Homeಅಂತರಾಷ್ಟ್ರೀಯಸ್ಥಳೀಯ ಬುಡಕಟ್ಟು ಸಮುದಾಯದ ಭೂಮಿ ವಶಕ್ಕೆ ಯತ್ನ | ನಿತ್ಯಾನಂದನ ಕೈಲಾಸದ ಸದಸ್ಯರನ್ನು ಗಡೀಪಾರು ಮಾಡಿದ...

ಸ್ಥಳೀಯ ಬುಡಕಟ್ಟು ಸಮುದಾಯದ ಭೂಮಿ ವಶಕ್ಕೆ ಯತ್ನ | ನಿತ್ಯಾನಂದನ ಕೈಲಾಸದ ಸದಸ್ಯರನ್ನು ಗಡೀಪಾರು ಮಾಡಿದ ಬೊಲಿವಿಯಾ

- Advertisement -
- Advertisement -

ಸ್ಥಳೀಯ ಬುಡಕಟ್ಟು ಸಮುದಾಯಗಳಿಗೆ ಸೇರಿದ ಭೂಮಿಯನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸಿದ ಆರೋಪದ ಮೇಲೆ ವಿವಾದಾತ್ಮಕ ಧಾರ್ಮಿಕ ಗುರು ನಿತ್ಯಾನಂದ ಸ್ಥಾಪಿಸಿದ ಕಾಲ್ಪನಿಕ ದೇಶವಾದ ಕೈಲಾಸದ 20 ಸದಸ್ಯರನ್ನು ಬೊಲಿವಿಯಾ ಮಂಗಳವಾರ ಗಡೀಪಾರು ಮಾಡಿದೆ ಎಂದು ವರದಿಯಾಗಿದೆ. ನಿತ್ಯಾನಂದ ವಿರುದ್ಧ ಭಾರತದಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ದೇಶದಿಂದ ಪರಾರಿಯಾಗಿದ್ದಾರೆ. ಸ್ಥಳೀಯ ಬುಡಕಟ್ಟು ಸಮುದಾಯದ

“ಈ ಗುಂಪಿಗೆ ಸೇರಿದ ಜನರ ಕಡ್ಡಾಯ ನಿರ್ಗಮನವನ್ನು ಜಾರಿಗೆ ತರಲಾಗಿದೆ. ಅವರು ಇನ್ನು ಮುಂದೆ ನಮ್ಮ ರಾಷ್ಟ್ರೀಯ ಪ್ರದೇಶದಲ್ಲಿ ಇರುವಂತಿಲ್ಲ” ಎಂದು ಬೊಲಿವಿಯಾದ ವಲಸೆ ನಿರ್ದೇಶಕಿ ಕ್ಯಾಥರೀನ್ ಕಾಲ್ಡೆರಾನ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಅವರ ವಿರುದ್ಧ ವಾರಾಂತ್ಯದಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಸ್ಥಳೀಯ ಬುಡಕಟ್ಟು ಸಮುದಾಯದ

ಭಾರತದಲ್ಲಿ ಅತ್ಯಾಚಾರದ ಆರೋಪ ಹೊತ್ತಿರುವ ನಿತ್ಯಾನಂದ, ಈಕ್ವೆಡಾರ್ ಕರಾವಳಿಯಲ್ಲಿ ಒಂದು ದ್ವೀಪ ಎಂದು ಹೇಳಲಾದ ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸ ಎಂಬ ದೇಶವನ್ನು ಸ್ಥಾಪಿಸಿರುವುದಾಗಿ ಹೇಳಿಕೊಂಡಿದ್ದಾರೆ.

“ಈ ಪಂಥವು ನಮ್ಮ ದೇಶಕ್ಕೆ ಆಗಮಿಸಿದ್ದು, ನಮ್ಮ ಸ್ಥಳೀಯ ಬುಡಕಟ್ಟು ಜನರ ನಂಬಿಕೆಯನ್ನು ಗಳಿಸಿ ಅವರ ಹಕ್ಕುಗಳನ್ನು ಉಲ್ಲಂಘಿಸಲು ಪ್ರಯತ್ನಿಸಿದೆ. ಅವರ ಸ್ಥಳೀಯ ಭೂಮಿಯನ್ನು ಬಳಸುವಂತೆ ಮಾಡಿ ಅವರನ್ನು ಮೋಸಗೊಳಿಸಲು ಪ್ರಯತ್ನಿಸುತ್ತಿದೆ” ಎಂದು ಕಾಲ್ಡೆರಾನ್ ಹೇಳಿದ್ದಾರೆ.

