Homeಕರ್ನಾಟಕಹೆಚ್‌ಡಿ ಕುಮಾರಸ್ವಾಮಿ ಭೂ ಒತ್ತುವರಿ: ಅಧಿಕಾರಿಗಳಿಂದ ತೆರವು ಕಾರ್ಯಾಚರಣೆ

ಹೆಚ್‌ಡಿ ಕುಮಾರಸ್ವಾಮಿ ಭೂ ಒತ್ತುವರಿ: ಅಧಿಕಾರಿಗಳಿಂದ ತೆರವು ಕಾರ್ಯಾಚರಣೆ

- Advertisement -
- Advertisement -

ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಮತ್ತು ಅವರ ಕುಟುಂಬದವರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಒತ್ತುವರಿ ಮಾಡಿರುವ ಸರ್ಕಾರಿ ಜಮೀನಿನ ತೆರವು ಕಾರ್ಯಾಚರಣೆ ಮಂಗಳವಾರ (ಮಾ.18) ಆರಂಭಗೊಂಡಿದೆ.

ಕಂದಾಯ ಇಲಾಖೆ ಅಧಿಕಾರಿಗಳು ಪೊಲೀಸ್ ಬಂದೋಬಸ್ತ್‌ನಲ್ಲಿ ಒತ್ತುವರಿ ತೆರವು ಪ್ರಾಂಭಿಸಿದ್ದು, ಕುಮಾರಸ್ವಾಮಿ ಅವರು ಒತ್ತುವರಿ ಮಾಡಿರುವ 5 ಎಕರೆ 25 ಗುಂಟೆ ಸೇರಿದಂತೆ ಒತ್ತುವರಿಯಾಗಿರುವ ಅರ್ಧದಷ್ಟು ಜಾಗದಲ್ಲಿ ಮಂಗಳವಾರ ಗುಂಡಿ ತೋಡಿ ಕಲ್ಲುಗಳನ್ನು ನೆಟ್ಟು , ಬಣ್ಣದಿಂದ ಗೆರೆ ಎಳೆದಿದ್ದಾರೆ. ಉಳಿದ ಜಾಗದ ಕಾರ್ಯಾಚರಣೆ ಬುಧವಾರ ಮುಂದುವರಿಯಲಿದೆ ಎಂದು ವರದಿಯಾಗಿದೆ.

ಕೇತಗಾನಹಳ್ಳಿಯ ಸರ್ವೆ ನಂಬರ್ 7, 8, 9, 16/2 ಹಾಗೂ 79ರಲ್ಲಿ 11 ಎಕರೆ 23 ಗುಂಟೆ ಸರ್ಕಾರಿ ಜಮೀನು ಒತ್ತುವರಿ ಆಗಿರುವುದನ್ನು ಕಂದಾಯ ಇಲಾಖೆ ಮತ್ತು ಸರ್ವೆ ಇಲಾಖೆಯ ಅಧಿಕಾರಿಗಳು ಗುರುತಿಸಿದ್ದಾರೆ. ಇದರಲ್ಲಿ ಕುಮಾರಸ್ವಾಮಿ ಒತ್ತುವರಿ ಮಾಡಿರುವ 5 ಎಕರೆ 25 ಗುಂಟೆ ಜಾಗವೂ ಸೇರಿದೆ.

ಮಂಗಳವಾರ ನಾಲ್ಕು ಜೆಸಿಬಿ ಮತ್ತು ಎರಡು ಟ್ರ್ಯಾಕ್ಟರ್‌ಗಳೊಂದಿಗೆ ಕುಮಾರಸ್ವಾಮಿ ಅವರ ತೋಟದ ಮನೆ ಬಳಿ ಅಧಿಕಾರಿಗಳು ತೆರಳಿದ್ದಾರೆ. ಮುನ್ನೆಚ್ಚರಿಕ ಕ್ರಮವಾಗಿ ಸ್ಥಳದಲ್ಲಿ 25ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು.

ಒತ್ತುವರಿ ತೆರವು ಆರಂಭಕ್ಕೂ ಮುನ್ನ ರಾಮನಗರ ಜಿಲ್ಲಾಧಿಕಾರಿ ಯಶವಂತ್‌ ವಿ.ಗುರುಕರ್ ಅವರು ಅಧಿಕಾರಿಗಳೊಂದಿಗೆ ಬೆಳಿಗ್ಗೆ ಸಭೆ ನಡೆಸಿದ್ದರು.

