Homeಕರ್ನಾಟಕಹೆಚ್‌ಡಿ ಕುಮಾರಸ್ವಾಮಿ ವಿರುದ್ಧದ ಭೂ ಕಬಳಿಕೆ ಆರೋಪ : ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವ...

ಹೆಚ್‌ಡಿ ಕುಮಾರಸ್ವಾಮಿ ವಿರುದ್ಧದ ಭೂ ಕಬಳಿಕೆ ಆರೋಪ : ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವ ಎಚ್ಚರಿಕೆ ನೀಡಿದ ಹೈಕೋರ್ಟ್‌

- Advertisement -
- Advertisement -

ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಮತ್ತಿತರರ ವಿರುದ್ಧದ ಸರ್ಕಾರಿ ಜಮೀನು ಕಬಳಿಕೆ ಆರೋಪ ಪ್ರಕರಣದಲ್ಲಿ ಏನೂ ಕ್ರಮ ಜರುಗಿಸದ ಅಧಿಕಾರಿಗಳನ್ನು ಹೈಕೋರ್ಟ್ ಬುಧವಾರ (ಜ.29) ತೀವ್ರ ತರಾಟೆಗೆ ತೆಗೆದುಕೊಂಡಿದೆ.

ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಭೂಮಿ ಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ವಿಸ್ತೃತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತರು ಆದೇಶ ಮಾಡಿರುವುದನ್ನು ಜಾರಿ ಮಾಡಲು ಹೈಕೋರ್ಟ್‌ ಆದೇಶಿಸಿತ್ತು. ಇದನ್ನು ಜಾರಿ ಮಾಡಲು ವಿಫಲವಾಗಿರುವ ರಾಜ್ಯ ಸರ್ಕಾರದ ನಡೆ ಪ್ರಶ್ನಿಸಿ ಎಸ್‌.ಆರ್‌ ಹಿರೇಮಠ ನೇತೃತ್ವದ ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್‌ ಮತ್ತು ಟಿ ವೆಂಕಟೇಶ್‌ ನಾಯ್ಕ್‌ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿದೆ.

“ಪ್ರತಿವಾದಿಗಳು ಪ್ರಭಾವಿಗಳು (ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ, ಮಾಜಿ ಸಚಿವ ಡಿ.ಸಿ ತಮ್ಮಣ್ಣ ಮುಂತಾದವರು) ಎಂದು ನೀವು ಐದು ವರ್ಷ ಏನೂ ಮಾಡಿಲ್ಲ ತಾನೆ? ನಿಮಗೆ ಇನ್ನೆರಡು ವಾರ ಸಮಯ ಕೊಡುತ್ತೇನೆ. ನೀವು ಅಸಮರ್ಥರು ಎಂದಾದರೆ ನಿಮ್ಮನ್ನು ಎಲ್ಲಿಗೆ ಕಳಿಸಬೇಕೊ ಅಲ್ಲಿಗೆ ಕಳಿಸುತ್ತೇನೆ. ಹದಿನೈದು ದಿನ ಜೈಲಿನಲ್ಲಿ ಇದ್ದು ಬಂದರೆ ಸರಿಹೋಗ್ತೀರಿ” ಎಂದು ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಹೈಕೋರ್ಟ್‌ ನ್ಯಾಯಾಧೀಶರು ಮೌಖಿಕವಾಗಿ ತೀವ್ರ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಜನವರಿ 7ರಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಖುದ್ದು ನ್ಯಾಯಾಲಯದ ಮುಂದೆ ಬರಬೇಕು ಎಂದು ಹೈಕೋರ್ಟ್ ಆದೇಶಿಸಿದ್ದ ಹಿನ್ನೆಲೆ, ಕಾರ್ಯದರ್ಶಿ ರಾಜೇಂದ್ರ ಕುಮಾರ್‌ ಕಠಾರಿಯಾ ಅವರು ಪೀಠದ ಮುಂದೆ ಹಾಜರಾಗಿ, ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಪೀಠಕ್ಕೆ ವಿವರಿಸಲು ಮುಂದಾಗಿದ್ದರು.

ಈ ವೇಳೆ ನ್ಯಾಯಾಧೀಶರು ಕಠಾರಿಯಾ ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಒಂದು ಹಂತದಲ್ಲಿ “ನಿಮ್ಮ ವಿರುದ್ದ ಈಗಲೇ ನ್ಯಾಯಾಂಗ ನಿಂದನೆಯ ಆರೋಪ ನಿಗದಿಗೊಳಿಸುವ ಪ್ರಕ್ರಿಯೆ ಆರಂಭಿಸಲಾಗುವುದು”ಎಂದು ಕಿಡಿಕಾರಿದ್ದಾರೆ. “ನೀವೆಲ್ಲಾ ಕೋರ್ಟ್ ಆದೇಶಗಳನ್ನು ಪಾಲನೆ ಮಾಡುವವರೆಗೆ ನಿಮ್ಮ ಸಂಬಳ ಕಟ್‌ ಮಾಡಿದರೆ ಗೊತ್ತಾಗುತ್ತದೆ” ಎಂದು ಹರಿಹಾಯ್ದಿದ್ದಾರೆ.

ಕೊನೆಗೆ, “ಇನ್ನೆರಡು ವಾರಗಳ ಕಾಲಾವಕಾಶ ನೀಡುತ್ತೇನೆ. ಅಷ್ಟರೊಳಗೆ ಆದೇಶ ಪಾಲಿಸಿದರೆ ಸರಿ. ಇಲ್ಲಾ ಅಂದರೆ ಎಲ್ಲ ಪ್ರತಿವಾದಿಗಳನ್ನೂ ಬೆಂಗಾವಲಿನಲ್ಲಿ ಕರೆಯಿಸಿಬಿಡುತ್ತೇನೆ. ಅಧಿಕಾರಿಗಳನ್ನು ಎಲ್ಲಿಗೆ ಕಳುಹಿಸಬೇಕೊ ಅಲ್ಲಿಗೆ ಕಳುಹಿಸುತ್ತೇನೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ. ಅಲ್ಲದೆ, “ಯಾವುದಾದರೂ ವಿಷಯಕ್ಕೆ ಎಸ್ಐಟಿ ರಚಿಸುವುದು ಸರ್ಕಾರಕ್ಕೆ ರೂಢಿಯಾಗಿಬಿಟ್ಟಿದೆ” ಎಂದು ಚಾಟಿ ಬೀಸಿದ್ದಾರೆ.

ಅಂತಿಮವಾಗಿ, ಸರ್ಕಾರಕ್ಕೆ ಎರಡು ವಾರಗಳ ಕಾಲಾವಕಾಶ ನೀಡಿದ ನ್ಯಾಯಾಲಯವು ವಿಚಾರಣೆಯನ್ನು ಫೆಬ್ರವರಿ 21ಕ್ಕೆ ಮುಂದೂಡಿದೆ ಎಂದು ವರದಿಯಾಗಿದೆ.

ಬೆಂಗಳೂರು ಅರಮನೆ ಭೂ ಬಳಕೆ, ನಿಯಂತ್ರಣ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....