Homeಮುಖಪುಟಉದ್ಯೋಗಕ್ಕಾಗಿ ಭೂಮಿ ಹಗರಣ: ಇಡಿ ಮುಂದೆ ವಿಚಾರಣೆಗೆ ಹಾಜರಾದ ಲಾಲು ಪ್ರಸಾದ್ ಯಾದವ್

ಉದ್ಯೋಗಕ್ಕಾಗಿ ಭೂಮಿ ಹಗರಣ: ಇಡಿ ಮುಂದೆ ವಿಚಾರಣೆಗೆ ಹಾಜರಾದ ಲಾಲು ಪ್ರಸಾದ್ ಯಾದವ್

- Advertisement -
- Advertisement -

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಪಾಟ್ನಾದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಮುಂದೆ ಉದ್ಯೋಗಕ್ಕಾಗಿ ಭೂ ಹಗರಣದ ತನಿಖೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಿದ್ದರು. ಲಾಲು ಅವರ ವಿಚಾರಣೆಯನ್ನು ವಿರೋಧಿಸಿ ಪಕ್ಷದ ಬೆಂಬಲಿಗರು ಇಡಿ ಕಚೇರಿಯ ಹೊರಗೆ ಪ್ರತಿಭಟಿಸಿದರು.

‘ಲ್ಯಾಂಡ್ ಫಾರ್ ಜಾಬ್ ಮನಿ ಲಾಂಡರಿಂಗ್’ ಪ್ರಕರಣದ ಆರೋಪಿಗಳಾದ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ, ಮಿಸಾ ಭಾರತಿ, ಹೇಮಾ ಯಾದವ್, ಹೃದಯಾನಂದ ಚೌಧರಿ ಮತ್ತು ಇತರ ಆರೋಪಿಗಳಿಗೆ ರೋಸ್ ಅವೆನ್ಯೂ ನ್ಯಾಯಾಲಯ ಶನಿವಾರ ಸಮನ್ಸ್ ಜಾರಿ ಮಾಡಿದೆ.

ಲಾಲು ಪ್ರಸಾದ್ ಯಾದವ್ ಹೊರತುಪಡಿಸಿ, ರಾಬ್ರಿ ದೇವಿ, ಅವರ ಪುತ್ರಿಯರಾದ ಮಿಸಾ ಭಾರತಿ ಮತ್ತು ಹೇಮಾ ಯಾದವ್, ಹೃದಯಾನಂದ್ ಚೌಧರಿ, ಅಮಿತ್ ಕತ್ಯಾಲ್ ಅವರನ್ನು ಇಡಿ ಹೆಸರಿಸಿದೆ. ಎಬಿ ಎಕ್ಸ್‌ಪೋರ್ಟ್ ಮತ್ತು ಎಕೆ ಇನ್ಫೋಸಿಸ್ಟಮ್ಸ್ ಎಂಬ ಎರಡು ಸಂಸ್ಥೆಗಳ ಮೇಲೂ ಆರೋಪ ಮಾಡಲಾಗಿದೆ.

ನಿತೀಶ್ ಕುಮಾರ್ ಪಕ್ಷ ಬದಲಾಯಿಸಿದ ನಂತರ ಭಾನುವಾರ ಬಿಹಾರ ಸರ್ಕಾರಕ್ಕೆ ಮರಳಿದ ಭಾರತೀಯ ಜನತಾ ಪಕ್ಷ (ಬಿಜೆಪಿ), ಆರ್‌ಜೆಡಿಯಲ್ಲಿ ಭ್ರಷ್ಟಾಚಾರವು ಆಳವಾಗಿ ನೆಲೆಗೊಂಡಿದೆ ಎಂದು ಹೇಳಿಕೊಂಡಿದೆ.

‘ಇವರು (ಲಾಲು ಯಾದವ್) ಭ್ರಷ್ಟರು ಎಂಬುದು ದೇಶದ ಜನತೆಗೆ ಗೊತ್ತಿದೆ. ಭ್ರಷ್ಟಾಚಾರವೇ ಅವರಿಗೆ ರತ್ನವಾಗಿದೆ… ಒಂದೂವರೆ ವರ್ಷದೊಳಗೆ ಲಕ್ಷಾಧಿಪತಿಗಳಾಗುವುದು ಹೇಗೆ ಎಂಬ ವ್ಯವಸ್ಥೆಯನ್ನು ಬಿಹಾರದ ಯುವಕರಿಗೆ ತಿಳಿಸುವಂತೆ ತೇಜಸ್ವಿ ಯಾದವ್ ಅವರನ್ನು ಒತ್ತಾಯಿಸಲು ಬಯಸುತ್ತೇನೆ’ ಎಂದು ಬಿಹಾರ ಬಿಜೆಪಿ ಘಟಕದ ಮುಖ್ಯಸ್ಥ, ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಹೇಳಿದ್ದಾರೆ.

