Homeಕರ್ನಾಟಕಎಚ್‌ಡಿಕೆ ವಿರುದ್ಧದ ಭೂಕಬಳಿಕೆ ಆರೋಪ; ಐಎಎಸ್ ಅಧಿಕಾರಿ ಆಮ್ಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿ ಎಸ್‌ಐಟಿ

ಎಚ್‌ಡಿಕೆ ವಿರುದ್ಧದ ಭೂಕಬಳಿಕೆ ಆರೋಪ; ಐಎಎಸ್ ಅಧಿಕಾರಿ ಆಮ್ಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿ ಎಸ್‌ಐಟಿ

- Advertisement -
- Advertisement -

ಕೇಂದ್ರ ಕೈಗಾರಿಕಾ ಸಚಿವ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ವಿರುದ್ಧದ ಭೂಕಬಳಿಕೆ ಆರೋಪಗಳ ತನಿಖೆಗಾಗಿ ಬೆಂಗಳೂರು ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿ ಐದು ಸದಸ್ಯರ ವಿಶೇಷ ತನಿಖಾ ತಂಡ (ಎಸ್‌ಐಟಿ)ವನ್ನು ರಾಜ್ಯ ಸರ್ಕಾರ ರಚಿಸಿದೆ.

ರಾಮನಗರದ ಬಿಡದಿಯ ಕೇತಗಾನಹಳ್ಳಿ ಗ್ರಾಮದ ಸರ್ವೇ ಸಂಖ್ಯೆ 8, 9, 10, 16 ಮತ್ತು 79 ರಲ್ಲಿ 14.04 ಎಕರೆ ಸರ್ಕಾರಿ ಭೂಮಿಯನ್ನು ಅತಿಕ್ರಮಣ ಮಾಡಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.

ಎಸ್‌ಐಟಿಯಲ್ಲಿ ಸರ್ವೆ, ಇತ್ಯರ್ಥ ಮತ್ತು ಭೂ ದಾಖಲೆಗಳ ಜಂಟಿ ನಿರ್ದೇಶಕ ನಿಸಾರ್ ಅಹ್ಮದ್, ಹೆಚ್ಚುವರಿ ಬೆಂಗಳೂರು ಪ್ರಾದೇಶಿಕ ಆಯುಕ್ತ ಇಸ್ಲಾವುದ್ದೀನ್ ಗಡ್ಡ್ಯಾಲ್, ತಹಶೀಲ್ದಾರ್ ಗಣಪತಿ ಶಾಸ್ತ್ರಿ ಸದಸ್ಯರಾಗಿ ತಹಶೀಲ್ದಾರ್ ಗ್ರೇಡ್ -2 ಶೀತಲ್ ಸದಸ್ಯ ಕಾರ್ಯದರ್ಶಿಯಾಗಿದ್ದಾರೆ.

ಜಾರಿ ನಿರ್ದೇಶನಾಲಯ (ಇಡಿ) ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಹಣ ವರ್ಗಾವಣೆ ತನಿಖೆಯನ್ನು ಚುರುಕುಗೊಳಿಸುತ್ತಿರುವಂತೆ ಕಂಡುಬರುತ್ತಿರುವ ಸಮಯದಲ್ಲಿ ಕುಮಾರಸ್ವಾಮಿ ವಿರುದ್ಧ ತನಿಖೆಗೆ ಎಸ್‌ಐಟಿ ರಚನೆಯಾಗಿದೆ.

ನವೆಂಬರ್ 2024 ರಲ್ಲಿ, ಸರ್ಕಾರವು ಕರ್ನಾಟಕ ಹೈಕೋರ್ಟ್‌ಗೆ ಅಫಿಡವಿಟ್‌ನಲ್ಲಿ ಆಪಾದಿತ ಅತಿಕ್ರಮಣವನ್ನು ತನಿಖೆ ಮಾಡಲು ಎಸ್‌ಐಟಿ ರಚಿಸುವುದಾಗಿ ತಿಳಿಸಿತ್ತು. ಎಸ್‌ಐಟಿ ರಚನೆಗೆ ಆದೇಶವನ್ನು ಜನವರಿ 28 ರಂದು ಹೊರಡಿಸಲಾಯಿತು.

“ಹೈಕೋರ್ಟ್ ಸರ್ಕಾರಕ್ಕೆ ತೀಕ್ಷ್ಣ ನಿರ್ದೇಶನ ನೀಡಿದೆ. ಅದರಂತೆ, ನಾವು ಉನ್ನತ ಮಟ್ಟದ ಸಮಿತಿಯನ್ನು ರಚಿಸಿದ್ದೇವೆ” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಎಸ್‌ಐಟಿ ತನಿಖೆಯನ್ನು ಪೂರ್ಣಗೊಳಿಸಲು ಮೂರು ತಿಂಗಳ ಕಾಲಾವಕಾಶ ನೀಡಲಾಗಿದ್ದರೂ, ಸರ್ಕಾರವು ತನ್ನ ವರದಿಯನ್ನು ಹೈಕೋರ್ಟ್‌ಗೆ ಬೇಗನೆ ಸಲ್ಲಿಸಲು ಬಯಸುತ್ತದೆ ಎಂದು ಸಚಿವರು ಹೇಳಿದರು. “ನಾವು ಮೂರು ತಿಂಗಳ ಕಾಲಾವಕಾಶವನ್ನು ಕೋರಿದ್ದೆವು. ಆದರೆ, ಹೈಕೋರ್ಟ್ ಅದಕ್ಕೆ ಒಪ್ಪಲಿಲ್ಲ. ಸಾಧ್ಯವಾದಷ್ಟು, ಫೆಬ್ರವರಿ 21 ರ ಮೊದಲು ತನಿಖೆಯನ್ನು ಮುಗಿಸಿ ವರದಿಯನ್ನು ಸಲ್ಲಿಸಲು ನಾವು ಬಯಸುತ್ತೇವೆ” ಎಂದು ಹೇಳಿದರು.