ಈ ಬಗ್ಗೆ ಬೊಲಿವಿಯನ್ ಪತ್ರಿಕೆ ಎಲ್ ಡೆಬರ್ ಮಾರ್ಚ್ 16 ರಂದು ತನಿಖಾ ವರದಿ ಪ್ರಕಟಿಸಿತ್ತು. ಇದರ ನಂತರ ಈ ಗಡಿಪಾರು ಮಾಡಲಾಗಿದೆ ಎಂದು ವರದಿಯಾಗಿದೆ. ಬೌರೆ, ಕಯುಬಾಬಾ ಮತ್ತು ಎಸ್ಸೆ ಎಜ್ಜಾ ಎಂಬ ಮೂರು ಸ್ಥಳೀಯ ಬುಡಕಟ್ಟು ಗುಂಪುಗಳು ಸೆಪ್ಟೆಂಬರ್ ಮತ್ತು ನವೆಂಬರ್ ನಡುವೆ ಸುಮಾರು 4.8 ಲಕ್ಷ ಹೆಕ್ಟೇರ್ ಸಾರ್ವಜನಿಕ ಭೂಮಿಗೆ ಕೈಲಾಸದೊಂದಿಗೆ ಗುತ್ತಿಗೆ ಒಪ್ಪಂದಗಳಿಗೆ ಸಹಿ ಹಾಕಿವೆ ಎಂದು ವರದಿ ಬಹಿರಂಗಪಡಿಸಿತ್ತು.

ಈ ಒಪ್ಪಂದಗಳ ಪ್ರಕಾರ, “ಸಾವಿರ ವರ್ಷಗಳ ಕಾಲ” ಭೂಮಿಯ ಬಳಕೆಗೆ ಪ್ರತಿಯಾಗಿ ವಾರ್ಷಿಕ ಬಾಡಿಗೆಯನ್ನು ಪಾವತಿಸಲಾಗುವುದು ಎಂದು ವರದಿ ಹೇಳಿದೆ. ಆರೋಪಗಳು ಬೆಳಕಿಗೆ ಬಂದ ನಂತರ, ಮತ್ತೊಂದು ಸುದ್ದಿ ಸಂಸ್ಥೆ, ಲಾ ರಿಪಬ್ಲಿಕಾ, ಕೈಲಾಸಕ್ಕೆ ಅಂತರರಾಷ್ಟ್ರೀಯ ಮನ್ನಣೆ ಇಲ್ಲ ಎಂದು ಬೊಲಿವಿಯನ್ ವಿದೇಶಾಂಗ ಸಚಿವಾಲಯ ಹೇಳಿರುವುದನ್ನು ಉಲ್ಲೇಖಿಸಿದೆ.

ಸ್ಥಳೀಯ ಬುಡಕಟ್ಟು ಸಮುದಾಯಗಳು ತಮ್ಮ ಭೂಮಿಯನ್ನು ನಿರ್ವಹಿಸಬಹುದಾದರೂ, ಇತರ ದೇಶಗಳೊಂದಿಗಿನ ಸಂಬಂಧಗಳು ರಾಷ್ಟ್ರೀಯ ಸರ್ಕಾರದ ವಿಶೇಷ ಜವಾಬ್ದಾರಿಯಾಗಿದೆ ಎಂದು ಸಚಿವಾಲಯ ಹೇಳಿದೆ. “ಈ ರೀತಿಯ ಗುಪ್ತ ಒಪ್ಪಂದಗಳನ್ನು ಸರ್ಕಾರ ಎಂದಿಗೂ ಅನುಮೋದಿಸಿಲ್ಲ, ಅಥವಾ ಎಂದಿಗೂ ಅನುಮೋದಿಸುವುದಿಲ್ಲ” ಎಂದು ಗ್ರಾಮೀಣಾಭಿವೃದ್ಧಿ ಮತ್ತು ಭೂ ಸಚಿವ ಯಾಮಿಲ್ ಫ್ಲೋರ್ಸ್ ಹೇಳಿದ್ದನ್ನು ಲಾ ರಿಪಬ್ಲಿಕಾ ಉಲ್ಲೇಖಿಸಿದೆ.

