Homeಕರ್ನಾಟಕಬಳ್ಳಾರಿ | ಪ್ರಭಾವ, ಗೂಂಡಾಗಿರಿ ಮೂಲಕ ಬಡ ಜನರ ಭೂ ಕಬಳಿಕೆ : ಬುಡಾ ಮಾಜಿ...

ಬಳ್ಳಾರಿ | ಪ್ರಭಾವ, ಗೂಂಡಾಗಿರಿ ಮೂಲಕ ಬಡ ಜನರ ಭೂ ಕಬಳಿಕೆ : ಬುಡಾ ಮಾಜಿ ಅಧ್ಯಕ್ಷನ ವಿರುದ್ಧ ಗಂಭೀರ ಆರೋಪ

- Advertisement -
- Advertisement -

ಬಳ್ಳಾರಿ ನಗರಕ್ಕೆ ಹೊಂದಿಕೊಂಡಿರುವ ಕೌಲ್‌ ಬಜಾರಿನ ದಾನಪ್ಪಬೀದಿ ಮತ್ತು ಬಂಡಿಹಟ್ಟಿ ಏರಿಯಾಗಳ ಬಡ ಜನರಿಗೆ ಇನಾಂ ರದ್ದತಿಯ ಬಳಿಕ ನೀಡಲಾಗಿದ್ದ ಭೂಮಿಯನ್ನು ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರ (ಬುಡಾ) ದ ಮಾಜಿ ಅಧ್ಯಕ್ಷ ಎನ್‌. ಪ್ರತಾಪ್‌ ರೆಡ್ಡಿ ಪ್ರಭಾವ ಬಳಸಿ, ಬೆದರಿಕೆ ಹಾಕಿ ಕಿತ್ತುಕೊಂಡಿರುವ ಆರೋಪ ಕೇಳಿ ಬಂದಿದೆ.

ಶುಕ್ರವಾರ (ಡಿ.26) ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ಪ್ರತಾಪ್ ರೆಡ್ಡಿ ವಿರುದ್ದ ಗಂಭೀರ ಆರೋಪಗಳನ್ನು ಮಾಡಿದೆ.

1970ರ ದಶಕದಲ್ಲಿ ಇನಾಂ ರದ್ದತಿಯ ಬಳಿಕ ಸರ್ವೆ ನಂಬರ್ 715ಎ ಕೌಲ್‌ ಬಜಾರಿನ 1080 ಎಕರೆ ಇನಾಂ ಭೂಮಿಯಲ್ಲಿ 134 ಎಕರೆ ಭೂಮಿಯನ್ನು, 7 ಮಾದಿಗ, 4 ಕುರುಬ, 5 ಮಡಿವಾಳ ಹಾಗೂ 1 ಈಡಿಗ ಸೇರಿ 17 ಕುಟುಂಬಗಳಿಗೆ ಆಗಿನ ಭೂ ನ್ಯಾಯ ಮಂಡಳಿ ಹಂಚಿಕೆ ಮಾಡಿತ್ತು. ಈ ಎಲ್ಲಾ ಕುಟುಂಬಗಳಿಗೆ ಮಂಡಳಿ ಫಾರಂ ನಂಬರ್ 10 ನೀಡಿತ್ತು, ಅಲ್ಲದೆ ಫಲಾನುಭವಿಗಳ ಹೆಸರಿಗೆ ಹಕ್ಕು ಬದಲಾಯಿಸಿತ್ತು. ಅಂದಿನಿಂದ ಈ ಎಲ್ಲಾ ಕುಟುಂಬಗಳು ತಮಗೆ ದೊರೆತ ಭೂಮಿಯನ್ನು ನಂಬಿ ಬದುಕುತ್ತಿದ್ದವು ಎಂದು ಸಮಿತಿ ಹೇಳಿದೆ.

