Homeಅಂತರಾಷ್ಟ್ರೀಯಸ್ಥಳೀಯ ಬುಡಕಟ್ಟು ಸಮುದಾಯದ ಭೂಮಿ ವಶಕ್ಕೆ ಯತ್ನ | ನಿತ್ಯಾನಂದನ ಕೈಲಾಸದ ಸದಸ್ಯರನ್ನು ಗಡೀಪಾರು ಮಾಡಿದ...

ಸ್ಥಳೀಯ ಬುಡಕಟ್ಟು ಸಮುದಾಯದ ಭೂಮಿ ವಶಕ್ಕೆ ಯತ್ನ | ನಿತ್ಯಾನಂದನ ಕೈಲಾಸದ ಸದಸ್ಯರನ್ನು ಗಡೀಪಾರು ಮಾಡಿದ ಬೊಲಿವಿಯಾ

- Advertisement -
- Advertisement -

ಸ್ಥಳೀಯ ಬುಡಕಟ್ಟು ಸಮುದಾಯಗಳಿಗೆ ಸೇರಿದ ಭೂಮಿಯನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸಿದ ಆರೋಪದ ಮೇಲೆ ವಿವಾದಾತ್ಮಕ ಧಾರ್ಮಿಕ ಗುರು ನಿತ್ಯಾನಂದ ಸ್ಥಾಪಿಸಿದ ಕಾಲ್ಪನಿಕ ದೇಶವಾದ ಕೈಲಾಸದ 20 ಸದಸ್ಯರನ್ನು ಬೊಲಿವಿಯಾ ಮಂಗಳವಾರ ಗಡೀಪಾರು ಮಾಡಿದೆ ಎಂದು ವರದಿಯಾಗಿದೆ. ನಿತ್ಯಾನಂದ ವಿರುದ್ಧ ಭಾರತದಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ದೇಶದಿಂದ ಪರಾರಿಯಾಗಿದ್ದಾರೆ. ಸ್ಥಳೀಯ ಬುಡಕಟ್ಟು ಸಮುದಾಯದ

“ಈ ಗುಂಪಿಗೆ ಸೇರಿದ ಜನರ ಕಡ್ಡಾಯ ನಿರ್ಗಮನವನ್ನು ಜಾರಿಗೆ ತರಲಾಗಿದೆ. ಅವರು ಇನ್ನು ಮುಂದೆ ನಮ್ಮ ರಾಷ್ಟ್ರೀಯ ಪ್ರದೇಶದಲ್ಲಿ ಇರುವಂತಿಲ್ಲ” ಎಂದು ಬೊಲಿವಿಯಾದ ವಲಸೆ ನಿರ್ದೇಶಕಿ ಕ್ಯಾಥರೀನ್ ಕಾಲ್ಡೆರಾನ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಅವರ ವಿರುದ್ಧ ವಾರಾಂತ್ಯದಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಸ್ಥಳೀಯ ಬುಡಕಟ್ಟು ಸಮುದಾಯದ

ಭಾರತದಲ್ಲಿ ಅತ್ಯಾಚಾರದ ಆರೋಪ ಹೊತ್ತಿರುವ ನಿತ್ಯಾನಂದ, ಈಕ್ವೆಡಾರ್ ಕರಾವಳಿಯಲ್ಲಿ ಒಂದು ದ್ವೀಪ ಎಂದು ಹೇಳಲಾದ ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸ ಎಂಬ ದೇಶವನ್ನು ಸ್ಥಾಪಿಸಿರುವುದಾಗಿ ಹೇಳಿಕೊಂಡಿದ್ದಾರೆ.

“ಈ ಪಂಥವು ನಮ್ಮ ದೇಶಕ್ಕೆ ಆಗಮಿಸಿದ್ದು, ನಮ್ಮ ಸ್ಥಳೀಯ ಬುಡಕಟ್ಟು ಜನರ ನಂಬಿಕೆಯನ್ನು ಗಳಿಸಿ ಅವರ ಹಕ್ಕುಗಳನ್ನು ಉಲ್ಲಂಘಿಸಲು ಪ್ರಯತ್ನಿಸಿದೆ. ಅವರ ಸ್ಥಳೀಯ ಭೂಮಿಯನ್ನು ಬಳಸುವಂತೆ ಮಾಡಿ ಅವರನ್ನು ಮೋಸಗೊಳಿಸಲು ಪ್ರಯತ್ನಿಸುತ್ತಿದೆ” ಎಂದು ಕಾಲ್ಡೆರಾನ್ ಹೇಳಿದ್ದಾರೆ.