ಹೆಚ್‌ಡಿಕೆ ಜಾಗದಲ್ಲಿ ಕಾಂಪೌಂಡ್‌, ಶೆಡ್‌

“ಸರ್ವೆ ನಂಬರ್ 8 ಮತ್ತು 9ರ ಜಮೀನಿನಲ್ಲಿ ಕುಮಾರಸ್ವಾಮಿ ತೋಟದ ಮನೆ ಹೊಂದಿದ್ದು, ಅವರು 5 ಎಕರೆ 25 ಗುಂಟೆ ಜಾಗ ಒತ್ತುವರಿ ಮಾಡಿಕೊಂಡಿದ್ದಾರೆ. ಆ ಜಾಗದಲ್ಲಿ ಕಾಂಪೌಂಡ್ ಹಾಗೂ ಶೆಡ್ ನಿರ್ಮಿಸಿದ್ದಾರೆ. ಉಳಿದ ಜಾಗದಲ್ಲಿ ಅಡಿಕೆ ಮತ್ತು ತೆಂಗು ಬೆಳೆಯಲಾಗಿದೆ” ಎಂದು ವರದಿಗಳು ಹೇಳಿವೆ.

ರಾಜ್ಯ ಸರ್ಕಾರದ ಷಡ್ಯಂತ್ರ

“ರೈತನಾಗಿ ಬದುಕಲು ಖರೀದಿಸಿರುವ ಜಮೀನಿನ ವಿಷಯದಲ್ಲಿ ಯಾವುದೇ ಅಕ್ರಮ ಎಸಗಿಲ್ಲ. ಸಾಮಾನ್ಯ ರೈತನ ಜಮೀನು ಒತ್ತುವರಿ ತೆರವು ಮಾಡುವುದಿದ್ದರೂ 15 ದಿನಗಳ ಮೊದಲು ನೋಟಿಸ್ ಕೊಡಬೇಕು. ಆದರೆ, ನನಗೆ ಯಾವುದೇ ನೋಟಿಸ್ ಬಂದಿಲ್ಲ. ಕಾಂಗ್ರೆಸ್ ನೇತೃತ್ವದ ಸರ್ಕಾರ ದಬ್ಬಾಳಿಕೆ ಮಾಡುತ್ತಿದೆ. ನನ್ನನ್ನು ಟಾರ್ಗೆಟ್ ಮಾಡಲಾಗಿದೆ. ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಈ ರೀತಿಯ ಪ್ರಕರಣಕ್ಕೆ ಎಸ್‌ಐಟಿ ರಚಿಸಲಾಗಿದೆ. ಇಂತಹ ನಡವಳಿಕೆಗೆ ಒಂದಲ್ಲ ಒಂದು ದಿನ ಬೇರೆ ರೀತಿಯ ಉತ್ತರ ಬರುತ್ತದೆ” ಎಂದು ಕುಮಾರಸ್ವಾಮಿ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ಕುಮಾರಸ್ವಾಮಿಗೆ ಗಾಬರಿ ಏಕೆ?

“ಕುಮಾರಸ್ವಾಮಿ ಒತ್ತುವರಿ ಮಾಡದಿದ್ದರೆ ಗಾಬರಿ ಆಗುತ್ತಿರುವುದು ಏಕೆ? ಎಲ್ಲದಕ್ಕೂ ಅಳತೆ, ದಾಖಲೆ ಇರುತ್ತದಲ್ಲವೇ. ಇದಕ್ಕೂ ಸಿದ್ದರಾಮಯ್ಯ ಹಾಗೂ ನನಗೂ ಯಾವುದೇ ಸಂಬಂಧ ಇಲ್ಲ. ನ್ಯಾಯಾಲಯ ಹೇಳಿದಂತೆ ಕಾನೂನು ಪ್ರಕಾರ ಕೆಲಸ ಮಾಡಲಾಗಿದೆ. ಕೇತಗಾನಹಳ್ಳಿ ವಿಚಾರಕ್ಕೆ ನಾವು ಯಾವತ್ತೂ ಹೋಗಿಲ್ಲ. ನಮಗೆ ಆ ವಿಚಾರ ಗೊತ್ತೂ ಇಲ್ಲ. ಯಾರೋ ಪಿಐಎಲ್‌ ಹಾಕಿದ್ದಾರೆ. ಕ್ರಮ ಕೈಗೊಳ್ಳದ್ದಕ್ಕೆ ನ್ಯಾಯಾಲಯ ಅಧಿಕಾರಿಗಳಿಗೆ ಛೀಮಾರಿ ಹಾಕಿದೆ. ನ್ಯಾಯಾಲಯ ಗಡುವು ವಿಧಿಸಿದ್ದಕ್ಕೆ ಅಧಿಕಾರಿಗಳು ಹೋಗಿ ಅಳತೆ ಮಾಡಿದ್ದಾರೆ” ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಸೌಜನ್ಯ ಪರ ಸಭೆ, ಪ್ರತಿಭಟನೆಯನ್ನು ಪೊಲೀಸರು ತಡೆಯುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....