ಮುಂದುವರಿದು, 2006ರಿಂದ ಪ್ರತಾಪ್‌ ರೆಡ್ಡಿಯ ಕಣ್ಣು ಈ ಭೂಮಿಯ ಮೇಲೆ ಬಿದ್ದಿದೆ. ಆ ಬಳಿಕ ಅವರು ಗೂಂಡಾಗಿರಿ ಮಾಡುತ್ತಾ, ಬೆದರಿಕೆ ಹಾಕುತ್ತಾ ಬಂದಿದ್ದಾರೆ. ಇವರ ಕಿರುಕುಳಕ್ಕೆ ಬಡ ಜನರ ಬದುಕು ದಿವಾಳಿಯಾಗುತ್ತಾ ಸಾಗಿದೆ. ಭೂ ಒಡೆಯರಾಗಿದ್ದ ಮಾದಿಗ ಸಮುದಾಯದ ಕುಟುಂಬಗಳು ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಕಸ ಗುಡಿಸುವ ಪೌರಕಾರ್ಮಿರಾಗಿ ಜೀವನ ಸಾಗಿಸುವಂತಾಗಿದೆ. ಮಡಿವಾಳರು ಜೀವ ಭಯದಿಂದ ಊರು ಬಿಟ್ಟಿದ್ದರೆ, ಈ ಭೂಮಿಯ ಸಹವಾಸವೇ ಬೇಡವೆಂದು ಜೀವ ಉಳಿಸಿಕೊಂಡು ಬದುಕುವ ಪರಿಸ್ಥಿತಿ ಕೆಲವರದ್ದಾಗಿದೆ. ಇನ್ನೂ ಕೆಲವರು ಜೀವ ಹೋದರೂ ಪರವಾಗಿಲ್ಲ, ನ್ಯಾಯ ಪಡೆದೇ ತೀರುತ್ತೇವೆಂದು ಕರ್ನಾಟಕ ಜನಶಕ್ತಿ ಮತ್ತು ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಬೀದಿಗಿಳಿದು ಹಲವಾರು ಬಾರಿ ಹೋರಾಟ ನಡೆಸಿದ್ದಾರೆ ಎಂದು ಸಮಿತಿ ವಿವರಿಸಿದೆ.

ಇನಾಂ ರದ್ದತಿಗೂ ಮೊದಲು ಈ ಭೂಮಿ ದಿವಂಗತ ರಾಜರಾಜೇಶ್ವರಿಶಾಸ್ತ್ರಿ ಮತ್ತು ಅವರ ಮಗ ಬ್ರಹ್ಮಶಾಸ್ತ್ರಿ ಅವರಿಗೆ ಸೇರಿತ್ತು. ಇದೇ ಭೂಮಿಯಲ್ಲಿ ಈಗಿನವರ ಎರಡು-ಮೂರು ತಲೆಮಾರುಗಳು ದುಡಿಯುತ್ತಾ ಬಂದಿದೆ. ಭೂಮಿಯ ಮಾಲೀಕರಾಗಿದ್ದ ಬ್ರಹ್ಮಶಾಸ್ತ್ರಿಯೇ ಈ ಭೂಮಿಯಲ್ಲಿ ದುಡಿಯುತ್ತಿದ್ದವರ ಕೂಲಿ, ಕೆಲಸ ಗೇಣಿ ಮಾಡುತ್ತಿದ್ದವರ ವಿವರಗಳನ್ನು ಸರ್ಕಾರಕ್ಕೆ ಕೊಟ್ಟಿದ್ದಾರೆ. ಅದರ ಪ್ರಕಾರವೇ ನ್ಯಾಯ ಮಂಡಳಿ 134 ಎಕರೆ ಸೇರಿದಂತೆ ನೂರಾರು ಎಕರೆ ಭೂಮಿಯನ್ನು ಹಂಚಿದೆ. ಫಾರಂ ನಂಬರ್ 10, ಮ್ಯೂಟೇಷನ್, ಪಹಣಿ ಎಲ್ಲವೂ ವರ್ಗಾವಣೆಯಾಗಿ ಇಂದಿನವರೆಗೂ ಕಂದಾಯ ಕಟ್ಟುತ್ತಾ ಬರುತ್ತಿದ್ದಾರೆ. ಭೂಮಿಯ ಮೇಲೆ ಬ್ಯಾಂಕ್ ಸಾಲ, ಬೆಳೆ ಸಾಲ ತೆಗೆದುಕೊಳ್ಳುತ್ತಿದ್ದಾರೆ. ಅಲ್ಲದೆ, ಕುಟುಂಬಗಳು ಬೆಳದಂತೆ ಭೂಮಿಯು ವಿಭಾಗಗಳಾಗಿ ಹಂಚಿಹೋಗಿವೆ. ಜನರು ಭಾವಿ, ಬೋರ್‌ವೆಲ್ ಕೊರೆದು, ವಿದ್ಯುತ್ ಸಂಪರ್ಕ ಪಡೆದು ತರಕಾರಿ ಹಾಗೂ ಇನ್ನಿತರೆ ಬೆಳೆಗಳನ್ನು ಬೆಳೆಯುತ್ತಾ ಬಂದಿದ್ದಾರೆ. ಗಮನಾರ್ಹವಾಗಿ, ಈ ಭೂಮಿಯಲ್ಲಿ ಜೀವ ಸವೆಸಿದ್ದ ಅವರ ತಾತ-ಮುತ್ತಾಂದಿರ ಸಮಾಧಿಗಳು ಕೂಡ ಇದೇ ಎಂದು ಸಮಿತಿ ತಿಳಿಸಿದೆ.