ಬಿಡದಿಯ ಕೇತಗಾನಹಳ್ಳಿಯಲ್ಲಿ ಸರ್ವೆ ಸಂಖ್ಯೆ 8, 9, 10, 16 ಮತ್ತು 79 ಕ್ಕೆ ಸೇರಿದ ದಾಖಲೆಗಳ ನೈಜತೆಯನ್ನು ಪರಿಶೀಲಿಸಲು ಸರ್ಕಾರ ಎಸ್‌ಐಟಿಯನ್ನು ಕೇಳಿದೆ. ಅಗತ್ಯವಿದ್ದರೆ, ಎಸ್‌ಐಟಿ ದಾಖಲೆಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಬಹುದು ಎಂದು ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ. ಭೂ ಸಂಬಂಧಿತ ಯಾವುದೇ ಕಾನೂನುಗಳನ್ನು ಉಲ್ಲಂಘಿಸಲಾಗಿದೆಯೇ ಎಂದು ಪರೀಕ್ಷಿಸಲು ಎಸ್‌ಐಟಿಗೆ ಸೂಚಿಸಲಾಗಿದೆ. ಸರ್ಕಾರಿ ಭೂಮಿಯನ್ನು ಅನಧಿಕೃತವಾಗಿ ಆಕ್ರಮಿಸಿಕೊಂಡಿರುವುದು ಕಂಡುಬಂದರೆ, ಅತಿಕ್ರಮಣ ತೆರವುಗೊಳಿಸಲು ಎಸ್‌ಐಟಿ ಕ್ರಮಗಳನ್ನು ತೆಗೆದುಕೊಳ್ಳಲಿದೆ.

ಆಗಸ್ಟ್ 2014 ರಲ್ಲಿ, ಕರ್ನಾಟಕ ಲೋಕಾಯುಕ್ತವು ಸರ್ಕಾರಿ ಭೂಮಿಯನ್ನು ಖಾಸಗಿ ವ್ಯಕ್ತಿಗಳಿಗೆ ನೀಡಲಾಗಿದೆ ಎಂದು ತೋರಿಸುವ ಯಾವುದೇ ದಾಖಲೆಗಳು ಕಂಡುಬಂದಿಲ್ಲದಿದ್ದರೆ ಅದನ್ನು ವಶಪಡಿಸಿಕೊಳ್ಳಲು ಆದೇಶಿಸಿತ್ತು. 2020 ರಲ್ಲಿ,  ಸಮಾಜ ಪರಿವರ್ತನಾ ಸಮುದಾಯದ ಎಸ್‌ಆರ್‌ ಹಿರೇಮಠ್‌ ಅವರು ಲೋಕಾಯುಕ್ತ ನಿರ್ದೇಶನದಂತೆ ಕೇತಗಾನಹಳ್ಳಿಯಲ್ಲಿ ಅತಿಕ್ರಮಣಗೊಂಡ ಭೂಮಿಯನ್ನು ವಶಪಡಿಸಿಕೊಳ್ಳುವ ಬಗ್ಗೆ ಹೈಕೋರ್ಟ್‌ಗೆ ನೀಡಿದ ಭರವಸೆಯನ್ನು ಪಾಲಿಸಲು ಸರ್ಕಾರ ವಿಫಲವಾಗಿದೆ ಎಂದು ನ್ಯಾಯಾಲಯ ನಿಂದನೆ ಅರ್ಜಿಯನ್ನು ಸಲ್ಲಿಸಿದ್ದರು.

ಕುಮಾರಸ್ವಾಮಿ, ಅವರ ಸಂಬಂಧಿ ಮತ್ತು ಮಾಜಿ ಶಾಸಕ ಡಿ.ಸಿ. ತಮ್ಮಣ್ಣ ಮತ್ತು ಇತರರು ಭೂಕಬಳಿಕೆ ಆರೋಪ ಹೊರಿಸಿ ಮಂಡ್ಯದ ಮಾಜಿ ಸಂಸದ ಜಿ. ಮಾದೇಗೌಡ ಅವರು ಸಲ್ಲಿಸಿದ ದೂರಿನ ಆಧಾರದ ಮೇಲೆ ಲೋಕಾಯುಕ್ತ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ; ಚಿಕ್ಕಮಗಳೂರು| ನಕ್ಸಲ್ ನಾಯಕ ಕೋಟೆಹೊಂಡ ರವೀಂದ್ರ ಇಂದು ಮುಖ್ಯವಾಹಿನಿಗೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...