ಸ್ಥಳೀಯ ನಾಯಕರು ಮತ್ತು ಕಾಲ್ಪನಿಕ ದೇಶದ ಪ್ರತಿನಿಧಿಗಳ ನಡುವೆ ಸಹಿ ಹಾಕಿದ ಒಪ್ಪಂದಗಳನ್ನು ಪರಿಶೀಲಿಸಲು ತನಿಖೆ ನಡೆಸಲಾಗುತ್ತಿದೆ ಎಂದು ಫ್ಲೋರ್ಸ್ ಹೇಳಿದರು, ಈ ಅಪರಾಧಗಳನ್ನು ಶಿಕ್ಷಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಮಂಗಳವಾರ ದೇಶದಿಂದ ಹೊರಹಾಕಲ್ಪಟ್ಟವರಲ್ಲಿ ಮೂವರನ್ನು ಎಕ್ಸಾಲ್ಟಾಸಿಯಾನ್ ಪುರಸಭೆಯಲ್ಲಿ ಪತ್ತೆ ಮಾಡಿ ಗಡೀಪಾರು ಮಾಡಲು ಸಾಂಟಾ ಕ್ರೂಜ್‌ನ ವಿರು ವಿರು ವಿಮಾನ ನಿಲ್ದಾಣಕ್ಕೆ ಕರೆದೊಯ್ಯಲಾಗಿದೆ ಎಂದು ಕ್ಯಾಲ್ಡೆರಾನ್ ಹೇಳಿದ್ದಾರೆ. ಉಳಿದ 17 ಜನರನ್ನು ಸಾಂಟಾ ಕ್ರೂಜ್‌ನಲ್ಲಿ ಪತ್ತೆ ಮಾಡಲಾಯಿತು ಮತ್ತು ಅವರನ್ನು ದೇಶದಿಂದ ಹೊರಹಾಕಲಾಗಿದೆ ಎಂದು ತಿಳಿಸಲಾಯಿತು ಎಂದು ಅವರು ಹೇಳಿದ್ದಾರೆ.

“ಎರಡೂ ನಗರಗಳಲ್ಲಿನ ವಿವಿಧ ಕಾರ್ಯಾಚರಣೆಗಳಲ್ಲಿ ಕಂಡುಬಂದ ಜನರು ಇನ್ನು ಮುಂದೆ ನಮ್ಮ ಪ್ರದೇಶದಲ್ಲಿ ಇರುವಂತಿಲ್ಲ. ಅವರಿಗೆ ಅಂತಿಮ ಕಡ್ಡಾಯ ನಿರ್ಗಮನ ಆದೇಶಗಳನ್ನು ನೀಡಲಾಗಿದೆ, ಇದು ಅವರನ್ನು ಬೊಲಿವಿಯಾಕ್ಕೆ ಮತ್ತೆ ಪ್ರವೇಶಿಸುವುದನ್ನು ತಡೆಯುತ್ತದೆ.” ಎಂದು ಅವರು ಹೇಳಿದ್ದಾರೆ.

ಅತ್ಯಾಚಾರ ಮತ್ತು ಮಕ್ಕಳನ್ನು ತನ್ನ ಆಶ್ರಮದಲ್ಲಿ ಅಕ್ರಮವಾಗಿ ಬಂಧಿಸಿದ ಆರೋಪದ ನಂತರ ನಿತ್ಯಾನಂದ ಭಾರತದಿಂದ ಪಲಾಯನ ಮಾಡಿದ್ದರು. 2019 ರಲ್ಲಿ, ಭಾರತವು ನಿತ್ಯಾನಂದನ ಪಾಸ್‌ಪೋರ್ಟ್ ಅನ್ನು ರದ್ದುಗೊಳಿಸಿತು ಮತ್ತು ಹೊಸ ಪಾಸ್‌ಪೋರ್ಟ್‌ಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸಹ ತಿರಸ್ಕರಿಸಿತ್ತು. ಮಕ್ಕಳನ್ನು ಅಪಹರಿಸಿ ತನ್ನ ಆಶ್ರಮಕ್ಕೆ ಹಣವನ್ನು ಸಂಗ್ರಹಿಸಲು ಬಳಸಿಕೊಂಡ ಆರೋಪ ಅವರ ಮೇಲಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹಿಂದೂಗಳು ಸುರಕ್ಷಿತರಾಗಿದ್ದರೆ, ಮುಸ್ಲಿಮರು ಕೂಡಾ ಸುರಕ್ಷಿತರು: ಯುಪಿ ಸಿಎಂ ಆದಿತ್ಯನಾಥ್ ಹೇಳಿಕೆ

ಹಿಂದೂಗಳು ಸುರಕ್ಷಿತರಾಗಿದ್ದರೆ, ಮುಸ್ಲಿಮರು ಕೂಡಾ ಸುರಕ್ಷಿತರು: ಯುಪಿ ಸಿಎಂ ಆದಿತ್ಯನಾಥ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...