ಮಡಿವಾಳರು ಈ ಜಮೀನಿನಲ್ಲಿ ಅವರ ಕುಲ ಕಸುಬು ಮಾಡಿಕೊಂಡು ಬಂದಿರುವುದಕ್ಕೆ ಅವರವರ ಹೊಲಗಳಲ್ಲಿ ಕಟ್ಟಿರುವ ನೀರಿನ ಕಟ್ಟೆಗಳು, ಚಿಕ್ಕ ಚಿಕ್ಕ ಬಾವಿಗಳು ಪುರಾವೆಯಾಗಿವೆ. ಈಗ 2006ರಿಂದ ಪ್ರತಾಪ್ ರೆಡ್ಡಿ ಆ ಭೂಮಿ ನನ್ನದು ಎಂದು ಹೇಳುತ್ತಿದ್ದಾರೆ ಎಂದಿದೆ.

ಪ್ರತಾಪ್‌ ರೆಡ್ಡಿ ಮತ್ತು ಅವರ ಹೆಂಡತಿ ಶೈಲಜಾ ರೆಡ್ಡಿ ಹೆಸರಿಗೆ ಸರ್ವೆ ನಂಬರ್ 715ಎನಲ್ಲಿ 134 ಎಕರೆ ಭೂಮಿಯನ್ನು 2005-06ರಲ್ಲಿ ಟಿಎಸ್‌ ನಂಬರ್ (ಟೌನ್‌ ಸರ್ವೆ) ನೋಂದಣಿ ಮಾಡಿಕೊಂಡಿದ್ದಾರೆ. ಇದಾದ ನಂತರ ಸರ್ವೆ ನಂಬರ್ 715ಎನಲ್ಲಿ ಉಳುಮೆ ಮಾಡುತ್ತಿದ್ದ ಕುಟುಂಬಗಳನ್ನು ಒಕ್ಕಲೇಳುವಂತೆ ಮಾಡಿದ್ದಾರೆ. ಈ ವ್ಯಾಜ್ಯ ಪೊಲೀಸ್, ಕಂದಾಯ ಇಲಾಖೆ ಮತ್ತು ನ್ಯಾಯಾಲಯದ ಮೆಟ್ಟಿಲೇರಿದೆ. ಕೆಲ ಪೊಲೀಸ್ ಅಧಿಕಾರಿಗಳು ಪ್ರತಾಪ್ ರೆಡ್ಡಿಪರ ವಕಾಲತ್ ವಹಿಸಿ ಕೋರ್ಟ್ ವ್ಯಾಜ್ಯ ಇತ್ಯರ್ಥಪಡಿಸುವವರೆಗೆ ಯಾರೂ ಜಮೀನಿಗೆ ಹೋಗದಂತೆ ಫರ್ಮಾನು ಹೊರಡಿಸಿದ್ದಾರೆ. ಇದರಿಂದ ಭೂಮಿ ಉಳುಮೆ ಮಾಡದೆ ಬೀಳು ಬೀಳುವಂತಾಗಿದೆ. ಪ್ರತಾಪ್ ರೆಡ್ಡಿ ವಿರುದ್ದ ಧ್ವನಿ ಎತ್ತಿದ್ದಕ್ಕಾಗಿ ಫಲಾನುಭವಿಗಳ ಮೇಲೆ ಸುಳ್ಳು ಕೇಸ್‌ ದಾಖಲಿಸಿ ಕೋರ್ಟ್-ಕಚೇರಿ ಅಲೆಯುವಂತೆ ಮಾಡಲಾಗಿದೆ ಎಂದು ಸಮಿತಿ ಹೇಳಿದೆ.