ಈ ಬಗ್ಗೆ ಬೊಲಿವಿಯನ್ ಪತ್ರಿಕೆ ಎಲ್ ಡೆಬರ್ ಮಾರ್ಚ್ 16 ರಂದು ತನಿಖಾ ವರದಿ ಪ್ರಕಟಿಸಿತ್ತು. ಇದರ ನಂತರ ಈ ಗಡಿಪಾರು ಮಾಡಲಾಗಿದೆ ಎಂದು ವರದಿಯಾಗಿದೆ. ಬೌರೆ, ಕಯುಬಾಬಾ ಮತ್ತು ಎಸ್ಸೆ ಎಜ್ಜಾ ಎಂಬ ಮೂರು ಸ್ಥಳೀಯ ಬುಡಕಟ್ಟು ಗುಂಪುಗಳು ಸೆಪ್ಟೆಂಬರ್ ಮತ್ತು ನವೆಂಬರ್ ನಡುವೆ ಸುಮಾರು 4.8 ಲಕ್ಷ ಹೆಕ್ಟೇರ್ ಸಾರ್ವಜನಿಕ ಭೂಮಿಗೆ ಕೈಲಾಸದೊಂದಿಗೆ ಗುತ್ತಿಗೆ ಒಪ್ಪಂದಗಳಿಗೆ ಸಹಿ ಹಾಕಿವೆ ಎಂದು ವರದಿ ಬಹಿರಂಗಪಡಿಸಿತ್ತು.

ಈ ಒಪ್ಪಂದಗಳ ಪ್ರಕಾರ, “ಸಾವಿರ ವರ್ಷಗಳ ಕಾಲ” ಭೂಮಿಯ ಬಳಕೆಗೆ ಪ್ರತಿಯಾಗಿ ವಾರ್ಷಿಕ ಬಾಡಿಗೆಯನ್ನು ಪಾವತಿಸಲಾಗುವುದು ಎಂದು ವರದಿ ಹೇಳಿದೆ. ಆರೋಪಗಳು ಬೆಳಕಿಗೆ ಬಂದ ನಂತರ, ಮತ್ತೊಂದು ಸುದ್ದಿ ಸಂಸ್ಥೆ, ಲಾ ರಿಪಬ್ಲಿಕಾ, ಕೈಲಾಸಕ್ಕೆ ಅಂತರರಾಷ್ಟ್ರೀಯ ಮನ್ನಣೆ ಇಲ್ಲ ಎಂದು ಬೊಲಿವಿಯನ್ ವಿದೇಶಾಂಗ ಸಚಿವಾಲಯ ಹೇಳಿರುವುದನ್ನು ಉಲ್ಲೇಖಿಸಿದೆ.

ಸ್ಥಳೀಯ ಬುಡಕಟ್ಟು ಸಮುದಾಯಗಳು ತಮ್ಮ ಭೂಮಿಯನ್ನು ನಿರ್ವಹಿಸಬಹುದಾದರೂ, ಇತರ ದೇಶಗಳೊಂದಿಗಿನ ಸಂಬಂಧಗಳು ರಾಷ್ಟ್ರೀಯ ಸರ್ಕಾರದ ವಿಶೇಷ ಜವಾಬ್ದಾರಿಯಾಗಿದೆ ಎಂದು ಸಚಿವಾಲಯ ಹೇಳಿದೆ. “ಈ ರೀತಿಯ ಗುಪ್ತ ಒಪ್ಪಂದಗಳನ್ನು ಸರ್ಕಾರ ಎಂದಿಗೂ ಅನುಮೋದಿಸಿಲ್ಲ, ಅಥವಾ ಎಂದಿಗೂ ಅನುಮೋದಿಸುವುದಿಲ್ಲ” ಎಂದು ಗ್ರಾಮೀಣಾಭಿವೃದ್ಧಿ ಮತ್ತು ಭೂ ಸಚಿವ ಯಾಮಿಲ್ ಫ್ಲೋರ್ಸ್ ಹೇಳಿದ್ದನ್ನು ಲಾ ರಿಪಬ್ಲಿಕಾ ಉಲ್ಲೇಖಿಸಿದೆ.

