Homeಮುಖಪುಟಉದ್ಯೋಗಕ್ಕಾಗಿ ಭೂಮಿ ಹಗರಣ: ಇಡಿ ಮುಂದೆ ವಿಚಾರಣೆಗೆ ಹಾಜರಾದ ಲಾಲು ಪ್ರಸಾದ್ ಯಾದವ್

ಉದ್ಯೋಗಕ್ಕಾಗಿ ಭೂಮಿ ಹಗರಣ: ಇಡಿ ಮುಂದೆ ವಿಚಾರಣೆಗೆ ಹಾಜರಾದ ಲಾಲು ಪ್ರಸಾದ್ ಯಾದವ್

- Advertisement -
- Advertisement -

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಪಾಟ್ನಾದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಮುಂದೆ ಉದ್ಯೋಗಕ್ಕಾಗಿ ಭೂ ಹಗರಣದ ತನಿಖೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಿದ್ದರು. ಲಾಲು ಅವರ ವಿಚಾರಣೆಯನ್ನು ವಿರೋಧಿಸಿ ಪಕ್ಷದ ಬೆಂಬಲಿಗರು ಇಡಿ ಕಚೇರಿಯ ಹೊರಗೆ ಪ್ರತಿಭಟಿಸಿದರು.

‘ಲ್ಯಾಂಡ್ ಫಾರ್ ಜಾಬ್ ಮನಿ ಲಾಂಡರಿಂಗ್’ ಪ್ರಕರಣದ ಆರೋಪಿಗಳಾದ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ, ಮಿಸಾ ಭಾರತಿ, ಹೇಮಾ ಯಾದವ್, ಹೃದಯಾನಂದ ಚೌಧರಿ ಮತ್ತು ಇತರ ಆರೋಪಿಗಳಿಗೆ ರೋಸ್ ಅವೆನ್ಯೂ ನ್ಯಾಯಾಲಯ ಶನಿವಾರ ಸಮನ್ಸ್ ಜಾರಿ ಮಾಡಿದೆ.

ಲಾಲು ಪ್ರಸಾದ್ ಯಾದವ್ ಹೊರತುಪಡಿಸಿ, ರಾಬ್ರಿ ದೇವಿ, ಅವರ ಪುತ್ರಿಯರಾದ ಮಿಸಾ ಭಾರತಿ ಮತ್ತು ಹೇಮಾ ಯಾದವ್, ಹೃದಯಾನಂದ್ ಚೌಧರಿ, ಅಮಿತ್ ಕತ್ಯಾಲ್ ಅವರನ್ನು ಇಡಿ ಹೆಸರಿಸಿದೆ. ಎಬಿ ಎಕ್ಸ್‌ಪೋರ್ಟ್ ಮತ್ತು ಎಕೆ ಇನ್ಫೋಸಿಸ್ಟಮ್ಸ್ ಎಂಬ ಎರಡು ಸಂಸ್ಥೆಗಳ ಮೇಲೂ ಆರೋಪ ಮಾಡಲಾಗಿದೆ.

ನಿತೀಶ್ ಕುಮಾರ್ ಪಕ್ಷ ಬದಲಾಯಿಸಿದ ನಂತರ ಭಾನುವಾರ ಬಿಹಾರ ಸರ್ಕಾರಕ್ಕೆ ಮರಳಿದ ಭಾರತೀಯ ಜನತಾ ಪಕ್ಷ (ಬಿಜೆಪಿ), ಆರ್‌ಜೆಡಿಯಲ್ಲಿ ಭ್ರಷ್ಟಾಚಾರವು ಆಳವಾಗಿ ನೆಲೆಗೊಂಡಿದೆ ಎಂದು ಹೇಳಿಕೊಂಡಿದೆ.

‘ಇವರು (ಲಾಲು ಯಾದವ್) ಭ್ರಷ್ಟರು ಎಂಬುದು ದೇಶದ ಜನತೆಗೆ ಗೊತ್ತಿದೆ. ಭ್ರಷ್ಟಾಚಾರವೇ ಅವರಿಗೆ ರತ್ನವಾಗಿದೆ… ಒಂದೂವರೆ ವರ್ಷದೊಳಗೆ ಲಕ್ಷಾಧಿಪತಿಗಳಾಗುವುದು ಹೇಗೆ ಎಂಬ ವ್ಯವಸ್ಥೆಯನ್ನು ಬಿಹಾರದ ಯುವಕರಿಗೆ ತಿಳಿಸುವಂತೆ ತೇಜಸ್ವಿ ಯಾದವ್ ಅವರನ್ನು ಒತ್ತಾಯಿಸಲು ಬಯಸುತ್ತೇನೆ’ ಎಂದು ಬಿಹಾರ ಬಿಜೆಪಿ ಘಟಕದ ಮುಖ್ಯಸ್ಥ, ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಹೇಳಿದ್ದಾರೆ.