ಪ್ರತಾಪ್‌ ರೆಡ್ಡಿ ತನ್ನ ಹೆಸರಿಗೆ 61.23 ಎಕರೆ ಭೂಮಿಗೆ 13,50,000 ರೂಪಾಯಿಗಳನ್ನು ಕೊಟ್ಟಿದ್ದರೆ, ಅವರ ಹೆಂಡತಿ ಶೈಲಜಾರೆಡ್ಡಿ 73 ಎಕರೆ ಭೂಮಿಗೆ 13,50,000 ರೂಪಾಯಿಗಳನ್ನು ಕೊಟ್ಟು ದಿನಾಂಕ : 17-10-2005 ನೋಂದಣಿ ಮಾಡಿಸಿಕೊಂಡಿದ್ದಾರೆಂದು ದಾಖಲೆಗಳು ಹೇಳುತ್ತಿವೆ. ಅಂದರೆ ಎಕರೆಗೆ ಕೇವಲ 20 ಸಾವಿರ ರೂಪಾಯಿ ಕೊಟ್ಟಂತಾಗಿದೆ. 134 ಎಕರೆ ಗಂಡ ಹೆಂಡತಿ ಹೆಸರಲ್ಲಿ ಒಂದೇ ದಿನ ನೋಂದಣಿ ಆಗಿರುವ ಈ ಭೂಮಿ ಬಳ್ಳಾರಿ ನಗರದಲ್ಲಿ ಇಷ್ಟು ಕಡಿಮೆ ದರದಲ್ಲಿ, ಅದೂ ಅವರ ಪ್ರಕಾರವೇ ಟೌನ್ ವ್ಯಾಪ್ತಿಗೊಳಪಟ್ಟ ಭೂಮಿ ಸಿಗುತ್ತದೆಂದರೆ ನಂಬಲು ಸಾಧ್ಯವೇ? ಎಂದು ಸಮಿತಿ ಪ್ರಶ್ನಿಸಿದೆ.

ಈ ರೀತಿಯ ದೊಡ್ಡ ಮಟ್ಟದ ಭೂಮಿಯ ನೋಂದಣಿ ಮಾಡಿರುವುದು ಕೂಡ ಕಾನೂನಿಗೆ ವಿರುದ್ಧವಾಗಿದೆ.
ಭೂಮಿಯು ಮೂಲತಃ ದಿವಂಗತ ರಾಜರಾಜೇಶ್ವರಿಶಾಸ್ತ್ರಿಯವರಿಗೆ ಸೇರಿದ್ದು ಇವರಿಗೆ ಬ್ರಹ್ಮಶಾಸ್ತ್ರಿ ಮತ್ತು ತಿಪ್ಪಾಶಾಸ್ತ್ರಿ ಇಬ್ಬರು ಮಕ್ಕಳು, ಬೃಹ್ಮಶಾಸ್ತ್ರಿಗೆ ಮಕ್ಕಳಿಲ್ಲ. ತಿಪ್ಪಶಾಸ್ತ್ರಿಗೆ 3 ಜನ ಮಕ್ಕಳೆಂದರೆ ವೆಂಕಟರಮಣಶಾಸ್ತ್ರಿ, ಕೃಷ್ಣಶಾಸ್ತ್ರಿ, ಮತ್ತು ದಕ್ಷಿಣಾಮೂರ್ತಿ, ಉಳಿದ ಭೂಮಿಯೆಲ್ಲವೂ ದಿವಂಗತವಾಗಿರುವ ವೆಂಕಟರಮಣಶಾಸ್ತ್ರಿಯ ಹೆಸರಿನಲ್ಲಿದೆ. ಕೃಷ್ಣಶಾಸ್ತ್ರಿ ಹೆಂಡತಿ ಲಲಿತಮ್ಮ ಮತ್ತು ಇವರ ಮಕ್ಕಳಿಂದ ಪ್ರತಾಪ್‌ರೆಡ್ಡಿಯವರು 27 ಲಕ್ಷ ಹಣ ಕೊಟ್ಟು ಭೂಮಿಯನ್ನು ಖರೀದಿಸಿದ್ದಾರೆ ಎಂದು ಹೇಳಲಾಗುತ್ತಿದೆ. ವಾಸ್ತವದಲ್ಲಿ ಪ್ರತಾಪ್‌ರೆಡ್ಡಿಗೆ ಮಾರಾಟ ಮಾಡಿರುವ ವ್ಯಕ್ತಿಗಳ ಹೆಸರಿನಲ್ಲಿ ಭೂಮಿಯ ಹಕ್ಕು ಬದಲಾಗಿರುವ ಯಾವುದೇ ದಾಖಲೆಗಳಿಲ್ಲ. ಇದಕ್ಕೆ ಸಂಬಂಧಿಸಿದ ಲಿಂಕ್ ದಾಖಲೆಗಳನ್ನು ಮಾಹಿತಿ ಹಕ್ಕು ಕಾಯ್ದೆ ಪ್ರಕಾರ ಕೇಳಿದರೆ, ಲಿಂಕ್ ದಾಖಲೆ ಪತ್ರಗಳನ್ನು ಸುಟ್ಟು ಹಾಕಲಾಗಿದೆ ಎಂದು ಲಿಖಿತವಾದ ಉತ್ತರವನ್ನು ಅಧಿಕಾರಿಗಳು ನೀಡಿದ್ದಾರೆ. ದಾಖಲೆಗಳನ್ನು ಸುಟ್ಟು ಹಾಕಲಾಗಿದೆ ಎಂದರೆ ವಾಸ್ತವವನ್ನು ಮರೆಮಾಚಿದಂತೆ ಆಗುವುದಿಲ್ಲವೇ? ಎಂದು ಸಮಿತಿ ಕೇಳಿದೆ. ಇದರ ಹಿಂದೆ ಭ್ರಷ್ಟ ಅಧಿಕಾರಿಗಳ ಕೈವಾಡ ಇರುವ ಇದೆ ಎನ್ನುವುದರಲ್ಲಿ ಸಂಶಯವಿಲ್ಲವೆಂದು ಹೇಳಬಹುದಾಗಿದೆ ಎಂದಿದೆ.