ಭೂಮಿ-ಉದ್ಯೋಗ ಹಗರಣ ಪ್ರಕರಣ

ಲಾಲು ಯಾದವ್ ಅವರು 2004 ಮತ್ತು 2009ರ ನಡುವೆ ರೈಲ್ವೇ ಸಚಿವರಾಗಿದ್ದಾಗ ಈ ಹಗರಣ ನಡೆದಿದೆ ಎನ್ನಲಾಗುತ್ತಿದೆ. ಆರ್‌ಜೆಡಿ ರಾಷ್ಟ್ರೀಯ ಅಧ್ಯಕ್ಷರ ಹೊರತಾಗಿ, ಚಾರ್ಜ್‌ಶೀಟ್ ಆಗಿನ ರೈಲ್ವೆ ಜನರಲ್ ಮ್ಯಾನೇಜರ್ ಹೆಸರನ್ನೂ ಒಳಗೊಂಡಿದೆ. ರೈಲ್ವೇ ನೇಮಕ ಮಾಡಲು ಅಭ್ಯರ್ಥಿಗಳ ಕುಟುಂಬದ ಸದಸ್ಯರ ಮಾಲೀಕತ್ವದ ಜಮೀನನ್ನು ಲಾಲು ಪ್ರಸಾದ್ ಯಾದವ್ ಅವರು ಪತ್ನಿ ರಾಬ್ರಿ ದೇವಿ ಮತ್ತು ಮಗಳು ಮಿಸಾ ಭಾರತಿ ಅವರ ಹೆಸರಿಗೆ ಮಾರಾಟ ಮಾಡಿಸಿದರು. ಇದು ಮಾರುಕಟ್ಟೆ ದರಗಳಿಗಿಂತ ಕಡಿಮೆಯಾಗಿತ್ತು ಎಂಬ ಆರೋಪ ಮಾಡಲಾಗಿದೆ.

ಇಡಿ ತನಿಖೆಯ ಪ್ರಕಾರ, ಪಾಟ್ನಾ ಮತ್ತು ಇತರ ಪ್ರದೇಶಗಳಲ್ಲಿನ ಪ್ರಮುಖ ಸ್ಥಳಗಳಲ್ಲಿ ಹಲವಾರು ತುಂಡು ಭೂಮಿಯನ್ನು ಆಗಿನ ರೈಲ್ವೆ ಸಚಿವರ ಕುಟುಂಬವು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿದೆ. ಈ ಜಮೀನುಗಳ ಪ್ರಸ್ತುತ ಮಾರುಕಟ್ಟೆ ಮೌಲ್ಯ ₹200 ಕೋಟಿಗೂ ಹೆಚ್ಚು ಎಂದು ಅಂದಾಜಿಸಲಾಗಿದೆ.

ಬಿಡಿ ಗ್ರೂಪ್-ಡಿ ಅರ್ಜಿದಾರರಿಂದ ಲಾಲು ಯಾದವ್ ಅವರ ಕುಟುಂಬವು ಕೇವಲ ₹7.5 ಲಕ್ಷಕ್ಕೆ ಸ್ವಾಧೀನಪಡಿಸಿಕೊಂಡ ನಾಲ್ಕು ಎಕರೆ ಭೂಮಿಯನ್ನು ರಾಬ್ರಿ ದೇವಿ ಅವರು ₹ 3.5 ಕೋಟಿಗಳಷ್ಟು ದೊಡ್ಡ ಲಾಭದೊಂದಿಗೆ ಆರ್‌ಜೆಡಿ ಮಾಜಿ ಶಾಸಕ ಸೈಯದ್ ಅಬು ದೋಜಾನಾ ಅವರಿಗೆ ಮಾರಾಟ ಮಾಡಿದ್ದಾರೆ ಎಂದು ಇಡಿ ತನಿಖೆಯು ಕಂಡುಹಿಡಿದಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿಗಳಾದ ಲಾಲು ಪ್ರಸಾದ್, ರಾಬ್ರಿ ದೇವಿ, ಅವರ ಪುತ್ರಿ ಮಿಸಾ ಭಾರತಿ ಮತ್ತು ಇತರ 13 ಮಂದಿಯ ವಿರುದ್ಧ ಭೂಮಿ-ಉದ್ಯೋಗ ಹಗರಣದಲ್ಲಿ ಸಿಬಿಐ ಆರೋಪಪಟ್ಟಿ ಸಲ್ಲಿಸಿತ್ತು.

ಇದನ್ನೂ ಓದಿ; ಕೆರಗೋಡು ಧ್ವಜ ವಿವಾದ: ಬಿಜೆಪಿ-ಆರ್‌ಎಸ್‌ಎಸ್‌ ಎಂಬ ದೇಶದ್ರೋಹಿಗಳಿಗೆ ಹೆದರುವುದುಂಟೆ ಎಂದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...