Homeಅಂತರಾಷ್ಟ್ರೀಯಸ್ಥಳೀಯ ಬುಡಕಟ್ಟು ಸಮುದಾಯದ ಭೂಮಿ ವಶಕ್ಕೆ ಯತ್ನ | ನಿತ್ಯಾನಂದನ ಕೈಲಾಸದ ಸದಸ್ಯರನ್ನು ಗಡೀಪಾರು ಮಾಡಿದ...

ಸ್ಥಳೀಯ ಬುಡಕಟ್ಟು ಸಮುದಾಯದ ಭೂಮಿ ವಶಕ್ಕೆ ಯತ್ನ | ನಿತ್ಯಾನಂದನ ಕೈಲಾಸದ ಸದಸ್ಯರನ್ನು ಗಡೀಪಾರು ಮಾಡಿದ ಬೊಲಿವಿಯಾ

- Advertisement -
- Advertisement -

ಸ್ಥಳೀಯ ಬುಡಕಟ್ಟು ಸಮುದಾಯಗಳಿಗೆ ಸೇರಿದ ಭೂಮಿಯನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸಿದ ಆರೋಪದ ಮೇಲೆ ವಿವಾದಾತ್ಮಕ ಧಾರ್ಮಿಕ ಗುರು ನಿತ್ಯಾನಂದ ಸ್ಥಾಪಿಸಿದ ಕಾಲ್ಪನಿಕ ದೇಶವಾದ ಕೈಲಾಸದ 20 ಸದಸ್ಯರನ್ನು ಬೊಲಿವಿಯಾ ಮಂಗಳವಾರ ಗಡೀಪಾರು ಮಾಡಿದೆ ಎಂದು ವರದಿಯಾಗಿದೆ. ನಿತ್ಯಾನಂದ ವಿರುದ್ಧ ಭಾರತದಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ದೇಶದಿಂದ ಪರಾರಿಯಾಗಿದ್ದಾರೆ. ಸ್ಥಳೀಯ ಬುಡಕಟ್ಟು ಸಮುದಾಯದ

“ಈ ಗುಂಪಿಗೆ ಸೇರಿದ ಜನರ ಕಡ್ಡಾಯ ನಿರ್ಗಮನವನ್ನು ಜಾರಿಗೆ ತರಲಾಗಿದೆ. ಅವರು ಇನ್ನು ಮುಂದೆ ನಮ್ಮ ರಾಷ್ಟ್ರೀಯ ಪ್ರದೇಶದಲ್ಲಿ ಇರುವಂತಿಲ್ಲ” ಎಂದು ಬೊಲಿವಿಯಾದ ವಲಸೆ ನಿರ್ದೇಶಕಿ ಕ್ಯಾಥರೀನ್ ಕಾಲ್ಡೆರಾನ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಅವರ ವಿರುದ್ಧ ವಾರಾಂತ್ಯದಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಸ್ಥಳೀಯ ಬುಡಕಟ್ಟು ಸಮುದಾಯದ

ಭಾರತದಲ್ಲಿ ಅತ್ಯಾಚಾರದ ಆರೋಪ ಹೊತ್ತಿರುವ ನಿತ್ಯಾನಂದ, ಈಕ್ವೆಡಾರ್ ಕರಾವಳಿಯಲ್ಲಿ ಒಂದು ದ್ವೀಪ ಎಂದು ಹೇಳಲಾದ ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸ ಎಂಬ ದೇಶವನ್ನು ಸ್ಥಾಪಿಸಿರುವುದಾಗಿ ಹೇಳಿಕೊಂಡಿದ್ದಾರೆ.

“ಈ ಪಂಥವು ನಮ್ಮ ದೇಶಕ್ಕೆ ಆಗಮಿಸಿದ್ದು, ನಮ್ಮ ಸ್ಥಳೀಯ ಬುಡಕಟ್ಟು ಜನರ ನಂಬಿಕೆಯನ್ನು ಗಳಿಸಿ ಅವರ ಹಕ್ಕುಗಳನ್ನು ಉಲ್ಲಂಘಿಸಲು ಪ್ರಯತ್ನಿಸಿದೆ. ಅವರ ಸ್ಥಳೀಯ ಭೂಮಿಯನ್ನು ಬಳಸುವಂತೆ ಮಾಡಿ ಅವರನ್ನು ಮೋಸಗೊಳಿಸಲು ಪ್ರಯತ್ನಿಸುತ್ತಿದೆ” ಎಂದು ಕಾಲ್ಡೆರಾನ್ ಹೇಳಿದ್ದಾರೆ.