ಸರ್ಕಾರವೇ ಕೊಟ್ಟ ಎಲ್ಲಾ ದಾಖಲೆ ಪತ್ರಗಳು ಇದ್ದರೂ, ಜಿಲ್ಲಾಡಳಿತ ಬಡವರ ಪರವಾಗಿ ನಿಂತು ಗೊಂದಲವನ್ನು ಬಗೆ ಹರಿಸಬಹುದಾದ ವಿಷಯವಾಗಿದ್ದರೂ, ಕೆಲ ಅಧಿಕಾರಿಗಳು ಮಾಡಿದ ತಪ್ಪು ಮತ್ತು ಬೇಜವಾಬ್ದಾರಿತನಗಳು ವಿಷಯ ಕಗ್ಗಂಟಾಗಲು ಕಾರಣವಾಗಿದೆ. ಇದಕ್ಕೆ ಎನ್.ಪ್ರತಾಪ್‌ರೆಡ್ಡಿಯವರ ಅಧಿಕಾರ-ಹಣ ಕೆಲಸ ಮಾಡಿದೆ ಎಂದು ಯಾವುದೇ ಸಂಶಯವಿಲ್ಲದೇ ಹೇಳಬಹುದು ಎಂದು ಸಮಿತಿ ತಿಳಿಸಿದೆ.

ಭೂ ಫಲಾನುಭವಿಗಳು ತಮಗಾಗುತ್ತಿರುವ ಅನ್ಯಾಯದ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದ ಸಂದರ್ಭದಲ್ಲಿ ಇವರ ಬೆನ್ನಿಗೆ ನಿಲ್ಲಬೇಕಾಗಿದ್ದ ಕಾನೂನು ಪಾಲಕರು, ಕಂದಾಯ ಇಲಾಖೆಯಯವರು ಸರಿಯಾಗಿ ಮಾರ್ಗದರ್ಶನ ಕೂಡ ಮಾಡಿರುವುದಿಲ್ಲ. ಈ ಜನರಿಗೆ ಸರ್ಕಾರವೇ ಕೊಟ್ಟಿರುವ ಭೂಮಿಯ ದಾಖಲೆಗಳ ಬಗ್ಗೆ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ವರ್ತಿಸುತ್ತಾ ಬಂದಿರುವುದರಿಂದ ಪ್ರತಾಪ್‌ರೆಡ್ಡಿ ತೋಡಿದ ಮೋಸದ ಖೆಡ್ಡಾಕ್ಕೆ ಜಿಲ್ಲಾಡಳಿತವನ್ನು ಮತ್ತು ಶೋಷಿತ ಬಡ ಜನರನ್ನು ಬೀಳಿಸಿಕೊಂಡು, ಕಾನೂನು-ನ್ಯಾಯ, ನನ್ನ ಹಣ-ರಾಜಕೀಯ ಬಲಕ್ಕಿಂತ ದೊಡ್ಡದೇ? ಎಂದು ಸೆಡ್ಡು ಹೊಡೆದಿದ್ದಾರೆ ಎಂದಿದೆ.

