Homeಮುಖಪುಟಉದ್ಯೋಗಕ್ಕಾಗಿ ಭೂಮಿ ಹಗರಣ: ಇಡಿ ಮುಂದೆ ವಿಚಾರಣೆಗೆ ಹಾಜರಾದ ಲಾಲು ಪ್ರಸಾದ್ ಯಾದವ್

ಉದ್ಯೋಗಕ್ಕಾಗಿ ಭೂಮಿ ಹಗರಣ: ಇಡಿ ಮುಂದೆ ವಿಚಾರಣೆಗೆ ಹಾಜರಾದ ಲಾಲು ಪ್ರಸಾದ್ ಯಾದವ್

- Advertisement -
- Advertisement -

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಪಾಟ್ನಾದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಮುಂದೆ ಉದ್ಯೋಗಕ್ಕಾಗಿ ಭೂ ಹಗರಣದ ತನಿಖೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಿದ್ದರು. ಲಾಲು ಅವರ ವಿಚಾರಣೆಯನ್ನು ವಿರೋಧಿಸಿ ಪಕ್ಷದ ಬೆಂಬಲಿಗರು ಇಡಿ ಕಚೇರಿಯ ಹೊರಗೆ ಪ್ರತಿಭಟಿಸಿದರು.

‘ಲ್ಯಾಂಡ್ ಫಾರ್ ಜಾಬ್ ಮನಿ ಲಾಂಡರಿಂಗ್’ ಪ್ರಕರಣದ ಆರೋಪಿಗಳಾದ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ, ಮಿಸಾ ಭಾರತಿ, ಹೇಮಾ ಯಾದವ್, ಹೃದಯಾನಂದ ಚೌಧರಿ ಮತ್ತು ಇತರ ಆರೋಪಿಗಳಿಗೆ ರೋಸ್ ಅವೆನ್ಯೂ ನ್ಯಾಯಾಲಯ ಶನಿವಾರ ಸಮನ್ಸ್ ಜಾರಿ ಮಾಡಿದೆ.

ಲಾಲು ಪ್ರಸಾದ್ ಯಾದವ್ ಹೊರತುಪಡಿಸಿ, ರಾಬ್ರಿ ದೇವಿ, ಅವರ ಪುತ್ರಿಯರಾದ ಮಿಸಾ ಭಾರತಿ ಮತ್ತು ಹೇಮಾ ಯಾದವ್, ಹೃದಯಾನಂದ್ ಚೌಧರಿ, ಅಮಿತ್ ಕತ್ಯಾಲ್ ಅವರನ್ನು ಇಡಿ ಹೆಸರಿಸಿದೆ. ಎಬಿ ಎಕ್ಸ್‌ಪೋರ್ಟ್ ಮತ್ತು ಎಕೆ ಇನ್ಫೋಸಿಸ್ಟಮ್ಸ್ ಎಂಬ ಎರಡು ಸಂಸ್ಥೆಗಳ ಮೇಲೂ ಆರೋಪ ಮಾಡಲಾಗಿದೆ.

ನಿತೀಶ್ ಕುಮಾರ್ ಪಕ್ಷ ಬದಲಾಯಿಸಿದ ನಂತರ ಭಾನುವಾರ ಬಿಹಾರ ಸರ್ಕಾರಕ್ಕೆ ಮರಳಿದ ಭಾರತೀಯ ಜನತಾ ಪಕ್ಷ (ಬಿಜೆಪಿ), ಆರ್‌ಜೆಡಿಯಲ್ಲಿ ಭ್ರಷ್ಟಾಚಾರವು ಆಳವಾಗಿ ನೆಲೆಗೊಂಡಿದೆ ಎಂದು ಹೇಳಿಕೊಂಡಿದೆ.

‘ಇವರು (ಲಾಲು ಯಾದವ್) ಭ್ರಷ್ಟರು ಎಂಬುದು ದೇಶದ ಜನತೆಗೆ ಗೊತ್ತಿದೆ. ಭ್ರಷ್ಟಾಚಾರವೇ ಅವರಿಗೆ ರತ್ನವಾಗಿದೆ… ಒಂದೂವರೆ ವರ್ಷದೊಳಗೆ ಲಕ್ಷಾಧಿಪತಿಗಳಾಗುವುದು ಹೇಗೆ ಎಂಬ ವ್ಯವಸ್ಥೆಯನ್ನು ಬಿಹಾರದ ಯುವಕರಿಗೆ ತಿಳಿಸುವಂತೆ ತೇಜಸ್ವಿ ಯಾದವ್ ಅವರನ್ನು ಒತ್ತಾಯಿಸಲು ಬಯಸುತ್ತೇನೆ’ ಎಂದು ಬಿಹಾರ ಬಿಜೆಪಿ ಘಟಕದ ಮುಖ್ಯಸ್ಥ, ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಹೇಳಿದ್ದಾರೆ.