ಸ್ಥಳೀಯ ನಾಯಕರು ಮತ್ತು ಕಾಲ್ಪನಿಕ ದೇಶದ ಪ್ರತಿನಿಧಿಗಳ ನಡುವೆ ಸಹಿ ಹಾಕಿದ ಒಪ್ಪಂದಗಳನ್ನು ಪರಿಶೀಲಿಸಲು ತನಿಖೆ ನಡೆಸಲಾಗುತ್ತಿದೆ ಎಂದು ಫ್ಲೋರ್ಸ್ ಹೇಳಿದರು, ಈ ಅಪರಾಧಗಳನ್ನು ಶಿಕ್ಷಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಮಂಗಳವಾರ ದೇಶದಿಂದ ಹೊರಹಾಕಲ್ಪಟ್ಟವರಲ್ಲಿ ಮೂವರನ್ನು ಎಕ್ಸಾಲ್ಟಾಸಿಯಾನ್ ಪುರಸಭೆಯಲ್ಲಿ ಪತ್ತೆ ಮಾಡಿ ಗಡೀಪಾರು ಮಾಡಲು ಸಾಂಟಾ ಕ್ರೂಜ್‌ನ ವಿರು ವಿರು ವಿಮಾನ ನಿಲ್ದಾಣಕ್ಕೆ ಕರೆದೊಯ್ಯಲಾಗಿದೆ ಎಂದು ಕ್ಯಾಲ್ಡೆರಾನ್ ಹೇಳಿದ್ದಾರೆ. ಉಳಿದ 17 ಜನರನ್ನು ಸಾಂಟಾ ಕ್ರೂಜ್‌ನಲ್ಲಿ ಪತ್ತೆ ಮಾಡಲಾಯಿತು ಮತ್ತು ಅವರನ್ನು ದೇಶದಿಂದ ಹೊರಹಾಕಲಾಗಿದೆ ಎಂದು ತಿಳಿಸಲಾಯಿತು ಎಂದು ಅವರು ಹೇಳಿದ್ದಾರೆ.

“ಎರಡೂ ನಗರಗಳಲ್ಲಿನ ವಿವಿಧ ಕಾರ್ಯಾಚರಣೆಗಳಲ್ಲಿ ಕಂಡುಬಂದ ಜನರು ಇನ್ನು ಮುಂದೆ ನಮ್ಮ ಪ್ರದೇಶದಲ್ಲಿ ಇರುವಂತಿಲ್ಲ. ಅವರಿಗೆ ಅಂತಿಮ ಕಡ್ಡಾಯ ನಿರ್ಗಮನ ಆದೇಶಗಳನ್ನು ನೀಡಲಾಗಿದೆ, ಇದು ಅವರನ್ನು ಬೊಲಿವಿಯಾಕ್ಕೆ ಮತ್ತೆ ಪ್ರವೇಶಿಸುವುದನ್ನು ತಡೆಯುತ್ತದೆ.” ಎಂದು ಅವರು ಹೇಳಿದ್ದಾರೆ.

ಅತ್ಯಾಚಾರ ಮತ್ತು ಮಕ್ಕಳನ್ನು ತನ್ನ ಆಶ್ರಮದಲ್ಲಿ ಅಕ್ರಮವಾಗಿ ಬಂಧಿಸಿದ ಆರೋಪದ ನಂತರ ನಿತ್ಯಾನಂದ ಭಾರತದಿಂದ ಪಲಾಯನ ಮಾಡಿದ್ದರು. 2019 ರಲ್ಲಿ, ಭಾರತವು ನಿತ್ಯಾನಂದನ ಪಾಸ್‌ಪೋರ್ಟ್ ಅನ್ನು ರದ್ದುಗೊಳಿಸಿತು ಮತ್ತು ಹೊಸ ಪಾಸ್‌ಪೋರ್ಟ್‌ಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸಹ ತಿರಸ್ಕರಿಸಿತ್ತು. ಮಕ್ಕಳನ್ನು ಅಪಹರಿಸಿ ತನ್ನ ಆಶ್ರಮಕ್ಕೆ ಹಣವನ್ನು ಸಂಗ್ರಹಿಸಲು ಬಳಸಿಕೊಂಡ ಆರೋಪ ಅವರ ಮೇಲಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹಿಂದೂಗಳು ಸುರಕ್ಷಿತರಾಗಿದ್ದರೆ, ಮುಸ್ಲಿಮರು ಕೂಡಾ ಸುರಕ್ಷಿತರು: ಯುಪಿ ಸಿಎಂ ಆದಿತ್ಯನಾಥ್ ಹೇಳಿಕೆ

ಹಿಂದೂಗಳು ಸುರಕ್ಷಿತರಾಗಿದ್ದರೆ, ಮುಸ್ಲಿಮರು ಕೂಡಾ ಸುರಕ್ಷಿತರು: ಯುಪಿ ಸಿಎಂ ಆದಿತ್ಯನಾಥ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...