ಇದು ಪ್ರಜಾತಂತ್ರ ವ್ಯವಸ್ಥೆಗೆ ಮಾರಕವೇ ಆಗಿದೆ. ತಾಲ್ಲೂಕು ಸರ್ವೆಯರ್ ಹನುಮಂತಪ್ಪ ಎಂಬ ಅಧಿಕಾರಿಯನ್ನು ಕೋರ್ಟ್ ಕಮಿಷನ್ ವಾರಂಟ್ ಪ್ರಕಾರ ನೇಮಿಸಲಾಗಿದ್ದು, ಈ ಅಧಿಕಾರಿ ಕಾನೂನು ಪ್ರಕಾರ ಸರ್ವೆ ಮಾಡದೆ ರೈತರ ವಿರುದ್ಧ ಇರುವ ವಕೀಲರ ಮಾತಿನಂತೆ ಕೆಲಸ ಮಾಡುತ್ತೇನೆಂದು ಹೇಳಿ ಬಲಾಡ್ಯರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಈ ಅಧಿಕಾರಿಯ ವಿರುದ್ಧ ಮತ್ತು ಕಾನೂನು ಉಲ್ಲಂಘನೆ ಮಾಡುತ್ತಿರುವ ಎನ್. ಪ್ರತಾಪ್‌ರೆಡ್ಡಿ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಿದೆ. ಹೈಕೋರ್ಟ್‌ನಲ್ಲಿ
ಪ್ರಕರಣ ಬಾಕಿಯಿದ್ದರೂ, ಪ್ರತಾಪ್‌ರೆಡ್ಡಿ ಬಡವರ ಮೇಲೆ ದೌರ್ಜನ್ಯವೆಸಗುತ್ತಿದ್ದಾರೆ ಎಂದು ಸಮಿತಿ ಆರೋಪಿಸಿದೆ.

ಈ ವಿಚಾರವಾಗಿ ಸರ್ಕಾರ ಮತ್ತು ಜಿಲ್ಲಾಡಳಿತ ತಕ್ಷಣವೇ ಮಧ್ಯಪ್ರವೇಶ ಮಾಡಿ ಪ್ರತಾಪ್‌ರೆಡ್ಡಿ ನಡೆಸುತ್ತಿರುವ ಉಪಟಳ ಮತ್ತು ಬಡ ಜನರ ಭೂಮಿಯ ವಂಚನೆ ನಡೆಸುತ್ತಿರುವುದರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಎಂದು ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ರಾಜ್ಯ ಮುಖಂಡರುಗಳಾದ ಕುಮಾರ್ ಸಮತಳ, ಮರಿಯಪ್ಪ, ಕಾವೇರಿ ಹಾಗೂ ಭೂಮಿಯಿಂದ ವಂಚನೆಗೊಳಗಾಗುತ್ತಿರುವ ಕೆ.ಮೋಹನ್ , ಕೆ.ಎಸ್‌ ರಘು, ಈ.ಈರೇಶ್ ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ವಾಯುಮಾಲಿನ್ಯ : ಏರ್ ಪ್ಯೂರಿಫೈಯರ್‌ ಜಿಎಸ್‌ಟಿ ಕಡಿತಕ್ಕೆ ಕೇಂದ್ರ ಆಕ್ಷೇಪ