ಈ ಬಗ್ಗೆ ಬೊಲಿವಿಯನ್ ಪತ್ರಿಕೆ ಎಲ್ ಡೆಬರ್ ಮಾರ್ಚ್ 16 ರಂದು ತನಿಖಾ ವರದಿ ಪ್ರಕಟಿಸಿತ್ತು. ಇದರ ನಂತರ ಈ ಗಡಿಪಾರು ಮಾಡಲಾಗಿದೆ ಎಂದು ವರದಿಯಾಗಿದೆ. ಬೌರೆ, ಕಯುಬಾಬಾ ಮತ್ತು ಎಸ್ಸೆ ಎಜ್ಜಾ ಎಂಬ ಮೂರು ಸ್ಥಳೀಯ ಬುಡಕಟ್ಟು ಗುಂಪುಗಳು ಸೆಪ್ಟೆಂಬರ್ ಮತ್ತು ನವೆಂಬರ್ ನಡುವೆ ಸುಮಾರು 4.8 ಲಕ್ಷ ಹೆಕ್ಟೇರ್ ಸಾರ್ವಜನಿಕ ಭೂಮಿಗೆ ಕೈಲಾಸದೊಂದಿಗೆ ಗುತ್ತಿಗೆ ಒಪ್ಪಂದಗಳಿಗೆ ಸಹಿ ಹಾಕಿವೆ ಎಂದು ವರದಿ ಬಹಿರಂಗಪಡಿಸಿತ್ತು.

ಈ ಒಪ್ಪಂದಗಳ ಪ್ರಕಾರ, “ಸಾವಿರ ವರ್ಷಗಳ ಕಾಲ” ಭೂಮಿಯ ಬಳಕೆಗೆ ಪ್ರತಿಯಾಗಿ ವಾರ್ಷಿಕ ಬಾಡಿಗೆಯನ್ನು ಪಾವತಿಸಲಾಗುವುದು ಎಂದು ವರದಿ ಹೇಳಿದೆ. ಆರೋಪಗಳು ಬೆಳಕಿಗೆ ಬಂದ ನಂತರ, ಮತ್ತೊಂದು ಸುದ್ದಿ ಸಂಸ್ಥೆ, ಲಾ ರಿಪಬ್ಲಿಕಾ, ಕೈಲಾಸಕ್ಕೆ ಅಂತರರಾಷ್ಟ್ರೀಯ ಮನ್ನಣೆ ಇಲ್ಲ ಎಂದು ಬೊಲಿವಿಯನ್ ವಿದೇಶಾಂಗ ಸಚಿವಾಲಯ ಹೇಳಿರುವುದನ್ನು ಉಲ್ಲೇಖಿಸಿದೆ.

ಸ್ಥಳೀಯ ಬುಡಕಟ್ಟು ಸಮುದಾಯಗಳು ತಮ್ಮ ಭೂಮಿಯನ್ನು ನಿರ್ವಹಿಸಬಹುದಾದರೂ, ಇತರ ದೇಶಗಳೊಂದಿಗಿನ ಸಂಬಂಧಗಳು ರಾಷ್ಟ್ರೀಯ ಸರ್ಕಾರದ ವಿಶೇಷ ಜವಾಬ್ದಾರಿಯಾಗಿದೆ ಎಂದು ಸಚಿವಾಲಯ ಹೇಳಿದೆ. “ಈ ರೀತಿಯ ಗುಪ್ತ ಒಪ್ಪಂದಗಳನ್ನು ಸರ್ಕಾರ ಎಂದಿಗೂ ಅನುಮೋದಿಸಿಲ್ಲ, ಅಥವಾ ಎಂದಿಗೂ ಅನುಮೋದಿಸುವುದಿಲ್ಲ” ಎಂದು ಗ್ರಾಮೀಣಾಭಿವೃದ್ಧಿ ಮತ್ತು ಭೂ ಸಚಿವ ಯಾಮಿಲ್ ಫ್ಲೋರ್ಸ್ ಹೇಳಿದ್ದನ್ನು ಲಾ ರಿಪಬ್ಲಿಕಾ ಉಲ್ಲೇಖಿಸಿದೆ.