ಭೂಮಿ-ಉದ್ಯೋಗ ಹಗರಣ ಪ್ರಕರಣ

ಲಾಲು ಯಾದವ್ ಅವರು 2004 ಮತ್ತು 2009ರ ನಡುವೆ ರೈಲ್ವೇ ಸಚಿವರಾಗಿದ್ದಾಗ ಈ ಹಗರಣ ನಡೆದಿದೆ ಎನ್ನಲಾಗುತ್ತಿದೆ. ಆರ್‌ಜೆಡಿ ರಾಷ್ಟ್ರೀಯ ಅಧ್ಯಕ್ಷರ ಹೊರತಾಗಿ, ಚಾರ್ಜ್‌ಶೀಟ್ ಆಗಿನ ರೈಲ್ವೆ ಜನರಲ್ ಮ್ಯಾನೇಜರ್ ಹೆಸರನ್ನೂ ಒಳಗೊಂಡಿದೆ. ರೈಲ್ವೇ ನೇಮಕ ಮಾಡಲು ಅಭ್ಯರ್ಥಿಗಳ ಕುಟುಂಬದ ಸದಸ್ಯರ ಮಾಲೀಕತ್ವದ ಜಮೀನನ್ನು ಲಾಲು ಪ್ರಸಾದ್ ಯಾದವ್ ಅವರು ಪತ್ನಿ ರಾಬ್ರಿ ದೇವಿ ಮತ್ತು ಮಗಳು ಮಿಸಾ ಭಾರತಿ ಅವರ ಹೆಸರಿಗೆ ಮಾರಾಟ ಮಾಡಿಸಿದರು. ಇದು ಮಾರುಕಟ್ಟೆ ದರಗಳಿಗಿಂತ ಕಡಿಮೆಯಾಗಿತ್ತು ಎಂಬ ಆರೋಪ ಮಾಡಲಾಗಿದೆ.

ಇಡಿ ತನಿಖೆಯ ಪ್ರಕಾರ, ಪಾಟ್ನಾ ಮತ್ತು ಇತರ ಪ್ರದೇಶಗಳಲ್ಲಿನ ಪ್ರಮುಖ ಸ್ಥಳಗಳಲ್ಲಿ ಹಲವಾರು ತುಂಡು ಭೂಮಿಯನ್ನು ಆಗಿನ ರೈಲ್ವೆ ಸಚಿವರ ಕುಟುಂಬವು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿದೆ. ಈ ಜಮೀನುಗಳ ಪ್ರಸ್ತುತ ಮಾರುಕಟ್ಟೆ ಮೌಲ್ಯ ₹200 ಕೋಟಿಗೂ ಹೆಚ್ಚು ಎಂದು ಅಂದಾಜಿಸಲಾಗಿದೆ.

ಬಿಡಿ ಗ್ರೂಪ್-ಡಿ ಅರ್ಜಿದಾರರಿಂದ ಲಾಲು ಯಾದವ್ ಅವರ ಕುಟುಂಬವು ಕೇವಲ ₹7.5 ಲಕ್ಷಕ್ಕೆ ಸ್ವಾಧೀನಪಡಿಸಿಕೊಂಡ ನಾಲ್ಕು ಎಕರೆ ಭೂಮಿಯನ್ನು ರಾಬ್ರಿ ದೇವಿ ಅವರು ₹ 3.5 ಕೋಟಿಗಳಷ್ಟು ದೊಡ್ಡ ಲಾಭದೊಂದಿಗೆ ಆರ್‌ಜೆಡಿ ಮಾಜಿ ಶಾಸಕ ಸೈಯದ್ ಅಬು ದೋಜಾನಾ ಅವರಿಗೆ ಮಾರಾಟ ಮಾಡಿದ್ದಾರೆ ಎಂದು ಇಡಿ ತನಿಖೆಯು ಕಂಡುಹಿಡಿದಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿಗಳಾದ ಲಾಲು ಪ್ರಸಾದ್, ರಾಬ್ರಿ ದೇವಿ, ಅವರ ಪುತ್ರಿ ಮಿಸಾ ಭಾರತಿ ಮತ್ತು ಇತರ 13 ಮಂದಿಯ ವಿರುದ್ಧ ಭೂಮಿ-ಉದ್ಯೋಗ ಹಗರಣದಲ್ಲಿ ಸಿಬಿಐ ಆರೋಪಪಟ್ಟಿ ಸಲ್ಲಿಸಿತ್ತು.

ಇದನ್ನೂ ಓದಿ; ಕೆರಗೋಡು ಧ್ವಜ ವಿವಾದ: ಬಿಜೆಪಿ-ಆರ್‌ಎಸ್‌ಎಸ್‌ ಎಂಬ ದೇಶದ್ರೋಹಿಗಳಿಗೆ ಹೆದರುವುದುಂಟೆ ಎಂದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...