ಏರ್‌ಪ್ಯೂರಿಫೈಯರ್‌ ಸಾಧನಗಳ ಮೇಲಿನ ಜಿಎಸ್‌ಟಿ ಕಡಿತಗೊಳಿಸುವಂತೆ ಜಿಎಸ್‌ಟಿ ಮಂಡಳಿಗೆ ಆದೇಶಿಸಿದರೆ ಅದು ಅಂತಹ ಇನ್ನಷ್ಟು ಪ್ರಕರಣಗಳು ಹೆಚ್ಚಳವಾಗಲು ಕಾರಣವಾಗುತ್ತದೆ (Pandora Box)ಎಂದು ಕೇಂದ್ರ ಸರ್ಕಾರ ಶುಕ್ರವಾರ (ಡಿ.26) ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ದೆಹಲಿ ಎನ್‌ಸಿಆರ್‌...

ಕ್ರಿಸ್‌ಮಸ್‌ ದಿನ ದೇಶದ ಹಲವು ನಗರಗಳಲ್ಲಿ ಗಿಗ್‌ ಕಾರ್ಮಿಕರಿಂದ ಪ್ರತಿಭಟನೆ : ಹೊಸ ವರ್ಷದಂದು ಮತ್ತೊಂದು ಹೋರಾಟಕ್ಕೆ ಸಿದ್ದತೆ

ವರ್ಷಾಂತ್ಯದ ಎರಡು ಪ್ರಮುಖ ದಿನಗಳಾದ ಡಿಸೆಂಬರ್ 25ರ ಕ್ರಿಸ್‌ಮಸ್‌ ಮತ್ತು ಡಿಸೆಂಬರ್ 31ರ ಹೊಸ ವರ್ಷದ ಸಂಜೆ (ಮುನ್ನಾದಿನ) ದೇಶದಾದ್ಯಂತ ಪ್ರತಿಭಟನೆ ನಡೆಸಲು ಗಿಗ್ ಕಾರ್ಮಿಕರು ನಿರ್ಧರಿಸಿದ್ದಾರೆ. ಈಗಾಗಲೇ ಡಿಸೆಂಬರ್ 25ರ ಕ್ರಿಸ್‌ಮಸ್‌ ದಿನದಂದು...

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಗುಂಪು ಹತ್ಯೆ : ಘಟನೆಗೆ ಕೋಮು ಆಯಾಮವಿಲ್ಲ ಎಂದ ಮಧ್ಯಂತರ ಸರ್ಕಾರ

ಬಾಂಗ್ಲಾದೇಶದ ರಾಜ್‌ಬರಿ ಜಿಲ್ಲೆಯಲ್ಲಿ ಸುಲಿಗೆ ಯತ್ನದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಗುಂಪೊಂದು ಥಳಿಸಿ ಕೊಂದಿದೆ. ಇದು ಇತ್ತೀಚೆಗೆ ಹಿಂದೂ ವ್ಯಕ್ತಿಯನ್ನು ಗುಂಪು ಹತ್ಯೆ ನಡೆಸಿರುವ ಎರಡನೇ ಘಟನೆಯಾಗಿದೆ. ಆದರೆ, ಅಲ್ಲಿನ ಮಧ್ಯಂತರ ಸರ್ಕಾರ...

ದೆಹಲಿ ವಾಯು ಮಾಲಿನ್ಯದಿಂದ ಸಾಂತಾ ಕ್ಲಾಸ್ ಮೂರ್ಛೆ ಹೋದ ವಿಡಿಯೋ ಹಂಚಿಕೆ : ಎಎಪಿಯ ಸೌರಭ್ ಭಾರದ್ವಾಜ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಪರೀತ ವಾಯುಮಾಲಿನ್ಯದಿಂದ ಸಾಂತಾಕ್ಲಾಸ್ ವೇಷ ಧರಿಸಿದ ಪುರುಷರು ಮೂರ್ಛೆ ಹೋಗುತ್ತಿರುವುದನ್ನು ತೋರಿಸುವ ವಿಡಿಯೋ ಸ್ಕಿಟ್ (ಅಭಿನಯ) ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರಾದ...