ಸ್ಥಳೀಯ ನಾಯಕರು ಮತ್ತು ಕಾಲ್ಪನಿಕ ದೇಶದ ಪ್ರತಿನಿಧಿಗಳ ನಡುವೆ ಸಹಿ ಹಾಕಿದ ಒಪ್ಪಂದಗಳನ್ನು ಪರಿಶೀಲಿಸಲು ತನಿಖೆ ನಡೆಸಲಾಗುತ್ತಿದೆ ಎಂದು ಫ್ಲೋರ್ಸ್ ಹೇಳಿದರು, ಈ ಅಪರಾಧಗಳನ್ನು ಶಿಕ್ಷಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಮಂಗಳವಾರ ದೇಶದಿಂದ ಹೊರಹಾಕಲ್ಪಟ್ಟವರಲ್ಲಿ ಮೂವರನ್ನು ಎಕ್ಸಾಲ್ಟಾಸಿಯಾನ್ ಪುರಸಭೆಯಲ್ಲಿ ಪತ್ತೆ ಮಾಡಿ ಗಡೀಪಾರು ಮಾಡಲು ಸಾಂಟಾ ಕ್ರೂಜ್‌ನ ವಿರು ವಿರು ವಿಮಾನ ನಿಲ್ದಾಣಕ್ಕೆ ಕರೆದೊಯ್ಯಲಾಗಿದೆ ಎಂದು ಕ್ಯಾಲ್ಡೆರಾನ್ ಹೇಳಿದ್ದಾರೆ. ಉಳಿದ 17 ಜನರನ್ನು ಸಾಂಟಾ ಕ್ರೂಜ್‌ನಲ್ಲಿ ಪತ್ತೆ ಮಾಡಲಾಯಿತು ಮತ್ತು ಅವರನ್ನು ದೇಶದಿಂದ ಹೊರಹಾಕಲಾಗಿದೆ ಎಂದು ತಿಳಿಸಲಾಯಿತು ಎಂದು ಅವರು ಹೇಳಿದ್ದಾರೆ.

“ಎರಡೂ ನಗರಗಳಲ್ಲಿನ ವಿವಿಧ ಕಾರ್ಯಾಚರಣೆಗಳಲ್ಲಿ ಕಂಡುಬಂದ ಜನರು ಇನ್ನು ಮುಂದೆ ನಮ್ಮ ಪ್ರದೇಶದಲ್ಲಿ ಇರುವಂತಿಲ್ಲ. ಅವರಿಗೆ ಅಂತಿಮ ಕಡ್ಡಾಯ ನಿರ್ಗಮನ ಆದೇಶಗಳನ್ನು ನೀಡಲಾಗಿದೆ, ಇದು ಅವರನ್ನು ಬೊಲಿವಿಯಾಕ್ಕೆ ಮತ್ತೆ ಪ್ರವೇಶಿಸುವುದನ್ನು ತಡೆಯುತ್ತದೆ.” ಎಂದು ಅವರು ಹೇಳಿದ್ದಾರೆ.

ಅತ್ಯಾಚಾರ ಮತ್ತು ಮಕ್ಕಳನ್ನು ತನ್ನ ಆಶ್ರಮದಲ್ಲಿ ಅಕ್ರಮವಾಗಿ ಬಂಧಿಸಿದ ಆರೋಪದ ನಂತರ ನಿತ್ಯಾನಂದ ಭಾರತದಿಂದ ಪಲಾಯನ ಮಾಡಿದ್ದರು. 2019 ರಲ್ಲಿ, ಭಾರತವು ನಿತ್ಯಾನಂದನ ಪಾಸ್‌ಪೋರ್ಟ್ ಅನ್ನು ರದ್ದುಗೊಳಿಸಿತು ಮತ್ತು ಹೊಸ ಪಾಸ್‌ಪೋರ್ಟ್‌ಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸಹ ತಿರಸ್ಕರಿಸಿತ್ತು. ಮಕ್ಕಳನ್ನು ಅಪಹರಿಸಿ ತನ್ನ ಆಶ್ರಮಕ್ಕೆ ಹಣವನ್ನು ಸಂಗ್ರಹಿಸಲು ಬಳಸಿಕೊಂಡ ಆರೋಪ ಅವರ ಮೇಲಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹಿಂದೂಗಳು ಸುರಕ್ಷಿತರಾಗಿದ್ದರೆ, ಮುಸ್ಲಿಮರು ಕೂಡಾ ಸುರಕ್ಷಿತರು: ಯುಪಿ ಸಿಎಂ ಆದಿತ್ಯನಾಥ್ ಹೇಳಿಕೆ

ಹಿಂದೂಗಳು ಸುರಕ್ಷಿತರಾಗಿದ್ದರೆ, ಮುಸ್ಲಿಮರು ಕೂಡಾ ಸುರಕ್ಷಿತರು: ಯುಪಿ ಸಿಎಂ ಆದಿತ್ಯನಾಥ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...