಮೀನನ್ನು ತೆರವು ಮಾಡಿಸಲಾಗಿಲ್ಲ. ಬಲಶಾಲಿಗಳು ಎಸ್‌ಐಟಿ ರಚನೆಯನ್ನು ಪ್ರಶ್ನಿಸಿ, ತಡೆಯಾಜ್ಞೆ ಪಡೆಯಲು ಅನುಕೂಲ ಮಾಡಿಕೊಡಲು ವ್ಯವಸ್ಥೆ ಮಾಡಲಾಗಿದೆ. ಸರ್ಕಾರ ತನ್ನ ಜಮೀನನ್ನು ವಶಕ್ಕೆ ಪಡೆಯಲು ನಾವು ಹೋರಾಟ ಮಾಡುತ್ತಿದ್ದೇವೆ. ಆರೋಪಿಗಳ ಹೆಸರನ್ನು ಕೇಳಿದ ತಕ್ಷಣ ಸರ್ಕಾರ ಬೆಚ್ಚುತ್ತಿದೆ. ಆರೋಪಿಗಳ ಜೊತೆ ಸರ್ಕಾರವೂ ಕೈಜೋಡಿಸಿದೆ. ಇಲ್ಲಿ ಅಪ್ರಾಮಾಣಿಕತೆ ಎದ್ದು ಕಾಣುತ್ತಿದೆ. ಪ್ರಕ್ರಿಯೆಯನ್ನು ಸಂಪೂರ್ಣವಾಗಿ ದುರ್ಬಳಕೆ ಮಾಡಲಾಗುತ್ತಿದೆ. ಇದನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಬೇಕು” ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರದ ಪರ ಹಾಜರಾಗಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಕಿರಣ ಎಂ. ರೋಣ್‌, “ಒತ್ತುವರಿ ಮಾಡಿರುವ ಸರ್ಕಾರದ ಜಮೀನನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸಲಾಗುತ್ತಿದೆ. ಕೆರೆಗೆ ಸಂಬಂಧಿಸಿದ 6 ಎಕರೆ 20 ಗಂಟೆ ತೆರವು ಮಾಡಲಾಗಿದೆ. 11 ಎಕರೆ 20 ಗುಂಟೆಯನ್ನು ಪತ್ತೆ ಮಾಡಿದ್ದೇವೆ. ಐಜಿಪಿ ಮತ್ತು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಒಳಗೊಂಡ ಎಸ್‌ಐಟಿ ರಚಿಸಲಾಗಿದೆ. ಎಸ್‌ಐಟಿ ರಚಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ. ಕಾನೂನು ಜಾರಿಗೊಳಿಸಲು ಎಸ್‌ಐಟಿ ರಚಿಸಲಾಗಿದೆ. 18 ಎಕರೆಯನ್ನು ಒತ್ತುವರಿ ಮಾಡಿಕೊಳ್ಳಲಾಗಿದ್ದು, ಅಸಲಿ ದಾಖಲೆಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಬಳಿಕ ಹೈಕೋರ್ಟ್ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ ಎಸ್‌ಐಟಿ ರಚಿಸಿರುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಈ ಬಗ್ಗೆ ವಿವರಣೆ ನೀಡಲು ಮುಂದಿನ ವಿಚಾರಣೆಗೆ ರಾಜೇಂದ್ರ ಕಟಾರಿಯಾ ಖುದ್ದು ಹಾಜರಾಗಲು ಸೂಚನೆ ನೀಡಿದೆ. ಪ್ರಕರಣದಲ್ಲಿ ಮೇಲ್ನೋಟಕ್ಕೆ ಅರೋಪಿಗಳ ವಿರುದ್ಧ ಮುಂದುವರಿಯಲು ದಾಖಲೆಗಳು ಇವೆ. ಆರೋಪ ನಿಗದಿಗೂ ಮುನ್ನ ವಾದ ಆಲಿಸುವ ಪ್ರಕ್ರಿಯೆಯನ್ನು ಮುಂದುವರಿಸಲಾಗುವುದು ಎಂದು ಹೇಳಿ ವಿಚಾರಣೆಯನ್ನು ಮಾರ್ಚ್‌ 19ಕ್ಕೆ ಮುಂದೂಡಿದೆ.

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...