ಕ್ರಿಸ್‌ಮಸ್‌ ವೇಳೆ ಶಾಲೆಗೆ ನುಗ್ಗಿ ದಾಂಧಲೆ : ವಿಹೆಚ್‌ಪಿ-ಬಜರಂಗದಳದ ನಾಲ್ವರ ಬಂಧನ

ನಲ್ಬರಿ ಜಿಲ್ಲೆಯ ಶಾಲೆಯೊಂದಕ್ಕೆ ನುಗ್ಗಿ ಕ್ರಿಸ್‌ಮಸ್ ಅಲಂಕಾರವನ್ನು ಧ್ವಂಸ ಮಾಡಿದ, ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಮತ್ತು ಬಜರಂಗದಳದ ನಾಲ್ವರನ್ನು ಅಸ್ಸಾಂ ಪೊಲೀಸರು ಗುರುವಾರ (ಡಿ.25) ಬಂಧಿಸಿದ್ದಾರೆ. ಬಂಧಿತರನ್ನು ವಿಹೆಚ್‌ಪಿ ಜಿಲ್ಲಾ ಕಾರ್ಯದರ್ಶಿ ಭಾಸ್ಕರ್...

ಅಲಿಗಢ ಮುಸ್ಲಿಂ ವಿವಿ ಆವರಣದಲ್ಲಿ ಗುಂಡಿಕ್ಕಿ ಶಿಕ್ಷಕನ ಹತ್ಯೆ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯ (ಎಎಂಯು)ದ ಶಿಕ್ಷಕರೊಬ್ಬರನ್ನು ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ (ಡಿ.24) ರಾತ್ರಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಲ್ಲಿ ಭೀತಿ ಮೂಡಿಸಿದೆ. ಮೃತರನ್ನು ಎಎಂಯುನ ಎಬಿಕೆ ಯೂನಿಯನ್ ಹೈಸ್ಕೂಲ್‌ನ ಶಿಕ್ಷಕ...

ಮತ್ತೊಬ್ಬ ವಲಸೆ ಕಾರ್ಮಿಕನ ಗುಂಪು ಹತ್ಯೆ : ಆರು ಜನರ ಬಂಧನ

ಬುಧವಾರ (ಡಿ.24) ಒಡಿಶಾದ ಸಂಬಾಲ್‌ಪುರದಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ 30 ವರ್ಷದ ವಲಸೆ ಕಾರ್ಮಿಕರೊಬ್ಬರನ್ನು ಗುಂಪು ಹತ್ಯೆ ಮಾಡಲಾಗಿದೆ. ಈ ಸಂಬಂಧ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...

ಉನ್ನಾವೋ ಅತ್ಯಾಚಾರ ಪ್ರಕರಣ : ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿರುವುದನ್ನು ಪ್ರಶ್ನಿಸಿ ಇಬ್ಬರು ಮಹಿಳಾ ವಕೀಲರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು...

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಪಹಾಸ್ಯ : ಮಾಧ್ಯಮಗಳ ಮುಂದೆ ವ್ಯಂಗ್ಯವಾಗಿ ನಕ್ಕ ಯುಪಿ ಸಚಿವ

ದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಭಟಿಸಿದ ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಸಚಿವ ಓಂ ಪ್ರಕಾಶ್ ರಾಜ್‌ಭರ್ ಅಪಹಾಸ್ಯ ಮಾಡಿದ್ದು, "ಆಕೆಯ ಮನೆ ಉನ್ನಾವೋದಲ್ಲಿರುವಾಗ ದೆಹಲಿಯಲ್ಲಿ ಏಕಿದ್ದಾಳೆ?"...

ಹತ್ಯೆಯ ಕೆಲವೇ ಗಂಟೆಗಳ ಮೊದಲು ನಾನು ಹಮಾಸ್ ಮುಖ್ಯಸ್ಥರನ್ನು ಭೇಟಿಯಾಗಿದ್ದೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹತ್ಯೆಯಾಗುವ ಕೆಲವೇ ಗಂಟೆಗಳ ಮೊದಲು ಟೆಹ್ರಾನ್‌ನಲ್ಲಿ ಹಮಾಸ್‌ನ ಮಾಜಿ ಮುಖ್ಯಸ್ಥ ಇಸ್ಮಾಯಿಲ್ ಹನಿಯಾ ಅವರನ್ನು ಭೇಟಿಯಾಗಿದ್ದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಬಹಿರಂಗಪಡಿಸಿದ್ದಾರೆ. ನವದೆಹಲಿಯಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಗಡ್ಕರಿ, ಅಧ್ಯಕ್ಷ...