ಭೂಮಿ-ಉದ್ಯೋಗ ಹಗರಣ ಪ್ರಕರಣ

ಲಾಲು ಯಾದವ್ ಅವರು 2004 ಮತ್ತು 2009ರ ನಡುವೆ ರೈಲ್ವೇ ಸಚಿವರಾಗಿದ್ದಾಗ ಈ ಹಗರಣ ನಡೆದಿದೆ ಎನ್ನಲಾಗುತ್ತಿದೆ. ಆರ್‌ಜೆಡಿ ರಾಷ್ಟ್ರೀಯ ಅಧ್ಯಕ್ಷರ ಹೊರತಾಗಿ, ಚಾರ್ಜ್‌ಶೀಟ್ ಆಗಿನ ರೈಲ್ವೆ ಜನರಲ್ ಮ್ಯಾನೇಜರ್ ಹೆಸರನ್ನೂ ಒಳಗೊಂಡಿದೆ. ರೈಲ್ವೇ ನೇಮಕ ಮಾಡಲು ಅಭ್ಯರ್ಥಿಗಳ ಕುಟುಂಬದ ಸದಸ್ಯರ ಮಾಲೀಕತ್ವದ ಜಮೀನನ್ನು ಲಾಲು ಪ್ರಸಾದ್ ಯಾದವ್ ಅವರು ಪತ್ನಿ ರಾಬ್ರಿ ದೇವಿ ಮತ್ತು ಮಗಳು ಮಿಸಾ ಭಾರತಿ ಅವರ ಹೆಸರಿಗೆ ಮಾರಾಟ ಮಾಡಿಸಿದರು. ಇದು ಮಾರುಕಟ್ಟೆ ದರಗಳಿಗಿಂತ ಕಡಿಮೆಯಾಗಿತ್ತು ಎಂಬ ಆರೋಪ ಮಾಡಲಾಗಿದೆ.

ಇಡಿ ತನಿಖೆಯ ಪ್ರಕಾರ, ಪಾಟ್ನಾ ಮತ್ತು ಇತರ ಪ್ರದೇಶಗಳಲ್ಲಿನ ಪ್ರಮುಖ ಸ್ಥಳಗಳಲ್ಲಿ ಹಲವಾರು ತುಂಡು ಭೂಮಿಯನ್ನು ಆಗಿನ ರೈಲ್ವೆ ಸಚಿವರ ಕುಟುಂಬವು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿದೆ. ಈ ಜಮೀನುಗಳ ಪ್ರಸ್ತುತ ಮಾರುಕಟ್ಟೆ ಮೌಲ್ಯ ₹200 ಕೋಟಿಗೂ ಹೆಚ್ಚು ಎಂದು ಅಂದಾಜಿಸಲಾಗಿದೆ.

ಬಿಡಿ ಗ್ರೂಪ್-ಡಿ ಅರ್ಜಿದಾರರಿಂದ ಲಾಲು ಯಾದವ್ ಅವರ ಕುಟುಂಬವು ಕೇವಲ ₹7.5 ಲಕ್ಷಕ್ಕೆ ಸ್ವಾಧೀನಪಡಿಸಿಕೊಂಡ ನಾಲ್ಕು ಎಕರೆ ಭೂಮಿಯನ್ನು ರಾಬ್ರಿ ದೇವಿ ಅವರು ₹ 3.5 ಕೋಟಿಗಳಷ್ಟು ದೊಡ್ಡ ಲಾಭದೊಂದಿಗೆ ಆರ್‌ಜೆಡಿ ಮಾಜಿ ಶಾಸಕ ಸೈಯದ್ ಅಬು ದೋಜಾನಾ ಅವರಿಗೆ ಮಾರಾಟ ಮಾಡಿದ್ದಾರೆ ಎಂದು ಇಡಿ ತನಿಖೆಯು ಕಂಡುಹಿಡಿದಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿಗಳಾದ ಲಾಲು ಪ್ರಸಾದ್, ರಾಬ್ರಿ ದೇವಿ, ಅವರ ಪುತ್ರಿ ಮಿಸಾ ಭಾರತಿ ಮತ್ತು ಇತರ 13 ಮಂದಿಯ ವಿರುದ್ಧ ಭೂಮಿ-ಉದ್ಯೋಗ ಹಗರಣದಲ್ಲಿ ಸಿಬಿಐ ಆರೋಪಪಟ್ಟಿ ಸಲ್ಲಿಸಿತ್ತು.

ಇದನ್ನೂ ಓದಿ; ಕೆರಗೋಡು ಧ್ವಜ ವಿವಾದ: ಬಿಜೆಪಿ-ಆರ್‌ಎಸ್‌ಎಸ್‌ ಎಂಬ ದೇಶದ್ರೋಹಿಗಳಿಗೆ ಹೆದರುವುದುಂಟೆ ಎಂದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...